ಕೋಟೆನಾಡಲ್ಲೂ ಬಾಲ್ಯವಿವಾಹ ಪಿಡುಗು


Team Udayavani, Sep 23, 2020, 6:55 PM IST

ಕೋಟೆನಾಡಲ್ಲೂ ಬಾಲ್ಯವಿವಾಹ ಪಿಡುಗು

ಚಿತ್ರದುರ್ಗ: ಬಾಲ್ಯವಿವಾಹ ಶಿಕ್ಷಾರ್ಹ ಅಪರಾಧ, ಮಕ್ಕಳಿಗೆ ಮದುವೆ ಮಾಡಬೇಡಿ, ಅವರ ಭವಿಷ್ಯಕ್ಕೆ ಕಲ್ಲು ಹಾಕಬೇಡಿ ಎಂದು ಸರ್ಕಾರ ಸಾರಿ ಹೇಳುತ್ತಿರುವುದು ಕೇಳಿಸುತ್ತಿದೆ. ಆದರೆ ಮನಸ್ಸಿಗೆ ಮಾತ್ರ ನಾಟುತ್ತಿಲ್ಲ. ಜನರು ಈ ಅನಿಷ್ಟ ಪದ್ಧತಿಯಿಂದ ದೂರ ಸರಿಯುತ್ತಿಲ್ಲ ಎನ್ನುವುದಕ್ಕೆ ಹಲವು ನಿದರ್ಶನಗಳು ಬೆಳಕಿಗೆ ಬಂದಿವೆ.

ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ಮಾರ್ಚ್‌ತಿಂಗಳಲ್ಲಿ ಲಾಕ್‌ಡೌನ್‌ ಘೋಷಣೆ ಮಾಡಿ ಯಾರೂ ಕೂಡ ಮನೆಯಿಂದ ಹೊರಬರಬೇಡಿ ಎಂದು ಎಲ್ಲೆಡೆ ಬಂದೋಬಸ್ತ್ ಮಾಡಿದ್ದ ಸಂದರ್ಭವನ್ನೇ ದುರುಪಯೋಗ ಮಾಡಿಕೊಂಡ ಕೆಲವರು ಸದ್ದಿಲ್ಲದೆ ಮಕ್ಕಳ ಮದುವೆ ಮಾಡಿ ಮುಗಿಸಲು ಮುಂದಾಗಿದ್ದರು ಎಂಬುದು ಆತಂಕಕಾರಿ ಸಂಗತಿ. 2020 ಮಾರ್ಚ್‌ನಿಂದ ಮೇ ತಿಂಗಳರೆಗಿನ ಎರಡು ತಿಂಗಳ ಅವಧಿಯಲ್ಲಿ ಜಿಲ್ಲೆಯ ವಿವಿಧ ಇಲಾಖೆಯ, ವಿವಿಧ ಹಂತದ ಅಧಿಕಾರಿಗಳು 50 ಬಾಲ್ಯವಿವಾಹ ಪ್ರಕರಣಗಳನ್ನು ತಡೆಹಿಡಿದು ಪೋಷಕರಿಂದ ಮುಚ್ಚಳಿಕೆ ಪತ್ರ ಬರೆಸಿಕೊಂಡು ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಏಳು ಬಾಲಕಿಯರನ್ನು ಬಾಲ್ಯವಿವಾಹದಿಂದ ರಕ್ಷಿಸಿದ್ದಾರೆ. ಇದೇ ವಿಚಾರಕ್ಕೆ ಒಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಮೊಳಕಾಲ್ಮೂರು, ಚಳ್ಳಕೆರೆ, ಚಿತ್ರದುರ್ಗ ಭಾಗಗಳಲ್ಲಿ ಕದ್ದು ಮುಚ್ಚಿ ಬಾಲ್ಯವಿವಾಹ ಮಾಡುವ ಪ್ರಯತ್ನಗಳು ಆಗಾಗ ನಡೆಯುತ್ತವೆ. ಹೊಸದುರ್ಗ, ಹಿರಿಯೂರು ಹಾಗೂ ಹೊಳಲ್ಕೆರೆ ತಾಲೂಕು ವ್ಯಾಪ್ತಿಗಳಲ್ಲಿ ಇದು ಕೊಂಚ ನಿಯಂತ್ರಣದಲ್ಲಿದೆ.

