ಕಾಫಿನಾಡಲ್ಲೂ ನಿಲ್ಲದ ಬಾಲ್ಯವಿವಾಹ


Team Udayavani, Sep 23, 2020, 6:45 PM IST

ಕಾಫಿ ನಾಡಲ್ಲೂ ನಿಲ್ಲದ ಬಾಲ್ಯವಿವಾಹ

ಚಿಕ್ಕಮಗಳೂರು: ಬಾಲ್ಯ ವಿವಾಹ ನಿಷೇಧ ಜಾಗೃತಿಯ ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು: ವಿದ್ಯಾವಂತರೇ ಹೆಚ್ಚಾಗಿರುವ ಚಿಕ್ಕಮಗಳೂರು ಜಿಲ್ಲೆಯ ಅಲ್ಲಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಜಿಲ್ಲೆಯಲ್ಲಿ 2020 ಏಪ್ರಿಲ್‌ನಿಂದ ಆಗಸ್ಟ್‌ ತಿಂಗಳವರೆಗೆ ಬಾಲ್ಯವಿವಾಹಕ್ಕೆ ಸಂಬಂ ಧಿಸಿ 31 ಪ್ರಕರಣಗಳು ಕಂಡು ಬಂದಿದ್ದು 2 ಪ್ರಕರಣ ದಾಖಲಿಸಲಾಗಿದೆ.

ಜಿಲ್ಲೆಯಲ್ಲಿನ 31 ಪ್ರಕರಣಗಳ ಪೈಕಿ 29 ಪ್ರಕರಣಗಳನ್ನು ತಡೆಹಿಡಿಯಲಾಗಿದೆ. ಕೋವಿಡ್ ಸೋಂಕು ತಡೆಗಾಗಿ ಸರ್ಕಾರ ವಿಧಿಸಿದ್ದ ಲಾಕ್‌ಡೌನ್‌ ಸಂದರ್ಭದಲ್ಲೇ 31 ಪ್ರಕರಣ ಬೆಳಕಿಗೆ ಬಂದಿವೆ. ಜಿಲ್ಲೆ ಬಯಲುಸೀಮೆ ಮತ್ತು ಮಲೆನಾಡು ಪ್ರದೇಶ ಒಳಗೊಂಡಿದ್ದು, ಇಲ್ಲಿನ ಕೆಲವು ಸಮುದಾಯದಲ್ಲಿ ಬಾಲ್ಯ ವಿವಾಹ ಪದ್ಧತಿ ಕಂಡು ಬರುತ್ತಿದೆ. ಹಿರಿಯರಭಾವನಾತ್ಮಕತೆ, ಸಂಪ್ರದಾಯ ಮತ್ತು ಬೇಗ ಮದುವೆ ಮಾಡಿ ಜವಾಬ್ದಾರಿ ಕಳೆದುಕೊಳ್ಳುವ ಪೋಷಕರ ಭಾವನೆ ಬಾಲ್ಯವಿವಾಹಕ್ಕೆ ಕಾರಣವಾಗಿದೆ. ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಬಾಲ್ಯ ವಿವಾಹದ ಸಂಖ್ಯೆ ಹೆಚ್ಚಿದೆ. ಮಲೆನಾಡು ಭಾಗದ ಕಾಫಿ ತೋಟಗಳಲ್ಲಿ ಕಾರ್ಮಿಕ ವೃತ್ತಿಗೆ ವಲಸೆ ಬಂದು ಕೂಲಿಲೈನ್‌ಗಳಲ್ಲಿ ವಾಸ ಮಾಡುತ್ತಿರುವರಲ್ಲಿ ಹಾಗೂ ಬಯಲುಸೀಮೆ ಭಾಗದ ಕೆಲ ಸಮುದಾಯದಲ್ಲಿ ಈ ಪದ್ಧತಿ ಇಂದಿಗೂ ಜೀವಂತವಾಗಿದೆ.

