ಬೆಳೆಗಾರರೇ ಸ್ಥಾಪಿಸಿರುವ ತೆಂಗು ಸಂಸ್ಕರಣೆ ಘಟಕ ಲೋಕಾರ್ಪಣೆ


Team Udayavani, Sep 19, 2020, 3:44 PM IST

ಬೆಳೆಗಾರರೇ ಸ್ಥಾಪಿಸಿರುವ ತೆಂಗು ಸಂಸ್ಕರಣೆ  ಘಟಕ ಲೋಕಾರ್ಪಣೆ

ಚಾಮರಾಜನಗರ: ಸಹಕಾರ ತತ್ವದಡಿ ರಾಜ್ಯದಲ್ಲೇ ಮೊದಲ ಬಾರಿಗೆ ತೆಂಗು ಬೆಳೆಗಾರರೇ ತಾಲೂಕಿನ ಮುಣಚನಹಳ್ಳಿ ಬಳಿ ಸ್ಥಾಪಿಸಿರುವ ಚಾಮರಾಜನಗರ ತಾಲೂಕು ತೆಂಗು ಬೆಳೆಗಾರರ ಸಂಸ್ಕರಣ ಮತ್ತು ಮಾರಾಟ ಸಹಕಾರ ಸಂಘದ ತೆಂಗು ಸಂಸ್ಕರಣಾ ಘಟಕವನ್ನು ಶುಕ್ರವಾರ ಲೋಕಾರ್ಪಣೆ ಮಾಡಲಾಯಿತು.

ಸುತ್ತೂರು ಕ್ಷೇತ್ರದ ಶಿವರಾತ್ರಿ ದೇಶಿಕೇಂದ್ರಮಹಾಸ್ವಾಮೀಜಿ ಅವರು ಆನ್‌ಲೈನ್‌ ಮೂಲಕ ಕಾರ್ಯಕ್ರಮದ ಉದ್ಘಾಟಿಸಿ ಆಶೀರ್ವಚನ ನೀಡಿದರು. 9 ಕೋಟಿ ರೂ.ವೆಚ್ಚದ ತೆಂಗು ಸಂಸ್ಕರಣ ಘಟಕ ಉದ್ಘಾಟಿಸಿ ಮಾತನಾಡಿದ ಸಚಿವ ಎಸ್‌. ಸುರೇಶ್‌ಕುಮಾರ್‌, ಘಟಕವು ರೈತರ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ನಾವು ಎಲ್ಲರಿಗಾಗಿ ಎಲ್ಲರೂ ನಮಗಾಗಿ ಎಂಬ ಸಹಕಾರ ತತ್ವವನ್ನು ಅನುಸರಿಸಿದಾಗ ಅಭಿವೃದ್ಧಿ ಸಾಧ್ಯ ಎಂದರು.

ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌, ಸುವರ್ಣ ಕಲ್ಪತರು ಬ್ರಾಂಡಿನ ತೆಂಗಿನ ಪುಡಿ ಪ್ಯಾಕೆಟ್‌ ಬಿಡುಗಡೆಗೊಳಿಸಿ ಮಾತನಾಡಿ, ಸಹಕಾರ ಆಡಳಿತದಲ್ಲಿ ಒಬ್ಬರಿಗೊಬ್ಬರು ಸಹಕಾರ ನೀಡಿದಾಗ ಮಾತ್ರ ಬೆಳೆವಣಿಗೆ ಹೊಂದಲು ಸಾಧ್ಯ. ಆಡಳಿತ ಮಂಡಳಿಯಲ್ಲಿ ಬದ್ಧತೆ, ಸಾರ್ವಜನಿಕರ ವಿಶ್ವಾಸಗಳಿಸಿದಾಗ ಸಹಕಾರ ಸಂಘಗಳು ಅಭಿವೃದ್ಧಿಯಾಗಲಿವೆ ಎಂದು ತಿಳಿಸಿದರು.

ಅ.2ಕ್ಕೆ ಆರ್ಥಿಕ ಸ್ಪಂದನೆ: ಕೋವಿಡ್‌ ಹಿನ್ನೆಲೆಯಲ್ಲಿ ಆರ್ಥಿಕ ತೊಂದರೆಗೆ ಒಳಗಾಗಿರುವ ಸಣ್ಣ ರೈತರು, ಅತಿ ಸಣ್ಣ ರೈತರು, ವ್ಯಾಪಾರಸ್ಥರು, ಉದ್ದಿಮೆದಾರರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿರುವವರಿಗೆ ನೆರವಾಗಲು ವಿಭಾಗ ಮಟ್ಟದಲ್ಲೂ ಆರ್ಥಿಕ ಸ್ಪಂದನೆಕಾರ್ಯಕ್ರಮಕ್ಕೆ ಮೈಸೂರಿನಲ್ಲಿ ಅಕ್ಟೋಬರ್‌ 2 ರಂದು ಚಾಲನೆ ನೀಡಲಾಗುತ್ತಿದೆ. 8 ಸಾವಿರದಿಂದ 4 ಲಕ್ಷ ರೂ ವರೆಗೆ ಸಾಲ ಸೌಲಭ್ಯ ನೀಡುವ ಉದ್ದೇಶ ಹೊಂದಲಾಗಿದೆ ಎಂದರು. ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ಜಿಲ್ಲೆಯಲ್ಲಿ ತೆರೆದಿರುವ ತೆಂಗು ಸಂಸ್ಕರಣ ಘಟಕದ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ಸಹಕಾರ ಇಲಾಖೆ ಬಿಡುಗಡೆ ಮಾಡಬೇಕು ಎಂದು ಕೋರಿದರು.

