ಕಡಿಮೆ ಖರ್ಚಿನಲ್ಲಿ ಜನತೆಗೆ ಉತ್ತಮ ಸೇವೆ ನೀಡಿ


Team Udayavani, Sep 14, 2020, 4:50 PM IST

ಕಡಿಮೆ ಖರ್ಚಿನಲ್ಲಿ ಜನತೆಗೆ ಉತ್ತಮ ಸೇವೆ ನೀಡಿ

ಬೀದರ: ಪ್ರಧಾನಿ ನರೇಂದ್ರ ಮೋದಿ ಡಿಜಿಟಲ್‌ ಇಂಡಿಯಾದ ಕನಸು ಕಂಡಿದ್ದಾರೆ. ಜನರಿಗೆ ಎಲ್ಲ ಸೇವೆಗಳು ಸರಳವಾಗಿ ಮತ್ತು ಕಡಿಮೆ ದರದಲ್ಲಿ ದೊರೆಯಬೇಕು ಎನ್ನುವುದೇ ಸಾಮಾನ್ಯ ಸೇವಾ ಕೇಂದ್ರಗಳ ಉದ್ದೇಶವಾಗಿದೆ. ಗ್ರಾಮೀಣ ಭಾಗದಲ್ಲಿ ವಿಎಲ್‌ಇಗಳು ಉತ್ತಮ ಸೇವೆ ನೀಡಿ ಜನರ ಪ್ರೀತಿ, ಗೌರವಕ್ಕೆ ಪಾತ್ರರಾಗಬೇಕು ಎಂದು ಸಂಸದ ಭಗವಂತ ಖೂಬಾ ಕರೆ ನೀಡಿದರು.

ನಗರದ ಡಾ| ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ರವಿವಾರ ನಡೆದ, ಸಂಸದ ಭಗವಂತ ಖೂಬಾ ಅವರ ಜತೆ ಜಿಲ್ಲೆಯ ಎಲ್ಲ ಸಾಮಾನ್ಯ ಸೇವಾ ಕೇಂದ್ರಗಳ ವಿಲೇಜ್‌ ಲೇವೆಲ್‌ ಎಂಟರ್‌ ಪ್ರೇನಿಯರ್‌ ಅವರ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಿಎಸ್‌ ಸಿಗಳಲ್ಲಿ ವಿಎಲ್‌ಇಗಳಾಗಿ ಸೇವೆ ಸಲ್ಲಿಸುತ್ತಿರುವ ಬೀದರ ಜಿಲ್ಲೆಯ 340 ಜನರು ಸ್ವಾವಲಂಬಿ ಜೀವನ ನಡೆಸುತ್ತಿದ್ದೀರಿ. ಅನೇಕ ಪದವೀಧರರಿಗೆ ಕೆಲಸಸಿಗುತ್ತಿಲ್ಲ. ಸ್ಥಳೀಯವಾಗಿ ಕೆಲಸ ಮಾಡಿ, ಹಣ ಗಳಿಸುತ್ತಿರುವ ನೀವೇ ಭಾಗ್ಯಶಾಲಿಗಳು ಎಂದು ಹೇಳಿದರು.

