ಇಂದಿನಿಂದ ಗ್ರಾಮೀಣ ಭಾಗಗಳಲ್ಲಿ ಕೋವಿಡ್‌-19 ಪರೀಕ್ಷೆ


Team Udayavani, Sep 28, 2020, 12:31 PM IST

ಇಂದಿನಿಂದ ಗ್ರಾಮೀಣ ಭಾಗಗಳಲ್ಲಿ  ಕೋವಿಡ್‌-19 ಪರೀಕ್ಷೆ

ಬಂಟ್ವಾಳ, ಸೆ. 27: ದ.ಕ. ಜಿಲ್ಲೆಯಲ್ಲಿ ಕೋವಿಡ್‌- 19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅದರ ನಿಯಂತ್ರಣದ ದೃಷ್ಟಿಯಿಂದ ಗ್ರಾಮೀಣ ಭಾಗಗಳಲ್ಲಿ ಕೊರೊನಾ ತಪಾಸಣೆ ನಡೆಸುವುದಕ್ಕೆ ನಿರ್ಧರಿಸಲಾಗಿದ್ದು, ಸೆ. 28ರಿಂದ ಜಿಲ್ಲೆಯ ಎಲ್ಲ ತಾಲೂಕುಗಳ ವಿವಿಧ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೋವಿಡ್‌ ಪರೀಕ್ಷೆ ನಡೆಯಲಿದೆ.

ಕೊರೊನಾ ಪರೀಕ್ಷೆ ನಡೆಸುವ ದೃಷ್ಟಿಯಿಂದ ಈಗಾಗಲೇ ಆರೋಗ್ಯ ಇಲಾಖೆ ಹಾಗೂ ಗ್ರಾ.ಪಂ.ಗಳು ಸಿದ್ಧತೆ ಮಾಡಿಕೊಂಡಿದ್ದು, ಆಯಾಯ ಪಿಡಿಒ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳ ಉಸ್ತುವಾರಿಯಲ್ಲಿ ತಪಾಸಣೆ ನಡೆಯಲಿದೆ. ಪ್ರಸ್ತುತ ಈ ತಪಾಸಣೆ ಕಡ್ಡಾಯವಿಲ್ಲವಾಗಿದ್ದು, ಜನತೆ ಸ್ವಇಚ್ಛೆಯಿಂದ ತಪಾಸಣೆ ಮಾಡಿಸಿಕೊಳ್ಳಬಹುದಾಗಿದೆ. ಆರೋಗ್ಯ ತೊಂದರೆ (ಹೈರಿಸ್ಕ್) ಇರುವವರು ತಪಾಸಣೆ ನಡೆಸುವುದು ಉತ್ತಮವಾಗಿದೆ. ಇಲ್ಲಿ ಪಾಸಿಟಿವ್‌ ಬಂದಲ್ಲಿ ಮುಂದಿನ ಚಿಕಿತ್ಸೆಗೆ ಕ್ರಮ ಕೈಗೊಳ್ಳಲಾಗುತ್ತದೆ.

ಪರೀಕ್ಷೆಗೆ ಮುನ್ನ ಒಟಿಪಿ : ಪ್ರತಿಯೊಬ್ಬರ ಪರೀಕ್ಷೆ ನಡೆಸುವ ಮುನ್ನ ಅವರಿಗೆ ಒಂದು ಗುರುತು ಸಂಖ್ಯೆ (ಐಡಿ)ಯನ್ನು ಮಾಡಲಾಗುತ್ತಿದ್ದು, ಅದಕ್ಕೆ ಒಂದು ಒಟಿಪಿ ಇರುತ್ತದೆ. ಹೀಗಾಗಿ ಪರೀಕ್ಷೆಗೆ ತೆರಳುವವರ ಬಳಿ ಮೊಬೈಲ್‌ ಇರಬೇಕಾಗುತ್ತದೆ.   ಒಂದು ಮನೆಯಿಂದ ಒಂದಕ್ಕಿಂತ ಹೆಚ್ಚಿನ ಮಂದಿ ತೆರಳುವುದಾದರೆ ಒಂದೇ ಮೊಬೈಲ್‌ ಸಾಕಾಗುತ್ತದೆ. ಪ್ರತಿಯೊಬ್ಬರ ಪರೀಕ್ಷೆಯು ಗುಪ್ತ ಕಾರ್ಯಾಚರಣೆ (ಕಾನ್ಫಿಡೆನ್ಶಿಯಲ್‌)ಯಾಗಿದ್ದು, ಪರೀಕ್ಷೆಗೆ ಕಳುಹಿಸುವ ವೇಳೆಗೆ ಐಡಿ ಸಂಖ್ಯೆ ಮಾತ್ರ ಕಳುಹಿಸಲಾಗುತ್ತದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಬಂಟ್ವಾಳ ತಾ|ನ 58 ಗ್ರಾ.ಪಂ.ಗಳು, 2 ನಗರ ಸ್ಥಳೀಯಾಡಳಿತ ಸಂಸ್ಥೆ ವ್ಯಾಪ್ತಿಯಲ್ಲೂ ತಪಾಸಣೆ ನಡೆಯಲಿದೆ. ತಾ|ನ ಅಡ್ಯನಡ್ಕ ಪ್ರಾ. ಆ.ಕೇಂದ್ರ ವ್ಯಾಪ್ತಿಯಲ್ಲಿ 2 ಗ್ರಾ.ಪಂ., ಅಳಿಕೆಯಲ್ಲಿ 1, ಬೆಂಜನಪದವು 3, ದೈವಸ್ಥಳ 3, ಕಲ್ಲಡ್ಕ ಬಾಳ್ತಿಲ 3, ಕನ್ಯಾನ 2, ಕುರ್ನಾಡು 5, ಮಾಣಿ 9, ಮಂಚಿ 4, ನಾವೂರು 1, ಪಂಜಿಕಲ್ಲು 2, ಪೆರುವಾಯಿ 2, ಪುದು 4, ಪುಂಜಾಲಕಟ್ಟೆ, ರಾಯಿ 5, ಸಜೀಪನಡು 3, ವಾಮದಪದವು 2 ಗ್ರಾ.ಪಂ.ಗಳು, ವಿಟ್ಲ ಪ.ಪಂ. ಸಹಿತ 5, ಜತೆಗೆ ನಗರ ಭಾಗದಲ್ಲಿಯೂ ತಪಾಸಣೆ ನಡೆಯಲಿದ್ದು, ಬಂಟ್ವಾಳ ನಗರ ಆರೋಗ್ಯ ಕೇಂದ್ರದಲ್ಲಿ 4 ಗ್ರಾಮಗಳ ನಿವಾಸಿಗಳಿಗೆ ತಪಾಸಣೆ ನಡೆಯಲಿದೆ.