ಬಾಲ್ಯವಿವಾಹ ಮಾಡುವ ತುರ್ತಾದರೂ ಏನು?:ಮೊಳಕಾಲ್ಮೂರು ಭಾಗದ ಕೆಲ ಗ್ರಾಮಗಳಲ್ಲಿ ಸಣ್ಣವಯಸ್ಸಿನ ಮಕ್ಕಳ ಮದುವೆಗೆ ಆಗಾಗ ಪ್ರಯತ್ನ ನಡೆಯುತ್ತಲೇ ಇರುತ್ತವೆ. ಸರ್ಕಾರ, ಅಧಿಕಾರಿಗಳು, ಮಾಧ್ಯಮಗಳು, ಪ್ರಜ್ಞಾವಂತರು ಎಷ್ಟು ಎಚ್ಚರಿಸಿದರೂ ಪ್ರಯೋಜನವಾಗುತ್ತಿಲ್ಲ. ಮಲೆನಾಡಿನ ಚಿಕ್ಕಮಗಳೂರು, ಬೆಂಗಳೂರು ಕಡೆಗೆ ಉದ್ಯೋಗಕ್ಕಾಗಿ ವಲಸೆ ಹೋಗುವ ಸಂದರ್ಭ ಮಕ್ಕಳ ರಕ್ಷಣೆಗಾಗಿ, ಪೋಷಕರು ತಮ್ಮ ಜವಾಬ್ದಾರಿ ಕಳೆದುಕೊಳ್ಳುವ ಸಲುವಾಗಿ ಮಕ್ಕಳ ಮದುವೆಗೆ ಮುಂದಾಗುತ್ತಿದ್ದಾರೆ. ಮಕ್ಕಳು ಪ್ರೀತಿ, ಪ್ರೇಮದಲ್ಲಿ ಬಿದ್ದು ಕೈಬಿಟ್ಟು ಹೋಗುತ್ತಾರೆ, ಇದರಿಂದ ಊರಿನಲ್ಲಿ ಮಾನ ಹೋಗುತ್ತದೆ

ಎಂಬ ಆತಂಕದಲ್ಲೂ ಹಲವು ಪೋಷಕರು ಮಕ್ಕಳ ಮದುವೆ ಮಾಡುವ ಆಲೋಚನೆ ಮಾಡುತ್ತಾರೆ. ಮತ್ತೂಂದೆಡೆ ಪ್ರಾಥಮಿಕ ಶಿಕ್ಷಣ ಮುಗಿಸಿದ ನಂತರ ಪ್ರೌಢ ಹಾಗೂ ಕಾಲೇಜು ಶಿಕ್ಷಣಕ್ಕೆ ದೂರದ ಊರುಗಳಿಗೆ ಹೋಗುವ ಸಂದರ್ಭ ಬಂದಾಗಲೂ ಮಕ್ಕಳನ್ನು ಮದುವೆ ಮಾಡಲು ಮುಂದಾಗುತ್ತಾರೆ ಎಂಬುದು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳ ತರ್ಕ.

ಲಾಕ್‌ಡೌನ್‌ ಸಂದರ್ಭದಲ್ಲೇ ಬಾಲ್ಯವಿವಾಹ ಜಾಸ್ತಿ: ಕೋವಿಡ್ ಸೋಂಕು ನಿಯಂತ್ರಣಕ್ಕೆ ಸರ್ಕಾರ ಲಾಕ್‌ಡೌನ್‌ ಜಾರಿಗೊಳಿಸಿದ್ದರಿಂದ ಎಲ್ಲಿಯೂ ಜನ ಸಂಚಾರ ಇಲ್ಲದಂತಾಗಿತ್ತು. ಅಧಿಕಾರಿಗಳು ಕೂಡ ಒಂದು ಕಡೆಯಿಂದ ಮತ್ತೂಂದು ಕಡೆಗೆ ಓಡಾಡುವುದಿಲ್ಲ. ಈಗ ಮದುವೆ ಮಾಡಿದರೆ ಯಾರಿಗೂ ಗೊತ್ತಾಗುವುದಿಲ್ಲ ಎಂದು ಭಾವಿಸಿದ ಪೋಷಕರು ಲಾಕ್‌ಡೌನ್‌ ಸಂದರ್ಭ ಬಳಸಿಕೊಂಡು ಮದುವೆ ಮಾಡಲು ಮುಂದಾಗಿದ್ದರು ಎನ್ನುವುದಕ್ಕೆ ಈಗ ಅಧಿಕಾರಿಗಳು ತಡೆಹಿಡಿದಿರುವ 50 ಪ್ರಕರಣಗಳು ಸಾಕ್ಷಿಯಾಗಿವೆ.

