ಜಿಪಂಗೆ ಅಶೋಕ್‌ ನೂತನ ಅಧ್ಯಕ್ಷ


Team Udayavani, Sep 11, 2020, 12:35 PM IST

ಜಿಪಂಗೆ ಅಶೋಕ್‌ ನೂತನ ಅಧ್ಯಕ್ಷ

ರಾಮನಗರ: ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಿಸಿದ ಎಲ್ಲ ಇಲಾಖೆಗಳ ಮೂಲಕ ಮುಂಜಾಗ್ರತೆ ಕ್ರಮ ಕೈಗೊಂಡುಕೋವಿಡ್‌ ಸೋಂಕು ಮುಕ್ತ ಜಿಲ್ಲೆಯನ್ನಾಗಿ ರೂಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಜಿಪಂ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿರುವ ಎಚ್‌.ಎನ್‌. ಅಶೋಕ್‌ ತಿಳಿಸಿದರು.

ನಗರದ ಜಿಪಂ ಭವನದಲ್ಲಿ ಗುರುವಾರ ನಡೆದ ವಿಶೇಷ ಸಭೆಯಲ್ಲಿ ಜಿಪಂ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಾತ ನಾಡಿದರು. ವಿಶ್ವವನ್ನೇ ವ್ಯಾಪಿಸಿರುವ ಕೋವಿಡ್‌ ಸೋಂಕು ಜಿಲ್ಲೆಯಲ್ಲೂ ಇನ್ನು ಬಾಧಿಸುತ್ತಿದೆ. ಜಿಪಂ ವತಿಯಿಂದ ಸರ್ಕಾರಿ ಇಲಾಖೆಗಳ ಮೂಲಕ ಏನೇನು ಸಾಧ್ಯವೋ ಅವನ್ನೆಲ್ಲಾ ಅನುಸರಿಸಿ ಕೋವಿಡ್‌ ಸೋಂಕು ಹರಡುವ ವಿಚಾರದಲ್ಲಿ ಕ್ರಮವಹಿಸುವುದಾಗಿ ತಿಳಿಸಿದರು.

ಮನೆ ಬಾಗಿಲಿಗೆ ಜಿಪಂ ಸೇವೆ: ಜಿಪಂ ಅಧ್ಯಕ್ಷ ಸ್ಥಾನ ಗುರುತರ ಜವಾಬ್ದಾರಿ ಸ್ಥಾನ. ಕುಡಿಯುವ ನೀರು, ರಸ್ತೆ ಸೇರಿ ಮೂಲ ಸೌಕರ್ಯ ಒದಗಿಸುವುದು ತಮ್ಮ ಆದ್ಯತೆ. ಇದಕ್ಕೆ ಜಿಪಂ ಎಲ್ಲಾ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ ವಿಶ್ವಾಸಗಳಿಸಿ ಕಾರ್ಯಸಾಧಿಸುವುದಾಗಿ ತಿಳಿಸಿದರು. ಜಿಪಂ ಸೇವೆಗಳನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವುದು ತಮ್ಮ ಇಚ್ಚೆ. ಒಟ್ಟಾರೆ ಹಾಲಿ ಜಿಪಂ ಉಳಿದ ಅವಧಿಗೆ ಉತ್ತಮ ಆಡಳಿತ ನೀಡಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು. ಕೃತಜ್ಞತೆ: ಜಿಪಂ ಅಧ್ಯಕ್ಷರಾಗಿ ತಾವು ಅವಿರೋಧ ಆಯ್ಕೆಯಾಗಲು ಕೆಪಿಸಿಸಿ ಅಧ್ಯಕ್ಷಡಿ.ಕೆ.ಶಿವಕುಮಾರ್‌, ಸಂಸದ ಡಿ.ಕೆ.ಸುರೇಶ್‌, ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ , ಜಿಪಂನ ಎಲ್ಲಾ ಸದಸ್ಯರ ಸಹಕಾರವೇ ಕಾರಣ ಎಂದು ತಿಳಿಸಿದ ಅವರು ಕೃತಜ್ಞತೆ ಸಲ್ಲಿಸಿದರು.

