![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Sep 3, 2020, 6:51 AM IST
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ಹಾಗೂ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು ಅವರು ಮಾತನಾಡಿದರು.
ಬೆಂಗಳೂರು: ಸ್ಯಾಂಡಲ್ವುಡ್ ಕಲಾವಿದರಿಗೆ ಡ್ರಗ್ಸ್ ಮಾಫಿಯಾ ನಂಟು ಇದೆ ಎಂಬುದಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ.
ಪ್ರಕರಣ ಇನ್ನೂ ತನಿಖೆಯ ಹಂತದಲ್ಲಿದ್ದು, ಆರೋಪ ಸಾಬೀತಾದರೆ ನ್ಯಾಯ ವ್ಯವಸ್ಥೆಯಲ್ಲಿ ಶಿಕ್ಷೆಯಾಗುತ್ತದೆ.
ಅಂಥ ಕಲಾವಿದರ ವಿರುದ್ಧ ವಾಣಿಜ್ಯ ಮಂಡಳಿಯೂ ಕಠಿನ ಕ್ರಮ ಜರಗಿಸಲಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಎಚ್ಚರಿಕೆ ನೀಡಿದೆ.
ಚಿತ್ರರಂಗದ ಕೆಲವು ಕಲಾವಿದರಿಗೆ ಡ್ರಗ್ಸ್ ಮಾಫಿಯಾ ಜತೆ ನಂಟಿದೆ ಎಂಬ ಆರೋಪಗಳ ಬಗ್ಗೆ ಪರ – ವಿರೋಧ ಚರ್ಚೆಗಳು ನಡೆಯುತ್ತಿರುವಾಗಲೇ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಬುಧವಾರ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.
ವಾಣಿಜ್ಯ ಮಂಡಳಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷ ಜೈರಾಜ್, ಸುಮಾರು 6 ತಿಂಗಳುಗಳಿಂದ ಚಿತ್ರರಂಗ ಆರ್ಥಿಕವಾಗಿ ಸಂಕಷ್ಟದಲ್ಲಿದೆ. ಈ ವಿಷಯವನ್ನು ಸರಕಾರದ ಗಮನಕ್ಕೂ ತಂದಿದ್ದೇವೆ. ನಾವು ಡ್ರಗ್ಸ್ ವಿಷಯಕ್ಕೆ ತಲೆ ಹಾಕುತ್ತಿಲ್ಲ. ನಮಗೆ ಆ ಅಧಿಕಾರವೂ ಇಲ್ಲ. ಇಂದ್ರಜಿತ್ ಲಂಕೇಶ್ ಮಾಡುತ್ತಿರುವ ಆರೋಪವನ್ನು ನಮ್ಮ ಗಮನಕ್ಕೆ ತಂದಿಲ್ಲ. ಅಲ್ಲದೆ ಬೇರೆ ಯಾವ ನಿರ್ದೇಶಕ, ನಿರ್ಮಾಪಕರು ಈ ಕುರಿತು ಮಾತನಾಡಿಲ್ಲ ಎಂದರು.
ಮಾಜಿ ಅಧ್ಯಕ್ಷ ಸಾ.ರಾ ಗೋವಿಂದು ಮಾತನಾಡಿ, ಹಿರಿಯರು ಶ್ರಮವಹಿಸಿ ಕಟ್ಟಿದ ಉದ್ಯಮವಿದು. ಸದಾ ಜನಪರವಾಗಿಯೇ ಇದೆ. ಈ ಆರೋಪ ನಮಗೆ ಅತೀವ ಬೇಸರ ತರಿಸಿದೆ. ಒಂದೆರಡು ಸಿನೆಮಾ ಮಾಡಿದವರನ್ನು, ಸಿನೆಮಾ ಉದ್ಯಮದವರು ಎಂದು ಒಪ್ಪಿಕೊಳ್ಳಲಾಗದು. ಒಂದಿಬ್ಬರ ತಪ್ಪನ್ನು ಇಡೀ ಚಿತ್ರರಂಗದ ತಪ್ಪು ಎನ್ನಲಾಗದು. ಇಂದ್ರಜಿತ್ ಮಾಡಿರುವ ಆರೋಪವನ್ನು ಸಾಬೀತುಪಡಿಸಬೇಕು. ಇಲ್ಲವಾದಲ್ಲಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು’ ಎಂದರು.
ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್ ಬಣಕಾರ್, ಪದಾಧಿಕಾರಿಗಳಾದ ಎನ್. ಎಂ. ಸುರೇಶ್, ನರಸಿಂಹಲು, ಎ. ಗಣೇಶ್, ನಾಗಣ್ಣ, ಎಂ.ಜಿ. ರಾಮಮೂರ್ತಿ, ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್, ಸಫೈರ್ ವೆಂಕಟೇಶ್ ಮೊದಲಾದವರು ಉಪಸ್ಥಿತರಿದ್ದರು.
ಗಾಂಧಿನಗರವನ್ನು ಗಾಂಜಾನಗರ ಎಂದು ಹೇಳಿರುವುದರಿಂದ ತುಂಬಾ ನೋವಾಗಿದೆ. ಕೋವಿಡ್ 19 ಪರಿಸ್ಥಿತಿಯಲ್ಲಿ ಹಲವರು ಕೆಲಸವಿಲ್ಲದೆ ಕೈ ಕಟ್ಟಿ ಕುಳಿತಿದ್ದಾರೆ. ಕೆಲಸಕ್ಕೋಸ್ಕರ ಹಾತೊರೆಯುತ್ತಿದ್ದಾರೆ. ಚಿತ್ರೀಕರಣ ಪ್ರಾರಂಭಿಸಿ ಎಂದು ಬೇಡಿಕೊಳ್ಳುತ್ತಿದ್ದಾರೆ. ಈ ಸಮಯದಲ್ಲಿ ಇಡೀ ಚಿತ್ರರಂಗದ ಮೇಲೆ ಆರೋಪ ಹೊರಿಸುತ್ತಿರುವುದರಿಂದ ತುಂಬಾ ದುಃಖವಾಗುತ್ತಿದೆ.
– ದೊಡ್ಡಣ್ಣ, ಹಿರಿಯ ನಟ
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.