ಶಿಕ್ಷಕರು ದೇವರಿದ್ದಂತೆ: ಪಾಟೀಲ


Team Udayavani, Sep 8, 2020, 5:52 PM IST

ಶಿಕ್ಷಕರು ದೇವರಿದ್ದಂತೆ: ಪಾಟೀಲ

ಸಾಂದರ್ಭಿಕ ಚಿತ್ರ

ರಾಯಚೂರು: ಸಮಾಜ ಹಾಗೂ ದೇಶದ ಏಳಿಗೆಗೆ ಕಾರಣೀಭೂತರಾದ ಶಿಕ್ಷಕರೇ ಇಂದಿನ ದೇವರಿದ್ದಂತೆ. ನಾವು ದೇವರನ್ನು ನೋಡಿಲ್ಲ, ಬದಲಿಗೆ ಶಿಕ್ಷಕರಲ್ಲಿ ದೇವರನ್ನು ಕಾಣುತ್ತಿದ್ದೇವೆ ಎಂದು ನಗರ ಶಾಸಕ ಡಾ| ಶಿವರಾಜ ಪಾಟೀಲ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಪಂ ಮತ್ತು ಸಾರ್ವಜನಿಕಶಿಕ್ಷಣ ಇಲಾಖೆ ಸಹಯೋಗದಲ್ಲಿ ಸೋಮವಾರ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಆಯೋಜಿಸಿದ್ದ ಜಿಲ್ಲಾ ಮತ್ತು ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣದಿಂದಲೇ ಪ್ರಗತಿ ಸಾಧ್ಯ. ಜಿಲ್ಲೆಯಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರ ಸಾಕಷ್ಟು ಸೌಲಭ್ಯ ಒದಗಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಶೈಕ್ಷಣಿಕವಾಗಿಜಿಲ್ಲೆ ಸಾಕಷ್ಟು ಉತ್ತಮ ಸಾಧನೆ ಮಾಡುತ್ತಿದೆ. ಇದಕ್ಕೆ ಕಾರಣ ಶಿಕ್ಷಕರ ಶ್ರಮ. ಮುಂದಿನದಿನಗಳಲ್ಲಿ ಜಿಲ್ಲೆ ಶೈಕ್ಷಣಿಕವಾಗಿ ಪ್ರಗತಿಯತ್ತ ದಾಪುಗಾಲು ಇಡಲಿದೆ ಎಂದರು.

ಸರ್ಕಾರ ಈ ಭಾಗದಲ್ಲಿ ವಿಶ್ವವಿದ್ಯಾಲಯಸ್ಥಾಪನೆ, ವೃತ್ತಿಪರ ಕಾಲೇಜುಗಳು ಸೇರಿದಂತೆ ಶೈಕ್ಷಣಿಕ ಪ್ರಗತಿಗೆ ಹಲವಾರು ಕಾರ್ಯಕ್ರಮ ರೂಪಿಸುತ್ತಿದೆ. ಕಾಲಕ್ಕೆ ತಕ್ಕಂತೆ ಶಿಕ್ಷಣದರೂಪುರೇಷೆ ಬದಲಾಗುತ್ತಿವೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಶಾಲೆಗಳಿಗೆ 100 ಕೊಠಡಿ ನಿರ್ಮಿಸಲಾಗುವುದು. ಎಲ್ಲ ಶಾಲೆಗಳಲ್ಲೂ ಶೌಚಾಲಯ, ಅಡುಗೆ ಕೋಣೆ ನಿರ್ಮಿಸಲಾಗುವುದು, ಗುರುಭವನ ನಿರ್ಮಾಣ ಕಾರ್ಯ ಕೈಗೊಂಡಿದ್ದು, ಒಂದು ಕೋಟಿ ರೂ. ಅನುದಾನ ನೀಡಲಾಗುವುದು. ಬಿಇಡಿ ಮುಗಿಸಿದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಶೀಘ್ರ ಬಡ್ತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಡಿಡಿಪಿಐ ಬಿ.ಎಚ್‌.ಗೋನಾಳ ಮಾತನಾಡಿ, ಶಿಕ್ಷಕರ ದಿನಾಚರಣೆಯಂದು ಅರ್ಹ ಶಿಕ್ಷಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದೆ. ಮಹತ್ವಾಕಾಂಕ್ಷಿ  ಜಿಲ್ಲೆಗಳಲ್ಲಿ ಒಂದಾಗಿರುವ ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಎಲ್ಲ ಶಿಕ್ಷಕರು ಶ್ರಮಿಸಬೇಕು. ಶಿಕ್ಷಣದ ಅಭಿವೃದ್ಧಿಗೆ ಶಾಸಕರು, ಜಿಲ್ಲಾ ಧಿಕಾರಿಗಳು, ಜಿಪಂ ಸಿಇಒ ಬೆಂಬಲವಾಗಿ ನಿಂತಿದ್ದಾರೆ, ಶಿಕ್ಷಕರು ಸಹ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದರು.