ಕಡಿಮೆ ಖರ್ಚಿನಲ್ಲಿ ಉತ್ತಮ ಸೇವೆ ನೀಡಿದರೆ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧಿಸಲು ಸಾಧ್ಯವಾಗಲಿದೆ. ಸಿಎಸ್‌ಸಿನಿಂದ 400 ಸೇವೆಗಳನ್ನು ಕಡಿಮೆ ದರದಲ್ಲಿ ನೀಡಬಹುದಾಗಿದೆ. ಇಲ್ಲಿ ಕೆಲಸ ಮಾಡುವ ವಿಎಲ್‌ಇಗಳು ಗ್ರಾಮದ ಮಗ ಹಾಗೂ ಮನೆಯ ಮಗನಾಗಲು ಅವಕಾಶವಿದೆ. ಅದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು. ದೇಶದ ಎಲ್ಲರೂ ಆರ್ಥಿಕವಾಗಿ ಸದೃಢರಾದರೆ ಮಾತ್ರ ದೇಶವು ಬಲಿಷ್ಠವಾಗುತ್ತದೆ. ಎಲ್ಲರೂ ಈ ನಿಟ್ಟಿನಲ್ಲಿ ಸಾಥ್‌ ನೀಡಬೇಕೆಂದರು. ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್‌ ಮಾತನಾಡಿ, ನ್ಯಾಯಬೆಲೆ ಅಂಗಡಿಗಳಿಗೆ ಪಡಿತರ ಆಹಾರ ಪಡೆಯಲು ಬರುವವರಿಗೆ ಅಲ್ಲಿಯೇ ಆಯುಷ್ಮಾನ್‌ ಆರೋಗ್ಯ ಕಾರ್ಡ್‌ ವಿತರಣೆಗೆಅವಕಾಶ ನೀಡಬೇಕು ಎಂದು ವಿಎಲ್‌ಇ ಒಬ್ಬರು ನೀಡಿರುವ ಸಲಹೆ ಒಳ್ಳೆಯದು. ಈ ಬಗ್ಗೆ ಆಹಾರ ಇಲಾಖೆ ಉಪ ನಿರ್ದೇಶಕರೊಂದಿಗೆ ಚರ್ಚಿಸಿ, ಅನುಷ್ಠಾನಗೊಳಿಸಲಾಗುವುದು. ಸಿಎಸ್‌ಸಿಮೂಲಕ ಹೋಲ್ಡಿಂಗ್‌ ವಿತರಣೆ ಮತ್ತು ಎಸ್‌ಟಿ ಜಾತಿ ಪ್ರಮಾಣ ಪತ್ರಕ್ಕೆ ಅವಕಾಶ ನೀಡಬೇಕೆಂಬ ಬೇಡಿಕೆ ರಾಜ್ಯ ಮಟ್ಟದ ವಿಷಯಗಳಾಗಿದ್ದು, ಈ ಕುರಿತು ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.

ಸಂವಾದದಲ್ಲಿ ಅನೇಕ ವಿಲೇಜ್‌ ಲೇವೆಲ್‌ ಎಂಟರ್‌ಪ್ರೇನಿಯರ್‌ಗಳು ತಮ್ಮ ಅನುಭವ ಮತ್ತು ಸಮಸ್ಯೆಗಳನ್ನು ಹೇಳಿಕೊಂಡರು. ಮಹಾನಂದ ಮಾತನಾಡಿ, ಸಿಎಸ್‌ಸಿ ಸ್ಥಾಪನೆ ಮೂಲಕ ತಮ್ಮ ಜೀವನ ಸುಧಾರಣೆ ಮತ್ತು ಕಷ್ಟಗಳನ್ನು ಮೆಟ್ಟಿ ತಾವು ಈ ಹಂತಕ್ಕೆ ಹೇಗೆ ತಲುಪಿದೆ ಎನ್ನುವ ಅನುಭವ ಹಂಚಿಕೊಂಡರಲ್ಲದೇ ತಾವು ಸ್ಯಾನಿಟರಿ ಪ್ಯಾಡ್‌ ತಯಾರಿಕಾ ಘಟಕ ಸ್ಥಾಪಿಸುತ್ತಿರುವುದಾಗಿಯೂ ತಿಳಿಸಿದರು. ಶೀಬಾ ರೋಜ್‌ ಅವರು ಆಯುಷ್ಮಾನ್‌ ಭಾರತ ಕಾರ್ಡ್‌ ವಿತರಣೆಯಲ್ಲಿನ ಸಾಧನೆ ವಿವರಿಸಿದರು.

