ಅಸಮಂಜಸ ನಕಾಶೆ ಪ್ರದರ್ಶಿಸಿದ ಪಾಕ್: SCO ಸಭೆಯಿಂದ ಹೊರನಡೆದ ಭಾರತ


Team Udayavani, Sep 15, 2020, 8:50 PM IST

ಅಸಮಂಜಸ ನಕಾಶೆ ಪ್ರದರ್ಶಿಸಿದ ಪಾಕ್: SCO ಸಭೆಯಿಂದ ಹೊರನಡೆದ ಭಾರತ

ಹೊಸದಿಲ್ಲಿ: ಭಾರತ ಮತ್ತು ಪಾಕಿಸ್ಥಾನ ದೇಶಗಳ ಗಡಿ ಭಾಗಗಳನ್ನು ಅಸಮಂಜಸ ರೀತಿಯಲ್ಲಿ ಬಿಂಬಿಸುವ ತನ್ನ ನಕ್ಷೆಯನ್ನು ಪಾಕಿಸ್ಥಾನ ಪ್ರದರ್ಶಿಸಿರುವುದನ್ನು ಖಂಡಿಸಿ ಭಾರತವು ಸಹಕಾರ ಸಂಸ್ಥೆಯ (SCO) ವರ್ಚ್ಯುವಲ್ ಸಭೆಯನ್ನು ಬಹಿಷ್ಕರಿಸಿ ಹೊರನಡೆದಿದೆ.

ಶಾಂಘೈ ಸಹಕಾರ ಸಂಸ್ಥೆಯ ಸದಸ್ಯ ರಾಷ್ಟ್ರಗಳ ರಾಷ್ಟ್ರೀಯ ಭದ್ರತಾ ಸಲಹೆಗಾರರ ವರ್ಚ್ಯುವಲ್ ಸಭೆ ನಡೆಯುತ್ತಿದ್ದ ಸಂದರ್ಭದಲ್ಲೇ ಪಾಕಿಸ್ಥಾನ ಈ ದುರ್ವರ್ತನೆಯನ್ನು ತೋರಿಸಿರುವುದು ಭಾರತವನ್ನು ಸಹಜವಾಗಿಯೇ ಕೆರಳಿಸಿದೆ.

‘ರಷ್ಯಾದ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಈ ವರ್ಚ್ಯುವಲ್ ಸಭೆಯ ಸಂದರ್ಭದಲ್ಲಿ ಪಾಕಿಸ್ಥಾನದ ರಾಷ್ಟ್ರೀಯ ಭದ್ರತಾ ಸಲಹೆಗಾರ ಉದ್ದೇಶಪೂರ್ವಕವಾಗಿಯೇ ಆ ದೇಶ ಕಳೆದ ಕೆಲವು ದಿನಗಳಿಂದ ಬಿಂಬಿಸುತ್ತಿರುವ ಅಸಮಂಜಸ ನಕ್ಷೆಯನ್ನು ಪ್ರದರ್ಶಿಸಿದರು’ ಎಂದು ವಿದೇಶಾಂಗ ವ್ಯವಹಾರ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ್ ಅವರ ಹೇಳಿಕೆಯನ್ನು ಆಧರಿಸಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಪಾಕಿಸ್ಥಾನದ ಈ ಅಧಿಕಪ್ರಸಂಗಿತನ ಸಭೆಯ ನಿಯಮಾವಳಿಗಳಿಗೆ ವಿರುದ್ಧವಾಗಿತ್ತು. ಹಾಗಾಗಿ ಈ ಸಭೆಯನ್ನು ಆಯೋಜಿಸಿದ್ದ ರಾಷ್ಟ್ರದ ಜೊತೆ ಸಮಾಲೋಚನೆ ನಡೆಸಿ ಭಾರತವು ಈ ಸಭೆಯಿಂದ ಹೊರ ನಡೆಯಿತು ಎಂದು ಶ್ರೀವಾಸ್ತವ ಅವರು ಘಟನೆಯ ಕುರಿತಾದ ವಿವರಗಳನ್ನು ನೀಡಿದ್ದಾರೆ.

