ಕುಸಿದ ಶುಂಠಿ ಬೆಲೆ: ಸಂಕಷ್ಟಕ್ಕೆ ಸಿಲುಕಿದ ಬೆಳೆಗಾರರು

ಸಾವಿರಾರು ಎಕ್ರೆ ಪ್ರದೇಶದಲ್ಲಿ ಬೆಳೆ; ಲಕ್ಷಾಂತರ ರೂ. ಖರ್ಚು

Team Udayavani, Sep 11, 2020, 4:36 AM IST

ಕುಸಿದ ಶುಂಠಿ ಬೆಲೆ: ಸಂಕಷ್ಟಕ್ಕೆ ಸಿಲುಕಿದ ಬೆಳೆಗಾರರು

ಮಡಿಕೇರಿ: ಶುಂಠಿ ಬೆಲೆ ಈ ಬಾರಿ ಪಾತಾಳಕ್ಕೆ ಕುಸಿದಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಶುಂಠಿ ಬೆಳೆದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ವಾಣಿಜ್ಯ ಬೆಳೆಗಳನ್ನು ಬೆಳೆಯುವುದರಿಂದ ಆರ್ಥಿಕವಾಗಿ ಅಭಿವೃದ್ಧಿ ಹೊಂದಬಹುದೆಂಬ ಆಶಯದೊಂದಿಗೆ ಕಳೆದ ಹತ್ತು ವರ್ಷಗಳಿಂದ ಜಿಲ್ಲೆಯ ರೈತರು ಸಾವಿರಾರು ಎಕ್ರೆ ಪ್ರದೇಶದಲ್ಲಿ ಲಕ್ಷಾಂತರ ರೂ. ಖರ್ಚು ಮಾಡಿ ಶುಂಠಿ ಬೆಳೆಯುತ್ತಿದ್ದಾರೆ. ಆದರೆ ಈ ಬಾರಿ ಶುಂಠಿ ಬೆಲೆ ಹಿಂದೆಂದಿಗಿಂತಲೂ ಕಡಿಮೆ ಯಾಗಿರು ವುದರಿಂದ ಜಿಲ್ಲೆಯಲ್ಲಿ ಶುಂಠಿ ಬೆಳೆದ ರೈತರು ಭಾರೀ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಈ ಬಾರಿ ಕೋವಿಡ್ ಸಂಕಷ್ಟದ ನಡುವೆಯೂ ಅನೇಕ ರೈತರು ಶುಂಠಿ ಬೆಳೆದಿದ್ದಾರೆ. ಆದರೆ ಇದೀಗ ಸ್ಥಳೀಯ ಮಾರುಕಟ್ಟೆ ಮಾತ್ರವಲ್ಲದೆ ಅಂತಾ ರಾಜ್ಯಗಳಲ್ಲೂ ಬೇಡಿಕೆ ಕಡಿಮೆ ಯಾಗಿರುವ ಹಿನ್ನೆಲೆಯಲ್ಲಿ ಶುಂಠಿಯನ್ನು ಕೇಳುವವರೇ ಇಲ್ಲವಾಗಿದೆ.

ಈಗಾಗಲೇ ಶುಂಠಿ ಬೆಳೆಗೆ ಏಳು ತಿಂಗಳುಗಳು ಕಳೆಯುತ್ತಿದ್ದು, ಫ‌ಸಲನ್ನು ಮಾರಾಟ ಮಾಡುವ ಸಮಯ ಬಂದಿದೆ. ಆದರೆ ಕಳೆದ 10 ವರ್ಷಗಳಿಂದಲೂ 60 ಕೆ.ಜಿ. ಶುಂಠಿ ಮೂಟೆಗೆ ರೂ. 1,500ರಷ್ಟಿದ್ದ ಬೆಲೆ ಈ ಬಾರಿ ರೂ. 750ಕ್ಕೆ ಇಳಿದಿದೆ. ಆದರೂ ಖರೀದಿದಾರರು ಮುಂದೆ ಬಾರದೆ ಬೆಳೆ ಹಾಳಾಗುತ್ತಿದೆ. ಮತ್ತೂಂದೆಡೆ ಆಗಾಗ ಸುರಿಯುತ್ತಿರುವ ಭಾರೀ ಮಳೆ ಶುಂಠಿಗೆ ರೋಗವನ್ನು ಹರಡುತ್ತಿದೆ.

