![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 7, 2020, 2:49 PM IST
ನವದೆಹಲಿ: ಕೋವಿಡ್ ಸೋಂಕಿನ ವ್ಯಾಪಿಸುವಿಕೆ ತಗ್ಗಿದ ಬಳಿಕವೂ ರೈಲ್ವೆಯ ಎಸಿ ಕೋಚ್ಗಳಲ್ಲಿ ಪ್ರಯಾಣಿಸುವವರು ತಮ್ಮ ಸ್ವಂತ ಹೊದಿಕೆ ಮತ್ತು ಚಾದರಗಳನ್ನು ತರ ಬೇಕಾಗುತ್ತದೆ ಎಂದು ರೈಲ್ವೆ ಮಂಡಳಿಯ ಅಧ್ಯಕ್ಷ ವಿನೋದ್ ಕುಮಾರ್ ಯಾದವ್ ಭಾನುವಾರ ಹೇಳಿದ್ದಾರೆ.
ಪ್ರಯಾಣಿಕರಿಗೆ ಒಂದೇ ಬಾರಿಗೆ ಬಳಸಬಹುದಾದ ಬೆಡ್ ಶೀಟ್ ಒದಗಿಸಲು ಅಥವಾ ಪ್ರಯಾಣಿಕರೇ ಸ್ವತಃ ಚಾದರ ಮತ್ತು ಹೊದಿಕೆ ತರುವಂತೆ ಸೂಚಿ ಸಲು ನಿರ್ಧರಿಸಿದ್ದೇವೆ. ಇದಕ್ಕಾಗಿ ವಿಸ್ತೃತ ನೀತಿಯೊಂದನ್ನು ಜಾರಿಗೆ ತಂದು, ಅಂತಿಮ ನಿರ್ಧಾರ ಕೈಗೊಳ್ಳಬೇಕಾಗುತ್ತದೆ.
ರೈಲು ಪ್ರಯಾಣದ ವೇಳೆ ಸಾಧ್ಯವಾದಷ್ಟು ನೈರ್ಮಲ್ಯ ಕಾಪಾಡಿಕೊಳ್ಳುವ ಉದ್ದೇಶದಿಂದ ಇಂಥ ನಿರ್ಧಾರ ಕೈಗೊಂಡಿದ್ದೇವೆ ಎಂದೂ ಯಾದವ್ ಹೇಳಿದ್ದಾರೆ.
ಈ ಹಿಂದೆ ಎಸಿ ಬೋಗಿಗಳಲ್ಲಿ ಪ್ರಯಾಣಿಕರಿಗೆ ರೈಲ್ವೆಯ ವತಿಯಿಂದಲೇ ಹೊದಿಕೆ ಒದಗಿಸಲಾಗುತ್ತಿತ್ತು. ಆದರೆ, ಕೊರೊನಾ ಸೋಂಕು ದೇಶವನ್ನು ಪ್ರವೇಶಿ ಸಿದ ಬಳಿಕ, ಸೋಂಕಿನ ವ್ಯಾಪಿಸುವಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಇಲಾಖೆಯು ತಿಳಿಸಿತ್ತು.
ಸಂಚಾರ ರದ್ದಾಗಲ್ಲ: ರೈಲ್ವೆಯು ಸುಮಾರು 500ರಷ್ಟು ರೈಲುಗಳ ಸಂಚಾರವನ್ನೇ ರದ್ದು ಮಾಡಲಿದೆ ಎಂಬ ವರದಿಗಳ ಕುರಿತು ಪ್ರತಿಕ್ರಿಯಿಸಿರುವ ಮಂಡಳಿ, ಯಾವುದೇ ರೈಲಿನ ಸಂಚಾರವನ್ನೂ ರದ್ದುಗೊಳಿಸುವ ನಿರ್ಧಾರ ಕೈಗೊಂಡಿಲ್ಲ ಮತ್ತು ಯಾವುದೇ ರೈಲು ನಿಲ್ದಾಣವನ್ನೂ ಮುಚ್ಚಲಾಗಿಲ್ಲ ಎಂದು ಸ್ಪಷ್ಟಪಡಿಸಿದೆ.
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.