![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Sep 6, 2020, 1:11 AM IST
ಹೊಸದಿಲ್ಲಿ: ಕೊಚ್ಚಿಯಲ್ಲಿ ನಿರ್ಮಾಣವಾಗುತ್ತಿರುವ ಸ್ವದೇಶಿ ವಿಮಾನವಾಹಕ ನೌಕೆಯಲ್ಲಿನ ಕಂಪ್ಯೂಟರ್ ಸಾಧನಗಳನ್ನು ಕಳವು ಮಾಡಿದ ಆರೋಪಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶುಕ್ರವಾರ ಇಬ್ಬರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ.
ಬಿಹಾರದ ಮುಂಗೇರ್ ಜಿಲ್ಲೆಯ ಸುಮಿತ್ ಕುಮಾರ್ ಸಿಂಗ್ ಮತ್ತು ರಾಜಸ್ಥಾನದ ಹನುಮಾನ್ಗಢ ಜಿಲ್ಲೆಯ ದಯಾರಾಮ್ ಎಂಬವರನ್ನು ಚಾರ್ಜ್ ಶೀಟ್ನಲ್ಲಿ ಆರೋಪಿಗಳೆಂದು ಹೆಸರಿಸಲಾಗಿದೆ. ಕಳೆದ ವರ್ಷದ ಜುಲೈನಿಂದ ಸೆಪ್ಪಂಬರ್ ಅವಧಿಯಲ್ಲಿ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ನಲ್ಲಿ ನಿರ್ಮಾಣ ಹಂತದಲ್ಲಿದ್ದ ವಿಮಾನವಾಹಕ ನೌಕೆ ಯೊಳಗೆ ಅಕ್ರಮವಾಗಿ ನುಗ್ಗಿ, ಅಲ್ಲಿದ್ದ ಪ್ರೊಸೆಸರ್ಗಳು, ರ್ಯಾಮ್, ಸಾಲಿಡ್ ಸ್ಟೇಟ್ ಡ್ರೈವ್ಗಳು ಸೇರಿದಂತೆ ಹಲವು ಎಲೆಕ್ಟ್ರಾನಿಕ್ ವಸ್ತುಗಳನ್ನು ಕದಿಯ ಲಾಗಿತ್ತು. 2019ರ ಸೆಪ್ಪಂಬರ್ನಲ್ಲಿ ಈ ಪ್ರಕರಣದ ವಿಚಾರಣೆ ಆರಂಭಿಸಿದ ಎನ್ಐಎ, ಸುಮಾರು 9 ತಿಂಗಳ ಕಾಲ ವಿವಿಧ ರಾಜ್ಯಗಳಲ್ಲಿ ವ್ಯಾಪಕ ತನಿಖೆ ನಡೆಸಿ, ಕೊನೆಗೂ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿತು. ಬಿಹಾರ ಮತ್ತು ರಾಜಸ್ಥಾನದಲ್ಲಿ ಇಬ್ಬರನ್ನೂ ಸೆರೆಹಿಡಿದು ತನಿಖೆ ನಡೆಸಿ ದಾಗ, ಆರೋಪಿಗಳು ತಪ್ಪೊಪ್ಪಿಕೊಂಡಿ ದ್ದರು. ವಿಮಾನವಾಹಕ ನೌಕೆಯ ಪೇಂಟಿಂಗ್ ಕೆಲಸ ಮಾಡುವ ವೇಳೆ ಈ ಕೃತ್ಯ ಎಸಗಿದ್ದರು ಎಂದು ಎನ್ಐಎ ವಕ್ತಾರರು ತಿಳಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.