ಪ್ರೋ ಎಂ.ಡಿ. ನಂಜುಂಡಸ್ವಾಮಿ ಪುತ್ಥಳಿಯನ್ನು ಚಿಂತಕ ಪ. ಮಲ್ಲೇಶ್‌ ಅನಾವರಣಗೊಳಿಸಿದರು. ಈ ವೇಳೆ ಶಾಸಕರಾದ ಆರ್‌. ನರೇಂದ್ರ, ಸಿ.ಎಸ್‌. ನಿರಂಜನ್‌ಕುಮಾರ್‌, ತೆಂಗು ಬೆಳೆಗಾರರ ಸಂಸ್ಕರಣ ಮತ್ತು ಮಾರಾಟ ಸಹಕಾರ ಸಂಘದ ಅಧ್ಯಕ್ಷ ಎಂ.ಎಂ.ಮಹೇಶ್‌, ಜಿಪಂ ಅಧ್ಯಕ್ಷೆ ಎಂ. ಅಶ್ವಿ‌ನಿ, ಸದಸ್ಯರಾದ ಸಿ.ಎನ್‌. ಬಾಲರಾಜು, ತಾಪಂ ಉಪಾಧ್ಯಕ್ಷ ಕೆ.ರವೀಶ್‌, ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಜಿಲ್ಲಾಧ್ಯಕ್ಷ ಹೆಬ್ಬಸೂರು ಬಸವಣ್ಣ, ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ, ಜಿಪಂ ಸಿಇಒ ಭೋಯರ್‌ ಹರ್ಷಲ್‌ ನಾರಾಯಣ ರಾವ್‌, ಎಸ್ಪಿ ದಿವ್ಯಾಸಾರಾ ಥಾಮಸ್‌, ಘಟಕದ ಕಾರ್ಯದರ್ಶಿ ಶಾಂತಮಲ್ಲಪ್ಪ, ಪ್ಲಾಂಟ್‌ ಇಂಜಿನಿಯರ್‌ ಚಂದ್ರಶೇಖರ್‌ ಇತರರಿದ್ದರು.

ಸುವರ್ಣ ಕಲ್ಪತರು ಬ್ರಾಂಡ್‌ ನೇಮ್‌ :  ಈ ತೆಂಗಿನ ಪುಡಿಗೆ ಸುವರ್ಣ ಕಲ್ಪತರು ಎಂಬ ಬ್ರಾಂಡ್‌ ನೇಮ್‌ ನೀಡಲಾಗಿದೆ. ಈಗಾಗಲೇ ಎಫ್ಎಸ್‌ಎಸ್‌ಎಐ ಪ್ರಮಾಣ ಪಡೆದಿದೆ. 1 ಕೆ.ಜಿ. ಪ್ಯಾಕ್‌ಗೆ225 ರೂ. ಹಾಗೂ ಅರ್ಧ ಕೆ.ಜಿ. ಪ್ಯಾಕ್‌ಗೆ 120 ರೂ. ದರ ನಿಗದಿ ಮಾಡಲಾಗಿದೆ ಎಂದು ಸಹಕಾರ ಸಂಘದ ಅಧ್ಯಕ್ಷ ಮಹೇಶ ಪ್ರಭು,ಪ್ಲಾಂಟ್‌ಎಂಜಿನಿಯರ್‌ಚಂದ್ರಶೇಖರ್‌ ತಿಳಿಸಿದರು. ತೆಂಗಿನಕಾಯಿ ಪುಡಿಯನ್ನು ಬಿಸ್ಕೆಟ್‌ ಕಾರ್ಖಾನೆಗಳು, ಬೇಕರಿಗಳು, ಗೃಹೋಪಯೋಗಿ ರೀಟೇಲ್‌ಗೆ ಸಗಟು ಮಾರಾಟ ಮಾಡಲಾಗುತ್ತದೆ. ರೀಟೇಲ್‌ ಪ್ಯಾಕನ್ನು ಮಾಲ್‌ಗ‌ಳಿಗೆ, ದಿನಸಿ ಅಂಗಡಿಗಳಿಗೆ, ಇ ಕಾಮರ್ಸ್‌ ಗೆ ಮಾರಾಟಕ್ಕೆ ನೀಡಲಾಗುತ್ತದೆ. ಈ ತೆಂಗಿನಪುಡಿಯನ್ನು ಐಸ್‌ಕ್ರೀಂ, ಬಿಸ್ಕೆಟ್ಸ್‌, ಚಾಕಲೇಟ್‌ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಚಟ್ನಿ ಪುಡಿ, ಕುಕೀಸ್‌ ಗಳಲ್ಲಿ ಬಳಸುತ್ತಾರೆ. ಬೇಕರಿ ಪದಾರ್ಥಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ.

