ಎಸೆಸೆಲ್ಸಿ ಮೌಲ್ಯಮಾಪಕರ ಎಡವಟ್ಟು; ಫೇಲಾಗಿದ್ದ 748 ವಿದ್ಯಾರ್ಥಿಗಳು ಉತ್ತೀರ್ಣ


Team Udayavani, Sep 12, 2020, 6:05 AM IST

ಎಸೆಸೆಲ್ಸಿ ಮೌಲ್ಯಮಾಪಕರ ಎಡವಟ್ಟು; ಫೇಲಾಗಿದ್ದ 748 ವಿದ್ಯಾರ್ಥಿಗಳು ಉತ್ತೀರ್ಣ

ಸಾಂದರ್ಭಿಕ ಚಿತ್ರ

ಮಂಗಳೂರು: ಮೌಲ್ಯಮಾಪಕರ ಎಡವಟ್ಟಿನಿಂದಾಗಿ ಅನುತ್ತೀರ್ಣಗೊಂಡಿದ್ದ ಅವಿಭಜಿತ ದ.ಕ. ಜಿಲ್ಲೆಯ 748ಕ್ಕೂ ಹೆಚ್ಚು ಮಂದಿ ಎಸೆಸೆಲ್ಸಿ ವಿದ್ಯಾರ್ಥಿಗಳು ಮರು ಮೌಲ್ಯಮಾಪನದಿಂದಾಗಿ ಉತ್ತೀರ್ಣ ಗೊಂಡಿದ್ದಾರೆ. ಇದರಿಂದ ಯಾರಧ್ದೋ ಎಡವಟ್ಟಿಗೆ ವಿದ್ಯಾರ್ಥಿಗಳು ಬಲಿಪಶು ಗಳಾಗಿರುವುದು ಸ್ಪಷ್ಟವಾಗಿದೆ ಮಾತ್ರ ವಲ್ಲದೇ ಅಂಕ ನೀಡುವಲ್ಲಿ ಅನ್ಯಾಯ ವಾಗಿತ್ತೆಂಬ ಆರೋಪಕ್ಕೆ ಪುಷ್ಟಿ ನೀಡಿದೆ.

ದ.ಕ. ಜಿಲ್ಲೆಯ 466ಕ್ಕೂ ಹೆಚ್ಚು (ಸುಳ್ಯ ವಲಯದ ಸಂಖ್ಯೆ ಲಭ್ಯ ವಾಗಿಲ್ಲ) ಮತ್ತು ಉಡುಪಿ ಜಿಲ್ಲೆಯ 282 ಮಂದಿ ವಿದ್ಯಾರ್ಥಿಗಳು ಮರು ಮೌಲ್ಯಮಾಪನದಲ್ಲಿ ಉತ್ತೀರ್ಣ ರಾಗಿದ್ದಾರೆ. ಮೌಲ್ಯ ಮಾಪಕರ ಎಡವಟ್ಟು ಇಷ್ಟೂ ವಿದ್ಯಾರ್ಥಿ ಗಳನ್ನು ಸಮಸ್ಯೆಗೆ ದೂಡಿದೆ. ಈ ಬಗ್ಗೆ “ಉದಯವಾಣಿ’ ವರದಿ ಪ್ರಕಟಿಸಿತ್ತು.

ಪ್ರತಿ ವಿಷಯಕ್ಕೆ 1,205 ರೂ.!
ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಯ ಛಾಯಾಪ್ರತಿ ಪಡೆಯಲು 405 ರೂ. ಮತ್ತು ಮರು ಮೌಲ್ಯಮಾಪನಕ್ಕೆ ಪ್ರತಿ ವಿಷಯಕ್ಕೆ 805 ರೂ.ಗಳನ್ನು ಪಾವತಿಸಬೇಕು. ಮರು ಮೌಲ್ಯಮಾಪನದಲ್ಲಿ ಪ್ರತಿ ವಿಷಯದಲ್ಲಿ 6ಕ್ಕೂ ಹೆಚ್ಚು ಅಂಕ ಪಡೆದುಕೊಂಡವರಿಗೆ 805 ರೂ.ಗಳನ್ನು ಹಿಂದಿರುಗಿಸಲಾಗುತ್ತದೆ. ಆರಕ್ಕಿಂತ ಕಡಿಮೆ ಅಂಕ ಬಂದು ಉತ್ತೀರ್ಣರಾಗದವರು ಕಟ್ಟಿದ 1,205 ರೂ.ಗಳನ್ನು ಕಳೆದುಕೊಂಡಿದ್ದಾರೆ.

