ಶೀಘ್ರದಲ್ಲೇ ಪೊಲೀಸ್‌ ಠಾಣೆಗಳು ಮೇಲ್ದರ್ಜೆಗೆ

ಮೇಲ್ದರ್ಜೆಗೇರಿದ ಠಾಣೆಗಳಲ್ಲಿ ಇನ್‌ಸ್ಪೆಕ್ಟರ್‌ಗಳ ನೇಮಕ

Team Udayavani, Sep 28, 2020, 12:51 PM IST

udupi-tdy-1

ಉಡುಪಿ, ಸೆ. 27: ರಾಜ್ಯದ ಕಾನೂನು ಸುವ್ಯವಸ್ಥೆ ನಿರ್ವಹಣೆ ಹಾಗೂ ಅಪರಾಧ ಪ್ರಕರಣಗಳ ಪರಿಣಾಮಕಾರಿ ತನಿಖೆಗಾಗಿ ಪೊಲೀಸ್‌ ಠಾಣೆಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ.

ಈ ಪೈಕಿ ಜಿಲ್ಲೆಯ ಒಂದು ಠಾಣೆ  ಸೇರಿದಂತೆ ಒಟ್ಟು 16 ಜಿಲ್ಲೆಗಳ 56 ಪೊಲೀಸ್‌ ಠಾಣೆಗಳು ಮೇಲ್ದರ್ಜೆಗೇರಲಿವೆ. ಮೇಲ್ದರ್ಜೆಗೇರಿಸುವ ಪ್ರಕ್ರಿಯೆಗಳು ಶೀಘ್ರದಲ್ಲಿಯೇ ರಾಜ್ಯಾದ್ಯಂತ ಹಂತ ಹಂತವಾಗಿ ಕಾರ್ಯರೂಪಕ್ಕೆ ಬರಲಿವೆ.

ಉಡುಪಿ ವೃತ್ತ ಠಾಣಾ ವ್ಯಾಪ್ತಿಯಲ್ಲಿ  ಪ್ರಸ್ತುತ ನಗರ, ಸಂಚಾರ ಹಾಗೂ ಮಲ್ಪೆ ಠಾಣೆಗಳಿವೆ. ಈ ಪೈಕಿ ಉಡುಪಿ  ನಗರಠಾಣೆಯನ್ನು ಮೇಲ್ದರ್ಜೆಗೇರಿಸಲಾಗಿದೆ. ಉಡುಪಿ ಸಂಚಾರ ಹಾಗೂ ಮಲ್ಪೆ  ಠಾಣೆಗಳು ಉಡುಪಿ ವೃತ್ತ ಠಾಣೆಯೊಳಗೆ  ಬರಲಿವೆ. ದ.ಕ. ಜಿಲ್ಲೆಯಿಂದ ಬಂಟ್ವಾಳ ವೃತ್ತ ವ್ಯಾಪ್ತಿಯಲ್ಲಿ ಇರುವ ಬಂಟ್ವಾಳ ನಗರ,  ಬಂಟ್ವಾಳ ಗ್ರಾಮಾಂತರ, ಬಂಟ್ವಾಳ ಸಂಚಾರ, ವಿಟ್ಲ ಪೊಲೀಸ್‌ ಠಾಣೆಗಳಿವೆ. ಈ ಪೈಕಿ ಬಂಟ್ವಾಳ ನಗರ ಹಾಗೂ ವಿಟ್ಲ ಠಾಣೆಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ಈ ಠಾಣೆಗಳು ಮೇಲ್ದರ್ಜೆಗೆ ಏರಿದ ಬಳಿಕ ಬಂಟ್ವಾಳ ವೃತ್ತ ಠಾಣೆಯ ಪರಿಮಿತಿಯಲ್ಲಿ ಬಂಟ್ವಾಳ ಗ್ರಾಮಾಂತರ ಹಾಗೂ ಸಂಚಾರ ಠಾಣೆಗಳು ಇರಲಿವೆ.

