ರಾಷ್ಟ್ರಮಟ್ಟದಲ್ಲಿ ವಿದ್ಯಾಗಮ? ಮಾದರಿಯಾಗಲಿ ರಾಜ್ಯ


Team Udayavani, Sep 14, 2020, 10:41 AM IST

ರಾಷ್ಟ್ರಮಟ್ಟದಲ್ಲಿ ವಿದ್ಯಾಗಮ? ಮಾದರಿಯಾಗಲಿ ರಾಜ್ಯ

ಕೋವಿಡ್‌ -19 ಸಾಂಕ್ರಾಮಿಕದಿಂದಾಗಿ ದೇಶಾದ್ಯಂತ ಬಹುತೇಕ ಕ್ಷೇತ್ರಗಳಿಗೆ ಭಾರೀ ಹಿನ್ನಡೆಯಾಗಿದ್ದು, ಶಿಕ್ಷಣ ಕ್ಷೇತ್ರಕ್ಕಂತೂ ಅತಂತ್ರ ಪರಿಸ್ಥಿತಿ ಕಾಡಲಾರಂಭಿಸಿದೆ. ದೇಶಾದ್ಯಂತ ಹಠಾತ್ತನೆ ಶಾಲಾ-ಕಾಲೇಜುಗಳು ನಿಂತಿದ್ದರಿಂದ, ಪರೀಕ್ಷೆಗಳು ಮುಂದೂಡಲ್ಪಟ್ಟ ಕಾರಣ ವಿದ್ಯಾರ್ಥಿಗಳ ಭವಿಷ್ಯ ಹೇಗೋ ಎಂಬ ಚಿಂತೆ ಪೋಷಕರಲ್ಲಿ, ಭವಿಷ್ಯದಲ್ಲಿ ಏನಾಗಲಿದೆಯೋ ಎಂಬ ಆತಂಕ ಶಿಕ್ಷಕರಲ್ಲಿ ಮೂಡಿದ್ದು ಸಹಜವೇ. ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಹಿಂದುಳಿಯಬಾರದು ಎಂದರೆ ಆನ್‌ಲೈನ್‌ ಶಿಕ್ಷಣವೊಂದೇ ಪರಿಹಾರ ಎಂದೇ ವಿವಿಧ ರಾಜ್ಯಗಳು ಚರ್ಚಿಸುವ ನಡುವೆಯೇ, ಕರ್ನಾಟಕದ ಶಿಕ್ಷಣ ಇಲಾಖೆ ವಿದ್ಯಾಗಮದಂಥ ಅಭೂತಪೂರ್ವ ಶೈಕ್ಷಣಿಕ ಕಾರ್ಯಕ್ರಮವೊಂದನ್ನು ಜಾರಿಗೆ ತಂದಿತು. ಸರಕಾರಿ ಶಾಲಾ ಮಕ್ಕಳ ನಿರಂತರ ಕಲಿಕೆಗಾಗಿ ಶಿಕ್ಷಣ ಇಲಾಖೆ ರೂಪಿಸಿರುವ ವಿದ್ಯಾಗಮ ಎಷ್ಟು ಮೆಚ್ಚುಗೆ ಗಳಿಸುತ್ತಿದೆಯೆಂದರೆ, ಈಗ ಅದಕ್ಕೆ ರಾಷ್ಟ್ರದ ಮಾನ್ಯತೆ ಸಿಗುವ ಸಾಧ್ಯತೆಯೂ ಎದುರಾಗಿದೆ. ಕೇಂದ್ರ ಶಿಕ್ಷಣ ಇಲಾಖೆ ರಾಜ್ಯದಿಂದ ಈ ಕುರಿತು ವರದಿ ಪಡೆದಿದ್ದು, ಅದರಲ್ಲಿರುವ ಒಳ್ಳೆಯ ಅಂಶಗಳನ್ನು ದೇಶಾ ದ್ಯಂತ ಅನುಷ್ಠಾನ ಮಾಡ ಬಹುದಾದ ಸಾಧ್ಯತೆಯೂ ಇದೆ ಎನ್ನಲಾಗಿದೆ.

