![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Aug 30, 2020, 10:40 AM IST
ಬೆಂಗಳೂರು: ಉದ್ಯಮಿ ಮನೆಯಲ್ಲಿ ಲಕ್ಷಾಂತರ ರೂ. ಕಳವು ಮಾಡಿದ್ದ ಅಡುಗೆ ಭಟ್ಟನನ್ನು ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ಮೂಲದ ಶಾಂತಕುಮಾರ್ ಬಂಧಿತ ಆರೋಪಿ. ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದ ದೇವಿದಾಸ್ ಎಂಬುವರ ಮನೆಯಲ್ಲಿ ಕಳೆದೊಂದು ವರ್ಷದಿಂದ ಅಡುಗೆ ಭಟ್ಟನಾಗಿ ಕೆಲಸ ಮಾಡು ತ್ತಿದ್ದ. ಮಾಲೀಕರ ವಿಶ್ವಾಸ ಸಂಪಾದಿಸಿಕೊಂಡಿದ್ದ ಶಾಂತಕುಮಾರ್, ಕೋವಿಡ್ ಹಿನ್ನೆಲೆಯಲ್ಲಿ ಹಣದ ಸಮಸ್ಯೆ ಎದುರಿಸುತ್ತಿದ್ದ. ಹೀಗಾಗಿ ಹಣದ ವ್ಯಾಮೋಹಕ್ಕೆ ಬಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ಸುಮಾರು 70 ಲಕ್ಷ ರೂ. ಹಣ ಕಳ್ಳತನ ಮಾಡಿ ತಮಿಳುನಾಡಿಗೆ ಓಡಿ ಹೋಗಿದ್ದ. ಕದ್ದ ಹಣದಲ್ಲಿ ಒಂದಷ್ಟು ಲಕ್ಷ ಸಾಲ ತೀರಿಸಿದ್ದಾನೆ.
70 ಲಕ್ಷ ರೂ. ಕದ್ದು ಬಂಧನ ಭೀತಿಯಿಂದ ತಮಿಳುನಾಡು ಹಾಗೂ ಕೇರಳಕ್ಕೆ ತಲೆಮರೆಸಿಕೊಂಡಿದ್ದ. ಅಲ್ಲದೆ ಮಾರ್ಗ ಮಧ್ಯೆ ಈತನಿಂದಲೇ ಬೇರೆ ಆರೋಪಿಗಳು ಐದು ಲಕ್ಷ ರೂ. ಕಳ್ಳತನ ಮಾಡಿದ್ದಾರೆ. ಸದ್ಯ ಬಂಧಿತ ನಿಂದ 53,70 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಜ್ಞಾನಭಾರತಿ ಠಾಣೆಯಲ್ಲಿ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎಸ್ಎಂಕೆ ಮನೆಯಲ್ಲಿ ಕೆಲಸಕ್ಕಿದ್ದ ಆರೋಪಿ : ಆರೋಪಿ ಶಾಂತಕುಮಾರ್ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ಅವರ ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ. ನಂತರ ಪ್ರತಿಷ್ಠಿತ ಸ್ಟಾರ್ ಹೊಟೇಲ್ಗಳಲ್ಲಿ ಅಡುಗೆ ಕೆಲಸಕ್ಕೆ ಸೇರಿಕೊಂಡಿದ್ದ. ಒಂದು ವರ್ಷದಿಂದ ದೇವಿದಾಸ್ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.