ಕಳೆದ ವರ್ಷಗಳಲ್ಲಿ ಇದೇ ಸಮಯದಲ್ಲಿ ಒಂದು ಮೂಟೆ ಶುಂಠಿಗೆ 2,600-3,000 ರೂ. ಬೆಲೆ ಸಿಗುತ್ತಿತ್ತು. ಆದರೆ ಈ ಬಾರಿ ಶುಂಠಿ ಬೆಳೆಯನ್ನು ಕೆಳುವವರೇ ಇಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

6 ತಿಂಗಳ ಹಿಂದೆ ಬೀಜದ ಶುಂಠಿಗೆ 5,000 ರೂ. ಬೆಲೆ ಇತ್ತು. ಆದರೆ ಈಗ ಬೀಜದ ಶುಂಠಿಗೂ ಕೇವಲ 1,100 ರೂ. ದೊರಕುತ್ತಿದೆ. ಇದರಿಂದಾಗಿ ಕುಶಾಲ ನಗರ ಹೋಬಳಿ ವ್ಯಾಪ್ತಿಯ ಹೆಬ್ಟಾಲೆ, ತೂರೆನೂರು, ಶಿರಂಗಾಲ ಸಿದ್ಧಲಿಂಗಪುರ, ಬಾಣವಾರ, ಗುಡ್ಡೆಹೂಸೂರು ಗ್ರಾ.ಪಂ. ವ್ಯಾಪ್ತಿಗಳಲ್ಲಿ ಮಳೆಯಿಂದಾಗಿ ಶುಂಠಿ ಗದ್ದೆ ಗಳಲ್ಲೇ ಕೊಳೆತು ಹೋಗುತ್ತಿದೆ. ಈ ಬಾರಿ ಶುಂಠಿಯ ಬೀಜದ ಬೆಲೆಯೂ ರೈತರಿಗೆ ದೊರಕುತ್ತಿಲ್ಲ. ಮತ್ತೂಂದೆಡೆ ನೀರು, ಗೊಬ್ಬರ ಹಾಗೂ ಕಾರ್ಮಿಕರಿಗಾಗಿ ಮಾಡಿದ ಖರ್ಚು ಅಧಿಕವಿದ್ದು, ಶುಂಠಿ ಬೆಳೆದ
ರೈತರು ತಲೆ ಮೇಲೆ ಕೈ ಇಟ್ಟು ಕೂರುವ ಪ್ರಸಂಗ ಎದುರಾಗಿದೆ.

ಸಾಲ ಮರುಪಾವತಿ ಚಿಂತೆ
ರೈತರು ಭೂಮಿ, ನೀರು, ಶುಂಠಿ ಬೀಜಕ್ಕೆ ಸಾವಿರಾರು ರೂ. ಖರ್ಚು ಮಾಡಿ ದ್ದಾರೆ. ಸಹಕಾರ ಸಂಘಗಳಲ್ಲಿ ಮತ್ತು ಇತರ ಸಂಸೆœಗಳಲ್ಲಿ ಸಾಲ ಪಡೆದು ಶುಂಠಿ ಬೆಳೆ ದವರೂ ಇದ್ದಾರೆ. ಆದರೆ ಈ ಸಾಲ ಮರುಪಾವತಿ ಹೇಗೆ ಎಂಬ ಚಿಂತೆಯಲ್ಲಿ ರೈತರಿದ್ದಾರೆ.

ಈ ವರ್ಷ ಬೇಡಿಕೆ ಕಡಿಮೆ
ಈ ಹಿಂದೆ ಶುಂಠಿ ಬೆಳೆ ಕಟಾವಿಗೆ ಬರುವುದಕ್ಕೆ ಮುಂಚೆಯೇ ಕೇರಳ ಸಹಿತ ವಿವಿಧೆಡೆಯ ವ್ಯಾಪಾರಿಗಳು ಶುಂಠಿ ಖರೀದಿಗೆ ಮುಂದಾಗುತ್ತಿದ್ದರು. ಆದರೆ ಈ ವರ್ಷ ಬೇಡಿಕೆ ಕಡಿಮೆಯಾದ ಹಿನ್ನೆಲೆಯಲ್ಲಿ ಶುಂಠಿ ಫ‌ಸಲನ್ನು ಸಾಗಾಟ ಮಾಡಲು ವ್ಯಾಪಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ನೊಂದ ರೈತರು ಅಳಲು ತೋಡಿಕೊಂಡಿದ್ದಾರೆ.

ಟಾಪ್ ನ್ಯೂಸ್

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

Untitled-1

Kasaragod ಅಪರಾಧ ಸುದ್ದಿಗಳು

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

\172.17.1.5ImageDirUdayavaniDaily21-09-24Daily_NewsDrugs.tif\172.17.1.5ImageDirUdayavaniDaily21-09-24Daily_NewsDrugs.tif

Uppala: ಸುಮಾರು 3.5 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶಕ್ಕೆ: ಓರ್ವನ ಸೆರೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.