ವಿದ್ಯುತ್‌ ಕಣ್ಣಾ ಮುಚ್ಚಾಲೆ; ರೈತರು ಕಂಗಾಲು

ನೀರು ಹರಿಸಲಾಗದೇ ಒಣಗುತ್ತಿರುವ ಭತ್ತ ಬೆಳೆ

Team Udayavani, Sep 15, 2020, 3:33 PM IST

ವಿದ್ಯುತ್‌ ಕಣ್ಣಾ ಮುಚ್ಚಾಲೆ; ರೈತರು ಕಂಗಾಲು

ರಾಯಚೂರು: ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಕಣ್ಣಾ ಮುಚ್ಚಾಲೆ ಆಟ ಮುಂದುವರಿದಿದ್ದು, ಜಮೀನುಗಳಿಗೆ ನೀರು ಕಟ್ಟಲಾಗದೆ ರೈತರು ಕಂಗಾಲಾಗಿದ್ದಾರೆ. ಹಗಲಲ್ಲಿ 7 ಗಂಟೆ ತ್ರಿಪೇಸ್‌ ವಿದ್ಯುತ್‌ ನೀಡುವುದಾಗಿ ತಿಳಿಸಿದರೂ ಮನಸೋಇಚ್ಛೆ ವಿದ್ಯುತ್‌ ಕಡಿತ ಮಾಡಲಾಗುತ್ತಿದೆ.ಇದರಿಂದ ರೈತರಿಗೆ ಹೊತ್ತು ಗೊತ್ತಿಲ್ಲದೇ ಜಮೀನಿಗೆ ಹೋಗಿ ನೀರು ಕಟ್ಟುವ ಪರಿಸ್ಥಿತಿ ಎದುರಾಗಿದೆ.

ಮಳೆ, ಗಾಳಿ ಇಲ್ಲದಿದ್ದರೂ ನಾಲ್ಕೈದು ಗಂಟೆ ವಿದ್ಯುತ್‌ ಕಡಿತಗೊಳಿಸಲಾಗುತ್ತಿದೆ. ರಾಯಚೂರು ತಾಲೂಕಿನ ಕಲಮಲ ಹೋಬಳಿಯಲ್ಲಿ ಕಳೆದ ಕೆಲ ದಿನಗಳಿಂದ ಈ ರೀತಿ ವಿದ್ಯುತ್‌ ಸರಬರಾಜಾಗುತ್ತಿದೆ. ಈ ಬಗ್ಗೆ ರೈತರು ಜೆಸ್ಕಾಂ ಅಧಿಕಾರಿಗಳನ್ನು ಕೇಳಿದರೆ ಕೆಲಸ ನಡೆದಿದೆ ಅರ್ಧ ಗಂಟೆಯೊಳಗೆ ಬರುತ್ತದೆ ಎಂದು ಹೇಳುತ್ತಾರೆ. ಮತ್ತೂಮ್ಮೆ ಕರೆಮಾಡಿದರೆ ಸ್ವೀಕರಿಸುವುದಿಲ್ಲ ಎನ್ನುವುದು ರೈತರ ಅಳಲು.

ಈಗ ಭತ್ತ ನಾಟಿ ಮಾಡಿದ್ದು, ಕಾಲಕಾಲಕ್ಕೆ ನೀರು ಕಟ್ಟಬೇಕಿದೆ. ಕಳೆದ ಕೆಲ ದಿನಗಳಿಂದ ಸಕಾಲಕ್ಕೆ ನೀರು ಹರಿಸಲು ಆಗುತ್ತಿಲ್ಲ. ವಿದ್ಯುತ್‌ ಇದ್ದರೂ ತ್ರಿಪೇಸ್‌ ನೀಡುತ್ತಿಲ್ಲ.ಇದರಿಂದ ಬೋರ್‌ನಿಂದ ಹೆಚ್ಚು ನೀರುಹರಿಸಲಾಗುತ್ತಿಲ್ಲ. ಭತ್ತ ಒಣಗುತ್ತಿದೆ ಎಂದು ಅಳಲು ತೋಡಿಕೊಳ್ಳುತ್ತಾರೆ ತಾಲೂಕಿನ ಜೇಗರಕಲ್‌ ಭಾಗದ ರೈತರು.

