ಬುಡಕಟ್ಟು ಜನರ ಜೀವನ ಶೈಲಿ, ಸಂಸ್ಕೃತಿ, ಭಾಷೆ ಉಳಿಸಿ


Team Udayavani, Sep 14, 2020, 1:58 PM IST

ಬುಡಕಟ್ಟು ಜನರ ಜೀವನ ಶೈಲಿ, ಸಂಸ್ಕೃತಿ, ಭಾಷೆ ಉಳಿಸಿ

ಮೈಸೂರು: ಬುಡಕಟ್ಟು ಜನಾಂಗ ಈ ದೇಶದ ಮೂಲ ನಿವಾಸಿಗಳಾಗಿದ್ದು, ಅವರ ಆಚಾರ‌ ಪದ್ಧತಿ, ಸಂಸ್ಕೃತಿಯನು ° ಉಳಿಸುವ ಕೆಲಸ ಆಗಬೇಕು ಎಂದು ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಅಪರ ಆಯುಕ್ತ ಡಾ.ಹೆಳವರಹುಂಡಿ ಸಿದ್ದಪ್ಪ ಹೇಳಿದರು.

ಕನ್ನಡ ಜಾನಪದ ಪರಿಷತ್‌ ವತಿಯಿಂದ ‌ ನಗರದ ಎಂಜಿನಿಯರ್‌ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಬುಡಕಟ್ಟು ಹಾಗೂ ವಿಶ್ವಜಾನಪದ ದಿನಾಚರಣೆಯಲ್ಲಿ ಮಾತನಾಡಿ, ಬುಡಕಟ್ಟು ಜನಾಂಗ ತಮ್ಮದೇ ಜೀವನ ಶೈಲಿ, ಸಂಸ್ಕೃತಿ, ಭಾಷೆ ಹೊಂದಿದ್ದು, ಇವೆಲ್ಲವೂ ಇಂದು ನಶಿಸಿ ಹೋಗುತ್ತಿದೆ. ಈ ನಿಟ್ಟಿನಲ್ಲಿ ಅವರ ಸಂಸ್ಕೃತಿ, ಆಚಾರ ಪದ್ಧತಿಗಳನ್ನು ಉಳಿಸಬೇಕಿದೆ ಎಂದರು.

ರಜೆ: ಪ್ರಸ್ತುತ ಭಾರತದಲ್ಲಿ ಶೇ.10ರಷ್ಟು ಬುಡಕಟ್ಟು ಜನಾಂಗ ಉಳಿದೆ. ಅವರ ‌ ಭಾಷೆ ಮತ್ತು ಜನಾಂಗ ನಶಿಸುತ್ತಿದ್ದು, ರಕ್ಷಣೆಗೆ ಸರಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ವಿಶ್ವ ಬುಡಕಟ್ಟು ದಿನವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿಲ್ಲ. ಮೂಲ ನಿವಾಸಿಗಳು ಸ್ಮರಿಸಿ ಗೌರವಿಸುವ ಕೆಲಸ ಆಗಬೇಕಿದೆ. ವಿಶ್ವ ಬುಡಕಟ್ಟು ದಿನದಂದು ಬಿಹಾರ ಮತ್ತು ಒಡಿಶಾದಲ್ಲಿ ರಜೆ ನೀಡಲಾಗುತ್ತದೆ. ಅದೇ ರೀತಿಯಲ್ಲಿ ರಾಜ್ಯ ಮತ್ತು ದೇಶದಲ್ಲಿ ರಜೆ ಘೋಷಿಸಲಿ ಎಂದು ಹೇಳಿದರು.