ಎಂಎಲ್‌ಸಿ ಎಸ್‌.ರವಿ, ಜಿಪಂ ಮಾಜಿ ಅಧ್ಯಕ್ಷ ಇಕ್ಬಾಲ್‌ ಹುಸೇನ್‌, ಜಿಪಂ ಸದಸ್ಯರು, ಮಾಗಡಿ ತಾಲೂಕಿನ ಜನಪ್ರತಿನಿಧಿಗಳು, ಅಭಿಮಾನಿಗಳು ನೂತನ ಅಧ್ಯಕ್ಷ ಎಚ್‌.ಎನ್‌.ಅಶೋಕ್‌ರನ್ನು ಅಭಿನಂದಿಸಿದರು.

1 ನಾಮಪತ್ರ ಸಲ್ಲಿಕೆ ಆಗಿತ್ತು :  ಎಚ್‌.ಬಸಪ್ಪ ಅವರ ರಾಜೀನಾಮೆಯಿಂದ ತೆರವಾಗಿದ್ದ ಜಿಪಂ ಅಧ್ಯಕ್ಷ ಸ್ಥಾನಕ್ಕೆ ನೂತನ ಅಧ್ಯಕ್ಷರ ಆಯ್ಕೆಗಾಗಿ ಗುರುವಾರ ಜಿಪಂ ವಿಶೇಷ ಸಭೆಆಯೋಜಿಸಲಾಗಿತ್ತು. ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಸ್ಥಾನಕ್ಕೆ ನಿಗದಿಯಂತೆ ಬೆಳಗ್ಗೆ 9ಕ್ಕೆ ರಾಮ ನಗರ ತಾಲೂಕು ಕೂಟಗಲ್‌ ಜಿಪಂ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಎಚ್‌.ಎನ್‌.ಅಶೋಕ್‌ ಹೊರತುಪಡಿಸಿ ಇನ್ಯಾರು ನಾಮಪತ್ರ ಸಲ್ಲಿಸಲಿಲ್ಲ.ಹೀಗಾಗಿ ನಾಮಪತ್ರ ಪರಿಶೀಲನೆ, ನಾಮಪತ್ರವಾಪಸ್ಸು ಪಡೆಯುವ ಸಮಯದ ನಂತರ ಮಧ್ಯಾಹ್ನ 12ಕ್ಕೆ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ನವೀನ್‌ ರಾಜ್‌ ಸಿಂಗ್‌ ಅವರು ಎಚ್‌.ಎನ್‌.ಅಶೋಕ್‌ ಅವರನ್ನು ಅವಿರೋಧ ಆಯ್ಕೆ ಎಂದು ಘೋಷಿಸಿದರು. 20 ಮಂದಿ ಜಿಪಂ ಸದಸ್ಯರು ಸಭೆಯಲ್ಲಿ ಭಾಗಿಯಾಗಿದ್ದರು. ಅಪರ ಜಿಲ್ಲಾಧಿಕಾರಿ ಬಿ.ಪಿ.ವಿಜಯ್‌, ಸಹಾಯಕ ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದರು. ಜಿಪಂ ಉಪಕಾರ್ಯದರ್ಶಿ ಉಮೇಶ್‌, ಜಿಪಂ ಹಿರಿಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೈಕ್‌ ಗೆ ಲಾರಿ ಡಿಕ್ಕಿ; ಬೈಕ್‌ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Ramanagara: ಬೈಕ್‌ ಗೆ ಲಾರಿ ಡಿಕ್ಕಿ; ಬೈಕ್‌ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Nikhil

Political: ಎಚ್‌.ಡಿ.ಕುಮಾರಸ್ವಾಮಿ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುವರು: ನಿಖಿಲ್‌

CM-Siid

By Election: ಚನ್ನಪಟ್ಟಣ ಮುಖಂಡರ ಜತೆ ಸಿಎಂ ಸಿದ್ದರಾಮಯ್ಯ ಸಭೆ

Chennapatana

Teachers Village: ಚನ್ನಪಟ್ಟಣದ ಚಕ್ಕೆರೆಯಲ್ಲಿ ಮನೆಗೊಬ್ಬ ಶಿಕ್ಷಕರು!

Donkey milk: ಬೊಂಬೆನಗರಿಯಲ್ಲಿ ಕತ್ತೆ ಹಾಲಿಗೆ ಬೇಡಿಕೆ!

Donkey milk: ಬೊಂಬೆನಗರಿಯಲ್ಲಿ ಕತ್ತೆ ಹಾಲಿಗೆ ಬೇಡಿಕೆ!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.