ಇಂದು ಎಂಜಿನಿಯರ್ ದಿನ : ವಿಶ್ವದ ಶೇ.25ರಷ್ಟು ಎಂಜಿನಿಯರ್‌ಗಳು ಭಾರತೀಯರು


Team Udayavani, Sep 15, 2020, 7:16 AM IST

Visvesvaraya

ವಿಶ್ವೇಶ್ವರಯ್ಯನವರು ಜಾಗತಿಕ ಮಟ್ಟದಲ್ಲೇ ಸಾರ್ವಕಾಲಿಕ ಶ್ರೇಷ್ಠ ವ್ಯಕ್ತಿ.

ವಿಶ್ವೇಶ್ವರಯ್ಯನವರು ಜಾಗತಿಕ ಮಟ್ಟದಲ್ಲೇ ಸಾರ್ವಕಾಲಿಕ ಶ್ರೇಷ್ಠ ವ್ಯಕ್ತಿ. ತಮ್ಮ ತಾಂತ್ರಿಕ ಕೌಶಲವನ್ನು ಸಮುದಾಯ, ನಾಡು-ದೇಶದ ಹಿತಕ್ಕಾಗಿಯೇ ಮೀಸಲಿಟ್ಟ ಪ್ರಾತಃಸ್ಮರಣೀಯರು. ಅವರ ಉತ್ಕೃಷ್ಟ ಸಾಧನೆಯಾದ ಜಲ ಸಂಪನ್ಮೂಲದ ಸದ್ಬಳಕೆ ಇಂದಿಗೂ ಜೀವನದಿಯಾಗಿ ನೀರುಣಿಸುತ್ತಿದೆ.

ವಿಜ್ಞಾನ – ತಂತ್ರಜ್ಞಾನ-ನಿಸರ್ಗ-ಸಮುದಾಯಗಳನ್ನು ಜೋಡಿಸುವ ವಿಶಿಷ್ಟ ಮಾಧ್ಯಮದ ಕೊಂಡಿಯೇ ಎಂಜಿನಿಯರ್‌ ವೃತ್ತಿ. ದೇಶ ಕಟ್ಟುವ ಎಂಜಿನಿಯರ್‌ ವೃತ್ತಿಗೆ ಗೌರವ ಸೂಚಿಸಲು ಹಾಗೂ ಭಾರತದ ಹೆಮ್ಮೆಯ ಎಂಜಿನಿಯರ್‌ ಪಿತಾಮಹ ಮೋಕ್ಷಗುಂಡಂ ವಿಶ್ವೇಶ್ವರಯ್ಯನವರ ಸ್ಮರಣಾರ್ಥ ದಿನವೇ ಎಂಜಿನಿಯರ್‌ ದಿನ.

ಈ ಹಿನ್ನೆಲೆಯಲ್ಲಿಯೇ ಪ್ರತಿವರ್ಷ ಭಾರತದಲ್ಲಿ ಎಷ್ಟು ಜನ ವಿದ್ಯಾರ್ಥಿಗಳು ಎಂಜಿನಿಯರ್‌ ಪದವಿಯನ್ನು ಪಡೆಯುತ್ತಾರೆ? ದೇಶದಲ್ಲಿರುವ ತಾಂತ್ರಿಕ ಮಹಾವಿದ್ಯಾಲಯಗಳೆಷ್ಟು? ಈ ಕ್ಷೇತ್ರದಿಂದ ದೇಶದ ಬೊಕ್ಕಸಕ್ಕೆ ಸೇರುತ್ತಿರುವ ಆದಾಯವೆಷ್ಟು? ಎಂಬಿತ್ಯಾದಿ ಮಾಹಿತಿ ಇಲ್ಲಿದೆ.

ಆರ್ಥಿಕ ಕ್ಷೇತ್ರಕ್ಕೆ ಕೊಡುಗೆ
ಮೂಲಸೌಕರ್ಯ ಮತ್ತು ಕೈಗಾರಿಕಾ ಉತ್ಪಾದನೆಯಲ್ಲಿ ಹೆಚ್ಚಿದ ಹೂಡಿಕೆಯಿಂದಾಗಿ ಭಾರತದ ಎಂಜಿನಿಯರಿಂಗ್‌ ಕ್ಷೇತ್ರವು ಕೆಲವು ವರ್ಷಗಳಿಂದ ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ. ಉತ್ಪಾದನಾ ಮತ್ತು ಮೂಲಸೌಕರ್ಯ ಕ್ಷೇತ್ರಗಳೊಂದಿಗೆ ನಿಕಟ ಸಂಬಂಧ ಹೊಂದಿರುವ ಈ ವಲಯವು ಭಾರತದ ಆರ್ಥಿಕ ಕ್ಷೇತ್ರಕ್ಕೂ ಕೊಡುಗೆ ನೀಡುತ್ತಿದೆ. ಜಾಗತಿಕ ಮಹಾಶಕ್ತಿಯಾಗಬೇಕೆಂಬ ಹಂಬಲದಲ್ಲಿ ಭಾರತ ತನ್ನ ಎಂಜಿನಿಯರಿಂಗ್‌ ಕ್ಷೇತ್ರವನ್ನು ಅಭಿವೃದ್ಧಿಪಡಿಸುವಲ್ಲಿ ಮಹತ್ವದ ದಾಪುಗಾಲು ಹಾಕುತ್ತಿದ್ದು, ಎಂಜಿನಿಯರಿಂಗ್‌ ಸರಕುಗಳು, ಉತ್ಪನ್ನಗಳ ಮತ್ತು ಸೇವೆಗಳ ರಫ್ತುನ್ನು ಉತ್ತೇಜಿಸುವ ಉಸ್ತುವಾರಿ ವಹಿಸಲು ಎಂಜಿನಿಯರಿಂಗ್‌ ರಫ್ತು ಉತ್ತೇಜನ ಮಂಡಳಿಯನ್ನು (ಇಇಪಿಸಿ) ಸರಕಾರ ರಚಿಸಿದೆ.