ತೆಂಗಿನ ಪುಡಿ ತಯಾರಿಕೆ ಹೇಗೆ? :  ತೆಂಗು ಸಂಸ್ಕರಣಾ ಘಟಕದಲ್ಲಿ ತೆಂಗಿನ ಕಾಯಿಯಿಂದ ತೆಂಗಿನಪುಡಿಯನ್ನು ತಯಾರಿಸಿ ಮಾರುಕಟ್ಟೆಗೆಕಳುಹಿಸಲಾಗುತ್ತದೆ.ರೈತರು ಸಿಪ್ಪೆ ಸುಲಿದು ಘಟಕಕ್ಕೆ ಜುಟ್ಟು ರಹಿತ ತೆಂಗಿನಕಾಯಿ ಮಾರುತ್ತಾರೆ. ಅದನ್ನು ವೇಬ್ರಿಜ್‌ನಲ್ಲಿ ತೂಕ ಮಾಡಲಾಗುತ್ತದೆ. ಬಲಿತ ಕಾಯಿಯನ್ನುಕೊಳ್ಳಲಾಗುತ್ತದೆ. ಎಳಸುಇದ್ದರೆ ವಾಪಸ್‌ ನೀಡಲಾಗುತ್ತದೆ. ಈ ತೆಂಗಿನಕಾಯಿಯನ್ನುಕನಿಷ್ಠ5 ರಿಂದ 7 ದಿನ ಸಂಗ್ರಹಿಸಲಾಗುತ್ತದೆ. ಯಂತ್ರದ ಸಹಾಯದಿಂದಕರಟ ತೆಗೆಯಲಾಗುತ್ತದೆ. ಚಾಕುವಿನಿಂದಕಂದು ಬಣ್ಣದ ಟೆಸ್ಟಾ (ಸಿಪ್ಪೆ)ತೆಗೆಯಲಾಗುತ್ತದೆ. ಬಳಿಕಕಾಯಿಯನ್ನು ತಣ್ಣೀರಿನಲ್ಲಿ ಸ್ವಚ್ಛಗೊಳಿಸಲಾಗುವುದು. ಕೊಳೆತಕಾಯಿಯಿದ್ದರೆ ತೆಗೆಯಲಾಗುವುದು.ಮಷಿನ್‌ನಲ್ಲಿ ಬಳಿಕ ತುಂಡು ತುಂಡು ಮಾಡಲಾಗುತ್ತದೆ. ಮತ್ತೆ ಸ್ವಚ್ಛಗೊಳಿಸ ಲಾಗುವುದು. ಪಿನ್‌ಮಿಲ್‌ನಲ್ಲಿಕಾಯಿಯನ್ನು ಹಸಿ ತುರಿ ಮಾಡಲಾಗುತ್ತದೆ. ಹಸಿ ತುರಿ ಡ್ರೈಯರ್‌ಗೆ ಹೋಗುತ್ತದೆ. ಡ್ರೈಯರ್‌ನಿಂದ ತೇವಾಂಶ ತೆಗೆಯಲಾಗುತ್ತದೆ. ಅದು ಒಣತುರಿ ಮಾಡುತ್ತದೆ. ಈ ಒಣತುರಿಯನ್ನು ಮತ್ತೆ ಬೇಕಾದ ಆಕಾರಕ್ಕೆ ಗ್ರೇಡಿಂಗ್‌ ಮಾಡಲಾಗುತ್ತದೆ. ನಂತರ25ಕೆ.ಜಿ. ಪ್ಯಾಕ್‌ಮಾಡಲಾಗುವುದು.1 ಕೆ.ಜಿ., ಅರ್ಧ ಕೆ.ಜಿ. ಪ್ಯಾಕ್‌ ಮಾಡಲಾಗುವುದು. ಈ ಪುಡಿಯನ್ನು 6 ತಿಂಗಳಕಾಲ ಬಳಸಬಹುದು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-kollegala

Kollegala: ಗಾಂಜಾ ಗಿಡ ಬೆಳೆಸಿದ್ದ ಆರೋಪಿಯ ಬಂಧನ; ಗಿಡ ವಶಕ್ಕೆ ಪಡೆದ ಪೊಲೀಸರು

2-gundlupete

Chamarajanagar: ಬೈಕ್- ಪಿಕ್ ಅಪ್ ಅಪಘಾತ: ಸವಾರ ಸಾವು

Road Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವುRoad Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Kollegala: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಮೃತ್ಯು

Kollegala: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಮೃತ್ಯು

Gundlupete; ರೈಲ್ವೇ ಬ್ಯಾರಿಕೇಡ್ ನಲ್ಲಿ ಸಿಲುಕಿದ ಕಾಡಾನೆ ರಕ್ಷಣೆ

Gundlupete; ರೈಲ್ವೇ ಬ್ಯಾರಿಕೇಡ್ ನಲ್ಲಿ ಸಿಲುಕಿದ ಕಾಡಾನೆ ರಕ್ಷಣೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.