ಸ್ವಾಮೀಜಿಗಳಿಂದ ಬೇಬಿ ಕೆರೆಗೆ ಬಾಗಿನ
Team Udayavani, Sep 15, 2020, 1:25 PM IST
ಪಾಂಡವಪುರ: ತಾಲೂಕಿನ ಬೇಬಿ ಗ್ರಾಮದ ಬೇಬಿಕೆರೆಗೆ ಸೋಮವಾರ ಶಾಸಕ ಸಿ.ಎಸ್.ಪುಟ್ಟರಾಜು, ಬೇಬಿಮಠದ ಶ್ರೀತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ, ಬೇಬಿಬೆಟ್ಟದ ಶ್ರೀಗುರುಸಿದ್ದೇಶ್ವರ ಸ್ವಾಮೀಜಿ ಅವರು ಬಾಗಿನ ಅರ್ಪಿಸಿದರು.
ನೀರು ತುಂಬಿಸುವ ಯೋಜನೆಗೆ ಚಾಲನೆ: ಶಾಸಕ ಸಿ.ಎಸ್.ಪುಟ್ಟರಾಜು ಮಾತನಾಡಿ, ತಾಲೂಕಿನ ಬೇಬಿಗ್ರಾಮದ ಕೆರೆಗೆ ಕೆಆರ್ಎಸ್ನಿಂದ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಲಾಗಿದೆ. ಕೆರೆಗಳನ್ನು ಭರ್ತಿ ಮಾಡಿ, ಜನರಿಗೆ ನೀರಾವರಿ ಸೌಲಭ್ಯ ಕಲ್ಪಿಸಿಕೊಡಬೇಕು ಎನ್ನುವ ಉದ್ದೇಶದಿಂದ ಕೆಆರ್ಎಸ್ ಹಿನ್ನೀರಿನ ಪ್ರದೇಶದಲ್ಲಿರುವ ಮಲ್ಲಿಗೆರೆ ಏತನೀರಾವರಿ ಯೋಜನೆಯಲ್ಲಿ ಡಿಂಕಾ, ಬನ್ನಂಗಾಡಿ, ಕಟ್ಟೇರಿ ಹಾಗೂ ಹೊನಗಾನಹಳ್ಳಿ ಗ್ರಾಪಂ ವ್ಯಾಪ್ತಿ ಸುಮಾರು 18 ಕೆರೆಗಳನ್ನು ತುಂಬಿಸುವ ಯೋಜನೆಗೆ ಚಾಲನೆ ನೀಡಲಾಗಿದೆ.
ಈಗಾಗಲೇ ಯೋಜನೆಯ ಕಾಮಗಾರಿ ಆರಂಭಗೊಂಡಿದೆ. ಸುಮಾರು 600 ಮೀಟರ್ ಉದ್ದದಷ್ಟು ಪೈಪ್ಲೈನ್ ಕೆಲಸ ನಡೆದಿದೆ. ಕೆಲಸ ಪೂರ್ಣಗೊಂಡರೆ, ಕೆಆರ್ಎಸ್ನಲ್ಲಿ ಕೇವಲ 90 ಅಡಿ ನೀರಿದ್ದರೂ ಕೆಆರ್ಎಸ್ನಿಂದ ಕೆರೆಗಳಿಗೆ ನೀರು ತುಂಬಿಸಬಹುದಾಗಿದೆ ಎಂದು ತಿಳಿಸಿದರು.
ಗಂಗಾಮಾತೆಗೆ ಗೌರವ: ಬೇಬಿಮಠದ ಶ್ರೀತ್ರಿನೇತ್ರ ಮಹಂತಶಿವಯೋಗಿ ಸ್ವಾಮೀಜಿ ಮಾತನಾಡಿ, ಜಗತ್ತಿನಲ್ಲಿ ಕೆರೆಗಳಿಗೆ ಬಾಗಿನ ಅರ್ಪಿಸುವ ಸಂಸ್ಕೃತಿ ಹೊಂದಿದೆ ಎಂದರೆ ಅದು ನಮ್ಮ ಭಾರತ ದೇಶದಲ್ಲಿ ಮಾತ್ರ. ನೀರನ್ನು ಗಂಗಾಮಾತೆ ಎಂದು ಕರೆಯುವ ನಾವು, ನಮ್ಮ ತಾಯಿಗೆ ಹೇಗೆ ಗೌರವ ಕೊಡುತ್ತೇವೆಯೋ, ಹಾಗೇ ಗಂಗಾಮಾತೆಯನ್ನುಗೌರವಿಸುತ್ತೇವೆ. ಹೀಗಾಗಿ ನೀರು ಪಾವಿತ್ರತೆಯನ್ನು ಹೊಂದಿದೆ ಎಂದು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ನದಿಗಳ ಜೋಡಣೆ ಹಾಗೂಕೆರೆ, ಕಟ್ಟೆಗಳ ಸಂರಕ್ಷಣೆಯನ್ನು ಮಾಡಬೇಕಾಗಿದೆ. ಇಲ್ಲವಾದರೆ, ಮುಂದಿನ ದಿನಗಳಲ್ಲಿ ನಮ್ಮ ಮನುಕುಲ ಅಪಾರವಾದ ಸಮಸ್ಯೆ ಎದುರಿಸಬೇಕಾ ಗುತ್ತದೆ ಎಂದು ಬೇಸರವ್ಯಕ್ತಪಡಿಸಿದರು.
ತಾಪಂ ಸದಸ್ಯ ಅಲ್ಪಳ್ಳಿ ಗೋವಿಂದಯ್ಯ, ಸಣ್ಣನೀರಾವರಿ ಇಲಾಖೆ ಎಇಇ ಶ್ರೀನಿವಾಸಲು, ಎಇ ಕೋಡಿಗೌಡ, ಟಿ.ಪಿ.ಶಿವಕುಮಾರ್, ಪಿಡಿಒ ತಮ್ಮಣ್ಣ, ಮುಖಂಡರಾದ ಚಂದ್ರಪ್ಪ, ಗಿರೀಶ್, ಚಿಕ್ಕಪಾಪಣ್ಣ, ಮಹದೇವಪ್ಪ, ನಿಂಗೇಗೌಡ, ಸ್ವಾಮಿ, ನಾಗರಾಜು, ಬಿ.ಪಿ.ಪುಟ್ಟರಾಜು, ವೈದ್ಯನಾಥ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagamangala ಗಲಭೆಯ ಹಿನ್ನೆಲೆ ಗೊತ್ತಾಗಬೇಕು: ಸಿ.ಎನ್. ಅಶ್ವತ್ಥನಾರಾಯಣ
Bharathinagar: ಕಾರು ಡಿಕ್ಕಿ ಹೊಡೆದು ಅಜ್ಜಿ, ಮೊಮ್ಮಗ ಸ್ಥಳದಲ್ಲೇ ಮೃತ್ಯು
Nagamangala ಗಲಭೆಗೆ ಕೇರಳ ಲಿಂಕ್: ಮಾಹಿತಿ ಸಂಗ್ರಹಕ್ಕೆ ಮುಂದಾದ ಪೊಲೀಸರು
Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು
Nagamangala Case: “ಟಾರ್ಗೆಟ್ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.