![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Aug 31, 2020, 8:57 AM IST
ಅಗರ್ತಾಲಾ:ಕಣ್ಣಾ ಮುಚ್ಚಾಲೆ ಆಟ ಆಡುವ ನೆಪದಲ್ಲಿ ಎಂಟು ವರ್ಷದ ಬಾಲಕಿ ಮೇಲೆ ಏಳು ಅಪ್ರಾಪ್ತ ಬಾಲಕರು ಅತ್ಯಾಚಾರ ಎಸಗಿರುವ ಘಟನೆ ತ್ರಿಪುರಾದ ಗ್ರಾಮವೊಂದರಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಶ್ಚಿಮ ತ್ರಿಪುರಾ ಜಿಲ್ಲೆಯ ಟಾಬಾರಿಯಾ ಗ್ರಾಮದಲ್ಲಿ ವಾಸವಾಗಿದ್ದ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದು, ಒಬ್ಬ ಬಾಲಕ ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾಲ್ವರನ್ನು ಬಾಲಗೃಹಕ್ಕೆ ಕಳುಹಿಸಲಾಗಿದ್ದು, ಇಬ್ಬರು 12 ವರ್ಷ ಪ್ರಾಯದವರಾಗಿದ್ದು, ಕೋವಿಡ್ 19 ಪಾಸಿಟಿವ್ ಬಂದ ನಿಟ್ಟಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ವಿವರಿಸಿದೆ. ಬಾಲಕಿಯ ತಂದೆ ನೀಡಿದ ದೂರಿನ ಪ್ರಕಾರ, ಆರೋಪಿ ಬಾಲಕರು ಕಣ್ಣಾಮುಚ್ಚಾಲೆ ಆಟ ಆಡುವ ನೆಪದಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿರುವುದಾಗಿ ತಿಳಿಸಿದ್ದಾರೆ.
3ನೇ ತರಗತಿ ವಿದ್ಯಾರ್ಥಿನಿ ಮನೆಗೆ ವಾಪಸ್ ಬರುತ್ತಿದ್ದಾಗ ಈ ಘಟನೆ ನಡೆದಿದ್ದು, ಪೋಷಕರಿಗೆ ವಿಷಯ ತಿಳಿಸಿರುವುದಾಗಿ ನ್ಯೂ ಕ್ಯಾಪಿಟಲ್ ಕಾಂಪ್ಲೆಕ್ಸ್ ಪೊಲೀಸ್ ಠಾಣಾಧಿಕಾರಿ ಪ್ರಿಯಾ ಮಾಧುರಿ ಮಜುಂದಾರ್ ತಿಳಿಸಿದ್ದಾರೆ.
ಆರೋಪಿ ಬಾಲಕರು ಬಾಲಕಿಯ ಪರಿಚಿತರಾಗಿದ್ದಾರೆ. ಎಫ್ ಐಆರ್ ನಲ್ಲಿ ಏಳು ಬಾಲಕರ ಹೆಸರನ್ನು ನಮೂದಿಸಲಾಗಿದೆ. ಆರು ಮಕ್ಕಳನ್ನು ಬಂಧಿಸಲಾಗಿದ್ದು, ಒಬ್ಬ ಪರಾರಿಯಾಗಿದ್ದಾನೆ ಎಂದು ಮಜುಂದಾರ್ ತಿಳಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.