ಕೋವಿಡ್‌-19 ಪ್ರಕರಣ ಹೆಚ್ಚಳ; ಅಸಮಾಧಾನ


Team Udayavani, Sep 26, 2020, 4:00 PM IST

HASAN-TYD-1

ಹೊಳೆನರಸೀಪುರ: ತಾಲೂಕಿನಲ್ಲಿ ಕೋವಿಡ್‌ ಪ್ರಕರಣ ಹೆಚ್ಚಾಗಿದ್ದು, ಜನರು ಹೆಚ್ಚಿನ ಮುಂಜಾಗ್ರತೆ ವಹಿಸಬೇಕೆಂದು ಮಾಜಿ ಸಚಿವ, ಕ್ಷೇತ್ರದ ಶಾಸಕ ಎಚ್‌.ಡಿ.ರೇವಣ್ಣ ಸಲಹೆ ನೀಡಿದರು.

ತಾಲೂಕು ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕೊರೊನೊ ಸೋಂಕಿನ ಜತೆಗೆ ಸಾವಿನ ಪ್ರಮಾಣವೂ ಹೆಚ್ಚಾಗುತ್ತಿದೆ. ಆರೋಗ್ಯ ಇಲಾಖೆ ಈ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತೆ ಸಭೆಯಲ್ಲಿ ಹಾಜರಿದ್ದ ತಾಲೂಕು ವೈದ್ಯಾಧಿಕಾರಿ ಎಚ್‌.ಎನ್‌.ರಾಜೇಶ್‌ಗೆ ಸೂಚಿಸಿದರು. ಪಟ್ಟಣದ ಕೋವಿಡ್‌ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ, ಅವಶ್ಯಕತೆ ಬಿದ್ದಲ್ಲಿ ಜಿಲ್ಲೆ ಕೇಂದ್ರ ಅಥವಾ ಇತರೆ ಪ್ರಮುಖ ಆಸ್ಪತ್ರೆಗಳಿಗೆ ಕಳುಹಿಸಿ, ಇದರಿಂದ ಸಾವಿನ ಪ್ರಮಾಣ  ತಡೆಯಬಹುದು. ಒಂದು ವೇಳೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಹೆಚ್ಚಿನ ಹಣ ಖರ್ಚಾದರೆ ಸಿಎಂ ಪರಿಹಾರ ನಿಧಿನಿಂದ ಕೊಡಿಸುವುದಾಗಿ ಹೇಳಿದರು.

ವಿಶೇಷ ಅವಕಾಶ: ಪಟ್ಟಣದ ಮಹಿಳಾ ಪಾಲಿಟೆಕ್ನಿಕ್‌ ಕಾಲೇಜಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಬದಲಾಗಿ ನೇರವಾಗಿ ಪ್ರಾಂಶುಪಾಲರನ್ನು ಭೇಟಿ ಮಾಡಿ ಸೇರ್ಪಡೆ ಆಗಲು ವಿಶೇಷ ಅವಕಾಶ ನೀಡಲಾಗಿದೆ. ಇಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರಿಗೆ ವಸತಿ ಸೌಕರ್ಯ ನೀಡಲಾಗುತ್ತಿದೆ. ಜಿಲ್ಲೆಯಿಂದ ಹೊರಗಿನವರಿಗೂ ಸೇರ್ಪಡೆಗೆ ಅವಕಾಶವಿದೆ. ಪ್ರಸ್ತುತ ವಸತಿ ನಿಲಯದಕಟ್ಟಡಕಾಮಗಾರಿ ಪೂರ್ಣಗೊಂಡಿದ್ದು, ಇನ್ನೂ15 ದಿನಗಳಲ್ಲಿ ಆರಂಭಿಸಲಾಗುತ್ತಿದೆ ಎಂದು ಹೇಳಿದರು. ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರ ವ್ಯಾಸಂಗಕ್ಕೆ ಅವಶ್ಯಕವಿರುವ ಎಲ್ಲಾ ಸೌಲಭ್ಯಗಳು ದೊರೆಯಲಿದೆ. ಜತೆಗೆ ಈ ವಸತಿ ನಿಲಯ, ಕಾಲೇಜು ಎರಡು ಒಂದು ಪ್ರಾಂಗಣದಲ್ಲಿ ಇರುವುದರಿಂದ ಹೆಣ್ಣು ಮಕ್ಕಳಿಗೆ ಯಾವುದೇ ಭಯ ಇರುವುದಿಲ್ಲ. ವ್ಯಾಸಂಗ ಮಾಡಲು ಅವಕಾಶ ಒದಗಿಸಲಾಗುತ್ತಿದೆ ಎಂದು ಹೇಳಿದರು.

ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ಪ್ರಸ್ತುತ ಪಟ್ಟಣದಲ್ಲಿರುವ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ಕಾರಿ ಗೃಹ ವಿಜ್ಞಾನ ಕಾಲೇಜು ಉತ್ತಮ ಫ‌ಲಿತಾಂಶ ತರುತ್ತಿದ್ದು, ಈ ಕಾಲೇಜಲ್ಲಿ ಓದಲು ಹಲವು ವಿಷಯಗಳು ಇವೆ. ರಾಜ್ಯದ ವಿವಿಧ ಭಾಗಗಳ ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳು ಹೊಳೆನರಸೀಪುರ ಪಟ್ಟಣದಲ್ಲಿ ಇರುವ ಗುಣಮಟ್ಟದ ಕಾಲೇಜುಗಳಲ್ಲಿ ಸೇರ್ಪಡೆ ಹೊಂದಿ, ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಸಭೆಯಲ್ಲಿ ಹಾಜರಿದ್ದ ತೋಟಗಾರಿಕೆ, ಕೃಷಿ ಇಲಾಖೆ, ಪಶು ಇಲಾಖೆ ಅಧಿಕಾರಿಗಳಿಗೆ ಸೂಚಿಸಿ, ಸರ್ಕಾರದಿಂದ ಬರುವ ಸೌಲಭ್ಯಗಳನ್ನು ವಿತರಣೆ ಮಾಡುವಲ್ಲಿ ತಾವುಗಳು ಯಾವುದೇ ಒತ್ತಡಗಳಿಗೆ ಒಳಗಾಗದೆ, ನೈಜ ಫಲಾನುಭವಿಗಳಿಗೆ ದೊರಕಬೇಕು. ಈ ವಿಚಾರದಲ್ಲಿ ತಮಗೆ ಯಾವುದೇ ದೂರು ಬಾರದಂತೆ ಕ್ರಮಕೈಗೊಳ್ಳಿ ಎಂದು ಹೇಳಿದರು.

ಪಟ್ಟಣದಲ್ಲಿನ ಬ್ಯಾಂಕುಗಳಲ್ಲಿ ಪಶು ಸಾಲದ ಪತ್ರಗಳು ಬಹಳಷ್ಟು ಸಿದ್ಧವಾಗಿದ್ದರೂ ಪಶು ವೈದ್ಯಕೀಯ ಇಲಾಖೆ ಸಹಕಾರ ನೀಡುತ್ತಿಲ್ಲ ಎಂಬ ಆರೋಪ ಇದೆ. ಫಲಾನುಭವಿಗಳಿಗೆ ಸಾಲದ ಪತ್ರ ನೀಡಲು ಅವಶ್ಯವಾದ ಸಹಕಾರ ನೀಡುವಂತೆ ಸೂಚಿಸಿದರು. ತಾಲೂಕಿನ ಗ್ರಾಮೀಣಪ್ರದೇಶಗಳಲ್ಲಿಅಕ್ರಮಮದ್ಯಮಾರಾಟ ನಡೆಯುತ್ತಿದ್ದು, ತಡೆಗಟ್ಟುವಲ್ಲಿ ಅಬಕಾರಿ ಇಲಾಖೆ ವಿಫ‌ಲವಾಗಿದೆ. ಗ್ರಾಮೀಣ ಜನತೆ ಮದ್ಯದ ಚಟಕ್ಕೆ ದಾಸರಾಗುತ್ತಿದ್ದಾರೆ. ಈ ಬಗ್ಗೆ ಅಬಕಾರಿ ಇಲಾಖೆ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕಲು ಮುಂದಾಗಬೇಕೆಂದರು.

ಸಭೆಯಲ್ಲಿ ತಾಪಂ ಇಒ ಕೆ.ಯೋಗೇಶ್‌, ತೋಟಗಾರಿಕೆ ಇಲಾಖೆಯ ಅಧಿಕಾರಿ ಭವ್ಯಾ, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಸ್ವಪ್ನಾ, ಪಶುವೈದ್ಯಾಧಿಕಾರಿ ಡಾ.ತಿಪ್ಪೇಸ್ವಾಮಿ, ಅಬಕಾರಿ ಇಲಾಖೆಯ ಇನ್ಸ್‌ಪೆಕ್ಟರ್‌ ಶಂಕರಪ್ಪ, ರೇಷ್ಮೆ ಅಧಿಕಾರಿ ನಟರಾಜ್‌, ಕಾರ್ಮಿಕಅಧಿಕಾರಿಮಂಗಳಗೌರಿ,ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK-Shivakumar

Yettinahole: ನಮ್ಮ ಸರಕಾರದ ಸಾಕ್ಷಿಗುಡ್ಡೆ ಎತ್ತಿನಹೊಳೆ: ಡಿಸಿಎಂ ಡಿ.ಕೆ. ಶಿವಕುಮಾರ್‌

Yettinahole Project: ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Yettinahole Project: ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Sakleshpura ಇಂದಿನಿಂದ ನೀರೆತ್ತಿನ ಹೊಳೆ; ಸಿದ್ದು 2.0 ಸರಕಾರದ ಅತೀ ದೊಡ್ಡ ಭರವಸೆ ಜಾರಿ

Sakleshpura ಇಂದಿನಿಂದ ನೀರೆತ್ತಿನ ಹೊಳೆ; ಸಿದ್ದು 2.0 ಸರಕಾರದ ಅತೀ ದೊಡ್ಡ ಭರವಸೆ ಜಾರಿ

HDD-LARGE

HD Deve Gowda: ರಾಜ್ಯ ವಿದ್ಯಮಾನದ ಕುರಿತು ಈಗೇನೂ ಹೇಳಲಾರೆ

Devegowda

Hasana: ನಾಲ್ಕು ತಿಂಗಳ ಬಳಿಕ ತವರು ಜಿಲ್ಲೆಗೆ ಆ.31ರಂದು ದೇವೇಗೌಡ ಭೇಟಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.