ಅಬಕಾರಿ ತೆರಿಗೆ ಆದಾಯದಲ್ಲಿ ಇಳಿಕೆ


Team Udayavani, Sep 2, 2020, 6:17 AM IST

ಅಬಕಾರಿ ತೆರಿಗೆ ಆದಾಯದಲ್ಲಿ ಇಳಿಕೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಕೋವಿಡ್‌-19 ಹಾಗೂ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಯ ಆದಾಯದಲ್ಲಿ ಭಾರೀ ಇಳಿಕೆ ಆಗಿದೆ.

ಕಳೆದ ಆರ್ಥಿಕ ವರ್ಷದ ಮೊದಲ ಐದು ತಿಂಗಳಿಗೆ ಹೋಲಿಸಿದರೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಎಪ್ರಿಲ್‌ನಿಂದ ಆಗಸ್ಟ್‌ವರೆಗೆ ಒಟ್ಟು 1,551 ಕೋಟಿ ರೂ. ತೆರಿಗೆ ಆದಾಯ ಕಡಿತವಾಗಿದೆ.

ಕಳೆದ 2019-20ನೇ ಸಾಲಿನಲ್ಲಿ ಎಪ್ರಿಲ್‌ನಿಂದ ಆಗಸ್ಟ್‌ವರೆಗಿನ ಅವಧಿಯಲ್ಲಿ ಒಟ್ಟು 9,131 ಕೋಟಿ ರೂ. ಆದಾಯ ಸಂಗ್ರಹವಾಗಿತ್ತು.

ಆದರೆ ಪ್ರಸಕ್ತ ವರ್ಷದಲ್ಲಿ ಎಪ್ರಿಲ್‌ನಲ್ಲಿ ವಹಿವಾಟು ಸಂಪೂರ್ಣ ಸ್ಥಗಿತವಾಗಿತ್ತು.

ಆ ಬಳಿಕ ಎಂ.ಆರ್‌.ಪಿ. ದರದಲ್ಲಿ ಮದ್ಯ ಮಾರಾಟಕ್ಕಷ್ಟೇ ಅನುಮತಿ ನೀಡಲಾಗಿತ್ತು. ಆ ಬಳಿಕ ಮದ್ಯ ಮಾರಾಟ ಚೇತರಿಕೆಯಾಗಿ ಆದಾಯ ಸಂಗ್ರಹ ಪ್ರಮಾಣವೂ ವೃದ್ಧಿಸಲಾರಂಭಿಸಿತು ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸಕ್ತ ಜೂನ್‌ನಿಂದ ಅಬಕಾರಿ ತೆರಿಗೆ ಆದಾಯ ಪ್ರಮಾಣ ಹೆಚ್ಚಾಗುತ್ತಿದೆ. ಜೂನ್‌ ಮಾತ್ರವಲ್ಲದೆ, ಜುಲೈ, ಆಗಸ್ಟ್‌ನಲ್ಲೂ ಕ್ರಮವಾಗಿ ಹಿಂದಿನ ವರ್ಷಕ್ಕಿಂತಲೂ ಹೆಚ್ಚು ಆದಾಯ ಸಂಗ್ರಹವಾಗಿದೆ. ಇದೀಗ ಬಾರ್‌ ಮತ್ತು ರೆಸ್ಟೋರೆಂಟ್‌, ಕ್ಲಬ್‌, ಪಬ್‌, ತಾರಾ ಹೊಟೇಲ್‌ ಸೇರಿದಂತೆ ಇತರ ಅಬಕಾರಿ ಸನ್ನದುಗಳಲ್ಲಿ ಮದ್ಯ ಪೂರೈಕೆ ಎಂದಿನಂತೆ ಆರಂಭವಾಗಿರುವುದರಿಂದ ಮುಂದಿನ ತಿಂಗಳಲ್ಲೂ ತೆರಿಗೆ ಆದಾಯ ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.

ಗುರಿ ಸಾಧನೆ ಸವಾಲು
ಪ್ರಸಕ್ತ ವರ್ಷದಲ್ಲಿ 22,700 ಕೋಟಿ ರೂ. ಅಬಕಾರಿ ತೆರಿಗೆ ಸಂಗ್ರಹ ಗುರಿ ಇದೆ. ಆದರೆ ಐದು ತಿಂಗಳಲ್ಲಿ ಸಂಗ್ರಹವಾಗಿರುವುದು 7,580 ಕೋಟಿ ರೂ. ಮಾತ್ರ. ಉಳಿದ ಏಳು ತಿಂಗಳಲ್ಲಿ ಸುಮಾರು 15,120 ಕೋಟಿ ರೂ. ಆದಾಯ ಸಂಗ್ರಹ ಸವಾಲಾಗಲಿದ್ದು, ಕೋವಿಡ್‌ ಸಂದರ್ಭದಲ್ಲಿ ಗುರಿ ತಲುಪುವ ಸಾಧ್ಯತೆ ಕಡಿಮೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.