ಪ್ರತ್ಯೇಕ ಪ್ರಕರಣ: 88 ಕೆ.ಜಿ.ಗಾಂಜಾ ವಶ
Team Udayavani, Sep 18, 2020, 1:17 PM IST
ರಾಮ ನಗರ: ಅಕ್ರಮ ಗಾಂಜಾ ಮಾರಾಟ, ದಾಸ್ತಾನು, ಸಾಗಾಟದಲ್ಲಿ ತೊಡಗಿರುವವರ ವಿರುದ್ದ ಸಮರ ಸಾರಿರುವ ಜಿಲ್ಲಾ ಪೊಲೀಸರು 3 ಪ್ರಕರಣಗಳಲ್ಲಿ 88.600 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
ರಾಮನಗರದಲ್ಲಿ 21 ಕೆ.ಜಿ. ಗಾಂಜಾ ಜಪ್ತಿ: ನಗರ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು, ವ್ಯಕ್ತಿಯನ್ನು ಬಂಧಿಸಿದ್ದು, ಆತನಿಂದ 21.100 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ. ನಗರ ಸಿಪಿಐ ನರಸಿಂಹಮೂರ್ತಿ ಅವರಿಗೆ ಬಂದ ಮಾಹಿತಿ ಮೇರೆಗೆ, ದಾಳಿ ನಡೆಸಿದ ಪೊಲೀಸರು, ಜಿಲ್ಲಾ ಕ್ರೀಡಾಂಗಣದ ಪಕ್ಕ ಹಾಜಿ ನಗರಕ್ಕೆ ಹೋಗುವ ರಸ್ತೆಯ ಬಳಿ ಆರೋಪಿಯನ್ನು ತಡೆದಿದ್ದಾರೆ. 2ಚೀಲಗಳಲ್ಲಿ ತುಂಬಿದ್ದ 21.100 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆದು ಆತನ ವಿರುದ್ಧ ಕೇಸು ದಾಖಲಿಸಿದ್ದಾರೆ. ಎಸ್ಪಿ ಎಸ್.ಗಿರೀಶ್ ಅವರ ನಿರ್ದೇಶನ, ಡಿವೈಎಸ್ಪಿ ಪುರುಷೋತ್ತಮ ಅವರ ನೇತೃತ್ವದಲ್ಲಿ ಸಿಪಿಐ ನರಸಿಂಹಮೂರ್ತಿ, ನಗರ ಠಾಣೆ ಪಿಎಸ್ಐ ಎಂ.ಹೇಮಂತ್ ಕುಮಾರ್, ಐಜೂರು ಠಾಣೆ ಪಿಎಸ್ಐ ಶುಭಾಂಬಿಕ, ಸಿಬ್ಬಂದಿಗಳಾದ ಗೌರೀಶ್, ನಾಗರಾಜಯ್ಯ, ಹನುಮಂತೇಗೌಡ, ಚನ್ನಬಸಪ್ಪ, ಹನುಮಂತ, ಸಂತೋಷ್ ಕಾರ್ಯಾಚರಣೆಯಲ್ಲಿದ್ದರು.
ತಾವರೆಕೆರೆ ಪೊಲೀಸರಿಂದ 60 ಕೆ.ಜಿ. ವಶಕ್ಕೆ: ಜಿಲ್ಲೆಯ ಮಾಗಡಿ ತಾಲೂಕಿನ ಕಸಬಾ ಹೋಬಳಿ ಮಾಗಡಿ – ಬೆಂಗಳೂರು ಮುಖ್ಯ ರಸ್ತೆ ಪಕ್ಕದ ಬಂಟಕುಪ್ಪೆಗೆ ಹೋಗುವ ರಸ್ತೆಯಲ್ಲಿ ತಗಚಗುಪ್ಪೆ ಮತ್ತು ಪೂಜಾರಹಟ್ಟಿ ಕಾಲೋನಿ ಬಳಿ ಅಕ್ರಮವಾಗಿ ಗಾಂಜಾ ಸೊಪ್ಪು ಮಾರಾಟ ಮಾಡುತ್ತಿದ್ದ 8 ಮಂದಿ ಆರೋಪಿಗಳನ್ನು ತಾವರೆಕರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳಿಂದ 60 ಕೆ.ಜಿ.ಗಾಂಜಾ, ಇನ್ನೋವಾ ಕಾರು, ಬೈಕ್, 3 ಸಾವಿರ ನಗದು, 3 ಮೊಬೈಲ್ ವಶ ಪಡಿಸಿಕೊಂಡಿದ್ದಾರೆ. ಬೆಂಗಳೂರು ಉಲ್ಲಾಳನಗರದ ನಿವಾಸಿ ಕುಪ್ಪ, ಆಂಧ್ರ ಪ್ರದೇಶ ವಿಶಾಖಪಟ್ಟಣ ಕೋಡಿತಲ ಗ್ರಾಮದ ನಿವಾಸಿ ಪಾಂಗಿಪ್ರಸಾದ್, ಬೆಂಗಳೂರು ಮಂಜುನಾಥ ನಗರದ ಶಿವರಾಜ, ತಾವರೆಕೆರೆ ಹೋಬಳಿ ಹೊಸ ಪಾಳ್ಯದ ಶಂಕರ, ದೊಡ್ಡಾಲಮರ ಗ್ರಾಮದ ಮಂಜುನಾಥ, ಇದೇ ಹೋಬಳಿಯ ಕೇತೋಹಳ್ಳಿಯ ನವೀನ್ ಕುಮಾರ್, ತಾವರೆಕೆರೆ ಟೌನ್ ಶರತ್ ಕುಮಾರ್ ಮತ್ತು ಕಾರ್ತಿಕ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.
ಹಾರೋಹಳ್ಳಿಯಲ್ಲಿ 7 ಕೆ.ಜಿ.ಜಪ್ತಿ: ಜಿಲ್ಲೆಯ ಕನಕಪುರ ತಾಲೂಕು ಹಾರೋಹಳ್ಳಿ ಠಾಣೆ ವ್ಯಾಪ್ತಿಯ ಚಿಕ್ಕದೇವರಹಳ್ಳಿ ಗ್ರಾಮದಲ್ಲಿ 7.600 ಕೆ.ಜಿ. ಗಾಂಜಾ ಶೇಖರಣೆ ಮಾಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಈ ಸಂಬಂಧ ತನಿಖೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Channapatna: ಜೆಡಿಎಸ್ಗೇ ಉಳಿಸಿಕೊಳ್ಳಲು ತೀರ್ಮಾನ? ಮೈತ್ರಿ ಅಭ್ಯರ್ಥಿ ಜಿಜ್ಞಾಸೆ
Channapatna ಗರಿಗೆದರಿದ ʼಕೈʼ ಕಸರತ್ತು; ಡಿಕೆ ಸುರೇಶ್ ಪರವಾಗಿ ಎಂ.ಸಿ.ಅಶ್ವಥ್ ಚಂಡಿಕಾಯಾಗ
Channapatna By Election; ಮೈತ್ರಿ ಅಭ್ಯರ್ಥಿ ನಾನೆ: ಸಿ.ಪಿ.ಯೋಗೇಶ್ವರ್ ವಿಶ್ವಾಸದ ನುಡಿ
Channapatna By Election; 3 ಸಾವಿರ ಮಂದಿಗೆ ಸಿದ್ದ ಮಾಡಿದ್ದ ಬಿರಿಯಾನಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.