ಗ್ರಂಥಾಲಯ ಸೇವೆ ಆರಂಭ


Team Udayavani, Sep 13, 2020, 1:05 PM IST

ಗ್ರಂಥಾಲಯ ಸೇವೆ ಆರಂಭ

ದೇವನಹಳ್ಳಿ: ಕೋವಿಡ್ ಲಾಕ್‌ಡೌನ್‌ ಸಂದರ್ಭದಲ್ಲಿ ಸರ್ಕಾರದ ಆದೇಶದಂತೆ ಬಾಗಿಲು ಹಾಕಿದ್ದ ಗ್ರಂಥಾಲಯಗಳು ಶನಿವಾರ ಕಾರ್ಯನಿರ್ವಹಿಸಿದವು. ನಗರದ ಕೋಟೆ ರಸ್ತೆಯ ಸಾರ್ವಜನಿಕ ಗ್ರಂಥಾಲಯದಲ್ಲಿ ದಿನಪತ್ರಿಕೆ, ಪುಸ್ತಕ ಓದಿದರು. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಓದುಗರಿಗೆ ಮಾಸ್ಕ್, ಸ್ಯಾನಿಟೈಸರ್‌, ಸಾಮಾಜಿಕ ಅಂತರ ಕಡ್ಡಾಯ ಮಾಡಲಾಗಿದೆ.

ಗ್ರಂಥಾಲಯಕ್ಕೆ ಆಗಮಿಸುವ ಓದುಗರಿಗೆ ಥರ್ಮಲ್‌ ಸ್ಕ್ಯಾನಿಂಗ್‌ ಮಾಡಲಾಯಿತು. ಗ್ರಂಥಾಲಯದ ಸಹಾಯಕ ಮಂಜುನಾಥ್‌ ಮಾತನಾಡಿ, ಲಾಕ್‌ಡೌನ್‌ ಸಮಯದಲ್ಲಿ ಸಾರ್ವಜನಿಕ ಗ್ರಂಥಾಲಯ ಮುಚ್ಚಲಾಗಿತ್ತು. ಗ್ರಂಥಾಲಯದ ಉಪನಿರ್ದೇಶಕಿ ಸರೋಜಮ್ಮ ಮಾರ್ಗದರ್ಶನದಲ್ಲಿ ಮುಚ್ಚಿದ್ದ ಗ್ರಂಥಾಲಯದ ಬಾಗಿಲು ತೆರೆಯಲಾಗಿದೆ ಎಂದು ಹೇಳಿದರು.

ಡಿಜಿಟಲ್‌ ಗ್ರಂಥಾಲಯಕ್ಕೆ 2 ಕಂಪ್ಯೂಟರ್‌ ಗಳನ್ನು ನೀಡಲಾಗಿತ್ತು. ಗ್ರಂಥಾಲಯವನ್ನೇ ಓದುಗರ ಮನೆ ಬಾಗಿಲಿಗೆ ತರಲು, ಡಿಜಿಟಲ್‌ ಲೈಬ್ರರಿ ಮತ್ತು ಆ್ಯಪ್‌ ವಿನ್ಯಾಸ ಮಾಡಿ, ಮೊಬೈಲ್‌ನಲ್ಲಿಯೇ ಎಲ್ಲಿ ಬೇಕಾದರೂ ಓದುವ ವಿನೂತನ ಕಾರ್ಯ ಆರಂಭಿಸಲಾಗಿತ್ತು ಎಂದು ತಿಳಿಸಿದರು.

ಸಾರ್ವಜನಿಕ ಗ್ರಂಥಾಲಯಗಳಲ್ಲಿ ಲಭ್ಯ ವಿರುವ 4 ಲಕ್ಷಕ್ಕೂ ಹೆಚ್ಚು ಪುಸ್ತಕ, ನೂರಾರು ನಿಯತಕಾಲಿಕೆಗಳನ್ನು ಎಲ್ಲೆಂದರಲ್ಲೇ ಓದುವ ಅವಕಾಶ ಸಾರ್ವಜನಿಕ ಗ್ರಂಥಾಲಯ ಕಲ್ಪಿಸಿದೆ. ಇನ್ನು ಡಿಜಿಟಲ್‌ ಗ್ರಂಥಾಲಯಕ್ಕೆ ನೋಂದಣಿ ಮಾಡಿಕೊಳ್ಳುವಂತೆ ಕಾಲೇಜು ಗಳಲ್ಲಿ ಅಭಿಯಾನ ಹಮ್ಮಿಕೊಂಡಿರುವುದರ ಫಲವಾಗಿ ಇದುವರೆಗೆ 5978 ಮಂದಿ ನೋಂದಣಿ ಮಾಡಿಕೊಂಡಿದ್ದಾರೆಂದರು.

