PM Cares ಫಂಡ್ ಗೆ ಪ್ರಧಾನಿ ಮೋದಿ ನೀಡಿರುವ ದೇಣಿಗೆ ಎಷ್ಟು ಗೊತ್ತೇ?

ಪ್ರಧಾನಿ ಮೋದಿ ಅವರು ಇಲ್ಲಿಯವರೆಗೆ ವಿವಿಧ ಸಾಮಾಜಿಕ ಉದ್ದೇಶಗಳಿಗೆ ನೀಡಿರುವ ದೇಣಿಗೆಯ ವಿವರ ಇಲ್ಲಿದೆ...

Team Udayavani, Sep 3, 2020, 6:50 PM IST

Narendra-Modi-4

ಹೊಸದಿಲ್ಲಿ: ಕೋವಿಡ್ 19 ವಿರುದ್ಧದ ಹೋರಾಟಕ್ಕೆ ಆರ್ಥಿಕ ಬಲ ತುಂಬುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಳೆದ ಮಾರ್ಚ್ ತಿಂಗಳಿನಲ್ಲಿ ಪ್ರಾರಂಭಿಸಿದ PM Cares ಫಂಡ್ ನ ಮೊದಲ ಆಡಿಟ್ ವರದಿ ಬಹಿರಂಗಗೊಂಡಿದೆ.

ಮಾರ್ಚ್ 27ರಂದು ಪ್ರಾರಂಭಿಸಲಾಗಿದ್ದ ಈ ನಿಧಿಗೆ ಕೇವಲ 5 ದಿನಗಳ ಅವಧಿಯಲ್ಲಿ 3,076 ಕೋಟಿ ರೂಪಾಯಿಗಳಷ್ಟು ದೇಣಿಗೆ ಹರಿದುಬಂದಿತ್ತು. ಆದರೆ ಇದಕ್ಕೆ ಹೊರತಾಗಿ ಪ್ರಾರಂಭಿಕ ನಿಧಿಯಾಗಿ ಪ್ರಧಾನಿ ಮೋದಿ ಅವರು 2.25 ಲಕ್ಷ ರೂಪಾಯಿಗಳ ದೇಣಿಗೆಯನ್ನು ಸಲ್ಲಿಸಿದ್ದರು.

ಪ್ರಧಾನಿ ಅವರ ಈ ನಡೆಯನ್ನು ಅವರದೇ ಪಕ್ಷದ ಹಲವಾರು ನಾಯಕರು ಶ್ಲಾಘಿಸಿದ್ದಾರೆ.

ಹಾಗೆಂದು, ಪ್ರಧಾನಿ ಮೋದಿ ಅವರು ಸಾಮಾಜಿಕ ಉದ್ದೇಶಗಳಿಗಾಗಿ ದೇಣಿಗೆಯನ್ನು ನೀಡುತ್ತಿರುವುದು ಇದೇ ಮೊದಲೇನಲ್ಲ.

ನರೇಂದ್ರ ಮೋದಿ ಅವರು ಇದುವರೆಗೆ ಸುಮಾರು 103 ಕೋಟಿ ರೂಪಾಯಿಗಳನ್ನು ವಿವಿಧ ಸಾಮಾಜಿಕ ಉದ್ದೇಶಗಳಿಗಾಗಿ ದೇಣಿಗೆ ನೀಡಿದ್ದಾರೆ.

2019ರಲ್ಲಿ ಪ್ರಧಾನಿ ಮೋದಿ ಅವರು ಕುಂಭ ಮೇಳದ ಸ್ವಚ್ಛತಾ ಕಾರ್ಮಿಕರ ಕಲ್ಯಾಣ ನಿಧಿಗಾಗಿ 21 ಲಕ್ಷ ರೂಪಾಯಿಗಳ ದೇಣಿಗೆಯನ್ನು ನೀಡಿದ್ದರು.

