ತೀರ ಪ್ರದೇಶದಲ್ಲಿ ಮೀನಿನ ಕೊರತೆ; ಸಂಕಷ್ಟದಲ್ಲಿ ನಾಡದೋಣಿ ಮೀನುಗಾರರು


Team Udayavani, Sep 16, 2020, 8:03 AM IST

ತೀರ ಪ್ರದೇಶದಲ್ಲಿ ಮೀನಿನ ಕೊರತೆ; ಸಂಕಷ್ಟದಲ್ಲಿ ನಾಡದೋಣಿ ಮೀನುಗಾರರು

ಮಲ್ಪೆ: ನಾಡದೋಣಿ ಮೀನುಗಾರರಿಗೆ ಸರಿಯಾದ ಮೀನು ದೊರೆಯದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಸೆ. 1ರಿಂದ ಸಾಂಪ್ರದಾಯಿಕ ಮೀನು ಗಾರಿಕೆ ಆರಂಭವಾಗಿದೆ. ಕೆಲವರಿಗೆ ಅಲ್ಪ ಪ್ರಮಾಣದಲ್ಲಿ ಮೀನು ದೊರೆತರೆ ಬಹುತೇಕ ಮೀನುಗಾರರು ಬರಿಗೈಯಲ್ಲಿ ಮರಳುತ್ತಿ ದ್ದಾರೆ. ಇದರಿಂದ ಸಾಲ ತೀರಿಸುವುದು ಹೇಗೆ ಎಂಬ ಚಿಂತೆ ಇವರನ್ನು ಕಾಡಿದೆ. ಪಡುಬಿದ್ರಿಯಿಂದ ಕೋಡಿಬೆಂಗ್ರೆಯ ವರೆಗೆ ಸುಮಾರು 26 ಜೋಡಿ ನಾಡದೋಣಿಗಳಿವೆ. ಜತೆಗೆ ಸುಮಾರು 300 ಕಂತುಬಲೆ, 200 ಬೊಳಂಜೀರ್‌ ಬಲೆ, 150 ಪಟ್ಟೆಬಲೆ ದೋಣಿಗಳಿದ್ದು ಸಾವಿರಾರು ಮಂದಿ ಮೀನುಗಾರರು ಸಾಂಪ್ರದಾಯಿಕ ಮೀನು ಗಾರಿಕೆ ಆಶ್ರಯಿಸಿದ್ದಾರೆ. ಈಗ ಹಲವು ದಿನಗಳಿಂದ ಮೀನುಗಾರಿಕೆ ಇಲ್ಲದೆ ಕಂಗಾಲಾಗಿದ್ದಾರೆ.

ನಾಡದೋಣಿಯಲ್ಲಿ ಒಂದು ಜೋಡು ಎಂದರೆ 2 ದೋಣಿಗಳಿರುತ್ತದೆ. ಇದರಲ್ಲಿ ತಲಾ 15 ಮಂದಿಯಂತೆ 30 ಜನರಿರು ತ್ತಾರೆ. ಒಮ್ಮೆ ಮೀನುಗಾರಿಕೆಗೆ ಹೋದರೆ ಕನಿಷ್ಠ 30ರಿಂದ 35 ಸಾವಿರ ರೂ. ಖರ್ಚಾಗುತ್ತದೆ. ಈಗ ಕೆಲವರಿಗೆ 5 ಸಾವಿರ ರೂ. ಕೂಡ ಆದಾಯ ಸಿಗುತ್ತಿಲ್ಲ. ಬಹುತೇಕ ಮಂದಿಗೆ ಮೀನು ಸಿಗದೇ ನಷ್ಟದಲ್ಲಿ ವಾಪಸಾಗುತ್ತಿದ್ದಾರೆ. ಹಾಗಾಗಿ ಕಳೆದ ಒಂದು ವಾರದಿಂದ ಬಹುತೇಕ ಎಲ್ಲ ದೋಣಿಗಳು ದಡದಲ್ಲಿ ಲಂಗರು ಹಾಕಿವೆ. ಈ ಹಿನ್ನೆಲೆಯಲ್ಲಿ ಮೀನುಗಾರರು ದೇವರ ಮೊರೆ ಹೋಗಿದ್ದಾರೆ.

ಮೀನಿನ ಕೊರತೆ
ಸೆ. 1ರಿಂದ ಮೀನುಗಾರಿಕೆ ಆರಂಭವಾಗಿದ್ದು 4-5 ದಿನ ಮಾತ್ರ ತೆರಳಿದ್ದೇವೆ. ಹಿಂದಿನ ವರ್ಷಗಳಲ್ಲಿ ಈ ವೇಳೆಯಲ್ಲಿ ಬಂಗುಡೆ, ಬೂತಾಯಿ ಮೀನು ರಾಶಿಯಾಗಿ ಸಿಗುತ್ತಿತ್ತು. ಈ ಬಾರಿ ಇದರ ಕೊರತೆ ಇದೆ.
-ಹರೀಶ್‌ ತಿಂಗಳಾಯ ಪಡುಕರೆ ನಾಡದೋಣಿ ಮೀನುಗಾರ

ವಾತಾವರಣದ ಏರಿಳಿತ ಕಾರಣ
ಮಳೆ ಗಾಳಿಯಿಂದಾಗಿ ಕಳೆದ ಕೆಲವು ದಿನಗಳಿಂದ ಸಮುದ್ರದ ವಾತಾವರಣದಲ್ಲಿ ಏರಿಳಿತ ಕಂಡು ಬರುತ್ತಿದೆ. ಹಾಗಾಗಿ ತೀರ ಸಮುದ್ರದಲ್ಲಿ ಮೀನುಗಾರಿಕೆ ನಡೆಸುವವರಿಗೆ ಸರಿಯಾದ ಪ್ರಮಾಣದಲ್ಲಿ ಮೀನು ಸಿಗುತ್ತಿಲ್ಲ. ಸಮುದ್ರ ಅಬ್ಬರ ತಿಳಿಯಾದ ಬಳಿಕ ಸರಿಯಾಗುವ ಸಾಧ್ಯತೆ ಇದೆ. ಆಳಸಮುದ್ರ ಮೀನುಗಾರಿಕೆಗೆ ಈ ಸಮಸ್ಯೆ ಉಂಟಾಗಿಲ್ಲ.
-ಶಿವಕುಮಾರ್‌, ಸಹಾಯಕ ನಿರ್ದೇಶಕರು,  ಮೀನುಗಾರಿಕೆ ಇಲಾಖೆ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.