ಶೇ.60ರಷ್ಟು ರಫ್ತು
ದೇಶದಿಂದ ಹೆಚ್ಚಾಗಿ ಎಂಜಿನಿಯರಿಂಗ್‌ ವಸ್ತುಗಳು ಯುಎಸ್‌ ಮತ್ತು ಯುರೋಪಿಗೆ ರಫ್ತು ಆಗಲಿದ್ದು, ಇದರ ಒಟ್ಟು ರಫ್ತಿನ ಪ್ರಮಾಣ ಶೇ.60 ಕ್ಕಿಂತ ಹೆಚ್ಚಿದೆ. 2025ರ ವೇಳೆಗೆ ಭಾರತದಲ್ಲಿ ಎಂಜಿನಿಯರಿಂಗ್‌ ಸರಕು ಉತ್ಪನ್ನ ಕೈಗಾರಿಕಾ ಘಟಕ ಉದ್ಯಮದ ವಹಿವಾಟನ್ನು 8.05 ಲಕ್ಷ ಕೋಟಿ ರೂ.ಗಳಿಗೆ (115.17 ಬಿಲಿಯನ್‌ ಯುಎಸ್‌ ಡಾಲರ್‌) ಏರಿಸುವ ನಿರೀಕ್ಷೆಯಿದೆ.


ಭಾರತ ನಂ. ಒನ್‌

ಯುಎಸ್‌ ಮೂಲದ ನ್ಯಾಶನಲ್‌ ಸೈನ್ಸ್ಫೌಂ ಡೇಶನ್‌ ನಡೆಸಿದ ವಿಜ್ಞಾನ ಮತ್ತು ಎಂಜಿನಿಯರಿಂಗ್‌ ಸಮೀಕ್ಷೆ ವರದಿ – 2018ರ ಪ್ರಕಾರ ಎಂಜಿನಿಯರಿಂಗ್‌ ಮತ್ತು ವಿಜ್ಞಾನ ಪದವೀಧರರನ್ನು ವಿಶ್ವಕ್ಕೆ ಕೊಡುಗೆ ನೀಡುವ ದೇಶಗಳ ಪೈಕಿ ಭಾರತ ಇಡೀ ವಿಶ್ವದಲ್ಲಿಯೇ ಮೊದಲ ಸ್ಥಾನದಲ್ಲಿದ್ದು, ಪ್ರತಿ ವರ್ಷ ಶೇ.25ರಷ್ಟು ಎಂಜಿನಿಯರ್‌ಗಳನ್ನು ಭಾರತ ವಿಶ್ವಕ್ಕೆ ಕೊಡುಗೆ ನೀಡುತ್ತದೆ ಎಂದು ವರದಿ ಹೇಳಿದೆ.

38 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು
ಮಾನವ ಸಂಪನ್ಮೂಲ ಸಚಿವಾಲಯದ ಅಖಿಲ ಭಾರತ ಉನ್ನತ ಶಿಕ್ಷಣ ಸಮೀಕ್ಷೆ (ಎಐಎಸ್‌ಎಚ್‌ಇ) 2019ರ ವರದಿಯ ಪ್ರಕಾರ ದೇಶಾದ್ಯಂತ ಸುಮಾರು 38.52 ಲಕ್ಷ ವಿದ್ಯಾರ್ಥಿಗಳು ಎಂಜಿನಿಯರ್‌ ಪದವಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಜತೆಗೆ ಅತೀ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿದ್ದ ಇತರ ಪದವಿ ವಿಭಾಗಗಳ ಪೈಕಿ ಎಂಜಿನಿಯರಿಂಗ್‌ ಪದವಿ ವಿಭಾಗ ನಾಲ್ಕನೇ ಸ್ಥಾನದಲ್ಲಿದೆ ಎಂದು ವರದಿ ಹೇಳಿದೆ.

6,000: ಮಾನವ ಸಂಪನ್ಮೂಲ ಸಚಿವಾಲಯದ ಪ್ರಕಾರ, ಭಾರತದಲ್ಲಿ 6,214 ಎಂಜಿನಿಯ ರಿಂಗ್‌ ಮತ್ತು ತಂತ್ರಜ್ಞಾನ ಸಂಸ್ಥೆಗಳು ಇವೆ.

15,00,000: ಪ್ರತಿವರ್ಷ 15 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪದವಿ ಪೂರೈಸಿ ಉದ್ಯೋಗ ಕ್ಷೇತ್ರಕ್ಕೆ ಪಾದಾರ್ಪಣೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.