ಸಂಗೀ ತವಿವಿಯಲ್ಲಿ ಕಲಿತವರು ನಿರುದ್ಯೋಗಿ ಆಗಿಲ್ಲ

ಗಂಗೂಬಾಯಿ ಹಾನಗಲ್‌ ಸಂಗೀತ ವಿವಿ ಸಂಸ್ಥಾಪನೆ ದಿನಾಚರಣೆ

Team Udayavani, Sep 23, 2020, 3:27 PM IST

ಸಂಗೀ ತವಿವಿಯಲ್ಲಿ ಕಲಿತವರು ನಿರುದ್ಯೋಗಿ ಆಗಿಲ್ಲ

ಮೈಸೂರು: ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ತನ್ನ ವಿದ್ಯಾರ್ಥಿಗಳಿಗೆ ಸ್ವಾವಲಂಬಿಯಾಗಿ ಬದುಕುವುದನ್ನು ಕಲಿಸುತ್ತದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ರಂಗ ತಜ್ಞ ಮತ್ತು ಸಾಹಿತಿ ಪ್ರೊ. ಅಶೋಕಕುಮಾರ ರಂಜೇರೆ ಅಭಿಪ್ರಾಯಪ್ಟರು.

ನಗರದ ಡಾ.ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ವಿವಿ ಸಂಸ್ಥಾಪನಾ ದಿನಾ ಚರಣೆಯಲ್ಲಿ ಅವರು ಮಾತನಾಡಿದರು.

ನಿರ್ಲಕ್ಷಿತ ವಿಷಯಗಳಿಗೆ ಒತ್ತು: ಸಾಮಾನ್ಯ ವಿಶ್ವ ವಿದ್ಯಾಲಯಗಳು ನಿರ್ಲಕ್ಷ್ಯ ಮಾಡಿರುವ ವಿಷಯ ಗಳನ್ನು ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವ ವಿದ್ಯಾನಿಲಯ ಮುನ್ನೆಲೆಗೆ ತಂದು ಜನರಿಗೆ ಹತ್ತಿರ ವಾಗಿಸುವ ಕೆಲಸ ಮಾಡುತ್ತಿದೆ. ಸಂಗೀತ, ನೃತ್ಯ, ನಾಟಕದಂತಹ ಕಲೆಗಳನ್ನು ಕಲಿಸಿ ಜನರಿಗೆ ತಲುಪಿಸುವ ಕೆಲಸ ಈ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿದೆ. ಮಿಕ್ಕ ವಿಶ್ವವಿದ್ಯಾನಿಲಯಗಳು ಪ್ರವೇಶಾತಿ, ಪರೀಕ್ಷೆ, ಅಂಕಗಳ ಬಗ್ಗೆ ಮಾತ್ರ ತಲೆಕೆಡಿಸಿಕೊಳ್ಳುತ್ತವೆ. ಆದರೆ, ಈ ವಿವಿಯಲ್ಲಿ ಅದೆಲ್ಲವನ್ನೂ ಮೀರಿದ ಕೆಲಸ ಮಾಡುತ್ತಿದೆ. ಜೊತೆಗೆ ಜನರೊಂದಿಗೆ ಸಮಾಜದಲ್ಲಿ ಹೇಗಿರಬೇಕು ಎಂಬುದು ಈ ವಿಶ್ವವಿದ್ಯಾಲಯ ಕಲಿಸಿಕೊಡುತ್ತದೆ ಎಂದು ಹೇಳಿದರು.

ಸ್ವಾವಲಂಬಿ ಬದುಕು: ಸಾಂಸ್ಕೃತಿಕ ಪರಂಪರೆಯನ್ನುಎತ್ತಿ ಹಿಡಿಯುತ್ತಿರುವ ಈ ವಿವಿಯಲ್ಲಿ ಆಡಳಿತಾಂಗ ಕೊನೆಯ ಆದ್ಯತೆ. ಮೊದಲು ಅಧ್ಯಯನಕ್ಕೆ ನಂತರ ಪ್ರಸರಣಕ್ಕೆ ಆದ್ಯತೆ ಕೊಡಲಾಗುತ್ತದೆ. ಪಾಠ ಕೇಳಲು ಬೇಸರವಾಗಬಹುದು. ಆದರೆ ಹಾಡು, ನೃತ್ಯ, ಸಂಗೀತದಿಂದ ಎಂದಿಗೂ ಬೇಸರವಾಗದು. ಕಲೆಗೆ ಇರುವ ಶಕ್ತಿ ಅಂತಹದ್ದು. ಆದರೆ ನಿರುದ್ಯೋಗದ ಭಯದಿಂದ ಇಲ್ಲಿಗೆ ಬರುವ ವಿದ್ಯಾರ್ಥಿಗಳ ಸಂಖ್ಯೆ ಬಹಳ ಕಡಿಮೆ. ಬೇರೆ ಕಡೆ ಓದಿ ನಿರುದ್ಯೋಗಿಯಾಗಿ ಉಳಿದಿರುವವರು ಸಿಗುತ್ತಾರೆ.ಆದರೆಇಲ್ಲಿಕಲಿತವರಿಗೆ ಹಾಗಾಗುವುದಿಲ್ಲ. ಸ್ವಾವಲಂಬಿಯಾಗಿ ಬದುಕುವುದನ್ನು ವಿಶ್ವವಿದ್ಯಾಲಯಕಲಿಸುತ್ತದೆ ಎಂದರು.

