ಕೋವಿಡ್ -19 ನಿಯಂತ್ರಕ ಉಪಕರಣಗಳ ಲೋಕಾರ್ಪಣೆಗೊಳಿಸಿದ ಡಿಸಿಎಂ ಅಶ್ವತ್ಥನಾರಾಯಣ

ರೇಡಿಯೇಷನ್ ಮುಕ್ತ, ಸ್ಪರ್ಶ ರಹಿತ, ಸತತ ನಿಗಾ ಉಪಕರಣಗಳು

Team Udayavani, Sep 9, 2020, 12:52 PM IST

dcm-main

ಬೆಂಗಳೂರು: ಕೋವಿಡ್-19 ಪಿಡುಗು ನಿಯಂತ್ರಿಸಲು ನೆರವಾಗುವ ಹಾಗೂ ಸೋಂಕು ಸಂಕಷ್ಟದ ಸಂದರ್ಭದಲ್ಲಿ ಕರ್ನಾಟಕದ ಅನ್ವೇಷಣಾ ಸಾಮರ್ಥ್ಯ ಪ್ರತಿಬಿಂಬಿಸುವ 22 ಉತ್ಪನ್ನಗಳನ್ನು  ಐಟಿ/ ಬಿಟಿ ಮತ್ತು  ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮಂತ್ರಿಯೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಬುಧವಾರ ಲೋಕಾರ್ಪಣೆಗೊಳಿಸಿದರು.

ಇಲಾಖೆಯ ಕರ್ನಾಟಕ ಅವಿಷ್ಕಾರ ಮತ್ತು ತಂತ್ರಜ್ಞಾನ ಸಂಸ್ಥೆಯ (KITS) ಆಶ್ರಯದಲ್ಲಿ ಬೆಂಗಳೂರು ಬಯೋ ಇನ್ನೊವೇಷನ್ ಸೆಂಟರ್ (ಬಿಬಿಸಿ- ಬೆಂಗಳೂರು ಜೈವಿಕ ಆವಿಷ್ಕಾರ ಕೇಂದ್ರ) ಮೇಲ್ವಿಚಾರಣೆಯಡಿ 6 ಉತ್ಪನ್ನಗಳು ಅಭಿವೃದ್ಧಿಗೊಂಡಿದ್ದರೆ, KITS ನ ಕರ್ನಾಟಕ ನವೋದ್ಯಮ ಕೋಶದ (ಕರ್ನಾಟಕ ಸ್ಟಾರ್ಟ್ ಅಪ್ ಸೆಲ್) ಮೇಲ್ವಿಚಾರಣೆಯಡಿ 16 ಉತ್ಪನ್ನಗಳು ಅಭಿವೃದ್ಧಿಗೊಂಡಿವೆ.

ಈ ಉತ್ಪನ್ನಗಳು ಬೆಂಗಳೂರಿನ ಮತ್ತು ಕರ್ನಾಟಕದ ಅನ್ವೇಷಣಾ ಸಾಮರ್ಥ್ಯವನ್ನು ಮತ್ತೊಮ್ಮೆ ಎತ್ತಿತೋರಿಸಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಡಿಸಿಎಂ ಅವರು, ಈ ಉತ್ಪನ್ನಗಳನ್ನು ಅಭಿವೃದ್ಧಿಪಡಿಸಿದ ನವೋದ್ಯಮಗಳನ್ನು ಅಭಿನಂದಿಸಿದರು.

ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಬಿಬಿಸಿ ಛೇರ್ ಮ್ಯಾನ್ ಡಾ.ಇ.ವಿ.ರಮಣ ರೆಡ್ಡಿ, ಈ ಉತ್ಪನ್ನಗಳನ್ನು ಅಭಿವೃದ್ಧಿಪಡಿಸಿದವರನ್ನು ಮುಂದಿನ ಹಂತದಲ್ಲಿ ಕರ್ನಾಟಕ ನವೋದ್ಯಮ ಕೋಶ ಹಾಗೂ ಬಿಬಿಸಿ ಮೂಲಕ ಸೂಕ್ತ ವ್ಯಾಪಾರ ಪಾಲುದಾರರೊಂದಿಗೆ ಸಂಪರ್ಕಿಸಲಾಗುವುದು ಎಂದರು.

ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಲಹೆಗಾರ್ತಿ ಮತ್ತು ರಾಷ್ಟ್ರೀಯ ವಿಜ್ಞಾನ ಹಾಗೂ ತಂತ್ರಜ್ಞಾನ ಉದ್ಯಮಶೀಲತಾ ಅಭಿವೃದ್ಧಿ ಆಯೋಗದ (NSTEDB) ಮುಖ್ಯಸ್ಥೆ ಡಾ.ಅನಿತಾ ಗುಪ್ತಾ, ಬಿಬಿಸಿ ವ್ಯವಸ್ಥಾಪಕ ನಿರ್ದೇಶಕ ಡಾ.ಜಿತೇಂದ್ರ ಕುಮಾರ್, ರಾಜ್ಯದ ಎಲೆಕ್ಟ್ರಾನಿಕ್ಸ್, ಐಟಿ/ಬಿಟಿ ಇಲಾಖೆ ನಿರ್ದೇಶಕಿ ಮೀನಾ ನಾಗರಾಜ್ ಸಿ.ಎನ್. ಅವರು ಕಾರ್ಯಕ್ರಮದಲ್ಲಿ ಹಾಜರಿದ್ದು ಮಾತನಾಡಿದರು.

IIT-SINE ಜೊತೆ ಎಂಒಯು

ಇದೇ ಸಂದರ್ಭದಲ್ಲಿ ಮುಂಬೈನ IIT-SINE ಮತ್ತು ಬಿಬಿಸಿ ನಡುವೆ ಪರಸ್ಪರ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. IIT-SINEನ ಪ್ರೊ.ಸಂತೋಷ್ ಘರ್ ಪುರೆ ಅವರು ಈ ಸಂದರ್ಭದಲ್ಲಿ ಮಾತನಾಡಿ, ಹಣಕಾಸು ಸಂಪನ್ಮೂಲ ಕ್ರೋಡೀಕರಣ, ತಾಂತ್ರಿಕ ನೆರವಿನ ಮೂಲಕ ಬಿಬಿಸಿ ಯ ನವೋದ್ಯಮಗಳಿಗೆ ಈ ಒಪ್ಪಂದವು ನೆರವಾಗಲಿದೆ ಎಂದರು.

ಉತ್ಪನ್ನ ಆಯ್ಕೆ ಹೇಗೆ?

ಕರ್ನಾಟಕ ನವೋದ್ಯಮ ಕೋಶವು ‘ಕೋವಿಡ್-19 ಚಾಲೆಂಜ್’ ಶೀರ್ಷಿಕೆಯಡಿ ಅನ್ವೇಷಣಾಕಾರದಿಂದ ಅರ್ಜಿಗಳನ್ನು ಆಹ್ವಾನಿಸಿತ್ತು. ಇದಕ್ಕೆ 3 ಹಂತಗಳಲ್ಲಿ 356 ಅರ್ಜಿಗಳು ಬಂದಿದ್ದವು. ಉದ್ಯಮ ಸಂಘಟನೆಗಳು ನಿರ್ದೇಶನ ಮಾಡಿದ ಸ್ವತಂತ್ರ ಜ್ಯೂರಿಯು ಕ್ರಮಬದ್ಧ ಮೌಲ್ಯಮಾಪನ ನಡೆಸಿದೆ. ವಿನೂತನತೆ, ಸಂಶೋಧನೆಯ ಕಾಲಮಿತಿ, ತಯಾರಿಕಾ ಸಾಮರ್ಥ್ಯ, ತಂಡದ ಶಕ್ತಿ, ಪ್ರಮಾಣಪತ್ರ & ಅನುಪಾಲನೆಗಳು ಇತ್ಯಾದಿಗಳನ್ನು ಆಧರಿಸಿ ಈ 16 ಉತ್ಪನ್ನಗಳನ್ನು ಆಯ್ಕೆ ಮಾಡಲಾಗಿದೆ.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.