ಕೆಎಸ್ಆರ್ಟಿಸಿಯಿಂದ “ಸ್ಕೂಲ್ ಬಸ್’ ಭಾಗ್ಯ!
Team Udayavani, Sep 15, 2020, 6:06 AM IST
ಉಡುಪಿಯ ನೇತ್ರಜ್ಯೋತಿ ಕಾಲೇಜು ಕೆಎಸ್ಆರ್ಟಿಸಿಯಿಂದ ಖರೀದಿಸಿರುವ ಬಸ್.
ಮಂಗಳೂರು: ಕೆಎಸ್ಆರ್ಟಿಸಿಯು ತನ್ನ ಆರ್ಥಿಕ ಹೊರೆಯನ್ನು ಕಡಿಮೆಗೊಳಿಸುವ ಉದ್ದೇಶದಿಂದ ಸುಮಾರು 9 ಲಕ್ಷ ಕಿ.ಮೀ. ದೂರ ಸಂಚರಿಸಿರುವ ಬಸ್ಗಳನ್ನು ಶಾಲೆಗಳಿಗೆ ರಿಯಾಯಿತಿ ದರದಲ್ಲಿ ನೀಡುವ ಮೂಲಕ ಮಕ್ಕಳ ಸ್ಕೂಲ್ ಬಸ್ ಪ್ರಯಾಣದ ಕನಸನ್ನು ನನಸುಗೊಳಿಸಲು ಹೊರಟಿದೆ. ಕೆಎಸ್ಆರ್ಟಿಸಿ ಬಸ್ಗಳು ಐದರಿಂದ ಹತ್ತು ವರ್ಷದೊಳಗೆ 10 ಲಕ್ಷ ಕಿ.ಮೀ. ದೂರ
ಓಡಿರುತ್ತವೆ. ಬಳಿಕ ಅವುಗಳನ್ನು ನಿರುಪಯುಕ್ತ ವೆಂದು ಪರಿಗಣಿಸಿ ಗುಜುರಿಗೆ ಹಾಕುವ ಬದಲು ಶಾಲೆಗಳಿಗೆ ನೀಡಿದರೆ ಬಾಳ್ವಿಕೆ ಮುಗಿಯುವವರೆಗೆ ಸದ್ಬಳಕೆ ಮಾಡಿಕೊಳ್ಳಬಹುದು. ಈ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ರಾಜ್ಯದ ಎಲ್ಲ ಡಿಪೋಗಳಲ್ಲಿ 10 ಲಕ್ಷ ಕಿ.ಮೀ. ಸಂಚರಿಸಿರುವ ಬಸ್ಗಳನ್ನು ಶಾಲೆಗಳಿಗೆ ರಿಯಾಯಿತಿ ದರದಲ್ಲಿ ನೀಡಲು ತೀರ್ಮಾನಿಸಿದೆ. ಈ ನಿರ್ಧಾರವು ನೂರಾರು ಶಾಲೆಗಳಿಗೆ ಅದರಲ್ಲಿಯೂ ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ “ಸ್ಕೂಲ್ ಬಸ್’ ಸೇವೆ ಪಡೆಯುವುದಕ್ಕೆ ವರದಾನವಾಗಲಿದೆ.
ರಾಜ್ಯದ 17 ಕೆಎಸ್ಆರ್ಟಿಸಿ ವಿಭಾಗಗಳಲ್ಲಿ ಈ ವ್ಯವಸ್ಥೆ ಜಾರಿಗೆ ತರಲಾಗಿದೆ. 8 ವಿಭಾಗಗಳಿಂದ ಈಗಾಗಲೇ 61 ಬಸ್ಗಳನ್ನು ಮಾರಾಟ ಮಾಡಲಾಗಿದೆ. ಕೊರೊನಾ ಕಾರಣ ನಿಗಮ ನಷ್ಟದ ಲ್ಲಿದ್ದು, ಈ ವ್ಯವಸ್ಥೆಯನ್ನು ಮತ್ತಷ್ಟು ಉತ್ತೇಜಿಸಲು ಕೆಎಸ್ಆರ್ಟಿಸಿ ಮುಂದಾಗಿದೆ.