ಸಮಾಜಮುಖೀ ವಿದ್ಯೆ: ಪ್ರಸಾರಾಂಗದ ಸಂಚಾಲಕ ಎಚ್‌.ಎಂ. ನಟರಾಜು ಮಾತನಾಡಿ, ಪ್ರಸಾರಾಂಗಸಮಾಜಮುಖೀ ವಿದ್ಯೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದೆ. ನಾಟಕ ರಚನಾ ಶಿಬಿರ, ಸಂಗೀತ ಚಿಕಿತ್ಸೆ, ಭರತನಾಟ್ಯ, ಬೀದಿ ನಾಟಕ ಶಿಬಿರ ಸೇರಿದಂತೆ ಸಾಕಷ್ಟು ವಿಚಾರಗಳಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಈಗ 3 ಪುಸ್ತಕಗಳನ್ನು ಬಿಡುಗಡೆ ಮಾಡಲಾಗಿದ್ದು, ಇನ್ನು ಮುಂದೆ 10 ಪುಸ್ತಕಗಳು ಬಿಡುಗಡೆಗೆ ಸಿದ್ಧವಾಗಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಪ್ರದರ್ಶಕ ಕಲೆಗಳು-ಅನನ್ಯತೆ ಮತ್ತು ಪ್ರಸ್ತುತತೆ’, ಪರ್ಫಾರ್ಮಿಂಗ್‌ ಆರ್ಟ್ಸ್ ಆ್ಯಸ್‌ ವಾಯ್ಸ್ ಆಫ್ ಪೀಪಲ್ (ವಾಲ್ಯೂಮ್‌1 ಮತ್ತು2) ಪುಸ್ತಕಗಳನ್ನುಲೋಕಾರ್ಪಣೆಗೊಳಿಸಲಾಯಿತು. ರಂಗನಿರ್ದೇಶಕ ಪ್ರೊ. ಎಸ್‌.ಆರ್‌. ರಮೇಶ್‌ ಬಿಡುಗಡೆ ಯಾದ ಪುಸ್ತಕಗಳ ಬಗ್ಗೆ ಮಾತನಾಡಿದರು. ಸಂಗೀತ ವಿವಿಯ ಕುಲಪತಿ ಹಾಗೂ ಕುಲಸಚಿವ ಪ್ರೊ.ನಾಗೇಶ್‌ವಿ.ಬೆಟ್ಟಕೋಟೆ,ಪರೀಕ್ಷಾಂಗಕುಲಸಚಿವ ಪ್ರೊ.ಆರ್‌.ರಾಜೇಶ್‌, ಮೈಸೂರು ವಿವಿ ಲಲಿತಕಲಾ ಕಾಲೇಜಿನ ಸಂಗೀತ ವಿಭಾಗದ ಮುಖ್ಯಸ್ಥ ಪ್ರೊ. ಸಿ.ಎ. ಶ್ರೀಧರ್‌, ರೇಣುಕಾಂಬ, ಡಾ. ದುಂಡಯ್ಯ ಪೂಜೇರ, ಡಾ. ಭುವನೇಶ್ವರಿ ಮತ್ತಿತರರು ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur-1

Hunsur: ತಂಬಾಕು ಬೆಳೆಗಾರರ ರಕ್ಷಣೆಗೆ ಬದ್ದ: ಸಂಸದ ಯದುವೀರ್ ಒಡೆಯರ್

ಮುಡಾ ಅಧ್ಯಕ್ಷ ಕೆ.ಮರಿಗೌಡ ತಲೆದಂಡ?

MUDA Chairman: ಕೆ.ಮರಿಗೌಡ ತಲೆದಂಡ? ಇಂದು ಅಥವಾ ನಾಳೆ ರಾಜೀನಾಮೆ ನೀಡುವ ಸಾಧ್ಯತೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.