ಗಡಿಯಲ್ಲಿ ಚೀನಾ ಕ್ಯಾತೆ: ಪ್ಯಾಂಗಾಂಗ್ ತ್ಸೋನ ಫಿಂಗರ್ 4 ಪ್ರದೇಶ ಭಾರತೀಯ ಸೇನೆಯ ವಶಕ್ಕೆ?

ಭಾರತೀಯ ಸೇನೆಯ ಉನ್ನತ ಮೂಲಗಳು ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದೆ

Team Udayavani, Sep 2, 2020, 6:16 PM IST

ಗಡಿಯಲ್ಲಿ ಚೀನಾ ಕ್ಯಾತೆ: ಪ್ಯಾಂಗಾಂಗ್ ತ್ಸೋನ ಫಿಂಗರ್ 4 ಪ್ರದೇಶ ಭಾರತೀಯ ಸೇನೆಯ ವಶಕ್ಕೆ?

ನವದೆಹಲಿ/ಜಮ್ಮು-ಕಾಶ್ಮೀರ: ಲಡಾಖ್ ನ ಪ್ಯಾಂಗಾಂಗ್ ಸರೋವರದ ದಕ್ಷಿಣ ದಂಡೆಯಲ್ಲಿ ಭಾರತದ ಗಡಿಯೊಳಗಿನ ಪ್ರದೇಶವನ್ನು ವಶಕ್ಕೆ ತೆಗೆದುಕೊಳ್ಳಲು ರಾತ್ರಿ ದುಸ್ಸಾಹಸಕ್ಕೆ ಕೈಹಾಕಿ ಚೀನಾ ವಿಫಲವಾಗಿತ್ತು. ಅಲ್ಲದೇ ಸೋಮವಾರವೂ ಕೂಡಾ ಚೀನಾ ಉದ್ಧಟತನ ತೋರಿ ಪ್ರಚೋದನಕಾರಿ ವರ್ತನೆ ತೋರಿಸಿತ್ತು. ಏತನ್ಮಧ್ಯೆ ಭಾರತೀಯ ಪ್ಯಾಂಗಾಂಗ್ ತ್ಸೋ ಪ್ರದೇಶದ ಫಿಂಗರ್ 4 ಅನ್ನು ವಶಕ್ಕೆ ತೆಗೆದುಕೊಂಡಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.

ಭಾರತೀಯ ಸೇನೆ ಅತೀ ಎತ್ತರದ ಫಿಂಗರ್ 4 ಪ್ರದೇಶಕ್ಕೆ ತಲುಪುವಲ್ಲಿ ಒಂದು ತಂಡ ಯಶಸ್ವಿಯಾಗಿದೆ ಎಂದು ದ ಪ್ರಿಂಟ್ ವರದಿ ಮಾಡಿದೆ. ಪ್ಯಾಂಗಾಂಗ್ ತ್ಸೋನ ಉತ್ತರ ನದಿ ದಂಡೆ ಪ್ರದೇಶದ ಎದುರು ಭಾಗದಲ್ಲಿ ಪಹರೆ ಕಾಯಲಾಗುತ್ತಿದೆ ಎಂದು ತಿಳಿಸಿದೆ.

ಪ್ಯಾಂಗಾಂಗ್ ತ್ಸೋನ ಫಿಂಗರ್ 4 ಪ್ರದೇಶವನ್ನು ಚೀನಾ ಪಡೆ ಅಚ್ಚರಿಗೊಳ್ಳುವಂತೆ ಭಾರತೀಯ ಸೇನೆ ತನ್ನ ಸುಪರ್ದಿಗೆ ತೆಗೆದುಕೊಂಡಿದೆ ಎಂದು ಹೇಳಲಾಗುತ್ತಿದೆ. ಆದರೆ ಟೈಮ್ಸ್ ನೌ ವರದಿ ಪ್ರಕಾರ, ಭಾರತೀಯ ಸೇನೆಯ ಉನ್ನತ ಮೂಲಗಳು ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದೆ ಎಂದು ಹೇಳಿದೆ.

ಸದ್ಯ ಲಡಾಖ್ ನ ಪ್ಯಾಂಗಾಂಗ್ ಪ್ರದೇಶದಲ್ಲಿ ಅಂತಹ ಯಾವುದೇ ಬೆಳವಣಿಗೆ ನಡೆದಿಲ್ಲ. ಆದರೆ ಮುಂಜಾಗ್ರತಾ ಕ್ರಮವಾಗಿ ಪ್ಯಾಂಗಾಂಗ್ ತ್ಸೋ ಪ್ರದೇಶದಲ್ಲಿ ಭಾರತೀಯ ಸೇನೆ ಎಲ್ಲ ರೀತಿಯಿಂದಲೂ ಸರ್ವ ಸನ್ನದ್ಧವಾಗಿದೆ. ಅಲ್ಲದೇ ಉಭಯ ದೇಶಗಳ ಕಮಾಂಡರ್ ಮಟ್ಟದ ಮಾತುಕತೆ ಮುಂದುವರಿದಿದೆ ಎಂದು ತಿಳಿಸಿದೆ.

ಫಿಂಗರ್ 4 ಪ್ರದೇಶದಲ್ಲಿ ಚೀನಾ ಸೈನಿಕರು ಬೀಡು ಬಿಟ್ಟಿದ್ದು, ಅವರು ಒಳ ನುಸುಳದಂತೆ ತಡೆಯಲು ಭಾರತೀಯ ಸೇನೆ ಕೂಡಾ ಸಜ್ಜಾಗಿ ನಿಂತಿದೆ ಎಂದು ಮೂಲಗಳು ಹೇಳಿವೆ.

ವಿವಾದಿತ ಸ್ಥಳ ಭಾರತದಲ್ಲಿ ನಿಯಂತ್ರಣದಲ್ಲಿ:

ಪ್ಯಾಂಗಾಂಗ್ ಸರೋವರದ ದಂಡೆ ಪ್ರದೇಶವನ್ನು ಚೀನಾ ಸೈನಿಕರು ವಶಪಡಿಸಿಕೊಳ್ಳಲು ಯತ್ನಿಸಿದ್ದ ಪ್ರದೇಶ ಭಾರತೀಯ ಸೇನೆಯ ವಶದಲ್ಲಿದೆ. ಈ ಪ್ರದೇಶದ ಎತ್ತರದ ಸ್ಥಳಗಳ ಮೇಲೆ ಭಾರತ ತನ್ನ ಹಿಡಿಯ ಸಾಧಿಸಿದ್ದು, ಚೀನಾ ಯಾವುದೇ ರೀತಿಯ ಆಕ್ರಮಣಕ್ಕೆ ಮುಂದಾದರೂ ಕೂಡಾ ಅದನ್ನು ವಿಫಲಗೊಳಿಸಲಾಗುವುದು ಎಂದು ಸೇನಾ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.