ಕೂಲಿಲೈನ್‌ನಲ್ಲಿ ವಾಸ ಮಾಡುವ ಕೆಲ ಪೋಷಕರು ಮದ್ಯ ವ್ಯಸನಿಗಳಾಗಿರುವುದು. ಮಕ್ಕಳ ಮೇಲೆ ಕಾಳಜಿ ಇಲ್ಲದಿರುವುದು, ಶಿಕ್ಷಣ, ಬಡತನ, ಅರಿವಿನ ಕೊರತೆ, ಜವಾಬ್ದಾರಿ ಇಲ್ಲದಿರುವುದು, ಸಂಬಂಧ ಕುದುರಿದರೇ ಸಾಕು ಎಂಬ ಭಾವನೆ, ಹಿರಿಯರ ಭಾವನಾತ್ಮಕ ಅಂಶಗಳ ಕಾರಣದಿಂದ ಬಾಲ್ಯವಿವಾಹ ಪ್ರಕರಣಗಳು ಅಲ್ಲಲ್ಲಿ ಬೆಳಕಿಗೆ ಬಂದರೂ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಕಡಿಮೆ ಪ್ರಮಾಣದಲ್ಲಿದೆ.

ಎಲ್ಲೆಲ್ಲಿ ಎಷ್ಟು ಪ್ರಕರಣ?: 2020ರ ಏಪ್ರಿಲ್‌ ತಿಂಗಳಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ 2 ಪ್ರಕರಣ, ತರೀಕೆರೆ ತಾಲೂಕಿನಲ್ಲಿ 1, ಕಡೂರು ತಾಲೂಕಿನಲ್ಲಿ 1 ಪ್ರಕರಣ ಬೆಳಕಿಗೆ ಬಂದಿವೆ. ಮೇ ತಿಂಗಳಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ 2, ತರೀಕೆರೆ ತಾಲೂಕಿನಲ್ಲಿ 2 ಪ್ರಕರಣಗಳು ಬೆಳಕಿಗೆ ಬಂದಿವೆ. ಜೂನ್‌ನಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ 3, ತರೀಕೆರೆ ತಾಲೂಕಿನಲ್ಲಿ 3, ಕಡೂರು ತಾಲೂಕಿನಲ್ಲಿ 3 ಹಾಗೂ ಮೂಡಿಗೆರೆ ತಾಲೂಕಿನಲ್ಲಿ 1 ಪ್ರಕರಣ ಕಂಡು ಬಂದಿದೆ. ಜುಲೈ ತಿಂಗಳಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ 6, ಕಡೂರು ತಾಲೂಕಿನಲ್ಲಿ 1, ಮೂಡಿಗೆರೆ ತಾಲೂಕಿನಲ್ಲಿ 1, ಕೊಪ್ಪ ತಾಲೂಕಿನಲ್ಲಿ 1 ಪ್ರಕರಣ ಬೆಳಕಿಗೆ ಬಂದಿವೆ. ಇದರಲ್ಲಿ ಎರಡು ಪ್ರಕರಣ ದಾಖಲಾದರೆ ಉಳಿದ 29 ಬಾಲ್ಯ ವಿವಾಹವನ್ನು ಇಲಾಖೆ ತಡೆದಿದ್ದು, 3 ಗಂಡು ಮಕ್ಕಳು 28 ಹೆಣ್ಣು ಮಕ್ಕಳನ್ನು ರಕ್ಷಿಸಲಾಗಿದೆ. ಜನರಲ್ಲಿನ ಅರಿವಿನ ಕೊರತೆ, ಅನಕ್ಷರತೆ, ಬಡತನ, ಜವಾಬ್ದಾರಿ ಕಳೆದುಕೊಳ್ಳಬೇಕು ಎಂಬ ಇಚ್ಛೆ, ಅಪ್ರಾಪ್ತರ ಪ್ರೇಮ ಪ್ರಕರಣಗಳು ಹಾಗೂ ಭಾವನಾತ್ಮಕ ಸಂಬಂಧ ಬಾಲ್ಯವಿವಾಹಕ್ಕೆ ಕಾರಣವಾಗುತ್ತಿವೆ. ಎಷ್ಟೋ ಪ್ರಕರಣವನ್ನು ತಡೆಹಿಡಿಯಲಾಗಿದ್ದರೂ ಈ ಪದ್ಧತಿ ಇನ್ನೂ ಜೀವಂತವಾಗಿದೆ ಎನ್ನುತ್ತಾರೆ ಮಕ್ಕಳ ಕಲ್ಯಾಣ ಸಮಿತಿ ಮಾಜಿ ಅಧ್ಯಕ್ಷರು, ಹಾಲಿ ಬಾಲಮಂಡಳಿ ಸದಸ್ಯರಾಗಿರುವ ವಕೀಲ ನಟರಾಜ್‌.

