ಕರಾವಳಿಯಾದ್ಯಂತ ಮೊಂತಿ ಫೆಸ್ತ್ ಆಚರಣೆ; ಹೊಸ ತೆನೆ ವಿತರಣೆ

ಚರ್ಚ್‌ಗಳಲ್ಲಿ ಸಂಭ್ರಮದ ಬಲಿಪೂಜೆ ; ಕೋವಿಡ್ ಹಿನ್ನೆಲೆ ಸರಳ ಹಬ್ಬ ಆಚರಣೆ

Team Udayavani, Sep 8, 2020, 9:39 PM IST

ಕರಾವಳಿಯಾದ್ಯಂತ ಮೊಂತಿ ಫೆಸ್ತ್ ಆಚರಣೆ; ಹೊಸ ತೆನೆ ವಿತರಣೆ

ವಾಮಂಜೂರು ಶ್ರಮಿಕ ಸಂತ ಜೋಸೆಫ್ರ ಚರ್ಚ್‌ನಲ್ಲಿ ಮೊಂತಿಫೆಸ್ತ್ ಆಚರಣೆ

ಮಹಾನಗರ: ಮಂಗಳೂರು ನಗರ ಸಹಿತ ಕರಾವಳಿಯಾದ್ಯಂತ ಕೊಂಕಣಿ ಭಾಷಿಗ ಕೆಥೋಲಿಕರು ಮಂಗಳವಾರ ಮೊಂತಿ ಫೆಸ್ತ್ನ್ ನ್ನು ಆಚರಿಸಿದರು. ಯೇಸುಕ್ರಿಸ್ತರ ತಾಯಿ ಮೇರಿ ಮಾತೆಯ ಜನ್ಮದಿನವಾದ ಸೆ. 8ಅನ್ನು ಮೊಂತಿ ಫೆಸ್ತ್ ಹಬ್ಬವಾಗಿ ಆಚರಿಸಲಾಗುತ್ತದೆ. ಚರ್ಚ್‌ಗಳಲ್ಲಿ ಹಬ್ಬದ ಬಲಿಪೂಜೆ ನೆರವೇರಿಸಲಾಯಿತು. ಮೇರಿ ಮಾತೆಗೆ ಹೂವುಗಳನ್ನು ಅರ್ಪಿಸಿ ನಮಿಸಿ ಪ್ರಾರ್ಥನೆ ಸಲ್ಲಿಸಲಾಯಿತು. ಕೊರೊನಾ ಹಿನ್ನೆಲೆಯಲ್ಲಿ ಹಬ್ಬವನ್ನು ಸರಳವಾಗಿ ಆಚರಿಸಲಾಯಿತು.

ತಾಯಿ ಮೇರಿ ಮಾತೆಯ ಜನ್ಮದಿನ, ತೆನೆ ಹಬ್ಬ ಹಾಗೂ ಹೆಣ್ಮಕ್ಕಳ ದಿನವನ್ನು ಸಂಯುಕ್ತವಾಗಿ “ಮೊಂತಿಫೆಸ್ತ್’ ಎಂಬ ಹೆಸರಿನಲ್ಲಿ ಆಚರಿಸಲಾಗುತ್ತಿದೆ. ಚರ್ಚ್‌ಗಳಲ್ಲಿ ಬೆಳಗ್ಗೆ ಹಬ್ಬದ ಬಲಿಪೂಜೆ, ಹೊಸತೆನೆಯ ಆಶೀರ್ವಚನ, ವಿತರಣೆ, ಹೂವು ಅರ್ಪಿಸಿ ಮೇರಿ ಮಾತೆಗೆ ನಮನ, ಸಿಹಿ, ತಿಂಡಿ ಹಾಗೂ ಕಬ್ಬು ವಿತರಣೆ ಕಾರ್ಯಕ್ರಮಗಳು ಜರಗಿದವು. ಧರ್ಮಗುರುಗಳು ಹಬ್ಬದ ಸಂದೇಶ ನೀಡಿದರು. ಬಲಿಪೂಜೆಯ ಅನಂತರ ಪೂಜಿಸಿದ ತೆನೆಯನ್ನು ಭಕ್ತರಿಗೆ ವಿತರಿಸಲಾಯಿತು. ಕೊರೊನಾ ಹಿನ್ನಲೆಯಲ್ಲಿ ಸಾಮಾಜಿಕ ಅಂತರಕ್ಕೆ ಪ್ರಾಮುಖ್ಯತೆಯನ್ನು ನೀಡಲಾಗಿತ್ತು. ಸ್ಯಾನಿಟೈಸರ್‌ ಬಳಕೆ, ಥರ್ಮಲ್‌ ಸ್ಕ್ಯಾನಿಂಗ್‌ ಕಡ್ಡಾಯಗೊಳಿಸಲಾಗಿತ್ತು. ಕೊಡಿಯಾಲಬೈಲ್‌ನ ಬಿಷಪ್‌ ಹೌಸ್‌ ಚಾಪೆಲ್‌ನಲ್ಲಿ ಧರ್ಮಪ್ರಾಂತದ ಶ್ರೇಷ್ಠ ಗುರುಗಳಾದ ಮೊ| ಮ್ಯಾಕ್ಸಿಂ ನೊರೊನ್ಹಾ ಅವರು ಬಲಿಪೂಜೆ ನೆರವೇರಿಸಿದರು. ನಗರದ ಜಪ್ಪುವಿನಲ್ಲಿರುವ ಸಂತ ಅಂಥೋನಿ ಆಶ್ರಮದಲ್ಲಿ ಮೊಂತಿಹಬ್ಬ ಆಚರಿಸಲಾಯಿತು. ಆಶ್ರಮದ ನಿರ್ದೇಶಕ ವಂ| ಓನಿಲ್‌ ಡಿಸೋಜಾ, ಸಹಾಯಕ ನಿರ್ದೇಶಕರಾದ ವಂ| ಅಲ್ಬನ್‌ ರಾಡ್ರಿಗಸ್‌, ವಂ| ರೋಶನ್‌ ಡಿಸೋಜಾ ಉಪಸ್ಥಿತರಿದ್ದರು.

