ಜಂಕ್ಷನ್‌ಗಳಲ್ಲಿ ಅಳವಡಿಸಿದ್ದ ರಬ್ಬರ್‌ ಕೋನ್‌ ಬದಲಾವಣೆಗೆ ನಿರ್ಧಾರ

ಸುಗಮ ವಾಹನ ಸಂಚಾರ, ಚಾಲನೆ ನಿಯಂತ್ರಣಕ್ಕೆ ಪೂರಕ

Team Udayavani, Sep 23, 2020, 5:05 AM IST

ಜಂಕ್ಷನ್‌ಗಳಲ್ಲಿ ಅಳವಡಿಸಿದ್ದ ರಬ್ಬರ್‌ ಕೋನ್‌ ಬದಲಾವಣೆಗೆ ನಿರ್ಧಾರ

ನಗರದ ಎಂ.ಜಿ. ರಸ್ತೆಯಲ್ಲಿ ಬಸ್‌ ಬೇಗೆ ಅಳವಡಿಸಿದ್ದ ರಬ್ಬರ್‌ ಕೋನ್‌ ತೆಗೆಯಲಾಗಿದೆ.

ಮಹಾನಗರ: ಸುಗಮ ವಾಹನ ಸಂಚಾರ ಮತ್ತು ವಾಹನಗಳ ಚಾಲನೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ನಗರದ ವಿವಿಧ ಜಂಕ್ಷನ್‌ಗಳಲ್ಲಿ ಈಗಾಗಲೇ ಅಳವಡಿಸಿ ಕಿತ್ತು ಹೋದ ರಬ್ಬರ್‌ ಕೋನ್‌ಗಳನ್ನು ಬದಲಾವಣೆ ಮಾಡಲು ಪೊಲೀಸ್‌ ಇಲಾಖೆಯು ನಿರ್ಧರಿಸಿದೆ.

ಅಡ್ಡಾದಿಡ್ಡಿ ವಾಹನ ಸಂಚಾರ ತಡೆಯುವ ಉದ್ದೇಶದಿಂದ ನಗರದ ವಿವಿಧ ಜಂಕ್ಷನ್‌ಗಳು, ಬಸ್‌ ಬೇಗಳಲ್ಲಿ ಈಗಾಗಲೇ ರಬ್ಬರ್‌ ಕೋನ್‌ಗಳನ್ನು ಅಳವಡಿಸಲಾಗಿತ್ತು. ಬಸ್‌ಗಳ ಚಕ್ರಗಳಿಗೆ ಸಿಲುಕಿ ಬಹುತೇಕ ಕೋನ್‌ಗಳು ಕಿತ್ತು ಹೋಗಿದ್ದವು. ಇದರಿಂದಾಗಿ ವಾಹನಗಳು ಅಪಘಾತವಾಗುವ ಸಾಧ್ಯತೆ ಹೆಚ್ಚಿತ್ತು. ಈ ಬಗ್ಗೆ “ಉದಯವಾಣಿ ಸುದಿನ’ ಕೆಲವು ತಿಂಗಳ ಹಿಂದೆ ರಿಯಾಲಿಟಿ ಚೆಕ್‌ ನಡೆಸಿ, ವಾಸ್ತವವನ್ನು ಸಾರ್ವಜನಿಕರ ಮುಂದಿಟ್ಟಿತ್ತು. ಪರ್ಯಾಯ ಯೋಜನೆ ಬಗ್ಗೆ ಪೊಲೀಸ್‌ ಇಲಾಖೆ ಭರವಸೆ ನೀಡಿತ್ತು. ಅದರಂತೆ ಇದೀಗ ಕಿತ್ತು ಹೋದ ರಬ್ಬರ್‌ ಕೋನ್‌ ತೆಗೆದು ಹೊಸ ಕೋನ್‌ ಅಳವಡಿಸಲು ಮುಂದಾಗಿದೆ. ನಗರದ ಕರಂಗಲ್ಪಾಡಿ ಜಂಕ್ಷನ್‌ ಬಳಿ ಜೈಲ್‌ ರೋಡ್‌ಗೆ