ಜಾನಪದ ಸಂಸ್ಕೃತಿಯನ್ನು ಉಳಿಸಲು ಸರ್ಕಾರ ಮಾಡಬೇಕಿರುವ ಕಾರ್ಯಗ ‌ಳನ್ನು ಕನ್ನಡ ಜಾನಪದ ಪರಿಷತ್‌ ನಡೆಸುತ್ತಿದೆ. ಈ ಮೂಲಕ ಜಾನಪದ ಸಂಸ್ಕೃತಿಯನ್ನು ಜನಮಾನಸದಲ್ಲಿ ಉಳಿಸುವ ಪ್ರಯತ್ನ ಮಾಡುತ್ತಿದೆ ಎಂದು ಶ್ಲಾಘಿಸಿದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕಾರ್ಯಕ್ರಮ ಉದ್ಘಾಟಿಸಿದರು. ಜಾನಪದ ಕ್ಷೇತ್ರದ ಸೋಬಾನೆ ಪದ ಕಲಾವಿದೆ ಸಣ್ಣಮ್ಮ, ತತ್ವಪದ ಗಾಯಕ ಜೆ.ಜಟ್ಟಪ್ಪ, ಹಾಗೂ ಕಲಾವಿದ ನಟರಾಜು ಸಿ.ಲಿಂಗೀಶ್‌ ಹಾಗೂ ಬುಡಕಟ್ಟುಕ್ಷೇತ್ರದಲ್ಲಿ ಪಿ.ಕೆ.ರಾಮು, ಚಿಕ್ಕಮೊಮ್ಮ, ಬೊಮ್ಮಿ ಮತ್ತು ಬುಡಕಟು r ಜನಾಂಗದ ಕುರಿತು ಸಂಶೋಧನೆ ನಡೆಸಿದ ಡಾ.ನಾಗ ರ‌ತ್ನ ಅವರನ್ನು ಸನ್ಮಾನಿಸಲಾಯಿತು.

ಪನ್ನಗ ವಿಜಯಕುಮಾರ್‌, ಅಮ್ಮ ರಾಮಚಂದ್ರ, ಮರಿಸ್ವಾಮಿ ಸರ್ವಾಥ,ಮನುಶ್ರೀ, ಪಿ.ಸೋಮಶೇಖರ್‌ ಹಾಗೂ ಸುಮಂತ್‌ ವಶಿಷ್ಟ್ಯ ಅವರು ಜಾನಪದ ಗೀತೆ ಗಾಯನ ನಡೆಸಿದರು. ಕಾರ್ಯಕ್ರಮದಲ್ಲಿ ಕನ್ನಡ ಜಾನಪದ ಪರಿಷತ್‌ ಜಿಲ್ಲಾಧ್ಯಕ್ಷ ಡಾ.ಎಚ್‌.ಕ್ಯಾತನಹಳ್ಳಿ ಪ್ರಕಾಶ್‌, ತೋಟಗಾರಿಕೆ ಇಲಾಖೆ ನಿವೃತ್ತ ಸಹಾಯಕನಿರ್ದೇಶಕ ಎಚ್‌.ಹನುಮಯ್ಯ, ವೇದವ್ಯಾಸ ಸೇವಾ ಟ್ರಸ್ಟ್‌ ಅಧ್ಯಕ್ಷ ಪನ್ನಗ ವಿಜಯಕುಮಾರ್‌, ಕಂಸಾಳೆ ಕಲಾವಿದ ಕಂಸಾಳೆ ಕುಮಾರಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur-1

Hunsur: ತಂಬಾಕು ಬೆಳೆಗಾರರ ರಕ್ಷಣೆಗೆ ಬದ್ದ: ಸಂಸದ ಯದುವೀರ್ ಒಡೆಯರ್

ಮುಡಾ ಅಧ್ಯಕ್ಷ ಕೆ.ಮರಿಗೌಡ ತಲೆದಂಡ?

MUDA Chairman: ಕೆ.ಮರಿಗೌಡ ತಲೆದಂಡ? ಇಂದು ಅಥವಾ ನಾಳೆ ರಾಜೀನಾಮೆ ನೀಡುವ ಸಾಧ್ಯತೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.