ಕರಾವಳಿಯಲ್ಲಿ ನಿರಾಸಕ್ತಿ
ಈ ವಿನೂತನ ಯೋಜನೆಗೆ ಕರಾವಳಿ ಯಲ್ಲಿ ಯಾರೂ ಉತ್ಸಾಹ ತೋರಿಸಿಲ್ಲ. ಮಂಗಳೂರು ವಿಭಾಗ ದಿಂದ ಕೇವಲ ಒಂದು ಬಸ್ ಮಾತ್ರ ರಿಯಾಯಿತಿ ದರದಲ್ಲಿ ಶಾಲೆಗೆ ಮಾರಾಟವಾಗಿದೆ. ಪುತ್ತೂರು ವಿಭಾಗದಿಂದ ಕೆಲವು ವರ್ಷಗಳ ಹಿಂದೆ 2 ಶಾಲೆಗಳ ಪ್ರಮುಖರು ಕೆಎಸ್ಆರ್ಟಿಸಿಯನ್ನು ಸಂಪರ್ಕಿಸಿದ್ದರು. ಆದರೆ ಯಾವುದೇ ಬಸ್ ಮಾರಾಟವಾಗಿಲ್ಲ.
ವಿನೂತನ ಯೋಜನೆ
ಸರಕಾರಿ ಶಾಲೆಗಳಿಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದ್ದು, ಕರಾವಳಿ ಸೇರಿದಂತೆ ರಾಜ್ಯದಲ್ಲಿ ಈಗಾಗಲೇ ಕೊರೊನಾ ಮೊಬೈಲ್ ಕ್ಲಿನಿಕ್ಗೆ ಕೆಎಸ್ಆರ್ಟಿಸಿ ಬಸ್ಸನ್ನು ಬಳಸಲಾಗುತ್ತಿದೆ. ಅದೇ ರೀತಿ ರಾಜ್ಯದಲ್ಲಿರುವ ಹಳೆ ಬಸ್ಗಳಲ್ಲಿ ಹೈಟೆಕ್ ಮಹಿಳಾ ಶೌಚಾಲಯ ನಿರ್ಮಿಸಲು ಮುಂದಾಗಿದೆ. ಇನ್ನು ಪ್ರಮುಖ ಪ್ರವಾಸಿ ತಾಣಗಳ ವ್ಯಾಪ್ತಿಯಲ್ಲಿ ಡಬಲ್ ಡೆಕ್ಕರ್ ಬಸ್ ಕಾರ್ಯಾಚರಣೆ ನಡೆಸಲು ಕೆಎಸ್ಆರ್ಟಿಸಿ ಚಿಂತಿಸಿದೆ ಎನ್ನುತ್ತಾರೆ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ.
ಕೆಲವು ತಿಂಗಳ ಹಿಂದೆ ಕೆಎಸ್ಆರ್ಟಿಸಿಯಿಂದ ನಮ್ಮ ಶಾಲೆಗೆ ರಿಯಾಯಿತಿ ದರದಲ್ಲಿ ಬಸ್ ಖರೀದಿಸಿದ್ದೇವೆ. ಖರೀದಿ ದರ, ಸರ್ವೀಸ್, ಆಲೆóàಶನ್ ಸೇರಿದಂತೆ ಒಟ್ಟು 6 ಲಕ್ಷ ರೂ. ಖರ್ಚಾಗಿದೆ. ಹೊಸ ಬಸ್ ಖರೀದಿಸುವುದಾದರೆ ಸುಮಾರು 45 ಲಕ್ಷ ರೂ. ತಗಲುತ್ತದೆ.
– ಅಬ್ದುಲ್ ಖಾದರ್, ಉಡುಪಿ ನೇತ್ರಜ್ಯೋತಿ ಕಾಲೇಜಿನ ಸಂಯೋಜಕ
ನವೀನ್ ಭಟ್ ಇಳಂತಿಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ
Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್ ಟೆಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.