ಹಗಲಲ್ಲಿ 4 ಗಂಟೆ ಮಾತ್ರ: ಹಗಲಲ್ಲಿ ನಿರಂತರ 7 ಗಂಟೆಗಳ ಕಾಲ ತ್ರಿಪೇಸ್‌ ವಿದ್ಯುತ್‌ ನೀಡಬೇಕು ಎಂಬ ಆದೇಶವಿದೆ. ಆದರೆ, ರೈತರು ದೂರುವ ಪ್ರಕಾರ ನಾಲ್ಕು ಗಂಟೆ ಕೊಟ್ಟರೆ ಹೆಚ್ಚು ಎನ್ನುತ್ತಾರೆ. ಕೆಲವೊಮ್ಮೆ ಸಂಜೆ ಹೊತ್ತು ಕೊಡುತ್ತಾರೆ. ಬಿಟ್ಟು ಬಿಟ್ಟು ವಿದ್ಯುತ್‌ಸರಬರಾಜು ಮಾಡುವುದರಿಂದ ವಿದ್ಯುತ್‌ ಗಾಗಿ ಕಾದು ಕೂಡುವುದೇ ಕಾಯಕವಾಗಿದೆ ಎಂದು ದೂರುತ್ತಾರೆ.

ನಿರಂತರ ಜ್ಯೋತಿ ಇಲ್ಲ: ಇನ್ನು ಸರ್ಕಾರ ಬಡವರಿಗಾಗಿ ಹಳ್ಳಿಗಳಲ್ಲಿ ನಿರಂತರ ಜ್ಯೋತಿ ಯೋಜನೆ ಜಾರಿ ಮಾಡಿದೆ. ಆದರೆ, ಅನಿಯಮಿತ ವಿದ್ಯುತ್‌ ಸರಬರಾಜು ಹೆಚ್ಚಾಗುತ್ತಿದೆ. ಮಳೆ ಗಾಳಿ ಇಲ್ಲದಿದ್ದಾಗಲೂ ವಿದ್ಯುತ್‌ ಕಡಿತಗೊಳ್ಳುತ್ತದೆ. ಈಚೆಗೆ ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿ ಸುರಿದಪರಿಣಾಮ ಸೊಳ್ಳೆ ಕಾಟ ಹೆಚ್ಚಾಗಿದೆ. ರಾತ್ರಿ ವಿದ್ಯುತ್‌ ಕಡಿತಗೊಳಿಸುವುದರಿಂದ ನಿದ್ರೆ ಮಾಡುವುದು ಕಷ್ಟವಾಗುತ್ತಿದೆ ಎಂದು ದೂರುತ್ತಾರೆ ಹಳ್ಳಿ ಜನ.

ವಿದ್ಯುತ್‌ ವಿಚಾರದಲ್ಲಿ ರೈತರು ಬೇಸತ್ತು ಹೋಗಿದ್ದಾರೆ. ಬೆಳೆಗೆ ನೀರು ಕಟ್ಟುವ ವೇಳೆಯೇ ವಿದ್ಯುತ್‌ ಇರುವುದಿಲ್ಲ. ಯಾವಾಗ ಬರುತ್ತದೋ ಯಾವಾಗ ಹೋಗುತ್ತದೋ ತಿಳಿಯದಾಗಿದೆ. ಕರೆ ಮಾಡಿ ಕೇಳಿದಾಗ ತಕ್ಷಣಕ್ಕೆ ವಿದ್ಯುತ್‌ ಸರಬರಾಜು ಮಾಡುತ್ತಾರೆ. ಮತ್ತೆ ವಿನಾಕಾರಣ ಕಡಿತಗೊಳಿಸುತ್ತಾರೆ. ಭತ್ತಕ್ಕೆ ನೀರು ಕಟ್ಟಲಾಗದೆ ಒಣಗಿ ಹೋಗುತ್ತಿದೆ. ಇನ್ನು  ತರಕಾರಿಗೆ ವಾರಕ್ಕೆ ಮೂರು ಬಾರಿ ನೀರು ಕಟ್ಟಲೇಬೇಕು. ಇಲ್ಲವಾದರೆ ಬೆಳೆ ಹಾಳಾಗುತ್ತದೆ. ಈ ಬಗ್ಗೆ ಮೇಲ ಧಿಕಾರಿಗಳ ಗಮನಕ್ಕೆ ತಂದಿದ್ದು, ಶೀಘ್ರದಲ್ಲೇ ಕ್ರಮ ಕೈಗೊಳ್ಳಬೇಕು. – ಲಕ್ಷ್ಮಣಗೌಡ ಕಡಗಂದೊಡ್ಡಿ, ರೈತ ಮುಖಂಡ