ರಾಜ್ಯದ ಮೂಲೆಮೂಲೆ ಯಲ್ಲೂ ಶಿಕ್ಷಕರು ಮಕ್ಕಳಿದ್ದಲ್ಲಿಗೇ ಹೋಗಿ ದೇಗುಲಗಳ ಆವರಣ, ಮೈದಾನಗಳು, ಮರಗಳಡಿಯಲ್ಲಿ ಪಾಠ ಮಾಡಿ, ಎಲ್ಲ ಸವಾಲುಗಳ ನಡುವೆಯೇ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಶ್ರಮಿಸುತ್ತಿದ್ದಾರೆ. ಗಮನಾರ್ಹ ಸಂಗತಿಯೆಂದರೆ, ಒಂದೆಡೆ ಖಾಸಗಿ ಶಿಕ್ಷಣ ಸಂಸ್ಥೆಗಳು ಮುಂದಿನ ದಾರಿ ಹೇಗೋ ಎಂದು ಯೋಚಿಸುತ್ತಿದ್ದಾಗಲೇ, ಸರಕಾರಿ ಶಾಲೆಗಳು ಇಂಥ ವಿನೂತನ ದಾರಿಯನ್ನು ಹುಡುಕಿಕೊಂಡು ಸಕ್ರಿಯವಾಗಿರುವುದು. ವಿದ್ಯಾಗಮದಿಂದ ಪ್ರೇರಿತರಾಗಿ ಕೆಲವೆಡೆ ಪೋಷಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಸೇರಿಸುತ್ತಿರುವ ಕುರಿತು ವರದಿಯಾಗುತ್ತಿವೆ.

ಇವೆಲ್ಲದರ ನಡುವೆಯೇ ಗಮನಿಸಬೇಕಾದ ಅಂಶವೆಂದರೆ, ಈಗ ರಾಜ್ಯವು ದೇಶದ ಪ್ರಮುಖ ಹಾಟ್‌ಸ್ಪಾಟ್‌ಗಳಲ್ಲಿ ಒಂದಾಗಿದ್ದು, ಕೊರೊನಾದ ಆತಂಕ ಶಿಕ್ಷಕರಿಗೆ ಕಾಡುತ್ತಿದೆ. ಹೀಗಾಗಿ ಅವರಿಗೆ ಅಗತ್ಯ ಸುರಕ್ಷಾ ಪರಿಕರಗಳನ್ನು ಒದಗಿ ಸುವುದರ ಜತೆಗೆ ಸಾರಿಗೆ ವ್ಯವಸ್ಥೆಯಲ್ಲಿ ತೊಂದರೆ ಎದುರಾಗದಂತೆ ನೋಡಿಕೊಳ್ಳುವತ್ತ ಸರಕಾರ ಗಮನಹರಿಸಬೇಕು. ಜತೆಗೆ ವಿದ್ಯಾಗಮ ನಡೆಸಲು ನಗರ ಪ್ರದೇಶಗಳಲ್ಲಿ ಹಲವು ಅಡ್ಡಿಗಳು ಎದುರಾಗುತ್ತಿವೆ ಎನ್ನುವ ದೂರುಗಳೂ ಕೇಳಿಬರುತ್ತಿವೆ. ಗ್ರಾಮೀಣ ಭಾಗಗಳಲ್ಲಾದರೆ ದೇವಾಲಯದ ಆವರಣ, ಅಶ್ವತ್ಥಕಟ್ಟೆ ಮೊದಲಾದ ಸಾರ್ವಜನಿಕ ಪ್ರದೇಶಗಳಲ್ಲಿ ಸಾಕಷ್ಟು ಸ್ಥಳಾವಕಾಶವಿರುತ್ತದೆ. ಆದರೆ ನಗರ ಪ್ರದೇಶಗಳಲ್ಲಿ ಈ ರೀತಿಯ ಸ್ಥಳಾವಕಾಶ ಕಡಿಮೆ. ಇದ್ದರೂ ವಾಹನಗಳ ಸದ್ದು ಮಕ್ಕಳಿಗೆ ಪಾಠದತ್ತ ಗಮನ ಕೇಂದ್ರೀಕರಿಸಲು ತೊಂದರೆಯುಂಟುಮಾಡುತ್ತಿದೆ. ಈ ಕಾರಣಕ್ಕಾಗಿಯೇ ವಿದ್ಯಾಗಮವನ್ನು ಶಾಲೆಗಳ ಆವರಣದಲ್ಲೇ ನಡೆಸಲು ಸರಕಾರ ಯೋಚಿಸಬೇಕು ಎನ್ನುವ ಸಲಹೆಗಳು ಶಿಕ್ಷಣ ತಜ್ಞರಿಂದ ಕೇಳಿಬರುತ್ತಿವೆ. ಸದ್ಯದ ಪರಿಸ್ಥಿತಿಯಲ್ಲಂತೂ ತರಗತಿಗಳನ್ನು ಎಂದಿನಂತೆ ಆರಂಭಿಸುವ ಸಾಧ್ಯತೆ ಕಡಿಮೆಯೇ. ಸರಕಾರಿ ಶಾಲೆಗಳ ಆವರಣಗಳು ವಿಶಾಲವಾಗಿರುತ್ತಾವಾದ್ದರಿಂದ ಅಲ್ಲಿಯೇ ವಿದ್ಯಾಗಮ ನಡೆಸುವ ಬಗ್ಗೆ ಶಿಕ್ಷಣ ಇಲಾಖೆ ಯೋಚಿಸಲಿ.

ಟಾಪ್ ನ್ಯೂಸ್

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.