ತೆರಳುವಲ್ಲಿ ಸುಗಮ ಸಂಚಾರದ ನಿಟ್ಟಿನಲ್ಲಿ ಅಳವಡಿಸಲಾಗಿದ್ದ ರಬ್ಬರ್‌ ಕೋನ್‌ಗಳ ಮೇಲೆ ಬಸ್‌ ಚಲಾಯಿಸಿ ಹಾನಿಗೊಳಿಸಿದ ಕಾರಣಕ್ಕೆ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಚಾಲಕನೊಬ್ಬನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದರು. ಅಲ್ಲದೇ, ಇದಾದ ಕೆಲ ದಿನಗಳ ಹಿಂದೆ, ನಗರದ ಜ್ಯೋತಿ ಚಿತ್ರಮಂದಿರ ಬಳಿ ಕೋನ್‌ಗಳಿಗೆ ಹಾನಿ ಎಸಗಿದ ಮೂರು ಕರ್ನಾಟಕ ಸಾರಿಗೆ ಬಸ್‌ ಮತ್ತು ಎರಡು ಖಾಸಗಿ ಬಸ್‌ ಚಾಲಕರ ವಿರುದ್ಧ ಇದೇ ರೀತಿ ಕ್ರಮ ಜರಗಿಸಲಾಗಿತ್ತು.

ಪ್ರತ್ಯೇಕ ಮಾರ್ಕಿಂಗ್‌
ರಸ್ತೆಗಳಲ್ಲಿ ರಬ್ಬರ್‌ ಕೋನ್‌ಗಳನ್ನು ತೆರವು ಮಾಡಿದ ಕಾರಣ ಬಸ್‌ ಬೇಗಳಲ್ಲಿ ಸದ್ಯ ತೊಂದರೆ ಉಂಟಾಗಿದೆ. ಬಸ್‌ ಬೇ ಗಳಲ್ಲಿ ಬಸ್‌ಗಳಲ್ಲದೆ ಇತರ ವಾಹನಗಳು ಕೂಡ ಸಂಚರಿಸುತ್ತಿವೆ. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಪೊಲೀಸ್‌ ಇಲಾಖೆ ಮುಂದಾಗಿದೆ. ಹೊಸತಾದ ರಬ್ಬರ್‌ ಕೋನ್‌ ಅಳವಡಿಸುವವರೆಗೆ ಬಸ್‌ ಬೇಗಳಲ್ಲಿ ಪ್ರತ್ಯೇಕ ಮಾರ್ಕಿಂಗ್‌ ಮಾಡಲು ಪೊಲೀಸ್‌ ಇಲಾಖೆ ನಿರ್ಧರಿಸಿದೆ.

ಹೊಸ ಕೋನ್‌ ಅಳವಡಿಕೆ
ಕೆಲ ಸಮಯದ ಹಿಂದೆ ನಗರದಲ್ಲಿ ಕೆಲವೊಂದು ಕಡೆಗಳಲ್ಲಿ ಅಳವಡಿಸಿದ್ದ ರಸ್ತೆ ಕೋನ್‌ಗಳು ಎದ್ದು ಹೋಗಿದ್ದವು. ಅವುಗಳನ್ನು ಗುರುತಿಸಿ, ಇದೀಗ ತೆಗೆಯ ಲಾಗಿದ್ದು, ಅಲ್ಲಿ ಮತ್ತೆ ಹೊಸ ಕೋನ್‌ಗಳನ್ನು ಅಳವಡಿಸಲಾಗುವುದು. ಅಲ್ಲಿಯವರೆಗೆ ಬಸ್‌ ಬೇಗಳಲ್ಲಿ ಮುನ್ನೆಚ್ಚರಿಕೆ ದೃಷ್ಟಿಯಿಂದ ಲೈನ್‌ ಅಳವಡಿಸಲಾಗುವುದು.
-ನಟರಾಜ್‌, ಮಂಗಳೂರು ಟ್ರಾಫಿಕ್‌ ಎಸಿಪಿ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.