ಮೆಗ್ಗಾನ್‌ನಲ್ಲಿ ಖಾಸಗಿ ವೈದ್ಯರ ಸೇವೆ ಬಳಕೆ


Team Udayavani, Sep 18, 2020, 8:06 PM IST

ಮೆಗ್ಗಾನ್‌ನಲ್ಲಿ ಖಾಸಗಿ ವೈದ್ಯರ ಸೇವೆ ಬಳಕೆ

ಶಿವಮೊಗ್ಗ: ಕೋವಿಡ್ ಪೀಡಿತರಿಗೆ ಚಿಕಿತ್ಸೆ ನೀಡಲು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಖಾಸಗಿ ವೈದ್ಯರ ಸೇವೆಯನ್ನು ಮುಂದಿನ ದಿನಗಳಲ್ಲಿ ಕಡ್ಡಾಯವಾಗಿ ಬಳಸಿಕೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ತಿಳಿಸಿದರು.

ಗುರುವಾರ ಮೆಗ್ಗಾನ್‌ ಬೋಧನಾ ಆಸ್ಪತ್ರೆಯಲ್ಲಿ ಕಲ್ಪಿಸಲಾಗಿರುವ ಹೊಸ ಮೂಲ ಸೌಲಭ್ಯಗಳ ಪರಿಶೀಲನೆ ನಡೆಸಿದ ಬಳಿಕ ವೈದ್ಯಾಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಪ್ರತಿದಿನ ಕೋವಿಡ್ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮೆಗ್ಗಾನ್‌ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಮೆಗ್ಗಾನ್‌ನಲ್ಲಿ 390 ಆಕ್ಸಿಜನ್‌ ಬೆಡ್‌ಗಳು ಲಭ್ಯವಿದ್ದು, ಪ್ರಸ್ತುತ ಇರುವ ವೈದ್ಯಕೀಯ ಸಿಬ್ಬಂದಿ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಖಾಸಗಿ ವೈದ್ಯರ ಸೇವೆಯನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದೆ. ಅಗತ್ಯ ಬಿದ್ದರೆ ಮುಂದಿನ ದಿನಗಳಲ್ಲಿ ಖಾಸಗಿ ನರ್ಸಿಂಗ್‌ ಹೋಂಗಳನ್ನು ಸಹ ಕೋವಿಡ್‌ ಚಿಕಿತ್ಸೆಗೆ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಎಚ್ಚರಿಕೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಮಾತನಾಡಿ, ಪ್ರಸ್ತುತ ನಾಲ್ಕು ಮಂದಿ ಖಾಸಗಿ ವೈದ್ಯರ ಸೇವೆಯನ್ನು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಕಳೆದ ಒಂದು ವಾರದಿಂದ ಬಳಸಿಕೊಳ್ಳಲಾಗುತ್ತಿದೆ. ಆದರೆ ಕೆಲವು ವೈದ್ಯರು ಸೇವೆ ನೀಡಲು ಹಿಂದೇಟು ಹಾಕುತ್ತಿದ್ದು, ಅಂತಹ ವೈದ್ಯರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.

ಐಎಂಎ ಅಧ್ಯಕ್ಷ ಡಾ| ಪರಶುರಾಮ ಮಾತನಾಡಿ, ಖಾಸಗಿ ವೈದ್ಯರು ಮೆಗ್ಗಾನ್‌ನಲ್ಲಿ ಸೇವೆ ಸಲ್ಲಿಸಲು ಸಿದ್ಧರಿದ್ದಾರೆ. ಅವರಿಗೆ ಕೆಲವು ಸೌಲಭ್ಯಗಳನ್ನು ಒದಗಿಸಿ ಕೊಡಬೇಕು.ಕೋವಿಡ್‌ ಪಾಸಿಟಿವ್‌ ವ್ಯಕ್ತಿಗಳ ಚಿಕಿತ್ಸೆ ಪ್ರೊಟೊಕಾಲ್‌ ಬಗ್ಗೆ ತರಬೇತಿ ನೀಡಬೇಕು. ಅವರಿಗೆ ಒಂದು ವಾರ ಸೇವೆ ಸಲ್ಲಿಸಿದ ಬಳಿಕ ಕ್ವಾರಂಟೈನ್‌ ವ್ಯವಸ್ಥೆ ಮಾಡಬೇಕು. ಸರ್ಕಾರಿ ವೈದ್ಯರಿಗೆ ಅನ್ವಯವಾಗುವ ವಿಮಾ ಸೌಲಭ್ಯವನ್ನು ಅವರಿಗೂ ಕಲ್ಪಿಸಬೇಕು. ಅವರಿಗೆ ಸೂಕ್ತ ಗೌರವಧನ ಹಾಗೂ ಕೋವಿಡ್ ಪಾಸಿಟಿವ್‌ ಆದರೆ ಸೂಕ್ತ ವೈದ್ಯಕೀಯ ಸೌಲಭ್ಯ ಒದಗಿಸಬೇಕು ಎಂದು ಮನವಿ ಮಾಡಿದರು.