ಶಿಕ್ಷಕರೇ ಹಣ ಭರಿಸಿದರು !
ಕೊರೊನಾ ಲಾಕ್‌ಡೌನ್‌ನಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವ ಕಾರಣ ಬಹುತೇಕ ವಿದ್ಯಾರ್ಥಿಗಳು ಹಣ ಹೊಂದಿಸಲಾಗದೆ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಮುಂದಾಗಿಲ್ಲ. ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳ ಮೇಲೆ ಭರವಸೆ ಇದ್ದದ್ದರಿಂದ ಶಿಕ್ಷಕರೇ ತಮ್ಮ ಕೈಯಿಂದ ಹಣ ಹಾಕಿ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದಾರೆ.

36 ಶಾಲೆಗಳಿಗೆ ಶೇ. 100 ಫಲಿತಾಂಶ
ಮರು ಮೌಲ್ಯಮಾಪನದ ಫಲಿತಾಂಶ ಬಂದ ಬಳಿಕ ಅವಿಭಜಿತ ದ.ಕ. ಜಿಲ್ಲೆಯ 36 ಶಾಲೆಗಳು ಶೇ. 100 ಫಲಿತಾಂಶ ಪಡೆದುಕೊಂಡಿವೆ. ದ.ಕ. ಜಿಲ್ಲೆಯ 22 ಮತ್ತು ಉಡುಪಿ ಜಿಲ್ಲೆಯ 14 ಶಾಲೆಗಳು ಶೇ. 100 ಫಲಿತಾಂಶ ಪಡೆದುಕೊಂಡ ಶಾಲೆಗಳಾಗಿವೆ.

ಮಾಹಿತಿ ಪಡೆದುಕೊಳ್ಳುತ್ತೇನೆ
ಎಸೆಸೆಲ್ಸಿ ಪರೀಕ್ಷೆ ಮರು ಮೌಲ್ಯಮಾಪನ ವಿಚಾರದಲ್ಲಿ ಜಿಲ್ಲಾಡಳಿತದ ಪಾತ್ರ ಇರುವುದಿಲ್ಲ. ಶಿಕ್ಷಣ ಮಂಡಳಿಯೇ ಇದನ್ನು ನಿರ್ವಹಿಸುತ್ತದೆ. ಆದಾಗ್ಯೂ ಜಿಲ್ಲೆಯ 466ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಎಸೆಸೆಲ್ಸಿ ಫಲಿತಾಂಶ ಬಂದಿದ್ದಾಗ ಅನುತ್ತೀರ್ಣಗೊಂಡಿರುವುದಕ್ಕೆ ಕಾರಣ ಏನು ಎಂಬ ಬಗ್ಗೆ ತಿಳಿದುಕೊಳ್ಳುತ್ತೇನೆ.
-ಡಾ| ಕೆ. ವಿ. ರಾಜೇಂದ್ರ, ದ.ಕ. ಜಿಲ್ಲಾಧಿಕಾರಿ

ಉಡುಪಿಯಲ್ಲಿ ಇದೇ ಮೊದಲು
ಉಡುಪಿ ಜಿಲ್ಲೆಯಲ್ಲಿ 282 ಮಂದಿ ಮರು ಮೌಲ್ಯಮಾಪನದಲ್ಲಿ ಉತ್ತೀರ್ಣಗೊಂಡಿದ್ದಾರೆ. ಫಲಿತಾಂಶದಲ್ಲಿ ಅನುತ್ತೀರ್ಣಗೊಂಡು ಮರುಮೌಲ್ಯಮಾಪನದಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ಉತ್ತೀರ್ಣರಾಗಿರುವುದು ಇದೇ ಮೊದಲು. ಆದರೆ, ಈ ರೀತಿಯ ಫಲಿತಾಂಶಕ್ಕೆ ಕಾರಣ ಏನು ಎಂದು ಹೇಳಲು ಬರುವುದಿಲ್ಲ.
-ಶೇಷಶಯನ ಕಾರಿಂಜ, ಉಡುಪಿ ಡಿಡಿಪಿಐ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.