ನಗರದಲ್ಲಿ ನೀರು ಸೋರಿಕೆ ತಡೆಗೆ ಶೀಘ್ರವೇ ಸ್ಕಾಡಾ


Team Udayavani, Sep 11, 2020, 1:08 PM IST

ನಗರದಲ್ಲಿ ನೀರು ಸೋರಿಕೆ ತಡೆಗೆ ಶೀಘ್ರವೇ ಸ್ಕಾಡಾ

ಮೈಸೂರು: ನಗರಕ್ಕೆ ಪೂರೈಕೆಯಾಗುವ ಕುಡಿಯುವನೀರು ಎಲ್ಲಿ ಪೋಲಾಗುತ್ತಿದೆ, ಏನೇನು ಅವ್ಯವಹಾರ ನಡೆಯುತ್ತಿದೆ, ಲ್ಲಿ ಏನೇನು ಸಮಸ್ಯೆಗಳಿವೆ ಎಂಬು ದರ ಬಗ್ಗೆ ನಿಗಾ ಇಡಲು ಸ್ಕಾಡಾ(ಸೂಪವೈಸರಿ ಕಂಟ್ರೋಲ್‌ ಎಂಡ್‌ ಡೇಟಾ ಅನಾಲಿಟಿಕ್ಸ್ ಆಕ್ವಿಸಿಷನ್‌) ಎಂಬ ಹೊಸ ತಂತ್ರ ಜ್ಞಾನವೊಂದನ್ನು ಅಭಿವೃದ್ಧಿ ಪಡಿಸಲು ವಾಣಿ ವಿಲಾಸ ನೀರು ಸರಬರಾಜು ಮಂಡಳಿಯು ಮುಂದಾಗಿದೆ ಎಂದು ಸಂಸದ ಪ್ರತಾಪ್‌ ಸಿಂಹ ತಿಳಿಸಿದರು.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಮೈಸೂರಿಗೆ ಅವಶ್ಯ ಕತೆ ಇರುವುದು 170 ಎಂಎಲ್‌ಡಿ ನೀರು. ಇಲ್ಲಿಗೆ 260ಎಂಎಲ್‌ಡಿ ನೀರು ಪೂರೈಕೆಯಾಗುತ್ತಿದೆ. ಆದರೆ ನಗರದ ಎಷ್ಟೋ ಬಡಾವಣೆಗಳಲ್ಲಿ ನೀರಿನ ಜ್ವಲಂತ ಸಮಸ್ಯೆಇದೆ. ಇದನ್ನು ಬಗೆಹರಿಸಲು ಸ್ಕಾಡಾ ಎಂಬ ಈ ಹೊಸ ತಂತ್ರಜ್ಞಾನ ರೂಪಿಸಲಾಗುತ್ತದೆ ಎಂದರು. ವರ್ಷದೊಳಗೆ ಪೂರ್ಣ: ಐಎಲ್‌ ಎಂಡ್‌ ಎಫ್ಎಸ್‌ ಕಂಪನಿಗೆ ನೀಡಿರುವ ಗುತ್ತಿಗೆಯಲ್ಲಿ ಸ್ಕಾಡಾ ತಂತ್ರಜ್ಞಾನ ಅಳವಡಿಕೆ ಕೂಡ ಸೇರಿದೆ. ಇನ್ನು 24 ತಿಂಗಳೊಳಗೆಎಲ್ಲವೂ ಸಿದ್ಧವಾಗಲಿದೆ. ಈ ಮೂಲಕ ನೀರು ಸರಬ ರಾಜಿನಲ್ಲಿ ಆಗುತ್ತಿರುವ ಅವ್ಯವಹಾರಗಳು ನಿಯಂತ್ರಣಕ್ಕೆ ಬರಲಿವೆ. ಇಂತಹ ಯೋಜನೆಗಳು ಬೃಹತ್‌ ಮೈಸೂರು ಮಹಾನಗರಪಾಲಿಕೆ ರಚನೆಗೆ ಪೂರಕವಾಗಿರಲಿದೆ. ನಗರದ ಅಂಚಿನಲ್ಲಿರುವ ಗ್ರಾಮಗಳನ್ನು ಪಾಲಿಕೆವ್ಯಾಪ್ತಿಗೆ ಸೇರಿಸಿಕೊಂಡರೆ ನೀರು ಸರಬರಾಜು ಹೆಚ್ಚು ಬೇಕಾಗುತ್ತದೆ. ಈ ಪ್ರಕ್ರಿಯೆ ಸ್ಕಾಡಾ ಪೂರಕವಾಗಲಿದೆ ಎಂದು ಮಾಹಿತಿ ನೀಡಿದರು.

9 ಗ್ರಾಪಂ ಸೇರ್ಪಡೆ: ಬೃಹತ್‌ ಮೈಸೂರು ಮಹಾ ನಗರ ಪಾಲಿಕೆ ಮಾಡಲು ನಗರದ ಸುತ್ತಲಿನ 9 ಗ್ರಾಪಂಗಳನ್ನು ಸೇರಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಈ ಬಾರಿಯ ಗ್ರಾಪಂ ಚುನಾವಣೆ ನಡೆಯುವ ಮುನ್ನವೇ ಗ್ರಾಮಗಳನ್ನು ನಗರಪಾಲಿಕೆಗೆ ಸೇರಿಸುವ ಪ್ರಕ್ರಿಯೆ ಚುರುಕಾಗಬೇಕು. ಒಮ್ಮೆ ಚುನಾವಣೆ ಸುತ್ತೋಲೆ ಹೊರಡಿಸಿದರೆ ಮತ್ತೆ ಪ್ರಕ್ರಿಯೆ ಮುಂದೂಡಲ್ಪಡು ತ್ತದೆ.ಗ್ರಾಮಗಳನ್ನು ನಗರ ವ್ಯಾಪ್ತಿಗೆ ಸೇರಿಸಿ 15 ಲಕ್ಷಕ್ಕೂ ಹೆಚ್ಚುಜನಸಂಖ್ಯೆ ಆದರೆ ಮೊನೊ ರೈಲು, ಮೆಟ್ರೋ ರೈಲುಸೇರಿದಂತೆ ಸಾಕಷ್ಟು ಯೋಜನೆಗಳನ್ನು ತರಬಹುದು.ಆದ್ದರಿಂದ ಬೃಹತ್‌ ಮೈಸೂರು ಮಹಾನಗರಪಾಲಿಕೆರಚನೆ ಬಗ್ಗೆ ಸಾಕಷ್ಟು ಗಮನ ಹರಿಸಲಾಗುತ್ತಿದೆ ಎಂದು ಸಂಸದ ಪ್ರತಾಪ್‌ ಸಿಂಹ ತಿಳಿಸಿದರು.