ಪ್ರಶಂಸೆ: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಲು ಎಲ್ಲಾ ಖಾಸಗಿ ವೈದ್ಯರುಸಿದ್ಧರಿದ್ದು, ಈಗಾಗಲೇ ವೈದ್ಯರ ಪಟ್ಟಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಾಗಿದೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಕಳೆದ ಒಂದು ವಾರ ಸೇವೆ ಸಲ್ಲಿಸಿರುವ ಡಾ| ಶ್ರೀಕಾಂತ್‌ ಹೆಗಡೆ ಅವರು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಲಭ್ಯವಿರುವ ಸೌಲಭ್ಯಗಳು, ರೋಗಿಗಳಿಗೆ ವ್ಯವಸ್ಥಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎಂದು ಡಾ| ಧನಂಜಯ ಸರ್ಜಿ ಅವರು ಸಭೆಗೆ ತಿಳಿಸಿದರು.

ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಬೆಡ್‌ ಲಭ್ಯತೆ: ಪ್ರಸ್ತುತ ಶಿಕಾರಿಪುರ, ಸಾಗರ ಹಾಗೂ ಭದ್ರಾವತಿ ತಾಲೂಕು ಆಸ್ಪತ್ರೆಗಳಲ್ಲಿ ತಲಾ 50 ಆಕ್ಸಿಜನ್‌ ಬೆಡ್‌ಗಳು ಲಭ್ಯವಿವೆ. ಆಯಾ ತಾಲೂಕುಗಳ ಕೊರೊನಾ ಪೀಡಿತರಿಗೆ ಅಲ್ಲಿಯೇ ಚಿಕಿತ್ಸೆ ಒದಗಿಸಬೇಕು. ಅಗತ್ಯ ಬಿದ್ದರೆ ಮಾತ್ರ ಮೆಗ್ಗಾನ್‌ ಆಸ್ಪತ್ರೆಗೆ ಅಲ್ಲಿನ ವೈದ್ಯರು ಶಿಫಾರಸು ಮಾಡಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು. ಮೆಗ್ಗಾನ್‌ ನಿರ್ದೇಶಕ ಡಾ| ಸಿದ್ಧಪ್ಪ, ಡಾ| ಶ್ರೀಧರ್‌, ಆಡಳಿತ ಮಂಡಳಿ

ಸದಸ್ಯರಾದ ಡಾ| ಗೌತಮ್‌, ದಿನಕರ ಶೆಟ್ಟಿ, ಡಾ| ವಾಣಿ ಕೋರಿ, ಐಎಂಎ ಕಾರ್ಯದರ್ಶಿ ಡಾ| ಶಂಭುಲಿಂಗ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK-Shiavamogga

Industry: ಕುದುರೆಮುಖದ ಕಂಪನಿಗೆ ದಿನಕ್ಕೆ 27 ಕೋಟಿ ರೂ.ನಷ್ಟ: ಎಚ್‌.ಡಿ.ಕುಮಾರಸ್ವಾಮಿ

Beluru

Shivamogga: ಸಾಗರ ಜನರಲ್ ಆಸ್ಪತ್ರೆ ಮೇಲ್ದರ್ಜೆಗೆ, ನೂರು ಹಾಸಿಗೆ ವ್ಯವಸ್ಥೆ: ಶಾಸಕ ಬೇಳೂರು

Shimoga; ಕೆಂಪಣ್ಣ ಆಯೋಗ ವರದಿ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಲಿ: ಕುಮಾರಸ್ವಾಮಿ

Shimoga; ಕೆಂಪಣ್ಣ ಆಯೋಗ ವರದಿ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಲಿ: ಕುಮಾರಸ್ವಾಮಿ

Theertha-Land

Landslide: ಆಗುಂಬೆ ಬಳಿಯ ಕಾರ್ ಬೈಲು ಗುಡ್ಡ ಕುಸಿತ!

Theerthalli

Theerthahalli: ವಾಹನ ಚಲಾಯಿಸುವ ವೇಳೆಯೇ ಕುಸಿದು ಬಿದ್ದು ಯುವಕ ದುರ್ಮರಣ!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.