ಮಂಡ್ಯ 14ರಿಂದ ಚಲಿಸು ಕರ್ನಾಟಕ ಸೈಕಲ್‌ ಯಾತ್ರೆ


Team Udayavani, Sep 9, 2020, 12:06 PM IST

ಮಂಡ್ಯ 14ರಿಂದ ಚಲಿಸು ಕರ್ನಾಟಕ ಸೈಕಲ್‌ ಯಾತ್ರೆ

ಮಂಡ್ಯ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಸ್ಥಾಪನೆಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಚಲಿಸು ಕರ್ನಾಟಕ ಘೋಷವಾಕ್ಯದೊಂದಿಗೆ ರಾಜ್ಯದಲ್ಲಿ 2700 ಕಿ.ಮೀ ಸೈಕಲ್‌ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಘಟಕದ ಉಪಾಧ್ಯಕ್ಷ ಎಸ್‌. ಎಚ್‌.ಲಿಂಗೇಗೌಡ ತಿಳಿಸಿದರು.

ಕೋವಿಡ್‌-19 ಸಂಕಷ್ಟದಿಂದ ಬಳಲು ತ್ತಿ ರುವ ಸಂದರ್ಭದಲ್ಲಿ ರೋಗಿಗಳ ಹೆಸರಿನಲ್ಲಿ ಸರ್ಕಾರ ಹಣಲೂಟಿ ಮಾಡುತ್ತಿದೆ. ತೈಲ ಬೆಲೆ ಏರಿಕೆ, ಉದ್ಯೋಗ ನಷ್ಟ, ವ್ಯಾಪಾರ- ವಹಿವಾಟು ಕುಂಠಿತವಾ ಗಿದ್ದು, ಜನರ ಕಷ್ಟಕ್ಕೆ ನೆರವಾಗದೆ ತಮ್ಮದೇ ಲೋಕದಲ್ಲಿ ಜನಪ್ರತಿನಿಧಿಗಳು ಇದ್ದಾರೆ. ಈ ವಿಚಾರ ಮುಂದಿಟ್ಟುಕೊಂಡು ಜನರಲ್ಲಿ ಸ್ವತ್ಛ, ಪ್ರಾಮಾಣಿಕ, ಜನಪರ ರಾಜಕಾರ ಣದಅವಶ್ಯಕತೆಯ ಬಗ್ಗೆ ತಿಳಿಸಲು ಸೈಕಲ್‌ ಯಾತ್ರೆ ಆಯೋಜಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಶಿರಾದಲ್ಲಿ ಸಮಾರೋಪ: ರಾಜ್ಯ ಘಟಕದ ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ನೇತೃತ್ವದಲ್ಲಿ ಮೂರು ಹಂತಗಳಲ್ಲಿ ಸೆಪ್ಟೆಂಬರ್‌, ಅಕ್ಟೋಬರ್‌, ನವೆಂಬರ್‌ನಲ್ಲಿ ಸೈಕಲ್‌ ಯಾತ್ರೆ ನಡೆಯಲಿದೆ. ಮೊದಲ ಹಂತದ ಯಾತ್ರೆ ಸೆ.14ರಂದು ಕೋಲಾರದಲ್ಲಿ ಆರಂಭವಾಗಿ ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ರಾಮನಗರ ಜಿಲ್ಲೆಯಲ್ಲಿ ಸಾಗಿ ಸೆ.18ರಂದು ಮದ್ದೂರಿಗೆ ಆಗಮಿಸಲಿದೆ. ಸೆ.19ರಂದು ಮಂಡ್ಯ ನಗರದ ಸಾರ್ವಜನಿಕ ಸ್ಥಳಗಳಲ್ಲಿ ಅರಿವು ಮೂಡಿಸಲಾಗುವುದು. ನಂತರ ಚಾಮರಾಜನಗರ, ಮೈಸೂರು, ಕೊಡಗು, ಚಿತ್ರ  ದುರ್ಗ ಜಿಲ್ಲೆಗಳಲ್ಲಿ ಸಾಗಿ ತುಮಕೂರಿನ ಶಿರಾದಲ್ಲಿ ಸಮಾರೋಪಗೊಳ್ಳಲಿದೆ ಎಂದು ವಿವರಿಸಿದರು.

ಅ.5ರಂದು ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದ ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್‌, ವಿಜಯಪುರ, ಬಾಗಲಕೋಟೆ, ನ.23ರಿಂದ ಬೆಳಗಾವಿ, ಧಾರವಾಡ,ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮ ಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯಾತ್ರೆ ನಡೆಯಲಿದೆ ಎಂದರು.

ಸ್ವಚ್ಛ ರಾಜಕಾರಣಕ್ಕೆ ನೆರವು: ಮುಂದೆ ಬರುವ ಗ್ರಾಪಂ ಚುನಾವಣೆಯಲ್ಲಿ ಪಾಲ್ಗೊಳ್ಳಲು ಇಚ್ಚಿಸುವವರು ನಮ್ಮನ್ನು ಸಂಪರ್ಕಿಸಬಹುದು (ಮೊ. 9449329929/7975625575). ಸ್ವತ್ಛ ರಾಜಕಾರಣಕ್ಕೆ ಸದಾ ನೆರವು ನೀಡಲಾಗುವುದು ಎಂದು ಹೇಳಿದರು.

ಮದ್ದೂರು ತಾಲೂಕಿನ ಕಾಡಕೊತ್ತನಹಳ್ಳಿಯ ನಿವಾಸಿ, ವಕೀಲ ಕಾ.ಮ. ಮಹೇಶ್‌ ಅವರನ್ನು ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ನೇಮಕ ಮಾಡಲಾಯಿತು. ಜಿಲ್ಲಾ ಘಟಕದ ಗೌರವಾಧ್ಯಕ್ಷ ಸಿ.ಎಸ್‌.ವೆಂಕಟೇಶ್‌, ಉಪಾಧ್ಯಕ್ಷ ರಮೇಶ್‌ ಗೌಡ, ರೈತ ಘಟಕದ ಅಧ್ಯಕ್ಷ ಎಸ್‌.ಎಲ್‌.ರಾಮಕೃಷ್ಣ ಹಾಜರಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

festcide

Mandya: ಭ್ರೂಣ ಹತ್ಯೆ ತಲೆಮರೆಸಿಕೊಂಡಿದ್ದ 12 ಆರೋಪಿಗಳ ಬಂಧನ

Malavalli: ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

Malavalli: ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

Bommai

Governer Procicution: ಹೈಕೋರ್ಟ್‌ ತೀರ್ಪಿನ ಮೇಲೆ ಸಿಎಂ ಸ್ಥಾನ ನಿರ್ಧಾರ: ಬೊಮ್ಮಾಯಿ

suicide (2)

Mandya; ರೋಡ್ ರೋಮಿಯೋಗಳ ಕಿರುಕುಳ: 14 ವರ್ಷದ ವಿದ್ಯಾರ್ಥಿನಿ ಆತ್ಮಹ*ತ್ಯೆ

1-wwwww

BJP 12 ವರ್ಷಗಳಿಂದ ತುಕ್ಕು ಹಿಡಿದಿದ್ದ ಪ್ರಕರಣಕ್ಕೆ ಜೀವ ನೀಡಿದೆ: ಸಚಿವ ಮಧು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.