ಆರ್‌ಡಿಎ ಅಧ್ಯಕ್ಷ ಯಾಪಚೆಟ್ಟು ಗೋಪಾಲರೆಡ್ಡಿ, ಬಿಇಒ ಚಂದ್ರಶೇಖರದೊಡ್ಡಮನಿ, ಮುಖಂಡರಾದ ರವೀಂದ್ರ ಜಲ್ದಾರ್‌, ಕಡಿಗೋಳ ಆಂಜನೇಯ, ಶ್ರೀನಿವಾಸ ರೆಡ್ಡಿ, ಪಿ. ಶ್ರೀನಿವಾಸ ನಾಯಕ, ಆರ್‌ಡಿಎ ಸದಸ್ಯ ಶೇಖರ ವಾರದ, ಸೇರಿದಂತೆ ಇತರರಿದ್ದರು. ಜಿಲ್ಲಾ ಮತ್ತು ರಾಯಚೂರು ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿಭಾಗದ ಅತ್ಯುತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shrana-p

Hospital: ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆಗಾಗಿ ಕೇಂದ್ರಕ್ಕೆ ಮನವಿ: ಸಚಿವ ಡಾ. ಶರಣಪ್ರಕಾಶ

Manvi

Raichuru: ಅಪಘಾತದಲ್ಲಿ ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ: ಸಿಎಂ ಸಿದ್ದರಾಮಯ್ಯ

Manvi: ಶಾಲಾ ಬಸ್-‌ ಸರ್ಕಾರಿ ಬಸ್‌ ನಡುವೆ ಭೀಕರ ಅಪಘಾತ; ಇಬ್ಬರು ಮಕ್ಕಳು ಸಾವು

Manvi: ಶಾಲಾ ಬಸ್-‌ ಸರ್ಕಾರಿ ಬಸ್‌ ನಡುವೆ ಭೀಕರ ಅಪಘಾತ; ಇಬ್ಬರು ಮಕ್ಕಳು ಸಾವು

Muda Case: ಮುಡಾ‌ ಪ್ರಕರಣ ಅಂದುಕೊಂಡಿದ್ದಕ್ಕಿಂತ ಆಳವಾಗಿದೆ- ಸಚಿವ ವಿ.ಸೋಮಣ್ಣ

Muda Case: ಮುಡಾ‌ ಪ್ರಕರಣ ಅಂದುಕೊಂಡಿದ್ದಕ್ಕಿಂತ ಆಳವಾಗಿದೆ- ಸಚಿವ ವಿ.ಸೋಮಣ್ಣ

Raichur: ನಗರಸಭೆ ಕೈ ವಶ… ಅಧ್ಯಕ್ಷೆಯಾಗಿ ನರಸಮ್ಮ, ಉಪಾಧ್ಯಕ್ಷರಾಗಿ ಸಾಜಿದ್ ಸಮೀರ್

Election: ರಾಯಚೂರು ನಗರಸಭೆ ಕೈ ವಶ, ಅಧ್ಯಕ್ಷೆಯಾಗಿ ನರಸಮ್ಮ, ಉಪಾಧ್ಯಕ್ಷರಾಗಿ ಸಾಜಿದ್ ಸಮೀರ್

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.