ಬಾಲ್ಯ ವಿವಾಹ ತಡೆಗೆ ಅನೇಕ ಇಲಾಖೆಗಳು ಕಾರ್ಯ ನಿರ್ವಹಿಸುತ್ತಿವೆ. ಜಿಲ್ಲಾಮಟ್ಟದಲ್ಲಿ ಜಿಲ್ಲಾ  ಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ,

ಹಿರಿಯ ಮಕ್ಕಳ ಕಲ್ಯಾಣಾಧಿಕಾರಿ, ಜಿಪಂ ಸಿಇಒ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು, ಜಿಲ್ಲಾ ಆರೋಗ್ಯಾಧಿಕಾರಿ, ಸಮಾಜ ಕಲ್ಯಾಣಾಧಿಕಾರಿ, ಹಿಂದುಳಿದ ವರ್ಗ ಇಲಾಖೆ ಅಧಿಕಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಐಟಿಡಿಪಿ, ಜಿಲ್ಲಾ ಕಾರ್ಮಿಕಾಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ತಾಲೂಕು ಮಟ್ಟದಲ್ಲಿ ತಹಶೀಲ್ದಾರ್‌, ತಾಪಂ ಸಿಇಒ, ತಾಲೂಕು ವೈದ್ಯಾಧಿಕಾರಿ, ತಾಲೂಕು

ಸಮಾಜ ಕಲ್ಯಾಣಾಧಿಕಾರಿ, ಕಾರ್ಮಿಕ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಂರಕ್ಷಣಾಧಿಕಾರಿ (ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ), ಸರ್ಕಲ್‌ ಇನ್ಸ್ ಪೆಕ್ಟರ್‌, ಹಿಂದುಗಳಿದ ವರ್ಗಗಳ ಅಭಿವೃದ್ಧಿ ಇಲಾಖೆ ವಿಸ್ತರಣಾಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗಿದೆ.

ಹೋಬಳಿ ವ್ಯಾಪ್ತಿಯಲ್ಲಿ ಕಂದಾಯ ನಿರೀಕ್ಷಕರು, ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಐಸಿಡಿಎಸ್‌ ವಲಯ ವ್ಯಾಪ್ತಿ, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಗ್ರಾಪಂ ವ್ಯಾಪ್ತಿ, ಗ್ರಾಮ ಲೆಕ್ಕಿಗರು, ಗ್ರಾಮ ವ್ಯಾಪ್ತಿಯಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಮಹಾನಗರ ವ್ಯಾಪ್ತಿಯಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಕಂದಾಯ ನೀರಿಕ್ಷಕರ ಸಮಿತಿ ರಚಿಸಲಾಗಿದೆ.