ಡಿಎಚ್‌ಒ ಡಾ| ವಿ.ಜಿ. ರೆಡ್ಡಿ, ಯೋಜನಾ ವ್ಯವಸ್ಥಾಪಕ ಸಚಿನ್‌ ಉಪ್ಪೆ, ಸತೀಶ ವಾಲೆ, ಸಂಸದರ ಆಪ್ತ ಸಹಾಯಕ ಅಮರ ಹಿರೇಮಠ, ಶಂಕರ ದೇಶಮುಖ ಮತ್ತಿತರರು ಇದ್ದರು. ಚನ್ನಬಸವ ಹೇಡೆ ನಿರೂಪಿಸಿದರು. ಸಂವಾದದಲ್ಲಿ ಸಿಎಸ್‌ಸಿಗಳ ಸೊಸೈಟಿಗೆ ಕೇಕ್‌ ಕತ್ತರಿಸುವ ಮೂಲಕ ಸಂಸದ ಖೂಬಾ ಉದ್ಘಾಟಿಸಿದರು.

ಬ್ಯಾಂಕ್‌ಗೆ ನೋಟಿಸ್‌ ಕೊಡಿ :  ಭಾಲ್ಕಿಯ ಎಸ್‌ಬಿಐ ಬ್ಯಾಂಕ್‌ನಲ್ಲಿ ಆಧಾರ್‌ ಕಾರ್ಡ್‌ ನವೀಕರಣ ಮಾಡುತ್ತಿಲ್ಲ ಎಂದು ವಿಎಲ್‌ಇ ಒಬ್ಬರು ಸಂವಾದದಲ್ಲಿ ಗಮನ ಸೆಳೆದರು. ಇದಕ್ಕೆ ಸ್ಪಂದಿಸಿದ ಜಿಲ್ಲಾ ಧಿಕಾರಿ ರಾಮಚಂದ್ರನ್‌ ಆರ್‌. ಅವರು, ಸೇವೆ ನೀಡದ ಬ್ಯಾಂಕ್‌ನವರಿಗೆ ನೋಟೀಸ್‌ ಜಾರಿ ಮಾಡಿ ಎಂದು ಸಿಬ್ಬಂದಿಗೆ ಸೂಚಿಸಿದರಲ್ಲದೇ ಜಿಲ್ಲೆಯ ಎಲ್ಲ 340 ಸಿಎಸ್‌ಸಿಗಳಲ್ಲೂ ಆಧಾರ್‌ ನವೀಕರಣಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಘೋಷಿಸಿದರು.

2021ರ ಜನವರಿ ತಿಂಗಳೊಳಗೆ ಬೀದರ ಜಿಲ್ಲೆಯ 15 ಲಕ್ಷ ಅರ್ಹ ಫಲಾನುಭವಿಗಳಿಗೆ ಆಯುಷ್ಮಾನ್‌ ಆರೋಗ್ಯ ಕಾರ್ಡ್‌ ವಿತರಿಸಲು ಗುರಿ ಹಾಕಿಕೊಳ್ಳಬೇಕು. ಈ ಗುರಿಯನ್ನು ತಲುಪಿದರೆ ಕೇಂದ್ರ ಸಚಿವರನ್ನು ಬೀದರಗೆಕರೆಯಿಸಿ ಜಿಲ್ಲೆಯ ಸಾಮಾನ್ಯ ಸೇವಾ ಕೇಂದ್ರಗಳ ವಿಲೇಜ್‌ ಲೇವೆಲ್‌ ಎಂಟರ್‌ ಪ್ರೇನಿಯರ್‌ಗಳನ್ನು ಸನ್ಮಾನಿಸಲಾಗುವುದು. ರಾಷ್ಟ್ರೀಯ ಭಾವನೆ, ಸಾಮಾಜಿಕ ಕಾಳಜಿ ಇದ್ದರೆ ಮಾತ್ರ ಸಾಧನೆ ಸಾಧ್ಯವಾಗಲಿದೆ.- ಭಗವಂತ ಖೂಬಾ, ಸಂಸದ, ಬೀದರ.

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

Bidar: ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

crime

Bidar:‌ ರಸ್ತೆ ಅಪಘಾತ; ಇಬ್ಬರು ಬಲಿ; ಪ್ರಕರಣ ದಾಖಲು

4-

Bidar: ವಿಮಾನಯಾನ ಸೇವೆ ಕುರಿತಂತೆ ಈಶ್ವರ ಖಂಡ್ರೆ ಸಭೆ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.