ನೆರವಿಗೆ ಬಂತು ಸಹಾಯವಾಣಿ: ಸರ್ಕಾರ ಮಕ್ಕಳ ನೆರವಿಗಾಗಿ ರೂಪಿಸಿರುವ 1098 ಮಕ್ಕಳ ಸಹಾಯವಾಣಿಗೆ ಬಂದಿರುವ ಕರೆಗಳ ಜಾಡು ಹಿಡಿದು ಬಾಲ್ಯವಿವಾಹ ತಡೆಯಲಾಗಿದೆ. ಸಾಮಾನ್ಯವಾಗಿ ಬೆಳಗಿನ ಜಾವ 4 ರಿಂದ 5 ಅಥವಾ ಮಧ್ಯರಾತ್ರಿ ವೇಳೆಗೆ ಹೆಚ್ಚು ಮದುವೆಗಳು ನಡೆಯುತ್ತಿದ್ದವು ಎನ್ನುವುದು ಅಧಿಕಾರಿಗಳ ದಾಳಿ ವೇಳೆ ಬೆಳಕಿಗೆ ಬಂದಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪೊಲೀಸರಿಂದ ತಪ್ಪಿಸಿಕೊಳ್ಳಲು ಈ ಸಮಯವನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಕೋಟೆನಾಡಿನಲ್ಲಿ ಬಾಲ್ಯವಿವಾಹ ಪಿಡುಗು ಇನ್ನೂ ಜೀವಂತವಾಗಿದ್ದು, ಅದಕ್ಕೆ ತಡೆ ಹಾಕಲು ಮತ್ತಷ್ಟು ಶ್ರಮ ಅಗತ್ಯ.

ಬಾಲ್ಯವಿವಾಹ ಪ್ರಕರಣಗಳ ಬಗ್ಗೆ ಮಾಹಿತಿ ಬಂದ ತಕ್ಷಣ ಸ್ಥಳಕ್ಕೆ ತೆರಳಿ ತಡೆಯುವ ಕೆಲಸ ಒಂದೆಡೆಯಾದರೆ, ಮದುವೆ ತಡೆದ ಮಕ್ಕಳಿಗೆ 18 ವರ್ಷ ಪೂರ್ಣವಾಗುವವರೆಗೆ ಆಗಾಗ ಅವರ ಮನೆ, ಶಾಲೆಗಳಿಗೆ ಭೇಟಿ ನೀಡಿ ವಿಚಾರಣೆ ನಡೆಸುತ್ತಿದ್ದೇವೆ. ಇದರಿಂದ ಮಕ್ಕಳನ್ನು ಬಾಲ್ಯದಲ್ಲೇ ಮದುವೆಗೆ ದೂಡುವ ಪೋಷಕರ ಆಲೋಚನೆಯಲ್ಲಿ ಬದಲಾವಣೆ ತರಬಹುದು. ವೆಂಕಟಲಕ್ಷ್ಮೀ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ

 

-ತಿಪ್ಪೇಸ್ವಾಮಿ ನಾಕೀಕೆರೆ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy

Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು

Sirigere: ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

1-ddaaa

Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ

8-Holalkere

Holalkere: ತಾಲೂಕಿನಾದ್ಯಾಂತ ರಣಭೀಕರ ಮಳೆ; ರೈತರ ಮುಖದಲ್ಲಿ ಮಂದಹಾಸ

SAnehalli

Chitradurga: “ಹಿಂದೂ’ ಧರ್ಮವೇ ಅಲ್ಲ: ಸಾಣೇಹಳ್ಳಿ ಶ್ರೀ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.