ರಾಯಚೂರು ತಾಲೂಕಿನ ಯಾಪಲದಿನ್ನಿ ಭಾಗದಲ್ಲಿ ತಾಂತ್ರಿಕ ಸಮಸ್ಯೆ ಇತ್ತು. ಹೀಗಾಗಿ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಿತ್ತು. ಈಗ ಸರಿ ಮಾಡಲಾಗಿದೆ. ನಿತ್ಯ 7 ಗಂಟೆ ತ್ರಿ ಪೇಸ್‌ ವಿದ್ಯುತ್‌ ನೀಡುವುದರಲ್ಲಿ ಯಾವುದೇ ವ್ಯತ್ಯಾಸ ಮಾಡಿಲ್ಲ.ಮಧ್ಯಂತರದಲ್ಲಿ ಎಷ್ಟು ಹೊತ್ತು ಕಡಿತ ಮಾಡಲಾಗುತ್ತದೆಯೋ ಅಷ್ಟು ಹೊತ್ತು ಬಳಿಕ ಸರಬರಾಜು ಮಾಡಲಾಗುತ್ತಿದೆ. ತಾಂತ್ರಿಕ ಸಮಸ್ಯೆ ಇದ್ದಲ್ಲಿ ಮಾತ್ರ ವಿದ್ಯುತ್‌ ವ್ಯತ್ಯಯವಾಗುತ್ತಿದೆ.ಸಮಸ್ಯೆಗಳಿದ್ದಲ್ಲಿ ಸಾರ್ವಜನಿಕರು ನೇರವಾಗಿ ಗಮನಕ್ಕೆ ತಂದಲ್ಲಿ ತಕ್ಷಣಕ್ಕೆ ಕ್ರಮ ಕೈಗೊಳ್ಳಲಾಗುವುದು. – ಹನುಮೇಶ, ಜೆಸ್ಕಾಂ ಎಇಇ, ರಾಯಚೂರು ಗ್ರಾಮೀಣ ವಿಭಾಗ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shrana-p

Hospital: ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆಗಾಗಿ ಕೇಂದ್ರಕ್ಕೆ ಮನವಿ: ಸಚಿವ ಡಾ. ಶರಣಪ್ರಕಾಶ

Manvi

Raichuru: ಅಪಘಾತದಲ್ಲಿ ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ: ಸಿಎಂ ಸಿದ್ದರಾಮಯ್ಯ

Manvi: ಶಾಲಾ ಬಸ್-‌ ಸರ್ಕಾರಿ ಬಸ್‌ ನಡುವೆ ಭೀಕರ ಅಪಘಾತ; ಇಬ್ಬರು ಮಕ್ಕಳು ಸಾವು

Manvi: ಶಾಲಾ ಬಸ್-‌ ಸರ್ಕಾರಿ ಬಸ್‌ ನಡುವೆ ಭೀಕರ ಅಪಘಾತ; ಇಬ್ಬರು ಮಕ್ಕಳು ಸಾವು

Muda Case: ಮುಡಾ‌ ಪ್ರಕರಣ ಅಂದುಕೊಂಡಿದ್ದಕ್ಕಿಂತ ಆಳವಾಗಿದೆ- ಸಚಿವ ವಿ.ಸೋಮಣ್ಣ

Muda Case: ಮುಡಾ‌ ಪ್ರಕರಣ ಅಂದುಕೊಂಡಿದ್ದಕ್ಕಿಂತ ಆಳವಾಗಿದೆ- ಸಚಿವ ವಿ.ಸೋಮಣ್ಣ

Raichur: ನಗರಸಭೆ ಕೈ ವಶ… ಅಧ್ಯಕ್ಷೆಯಾಗಿ ನರಸಮ್ಮ, ಉಪಾಧ್ಯಕ್ಷರಾಗಿ ಸಾಜಿದ್ ಸಮೀರ್

Election: ರಾಯಚೂರು ನಗರಸಭೆ ಕೈ ವಶ, ಅಧ್ಯಕ್ಷೆಯಾಗಿ ನರಸಮ್ಮ, ಉಪಾಧ್ಯಕ್ಷರಾಗಿ ಸಾಜಿದ್ ಸಮೀರ್

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.