![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Sep 1, 2020, 1:53 PM IST
ತುಮಕೂರು: ನನಗೆ ಕಳೆದ ನಾಲ್ಕು ತಿಂಗಳಿನಿಂದ ಸಿದ್ದಗಂಗಾ ಮಠಕ್ಕೆ ಭೇಟಿ ಕೊಡಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ಜತೆಗೂಡಿ ಸ್ಯಾಂಡಲ್ ವುಡ್ ಸ್ಟಾರ್ ನಟ ಕಿಚ್ಚ ಸುದೀಪ್ ಮಂಗಳವಾರ ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಡ್ರಗ್ಸ್ ಜಾಲದ ಆರೋಪದ ಬಗ್ಗೆ ಸುದೀಪ್ ಹೇಳಿದ್ದಿಷ್ಟು!
ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿರುವ ಡ್ರಗ್ಸ್ ಜಾಲದ ಆರೋಪದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಡ್ರಗ್ಸ್ ದಂಧೆ ಬಗ್ಗೆ ನಾನೇನು ಹೇಳಲ್ಲ. ನಾನು ಕೂಡಾ ಚಿತ್ರರಂಗದವನೇ, ಆದರೆ ಅದರ ಬಗ್ಗೆ ನನಗೇನೂ ಗೊತ್ತಿಲ್ಲ. ಗೊತ್ತಿಲ್ಲದ ವಿಚಾರದ ಬಗ್ಗೆ ಮಾತನಾಡಲು ಹೋಗಬಾರದು. ನಮಗೆ ರೈಸ್, ದಾಲ್ ಗೊತ್ತು….ಇದರ ಬಗ್ಗೆ ಗೊತ್ತಿಲ್ಲ ಎಂದು ನಗೆ ಚಟಾಕಿ ಹಾರಿಸಿದರು.!
ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್ ದಂಧೆ ನಡೆಯುತ್ತಿದೆ ಎಂಬುದರ ಬಗ್ಗೆ ನನಗೇನೂ ಗೊತ್ತಿಲ್ಲ. ಚಿತ್ರರಂಗವನ್ನು ಎಲ್ಲರೂ ಸೇರಿ ಕಟ್ಟಿದ್ದಾರೆ. ಯಾವುದೋ ಒಂದು ವಿಚಾರದಿಂದಾಗಿ ಚಿತ್ರರಂಗದ ದೂಷಣೆ ಬೇಡ ಎಂದು ಸುದೀಪ್ ಹೇಳಿದರು.
ನಟ ಚಿರಂಜೀವಿ ಸರ್ಜಾಗೆ ಕುಟುಂಬ ಇದೆ, ಪತ್ನಿಯೂ ಇದ್ದಾರೆ. ಹೀಗಾಗಿ ನಿಧನರಾದವರ ಬಗ್ಗೆ ಮಾತನಾಡೋದು ಬೇಡ. ನನಗೆ ಪಾರ್ಟಿ ಆಫರ್ ಬಂದಿರೋದು ರಾಜಕೀಯ ಪಕ್ಷಗಳಿಂದ, ಹೀಗಾಗಿ ಬೇರೆ ಪಾರ್ಟಿಗಳ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.
ಅಭಿಮಾನಿಗಳು ಮಾತ್ರ ಹುಟ್ಟು ಹಬ್ಬ ಆಚರಿಸುತ್ತಾರೆ:
ಸೆಪ್ಟೆಂಬರ್ 2ರಂದು ಕಿಚ್ಚ ಸುದೀಪ್ ಹುಟ್ಟು ಹಬ್ಬ. ಆದರೆ ಈ ಬಾರಿ ತಾವು ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಅಭಿಮಾನಿಗಳು ಮಾತ್ರ ಹುಟ್ಟು ಹಬ್ಬ ಆಚರಿಸುತ್ತಾರೆ ಎಂದು ಈ ಸಂದರ್ಭದಲ್ಲಿ ಹೇಳಿದರು.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
You seem to have an Ad Blocker on.
To continue reading, please turn it off or whitelist Udayavani.