ಪಾಲ್ದನೆ ಚರ್ಚ್‌
ನಗರದ ಪಾಲ್ದನೆ ಸಂತ ತೆರೇಸಾ ಚರ್ಚ್‌ ನಲ್ಲಿ ಮೊಂತಿಫೆಸ್ತ್ ಆಚರಣೆ ಜರಗಿತು. ಮಂಗಳೂರು ಧರ್ಮಪ್ರಾಂತ್ಯದ ಜ್ಯೂಡಿಷಿಯಲ್‌ ವಿಕಾರ್‌ ವಾಲ್ಟರ್‌ ಡಿ’ಮೆಲ್ಲೊ ಅವರು ದಿನದ ಬಲಿಪೂಜೆ ನೇತೃತ್ವ ವಹಿಸಿದರು. ಬಲಿಪೂಜೆಯ ಅನಂತರ ಶಿಕ್ಷಕರ ದಿನವನ್ನು ಆಚರಿಸಲಾಯಿತು. ಆ ಚರ್ಚಿನ ವ್ಯಾಪ್ತಿಯಲ್ಲಿ ಬರುವ ಶಿಕ್ಷಕ, ಶಿಕ್ಷಕಿಯನ್ನು ಹೂಗುಚ್ಚವನ್ನು ನೀಡಿ ಸಮ್ಮಾನಿಸಲಾಯಿತು. ವಂ| ಅಲ್ಬನ್‌ ಡಿ’ಸೋಜಾ, ಚರ್ಚ್‌ನ ಪಾಲನ ಸಮಿತಿಯ ಉಪಾಧ್ಯಕ್ಷ ವಿಲಿಯಂ ಲೋಬೋ ಹಾಗೂ ಕಾರ್ಯದರ್ಶಿ ಆಸ್ಟಿನ್‌ ಮೊಂತೆರೋ ಉಪಸ್ಥಿತರಿದ್ದರು. ಚರ್ಚ್‌ನ ವ್ಯಾಪ್ತಿಯ ಪ್ರಸ್ತುತ ವರ್ಷದಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು.