ಇಂದಿನ ಬೆಳವಣಿಗೆಗಳ ಕುರಿತಾಗಿ ನಿಖರ ಮಾಹಿತಿ ಹೊಂದಿರುವ ವ್ಯಕ್ತಿ ತನ್ನ ಗುರುತಿನ ಗೌಪ್ಯತೆಯನ್ನು ಕಾಪಿಡುವ ಷರತ್ತಿನ ಮೇಲೆ ಪಾಕ್ ನಡೆಸಿದ ಕಿತಾಪತಿಯನ್ನು ‘ಹಿಂದೂಸ್ತಾನ್ ಟೈಮ್ಸ್’ ಜೊತೆ ಹಂಚಿಕೊಂಡಿದ್ದು ಹೀಗೆ…:

‘ಇಂದಿನ ವರ್ಚ್ಯುವಲ್ ಸಭೆ ನಡೆಯುತ್ತಿದ್ದ ಸಂದರ್ಭದಲ್ಲಿ ಪಾಕಿಸ್ಥಾನದ ಪ್ರತಿನಿಧಿ ಕುಳಿತಿದ್ದ ಹಿಂಭಾಗದಲ್ಲಿ ಇರಿಸಲಾಗಿದ್ದ ನಕಾಶೆ ಅಸಮಂಜಸ ಮತ್ತು ಕಾಲ್ಪನಿಕವಾಗಿತ್ತು. ಮತ್ತು ಈ ನಕಾಶೆಯಲ್ಲಿ ಭಾರತದ ಸಾರ್ವಭೌಮತೆಗೊಳಪಟ್ಟ ಪ್ರದೇಶಗಳನ್ನು ಪಾಕಿಸ್ಥಾನ ತನ್ನದೆಂದು ಬಿಂಬಿಸಿಕೊಂಡಿತ್ತು. ಮತ್ತು ಪಾಕ್ ನ ಈ ನಡೆ SCOನ ಸದಸ್ಯ ರಾಷ್ಟ್ರಗಳ ಸಾರ್ವಭೌಮತೆ, ಸಮಗ್ರತೆಯ ರಕ್ಷಣೆಯ ಸ್ಪಷ್ಟ ಉಲ್ಲಂಘನೆಯಾಗಿತ್ತು’ ಎಂದು ಅವರು ಹೇಳಿದ್ದಾರೆ.

ಇದನ್ನು ಕಂಡ ಕೂಡಲೇ ಭಾರತದ ಪ್ರತಿನಿಧಿಯಾಗಿ ಭಾಗವಹಿಸಿದ್ದ ಅಜಿತ್ ದೋವಲ್ ಮತ್ತು ಅವರ ತಂಡ ಪಾಕ್ ನ ಈ ದುಸ್ಸಾಹಸವನ್ನು ಕಟುಶಬ್ದಗಳಲ್ಲಿ ಖಂಡಿಸಿದ್ದಾರೆ ಮತ್ತು ಈ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ರಷ್ಯಾ ಸಹ ಪಾಕಿಸ್ಥಾನಕ್ಕೆ ಈ ರೀತಿ ಮಾಡದಂತೆ ಮನವರಿಕೆ ಮಾಡಿಕೊಡುವ ಪ್ರಯತ್ನವನ್ನು ಮಾಡಿತು.

ಮತ್ತು ಈ ಸಭೆಯಲ್ಲಿ ಭಾಗವಹಿಸಿದ್ದಕ್ಕೆ ರಷ್ಯಾದ ರಾಷ್ಟ್ರೀಯ ಭದ್ರತಾ ಸಲಹೆಗಾರ ನಿಕೊಲಾಯ್ ಪತ್ರುಶೇವ್ ಅವರು ಅಜಿತ್ ದೋವಲ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು ಮಾತ್ರವಲ್ಲದೇ ಪಾಕಿಸ್ಥಾನದ ಈ ಆಕ್ಷೇಪಾರ್ಹ ನಡೆ SCOದಲ್ಲಿ ಭಾರತದ ಭಾಗವಹಿಸುವಿಕೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂಬ ಆಶಾಭಾವನೆಯನ್ನು ಅವರು ವ್ಯಕ್ತಪಡಿಸಿದರು ಹಾಗೂ ಮುಂಬರುವ ದಿನಗಳಲ್ಲಿ ನಡೆಯುವ ಸಭೆಗಳಲ್ಲಿ ಅಜಿತ್ ದೋವಲ್ ಅವರ ಭಾಗವಹಿಸುವಿಕೆಯನ್ನು ನಿರೀಕ್ಷಿಸುತ್ತಿರುವುದಾಗಿ ಪತ್ರುಶೇವ್ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.