ಹಸಿರು ಬಜೆಟ್‌ ಮಂಡನೆಗೆ ಅಶೀಸರ ಒತ್ತಾಯ


Team Udayavani, Sep 20, 2020, 6:44 PM IST

cm-tdy1

ಕಡೂರು: ಪರಿಸರ ಸಂರಕ್ಷಣೆ ಕುರಿತಂತೆ ರಾಜ್ಯ ಸರ್ಕಾರವು ಪ್ರತ್ಯೇಕ ಹಸಿರು ಬಜೆಟ್‌ ಮಂಡಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಹೇಳಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಶನಿವಾರ ಪಂಚಾಯತ್‌ ಪ್ರತಿನಿಧಿಗಳು, ಅರಣ್ಯ, ತಾಪಂ ಇಲಾಖೆಯ ಅಧಿಕಾರಿ ವರ್ಗದವರೊಂದಿಗೆ ತಾಲೂಕಿನ ಜೀವ ವೈವಿಧ್ಯ ತಾಣಗಳ ಸಂರಕ್ಷಣೆ ಕುರಿತಂತೆ ನಡೆದ ಸಭೆಯಲ್ಲಿ ವಿಷಯ ಮಂಡಿಸಿ ಅವರು ಮಾತನಾಡಿದರು.

ಕೃಷಿ ಭೂಮಿ, ಕೆರೆ-ಕಟ್ಟೆ, ತೋಟ, ಗುಡ್ಡಗಾಡು ಮುಂತಾದ ಪ್ರದೇಶಗಳನ್ನು ಮೂಲ ಸ್ವರೂಪದಲ್ಲಿಯೇ ಉಳಿಸಿಕೊಳ್ಳುವ ಸುಸ್ಥಿರ ಅಭಿವೃದ್ಧಿ ಯೋಜನೆ ಜಾರಿ ಕುರಿತಂತೆ ಮಂಡಳಿಯೂ ರಾಜ್ಯ ಮಟ್ಟದಲ್ಲಿ ಪ್ರವಾಸ ನಡೆಸಿ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದರು.

ಅತಿವೃಷ್ಟಿ, ಅನಾವೃಷ್ಠಿ, ಕೊರೊನಾ ಮುಂತಾದ ಪ್ರಾಕೃತಿಕ ವಿಕೋಪದಿಂದ ಅಭಿವೃದ್ಧಿಗೆ ತೊಂದರೆಯಾಗಿದೆ. ಸುಸ್ಥಿರ ಅಭಿವೃದ್ಧಿ ಈಗ ಅನಿವಾರ್ಯವಾಗಿದೆ. 2030 ರ ವೇಳೆಗೆ ರಾಜ್ಯವು ಯಾವ ರೀತಿಯ ಸುಸ್ಥಿರ ಅಭಿವೃದ್ಧಿ ಹೊಂದಬೇಕುಎಂಬ ಬಗ್ಗೆ ನೀಲನಕ್ಷೆ ಸಿದ್ಧಪಡಿಸಲಾಗಿದೆ. ಈ  ನಿಟ್ಟಿನಲ್ಲಿ ಸರ್ಕಾರ ಹಸಿರು ಬಜೆಟ್‌ ಮಂಡಿಸಿದಲ್ಲಿ ಇದಕ್ಕೆ ಪೂರಕವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಕಡೂರು ತಾಲೂಕಿನ ಹೊಗರೆಖಾನ್‌ ಗಿರಿ ಪ್ರದೇಶವನ್ನು ಜೀವ ವೈವಿಧ್ಯ ತಾಣ ಎಂದು ಘೋಷಿಸಲಾಗಿದೆ. ಇದೇ ರೀತಿ ಬಾಸೂರು ಅಮೃತ ಮಹಲ್‌ ಕಾವಲು ಪ್ರದೇಶದಲ್ಲಿ ಅಮೂಲ್ಯ ಕೃಷ್ಣಮೃಗಗಳಿರುವುದರಿಂದ ಹಾಗೂ ಜಾನುವಾರು ಕಾವಲು ತಳಿಗಳ ಅಭಿವೃದ್ಧಿ ನಡೆಯುತ್ತಿರುವುದರಿಂದ ಇದನ್ನು ಕೂಡ ಜೀವ ವೈವಿದ್ಯ ತಾಣ ಎಂದು ಘೋಷಿಸಲು ಮಂಡಳಿ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಿದ್ಧವಿದೆ ಎಂದು ಹೇಳಿದರು.

ಸಭೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿಗಳನ್ನು ಈ ರೀತಿ ತಾಣಗಳ ಬಗ್ಗೆ ಮಾಹಿತಿ ಕೇಳಿದಾಗ ತಾಪಂ ಕಾರ್ಯನಿರ್ವಹಣಾಧಿಕಾರಿ ಡಾ| ದೇವರಾಜ್‌ನಾಯ್ಕ ಸಖರಾಯಪಟ್ಟಣದ ಶಕುನಗಿರಿ ಮತ್ತು ಹೇಮಗಿರಿ ಶ್ರೀ ಮಲ್ಲಿಕಾರ್ಜುನಸ್ವಾಮಿ ಬೆಟ್ಟ ಪ್ರದೇಶವನ್ನು ಸೇರಿಸ ಬಹುದೆಂದು ಅಭಿಪ್ರಾಯ ವ್ಯಕ್ತಪಡಿಸಿದಾಗ ಅದರ ಬಗ್ಗೆ ಮಾಹಿತಿ ಸಂಗ್ರಹಿಸಿ ಕೈಪಿಡಿ ಕಳುಹಿಸುವಂತೆ ಸೂಚಿಸಿದರು.