ಇನ್ನು ದಕ್ಷಿಣ ಕೊರಿಯಾದಿಂದ ಸಿಯೋಲ್ ಶಾಂತಿ ಪ್ರಶಸ್ತಿಯ ಜೊತೆಗೆ ತನಗೆ ಸಿಕ್ಕಿದ 1.3 ಕೋಟಿ ರೂಪಾಯಿಗಳ ಮೊತ್ತವನ್ನು ಪ್ರಧಾನಿ ಮೋದಿ ಅವರು ಆ ಕ್ಷಣದಲ್ಲೇ ‘ನಮಾಮಿ ಗಂಗಾ’ ಯೋಜನೆಗಾಗಿ ಮೀಸಲಿಡುವ ಘೋಷಣೆಯನ್ನು ಮಾಡಿದ್ದರು.

ತನ್ನ ಬಳಿಯಲ್ಲಿದ್ದ ಸ್ಮರಣಿಕೆಗಳನ್ನು ಹರಾಜು ಹಾಕುವ ಮೂಲಕ ನರೇಂದ್ರ ಮೋದಿ ಅವರು ಇತ್ತೀಚೆಗಷ್ಟೇ 3.40 ಕೋಟಿ ರೂಪಾಯಿಗಳ ಮೊತ್ತವನ್ನು ಸಂಗ್ರಹಿಸಿ, ಪೂರ್ತಿ ಮೊತ್ತವನ್ನು ರಾಷ್ಟ್ರೀಯ ಗಂಗಾ ಸ್ವಚ್ಛತಾ ಯೋಜನೆಗೆ ಸಲ್ಲಿಸಿದ್ದರು.

ಮತ್ತು 2015ರವರೆಗೆ ತನಗೆ ಸಿಕ್ಕಿದ್ದ ಸ್ಮರಣಿಕೆಗಳನ್ನು ಹರಾಜು ಹಾಕಿ ಸಂಗ್ರಹಗೊಂಡಿದ್ದ ಹೆಚ್ಚುವರಿ 8.35 ಕೋಟಿ ರೂಪಾಯಿಗಳನ್ನೂ ಸಹ ಮೋದಿ ಅವರು ‘ನಮಾಮಿ ಗಂಗಾ ಯೋಜನೆ’ಗಾಗಿ ನೀಡಿದ್ದಾರೆ.

ತಾವು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ತಮ್ಮ ಅಧಿಕಾರಾವಧಿ ಪೂರ್ಣಗೊಂಡಿದ್ದ ಸಂದರ್ಭದಲ್ಲಿ ಮೋದಿ ಅವರು ತಮ್ಮ ಸ್ವಂತ ಉಳಿಕೆ ಮೊತ್ತದ 21 ಲಕ್ಷ ರೂಪಾಯಿಗಳನ್ನು ಗುಜರಾತ್ ಸರಕಾರದ ಸಿಬ್ಬಂದಿಗಳ ಪುತ್ರಿಯರ ಶಿಕ್ಷಣದ ಉದ್ದೇಶಕ್ಕಾಗಿ ದೇಣಿಗೆ ನೀಡಿದ್ದರು.

ಇನ್ನು, ಗುಜರಾತ್ ಮುಖ್ಯಮಂತ್ರಿಯಾಗಿದ್ದಷ್ಟು ಕಾಲ ತನಗೆ ಸಿಕ್ಕಿದ್ದ ಸ್ಮರಣಿಕೆಗಳನ್ನೆಲ್ಲಾ ಹರಾಜು ಹಾಕಿ ಅದರಿಂದ ಲಭಿಸಿದ 89.96 ಕೋಟಿ ರೂಪಾಯಿಗಳನ್ನು ಕನ್ಯಾ ಕೆಲವಾನಿ ನಿಧಿಗೆ ದೇಣಿಗೆಯಾಗಿ ನೀಡಿದ್ದರು.

ಹೀಗೆ, ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಕಾರ್ಯಗಳಿಗೆ ಮತ್ತು ಈ ಉದ್ದೇಶಗಳಿಗೆ ತಮ್ಮ ಪಾಲಿನ ದೇಣಿಗೆಯನ್ನು ನೀಡುವುದರಲ್ಲಿ ಯಾವಾಗಲೂ ಮುಂಚೂಣಿಯಲ್ಲಿರುವ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.