ಪ್ರತಿಯೊಂದು ಕಡೆಯೂ ಸ್ಥಳೀಯ ಗ್ರಾ.ಪಂ. ಪಿಡಿಒಗಳು ಹಾಗೂ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ನಿಗದಿತ ಸ್ಥಳದಲ್ಲಿ ಕೋವಿಡ್‌-19 ತಪಾಸಣೆ ನಡೆಯುತ್ತದೆ. ತಪಾಸಣೆ ಮೊದಲು ಒಟಿಪಿ ಬರುವುದರಿಂದ ಮೊಬೈಲ್‌ ಬೇಕಾಗುತ್ತದೆ. ಸ್ವಇಚ್ಛೆಯಿಂದ ತಪಾಸಣೆ ಮಾಡಿಸಿಕೊಳ್ಳುವುದಕ್ಕೆ ತಿಳಿಸಲಾಗಿದೆ.   -ಡಾ| ದೀಪಾ ಪ್ರಭು  ತಾಲೂಕು ಆರೋಗ್ಯಾಧಿಕಾರಿ, ಬಂಟ್ವಾಳ

ಜಿಲ್ಲಾಡಳಿತದ ಸೂಚನೆಯಂತೆ ಸೆ. 28ರಂದು ನಿಗದಿಪಡಿಸಲಾದ ಗ್ರಾ.ಪಂ. ಮತ್ತು ಪುತ್ತೂರು ನಗರಸಭೆಯಲ್ಲಿ ಕೋವಿಡ್‌ ಪರೀಕ್ಷೆ ನಡೆಯಲಿದೆ. ಸಾರ್ವಜನಿಕರು ಬಂದು ತಪಾಸಣೆ ಮಾಡಿಸಿಕೊಳ್ಳಬಹುದು. ಬಂದ್‌ ಪರಿಣಾಮ ಭೇಟಿ ನೀಡಿದವರ ಸಂಖ್ಯೆ ಕಡಿಮೆಇದ್ದಲ್ಲಿ ಇನ್ನೊಂದು ದಿನ ತಪಾಸಣೆಗೆ ವ್ಯವಸ್ಥೆ ಕಲ್ಪಿಸಲಾಗುವುದು. -ಅಶೋಕ್‌ ಕುಮಾರ್‌ ರೈ  ತಾಲೂಕು ಆರೋಗ್ಯಾಧಿಕಾರಿ, ಪುತ್ತೂರು

ಪರೀಕ್ಷೆ ಕಡ್ಡಾಯವಿಲ್ಲದಿದ್ದರೂ 60 ವರ್ಷ ಪ್ರಾಯ ಮೇಲ್ಪಟ್ಟವರು ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ. ಅಸೌಖ್ಯದಿಂದ ಬಳಲುತ್ತಿರುವವರು, ಬಿಪಿ, ಮಧುಮೇಹ, ಹೃದಯ ಸಂಬಂಧಿ ಕಾಯಿಲೆ, ಆಸ್ಪತ್ರೆಯಲ್ಲಿರುವ ರೋಗಿಗಳ ಪ್ರಾಥಮಿಕ ಸಂಪರ್ಕದಲ್ಲಿರುವವರು ಹಾಗೂ 10 ವರ್ಷ ಪ್ರಾಯದೊಳಗಿನ ಮಕ್ಕಳು ಪರೀಕ್ಷೆಗೊಳಪಡಿಸುವುದು ಉತ್ತಮ. ಇದರಿಂದ ಮುಂದಿನ ಅಗತ್ಯ ಕ್ರಮ ಕೈಗೊಳ್ಳಲು ಅನುಕೂಲವಾಗಲಿದೆ. -ಡಾ| ಕಲಾಮಧು ತಾಲೂಕು ಆರೋಗ್ಯಾಧಿಕಾರಿ, ಬೆಳ್ತಂಗಡಿ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.