ಸಭೆಯಲ್ಲಿ ಪಾಲ್ಗೊಂಡಿದ್ದ ಮಂಡಳಿಯ ಅಧಿಕಾರಿ ಪ್ರೀತಮ್‌ ಮಾತನಾಡಿ, ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿ ಸಂಬಂಧ ಸ್ಥಳೀಯ ಮಟ್ಟದ ಸಮಿತಿಗಳ ರಚನೆಯಾಗಬೇಕು. ವಿಶೇಷ ಪ್ರದೇಶಗಳ ಗುರುತಿಸುವಿಕೆ ಕೆಲಸವಾಗಬೇಕು.ಈಗಾಗಲೇ ಘೋಷಿತವಾಗಿರುವ ಹೊಗರೆಖಾನ್‌ಗಿರಿ ಪ್ರದೇಶವನ್ನು ಯಾವ ರೀತಿ ಸಂರಕ್ಷಿಸಬೇಕು ಎಂಬ ಬಗ್ಗೆ ಸ್ಥಳೀಯ ಮಟ್ಟದ ಅರಣ್ಯ ಮತ್ತು ಪಂಚಾಯತ್‌ ವ್ಯಾಪ್ತಿಯ ಅಧಿ ಕಾರಿಗಳು ಒಂದು ಸ್ಥೂಲವಾದ ವರದಿಯನ್ನು ಮಂಡಳಿಗೆ ಸಲ್ಲಿಸಲು ಕೋರಿದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮುದ್ದಣ್ಣ ಮಾತನಾಡಿ, ಹೊಗರೇಖಾನ್‌ ಗಿರಿ ಪ್ರದೇಶ ಸುತ್ತ ಟ್ರಂಚ್‌ ಮಾಡುವುದು, ಚಿಕ್ಕಮಗಳೂರು ಗಿರಿ ಪ್ರದೇಶ ವ್ಯಾಪ್ತಿಯಲ್ಲಿರುವ ಶೋಲಾ ಅರಣ್ಯ ಸಂರಕ್ಷಣೆ ಕುರಿತಂತೆ ಮಂಡಳಿಯು ಸರ್ಕಾರಕ್ಕೆ

ಒತ್ತಡ ಹಾಕಬೇಕು. ಕೆರೆಗಳ ಪುನಃಶ್ಚೇತನಕ್ಕೆ ಗ್ರಾಪಂ ಮಟ್ಟದಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಸಲಹೆ ನೀಡಿದಾಗ ಸಭೆ ಅನುಮೋದಿ ಸಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಪಂ ಅಧ್ಯಕ್ಷೆ ಪ್ರೇಮಾಬಾಯಿ ಕೃಷ್ಣಮೂರ್ತಿ ವಹಿಸಿದ್ದರು. ಸಾಮಾಜಿಕ ಅರಣ್ಯ ಡಿಸಿಎಫ್‌ ಶರಣಬಸಪ್ಪ, ಇಒ ದೇವರಾಜ ನಾಯ್ಕ ಇದ್ದರು. ಸಭೆಯ ಬಳಿಕ ಮಂಡಳಿಯ ಅಧ್ಯಕ್ಷರು ಮತ್ತು ಅಧಿಕಾರಿಗಳನ್ನೊಳಗೊಂಡ ತಂಡ ಹೊಗರೇಖಾನ್‌ ಗಿರಿ ಮತ್ತು ಹೇಮಗಿರಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

3-chikkamagaluru

Chikkamagaluru: ಟಾಟಾ ಏಸ್ ಆಟೋ ಪಲ್ಟಿ ; ಇಬ್ಬರು ಸ್ಥಳದಲ್ಲೇ ಸಾವು

4-chikkamagaluru

Chikkamagaluru: ಸ್ಕಿಡ್ ಆಗಿ 20 ಅಡಿ ಎತ್ತರಿಂದ ಕೆಳಗೆ ಬಿದ್ದ ಗೂಡ್ಸ್ ವಾಹನ

Kottigehara: ಕಸ ವಿಲೇವಾರಿ ವಾಹನ ಬಂದಿಲ್ಲವೆಂದು ಪಂಚಾಯತ್ ಬಾಗಿಲಿಗೆ ಕಸ ಸುರಿದ ಭೂಪ

Kottigehara: ಕಸ ವಿಲೇವಾರಿ ವಾಹನ ಬಂದಿಲ್ಲವೆಂದು ಪಂಚಾಯತ್ ಬಾಗಿಲಿಗೆ ಕಸ ಸುರಿದ ಭೂಪ

ಹದಗೆಟ್ಟ ಕೊಟ್ಟಿಗೆಹಾರ-ಗಂಗಾಮುಲ ರಸ್ತೆ, ಗ್ರಾಮಸ್ಥರಿಂದ ಪ್ರತಿಭಟನೆಗೆ ನಿರ್ಧಾರ

ಹದಗೆಟ್ಟ ಕೊಟ್ಟಿಗೆಹಾರ-ಗಂಗಾಮುಲ ರಸ್ತೆ, ಗ್ರಾಮಸ್ಥರಿಂದ ಪ್ರತಿಭಟನೆಗೆ ನಿರ್ಧಾರ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.