ಪಂಚಾಯತ್‌ ವ್ಯಾಪ್ತಿಯಲ್ಲಿ ಆರೋಗ್ಯ ನೀರಿಕ್ಷಕರು, ಹಿರಿಯ ಕಾರ್ಮಿಕ ನಿರೀಕ್ಷಕರು, ಆ ವ್ಯಾಪ್ತಿಯ ಪೊಲೀಸ್‌ ಇಲಾಖೆ, ಕಂದಾಯ ಅಧಿಕಾರಿಗಳು, ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ ಈ ಸಮಿತಿಗಳು ಹದ್ದಿನ ಕಣ್ಣಿಟ್ಟು ಬಾಲ್ಯವಿವಾಹವನ್ನು ತಡೆಗಟ್ಟಲು ನಿರಂತರವಾಗಿ ಶ್ರಮಿಸುತ್ತಿವೆ. ಬಾಲ್ಯವಿವಾಹ ನಿಷೇಧ ಕಾನೂನು ಮತ್ತು ಅದರಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಕಾನೂನು ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಸರ್ಕಾರಿ ಶಾಲೆ, ಅಂಚೆ ಕಚೇರಿ, ಪಂಚಾಯತ್‌ ಕಚೇರಿ ಮೀನಾ ಕ್ಲಬ್‌, ಕಿಶೋರಿ ಸಂಘಗಳು, ಮಕ್ಕಳ ಗ್ರಾಮ ಸಭೆಗಳಲ್ಲಿ ತೆರೆದಮನೆ, ಗ್ರಾಮ ಚಾವಡಿ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಬೀದಿನಾಟಕ ಸೇರಿದಂತೆ ವಿವಿಧ ಪ್ರಕಾರಗಳಲ್ಲಿ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಇದೆಲ್ಲದರ ನಡುವೆಯೂ ಅಲ್ಲಲ್ಲಿ ಬೆರಳೆಣಿಕೆಯಷ್ಟು ಬಾಲ್ಯವಿವಾಹ ನಡೆಯುತ್ತಿದ್ದು, ಬಾಲ್ಯವಿವಾಹಕ್ಕೆ ಸಂಪೂರ್ಣ ಮುಕ್ತಿ ಹಾಡಬೇಕೆನ್ನುವುದು ಸಾರ್ವಜನಿಕರ ಆಶಯವಾಗಿದೆ.

ಬಾಲ್ಯವಿವಾಹದ ಪ್ರಕರಣ ಬೆರಳೆಣಿಕೆಯಷ್ಟು ಅಲ್ಲೊಂದು ಇಲ್ಲೊಂದು ಕಂಡು ಬರುತ್ತಿವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ದೂರು ಬಂದ ತಕ್ಷಣ ಮಗುವನ್ನು ರಕ್ಷಿಸಿ ಪೋಷಕರ ಮೇಲೆ ದೂರು ದಾಖಲು ಮಾಡಲಾಗುತ್ತಿದೆ. ಬಾಲ್ಯವಿವಾಹ ಒಂದು ಕ್ರಿಮಿನಲ್‌ ಅಪರಾಧ. ಬಾಲ್ಯವಿವಾಹ ತಡೆಗಟ್ಟಲು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಸದ್ಯಜಿಲ್ಲೆಯಲ್ಲಿ ಶೇ.99ರಷ್ಟು ಬಾಲ್ಯವಿವಾಹ ನಿಂತು ಹೋಗಿದೆ. ಶೇ.1ರಷ್ಟು ಅಲ್ಲೊಂದು ಇಲ್ಲೊಂದು ಪ್ರಕರಣ ಸಂಬಂಧಿಕರೊಳಗೆ ಕದ್ದುಮುಚ್ಚಿ ನಡೆಯುತ್ತವೆ. ದೂರು ಬಂದ ತಕ್ಷಣ ಅವರ ಮೇಲೆ ದೂರು ದಾಖಲಿಸಿ ಮಗುವನ್ನು ಸಂರಕ್ಷಿಸಿ ಸಾಂತ್ವನ ಕೇಂದ್ರದಲ್ಲಿ ಆಶ್ರಯ ನೀಡಲಾಗುತ್ತಿದೆ. -ಸಿ.ಟಿ. ರವಿ, ಜಿಲ್ಲಾ ಉಸ್ತುವಾರಿ ಸಚಿವ