ಪದನಾಮ ನವೀಕರಣಕ್ಕೆ ಅವಕಾಶ :  ಪೊಲೀಸ್‌ ಠಾಣೆಗಳು ಮೇಲ್ದರ್ಜೆಗೆ ಏರಿದ ಬಳಿಕ ವೃತ್ತದ ಹೆಸರನ್ನು ಬದಲಿಸಲು ಅವಕಾಶ ನೀಡಲಾಗಿದೆ. ಅದರಂತೆ ಉಡುಪಿ ವೃತ್ತವನ್ನು ಮಲ್ಪೆ ವೃತ್ತವನ್ನಾಗಿ ಹಾಗೂ ಬಂಟ್ವಾಳ ವೃತ್ತವನ್ನು ಬಂಟ್ವಾಳ ಗ್ರಾಮಾಂತರ ವೃತ್ತವನ್ನಾಗಿ ಮರು ಪದನಾಮಕರಿಸಬಹುದಾಗಿದೆ.  ಈ ಆಯ್ಕೆಯನ್ನು ಆಯಾ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ನಿರ್ಧರಿಸಲಿದ್ದಾರೆ.

ಇನ್‌ಸ್ಪೆಕ್ಟರ್‌ಗಳ  ನೇಮಕ : ಮೇಲ್ದರ್ಜೆಗೆ ಆಯ್ಕೆಯಾಗಿರುವ ಪೊಲೀಸ್‌ ಠಾಣೆಗಳಲ್ಲಿ ಪ್ರಸ್ತುತ  ಸಬ್‌ ಇನ್‌ಸ್ಪೆಕ್ಟರ್‌ಗಳ ಉಸ್ತುವಾರಿ ಇದೆ. ಸರ್ಕಲ್‌ ಇನ್‌ಸ್ಪೆಕ್ಟರ್‌ಗಳ ಅಧೀನದಲ್ಲಿ ಇವರು ಕಾರ್ಯನಿರ್ವಹಿಸುತ್ತಿದ್ದರು. ಇನ್‌ಸ್ಪೆಕ್ಟರ್‌ಗಳ ಅನುಮತಿ ಇಲ್ಲದೆ ಅಥವಾ ಅವರ ಗಮನಕ್ಕೆ ತಾರದೆ ನೇರವಾಗಿ ಯಾವುದೇ ರೀತಿಯ ನಿರ್ಧಾರ ತೆಗೆದುಕೊಳ್ಳಲು ಸಬ್‌ಇನ್‌ಸ್ಪೆಕ್ಟರ್‌ಗಳಿಗೆ ಅಧಿಕಾರವಿರಲಿಲ್ಲ. ಇದರಿಂದಾಗಿ ಕಾನೂನು ಸುವ್ಯವಸ್ಥೆ ಹಾಗೂ ಅಪರಾಧ ಪ್ರಕರಣಗಳ ನಿರ್ವಹಣೆ ಪರಿಣಾಮಕಾರಿಯಾಗುತ್ತಿರಲಿಲ್ಲ. ಆದ್ದರಿಂದ ಠಾಣೆಗಳನ್ನು ಮೇಲ್ದರ್ಜೆಗೇರಿಸಿ ಇನ್‌ಸ್ಪೆಕ್ಟರ್‌ಗಳನ್ನು ನಿಯೋಜಿಸಲು ನಿರ್ಧರಿಸಲಾಗಿದೆ. ಮೇಲ್ದರ್ಜೆಗೇರುವ ಠಾಣೆಗಳಲ್ಲಿ ಸಬ್‌ಇನ್‌ಸ್ಪೆಕ್ಟರ್‌ಗಳನ್ನೂ ನೇಮಕ ಮಾಡಲಾಗುತ್ತದೆ.

ಪ್ರಕರಣಗಳ ಪರಿಣಾಮಕಾರಿ ತನಿಖೆಗಾಗಿ ರಾಜ್ಯದ 56  ಪೊಲೀಸ್‌ ಠಾಣೆಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ಶೀಘ್ರದಲ್ಲಿ ಈ ಠಾಣೆಗಳಿಗೆ ಇನ್‌ಸ್ಪೆಕ್ಟರ್‌ಗಳ ನೇಮಕ ಆಗಲಿದೆ. -ಪ್ರವೀಣ್‌ ಸೂದ್‌,  ರಾಜ್ಯ ಪೊಲೀಸ್‌ ಮಹಾನಿರ್ದೇಶಕರು

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.