ಬಜ್ಜೋಡಿಯ ಚರ್ಚ್‌
ಬಜ್ಜೋಡಿ ಇನೆಟ್‌ ಮೇರಿ ಚರ್ಚ್‌ನಲ್ಲಿ ಬೆಳಗ್ಗೆ ಬಲಿಪೂಜೆಯನ್ನು ವಂ|ಆರ್ಚಿಬಾಲ್ಡ್‌ ಗೊನ್ಸಾಲ್ವಿಸ್‌ರವರು ಅರ್ಪಿಸಿದರು. ವಂ| ಐವನ್‌ ಡಿಸೋಜಾ, ವಂ| ಪ್ಯಾಟ್ರಿಕ್‌ ಲೋಬೋ, ವಂ| ರಾಯನ್‌ ಪಿಂಟೊ, ವಂ| ಬಾರ್ನಬಾಸ್‌ ಮೊನಿಸ್‌ ಅವರು ಉಪಸ್ಥಿತರಿದ್ದರು. ಬಲಿಪೂಜೆಯ ಮುಂಚೆ ಪ್ರಧಾನ ಯಾಜಕರಾದ ವಂ| ಆರ್ಚಿಬಾಲ್ಡ್‌ ಗೊನ್ಸಾಲ್ವಿಸ್‌ ಅವರು ಹೊಸ ತೆನೆಯನ್ನು ಆಶೀರ್ವದಿಸಿದರು . ಬಲಿಪೂಜೆಯ ನಂತರ ಭತ್ತದ ಕದಿರನ್ನು ವಿತರಿಸಲಾಯಿತು.

ವಾಮಂಜೂರಿನ ಚರ್ಚ್‌
ವಾಮಂಜೂರು ಶ್ರಮಿಕ ಸಂತ ಜೊಸೆಫ್ರ ಚರ್ಚ್‌ನಲ್ಲಿ ಮೊಂತಿ ಫೆಸ್ತ್ನ್ನು ಬೆಳಗ್ಗೆ 7.30ಕ್ಕೆ ಬಲಿಪೂಜೆಯೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು. ವಂ| ಜೇಮ್ಸ್‌ ಡಿ’ಸೋಜಾ, ವಂ| ರೋಹನ್‌ ಲೋಬೋ, ವಂ| ಜೋನ್‌ ಫೆರ್ನಾಂಡೀಸ್‌ ಬಲಿಪೂಜೆ ನೆರವೇರಿಸಿದರು. ಭಕ್ತರು ಮೇರಿಮಾತೆಗೆ ಹೂವುಗಳನ್ನು ಅರ್ಪಿಸಿ ನಮಿಸಿದರು. ಬಲಿಪೂಜೆಯ ಅನಂತರ ಭಕ್ತರಿಗೆ ಹೊಸ ಭತ್ತದ ತೆನೆಯನ್ನು ವಿತರಿಸಲಾಯಿತು.

ರೋಜಾರಿಯೋ ಕೆಥೆಡ್ರಲ್‌
ಮಂಗಳೂರಿನ ರೊಜಾ ರಿಯೋ ಕೆಥೆಡ್ರಲ್‌ನಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್‌ ವಂ| ಡಾ| ಪೀಟರ್‌ ಪಾವ್ಲ್ ಸಲ್ಡಾನ್ಹಾ ಅವರು ಪ್ರಧಾನ ಬಲಿಪೂಜೆ ನೆರವೇರಿಸಿದರು. ರೊಸಾರಿಯೊ ಕೆಥಡ್ರಲ್‌ನ ಪ್ರಧಾನ ಧರ್ಮಗುರುಗಳಾದ ವಂ| ಅಲ್ಫೆ†ಡ್‌ ಪಿಂಟೋ, ಸಹಾಯಕ ಧರ್ಮಗುರುಗಳಾದ ವಂ| ವಿನೋದ್‌ ಲೋಬೋ, ವಂ| ವಿಕ್ಟರ್‌ ಡಿ’ಸೋಜಾ, ಗ್ಲ್ಯಾಡ್‌ಸಮ್‌ ಮೈನರ್‌ ಸೆಮಿನರಿಯ ರೆಕ್ಟರ್‌ ವಂ| ಅನಿಲ್‌ ಐವನ್‌ ಫೆರ್ನಾಂಡಿಸ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Rain ಕರಾವಳಿಯಲ್ಲಿ ಎಲ್ಲೋ ಅಲರ್ಟ್‌

Rain ಕರಾವಳಿಯಲ್ಲಿ ಎಲ್ಲೋ ಅಲರ್ಟ್‌

Campco ಸದಸ್ಯತ್ವ ಚೀಟಿ ದುರ್ಬಳಕೆ ಮಾಡಿ ಕಳಪೆ ಅಡಿಕೆ ಮಾರಾಟ ಯತ್ನ

Campco ಸದಸ್ಯತ್ವ ಚೀಟಿ ದುರ್ಬಳಕೆ ಮಾಡಿ ಕಳಪೆ ಅಡಿಕೆ ಮಾರಾಟ ಯತ್ನ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.