ಬಾಲ್ಯವಿವಾಹ ಸಂಪೂರ್ಣ ತಡೆಗಟ್ಟಿದರೂ ಅಲ್ಲಲ್ಲಿ ಒಂದೊಂದು ಪ್ರಕರಣ ಬೆಳಕಿಗೆ ಬರುತ್ತಿವೆ. ಬಾಲ್ಯ ವಿವಾಹಕ್ಕೆ ಶಿಕ್ಷಣದ ಕೊರತೆ, ಬಡತನ, ಅರಿವಿನ ಕೊರತೆ,ಭಾವನಾತ್ಮಕ ಸಂಬಂಧ ಹೀಗೆ ಅನೇಕ ಕಾರಣಗಳಿಂದ ಕಂಡುಬರುತ್ತಿದ್ದು, ಅದರಲ್ಲೂ ಕೆಲ ಪ್ರಕರಣ ವಿದ್ಯಾವಂತ ಕುಟುಂಬಗಳಲ್ಲಿ ಕಂಡು ಬರುವಂತದ್ದು ಬೇಸರದ ಸಂಗತಿ. ಜಿಲ್ಲೆಯಲ್ಲಿ ಬಾಲ್ಯವಿವಾಹ ತಡೆಗಟ್ಟಲು ಅನೇಕ ಇಲಾಖೆಗಳು ಹಗಲಿರುಳು ಶ್ರಮಿಸುತ್ತಿದ್ದು, ಜಿಲ್ಲೆಯಲ್ಲಿ ಬಾಲ್ಯವಿವಾಹ ಪದ್ಧತಿ ಸಂಪೂರ್ಣ ನಶಿಸಿಹೋಗಬೇಕು. –ನಟರಾಜ್‌, ಮಕ್ಕಳ ಕಲ್ಯಾಣ ಸಮಿತಿ ಮಾಜಿ ಅಧ್ಯಕ್ಷರು, ಹಾಲಿ ಬಾಲನ್ಯಾಯ ಮಂಡಳಿ ಸದಸ್ಯರು ಮತ್ತು ವಕೀಲರು

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

3-chikkamagaluru

Chikkamagaluru: ಟಾಟಾ ಏಸ್ ಆಟೋ ಪಲ್ಟಿ ; ಇಬ್ಬರು ಸ್ಥಳದಲ್ಲೇ ಸಾವು

4-chikkamagaluru

Chikkamagaluru: ಸ್ಕಿಡ್ ಆಗಿ 20 ಅಡಿ ಎತ್ತರಿಂದ ಕೆಳಗೆ ಬಿದ್ದ ಗೂಡ್ಸ್ ವಾಹನ

Kottigehara: ಕಸ ವಿಲೇವಾರಿ ವಾಹನ ಬಂದಿಲ್ಲವೆಂದು ಪಂಚಾಯತ್ ಬಾಗಿಲಿಗೆ ಕಸ ಸುರಿದ ಭೂಪ

Kottigehara: ಕಸ ವಿಲೇವಾರಿ ವಾಹನ ಬಂದಿಲ್ಲವೆಂದು ಪಂಚಾಯತ್ ಬಾಗಿಲಿಗೆ ಕಸ ಸುರಿದ ಭೂಪ

ಹದಗೆಟ್ಟ ಕೊಟ್ಟಿಗೆಹಾರ-ಗಂಗಾಮುಲ ರಸ್ತೆ, ಗ್ರಾಮಸ್ಥರಿಂದ ಪ್ರತಿಭಟನೆಗೆ ನಿರ್ಧಾರ

ಹದಗೆಟ್ಟ ಕೊಟ್ಟಿಗೆಹಾರ-ಗಂಗಾಮುಲ ರಸ್ತೆ, ಗ್ರಾಮಸ್ಥರಿಂದ ಪ್ರತಿಭಟನೆಗೆ ನಿರ್ಧಾರ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.