………………………………………………………………………………………………………………………………………………………

ಹಾಲು ನೀಡದ ಡೇರಿ: ಪರಿಶೀಲನೆ : ದೇವನಹಳ್ಳಿ: ತಾಲೂಕಿನ ಸಾವಕನಹಳ್ಳಿ ಡೇರಿಯಿಂದ ಹಾಲು ನೀಡುತ್ತಿಲ್ಲ. ಡೇರಿ ಜಾಗದಲ್ಲಿ ಓಡಾಡಲು ಅವಕಾಶ ಕೊಡುತ್ತಿಲ್ಲ ಎಂದು ಆರೋಪಿಸಿ ಗ್ರಾಮದ 5 ಕುಟುಂಬ ಬೆಂಗಳೂರು ಕೇಂದ್ರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ ಹಿನ್ನೆಲೆಯಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಆರಕ್ಷಕ ಉಪನಿರೀಕ್ಷಕ ಶ್ರೀನಿವಾಸ್‌ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಯಿತು.

ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಠಾಣಾ ವ್ಯಾಪ್ತಿಯ ಸಾವಕನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಪಿಎಸ್‌ಐ ಶ್ರೀನಿವಾಸ್‌ ಮಾತನಾಡಿ, ಈ ಗ್ರಾಮದ ಮುನಿಆಂಜಿನಪ್ಪ ಎಂಬವರು ನೀಡಿದ ದೂರಿನ ಅನ್ವಯಗ್ರಾಮದಲ್ಲಿ ನೈಜ ಘಟನೆ ವರದಿ ಮಾಡಲಾಗಿದ್ದು ಮೇಲಧಿಕಾರಿಗಳಿಗೆ ಸಲ್ಲಿಸಲಾಗುತ್ತದೆ. ಆರೋಪ ಸಾಬೀತಾಗಿ ಪ್ರಕರಣ ದಾಖಲಾದರೆ, 3-6ತಿಂಗಳವರೆಗೆ ಜಾಮೀನು ಸಿಗದ ಕಠಿಣ ಶಿಕ್ಷೆ ಇದೆ. 7ವರ್ಷಕ್ಕಿಂತ ಹೆಚ್ಚು ಕಾಲ ಕಠಿಣ ಶಿಕ್ಷೆ ಇದೆ ಎಂದು ಹೇಳಿದರು.

ಗ್ರಾಮಸ್ಥೆ ಲಕ್ಷ್ಮಮ್ಮ ಮಾತನಾಡಿ, ನಮಗೆ 2 ತಿಂಗಳಿನಿಂದ ಡೇರಿಯಿಂದ ಹಾಲು ನೀಡುತ್ತಿಲ್ಲ. ವಿಶ್ವನಾಥಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಹೋದರೆ ದೂರು ಸ್ವೀಕರಿಸುತ್ತಿಲ್ಲ. ಮಗುವಿಗೂ ಹಾಲು ನೀಡುತ್ತಿಲ್ಲ. ಬೇರೆಯವರನ್ನು ಕಳುಹಿಸಿದರೂ ಅವರಿಗೆ ಹಾಕಬೇಡಿ ಎಂದು ವಾಪಸ್‌ ಕಳುಹಿಸುತ್ತಾರೆಂದರು.ಎಂಪಿಸಿಎಸ್‌ ಅಧ್ಯಕ್ಷ ಎಸ್‌. ಪಿ.ಮುನಿರಾಜು, ಈ ಹಿಂದೆ ಡೇರಿ ಮೇಲೆ ಮೊದಲ ಅಂತಸ್ತು ಕಟ್ಟಲಾಗುತ್ತಿದೆ. ಅರ್ಜಿದಾರರು ಕರಾರು ತೆಗೆದಿದ್ದರು ಎಂದು ದೂರಿದ್ದಾರೆ. ಡೇರಿ ಸಂಬಂಧ ಯಾವುದೇ ಒಬ್ಬ ಅರ್ಜಿ ಹಾಕಿಕೊಂಡಿದ್ದರೆ, ಹಾಲು ಕೊಡಲು ಬರುವುದಿಲ್ಲ ಎಂಬುದು ಬೈಲಾದಲ್ಲಿದೆ. ಮುಂದಿನ ಹಂತದಲ್ಲಿ ಡೇರಿ ತೀರ್ಮಾನ ತೆಗೆದುಕೊಳ್ಳಲಾಗುವುದೆಂದು ತಿಳಿಸಿದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

Untitled-5

Bangalore: ಇಬ್ಬರು ಮಕ್ಕಳನ್ನು ಕೊಂದ ಮಲತಂದೆಯ ಬಂಧನ

16-bng

Magadi: ಮದುವೆ ನಿಶ್ಚಯವಾಗಿದ್ದ ಯುವ ವಕೀಲೆ ಆತ್ಮಹತ್ಯೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.