ಸ್ಕಾಡಾ ತಂತ್ರಜ್ಞಾನ ಕಾರ್ಯವೈಖರಿ ಹೇಗೆ? : ಸ್ಕಾಡಾ ಕುರಿತು ಮಾಹಿತಿ ನೀಡಿದ ವಾಣಿವಿಲಾಸ ನೀರು ಸರಬರಾಜು ಮಂಡಳಿಯ ಎಇಇ ಆಸಿಫ್ “ವಾಣಿವಿಲಾಸ ನೀರು ಸರಬರಾಜು ಕೇಂದ್ರದಲ್ಲಿನಿಯಂತ್ರಣ ಕೊಠಡಿ ಸ್ಥಾಪಿಸಿ ಇಡೀ ನಗರದ ನೀರು ಸರಬರಾಜು ವ್ಯವಸ್ಥೆಯ ಮೇಲೆ ನಿಗಾ ಇಡಲಾಗು ತ್ತದೆ. ಸೋಲಾರ್‌ ಮತ್ತು ಎಲೆಕ್ಟ್ರಿಕಲ್‌ ಆ್ಯಕುcಯೇಟರ್‌ ಗಳು, ಪ್ರೋ ಮೀಟರ್‌, ಕ್ಯಾಮರಾ ಗಳು, ಸೆನ್ಸಾರ್‌ ಗಳು ಈ ನಿಟ್ಟಿನಲ್ಲಿ ಕಾರ್ಯನಿರ್ವ ಹಿಸುತ್ತವೆ. ಎಲ್ಲಿಗೆ ಎಷ್ಟು ನೀರು ಸರಬರಾಜಾಗು ತ್ತಿದೆ, ಎಲ್ಲಿ ನೀರುಸೋರಿಕೆಯಾಗುತ್ತಿದೆ, ಎಲ್ಲಿ ಕಳ್ಳತನ ಆಗುತ್ತಿದೆ ಎಂಬುದನ್ನು ಸುಲಭವಾಗಿ ಪತ್ತೆಹಚ್ಚಬಹುದು. ಈ ತಂತ್ರಜ್ಞಾನ ಬಳಸಿ ನೀರಿನಲ್ಲಿರುವ ಪಿಎಚ್‌, ಕ್ಲೋರಿನ್‌ ಮತ್ತಿತರ ಅಂಶಗಳ ಪ್ರಮಾಣವನ್ನು ತಿಳಿಯಬಹುದು. ಎಲ್ಲವೂ ಆನ್‌ಲೈನ್‌ ಮೂಲಕ ಆಗಲಿದೆ. ನೀರು ಸರಬರಾಜಿನ ಮೇಲ್ವಿಚರಾಣೆ, ನಿಯಂತ್ರಣ ಎರಡನ್ನೂ ಇದರಿಂದ ಮಾಡಬಹುದು. ಇಂತಹ ವ್ಯವಸ್ಥೆ ಬೆಂಗಳೂರಿನಲ್ಲಿದೆ. ಕೆಲವು ಸಣ್ಣ ಸಣ್ಣ ಊರುಗಳಲ್ಲಿ ನೀರು ಸರಬರಾಜಿನ ಮೇಲ್ವಿಚಾರಣೆ ಇದ್ದರೂ ನಿಯಂತ್ರಣ ವ್ಯವಸ್ಥೆ ಇಲ್ಲ. ಇದು ಸುಮಾರು 50 ಕೋಟಿ ರೂ. ವೆಚ್ಚದ ಯೋಜನೆ’ ಎಂದು ವಿವರಿಸಿದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru-Elephant

Mysuru Dasara: ಎರಡನೇ ತಂಡದ ಗಜಪಡೆಗೆ ತೂಕ ಪರೀಕ್ಷೆ: ಸುಗ್ರೀವ 5.2 ಟನ್‌

3-hunsur

Hunsur: ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಇನ್ಸ್ಪೆಕ್ಟರ್ ಮುನಿಯಪ್ಪ

CM-Siddu

Report on Corruption: ಕೋವಿಡ್‌ ಅಕ್ರಮ: ಸಂಪುಟ ಸಭೆಯಲ್ಲಿ ಚರ್ಚಿಸಿ ಕ್ರಮ: ಸಿಎಂ

Yadhuveer

Mysuru: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಅಕ್ರಮ: ಸಂಸದ ಯದುವೀರ್‌

Chamundi-Sabhe

Mysore: ಚಾಮುಂಡೇಶ್ವರಿ ದೇಗುಲ ಸಂಪ್ರದಾಯ, ಘನತೆ ಕಾಪಾಡಿ ಉನ್ನತೀಕರಿಸಿ: ಸಿದ್ದರಾಮಯ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.