ಕೋವಿಡ್‌ನಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ ಕಲಾವಿದರು


Team Udayavani, Sep 28, 2020, 5:14 PM IST

ಕೋವಿಡ್‌ನಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ ಕಲಾವಿದರು

ಸಾಂದರ್ಭಿಕ ಚಿತ್ರ

ತೆಲಸಂಗ: ಕೋವಿಡ್‌ ಬಂದಾಗಿನಿಂದ ವೃತ್ತಿ ರಂಗಭೂಮಿ ಕಲಾವಿದರ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು, ಇಂಥಹ ಸಂದಿಗ್ಧ ಸ್ಥಿತಿಯಲ್ಲಿ ಕಲಾವಿದರು ರಂಗ ವೃತ್ತಿಯನ್ನು ತೊರೆಯದಂತೆ ನೋಡಿಕೊಳ್ಳದೆ ಇದ್ದಲ್ಲಿ ರಂಗಭೂಮಿ ಬಡವಾಗುವುದರಲ್ಲಿ ಸಂದೇಹವಿಲ್ಲ ಎಂದು ಖ್ಯಾತ ವೃತ್ತಿ ರಂಗಭೂಮಿ ಹಾಸ್ಯ ಕಲಾವಿದ ಸಿದ್ದು ನಲವತ್ತವಾಡ ಹೇಳಿದರು.

ಗ್ರಾಮದಲ್ಲಿ ಡಾ.ಪಂಡಿತ ಪುಟ್ಟರಾಜ ಕವಿ ಗವಾಯಿಗಳ ಕಲಾ ಸಂಘದಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಈಗ ಕೋವಿಡ್‌ನಿಂದಾಗಿ ನಾಟಕ ಕಂಪನಿಗಳು ಬಂದ್‌ ಆಗಿದ್ದರಿಂದ ಬದುಕಿಗಾಗಿ ವೃತ್ತಿ ರಂಗಭೂಮಿ ಕಲಾವಿದರು ಬೇರೆ ಉದ್ಯೋಗ ಅರಸಿ ಹೋಗುತ್ತಿದ್ದಾರೆ. ಅನ್ಯ ಉದ್ಯೋಗ ಅರಸಿ ಹೋದವರು ಮತ್ತೆ  ರಂಗಭೂಮಿಗೆ ಮರಳದೇ ಹೋದರೆ ನಾಡಿನ ಸಂಸ್ಕೃತಿಯ ಸಂಸ್ಕಾರದ ಶಕ್ತಿಯಾದ ರಂಗಭೂಮಿ ಮತ್ತಷ್ಟು ಬಡವಾಗಲಿದೆ. ಟಿವಿ ಮತ್ತು ಸಿನಿಮಾ ಹಾವಳಿಗೆ ಈ ಮೊದಲೇ ರಾಜ್ಯದಲ್ಲಿ ಬೆರಳೆಣಿಕೆಯಷ್ಟೆ ನಾಟಕ ಕಂಪನಿಗಳು ಉಳಿದುಕೊಂಡಿದ್ದು, ವೃತ್ತಿ ರಂಗಭೂಮಿಗೆ ಕಲಾವಿದರ ಕೊರತೆ ಇತ್ತಿಚೀನ ದಿನಗಳಲ್ಲಿ ಹೆಚ್ಚಿದೆ. ಈಗ ಕೋವಿಡ್‌ನಿಂದಾಗಿ ಕನ್ನಡ ರಂಗಭೂಮಿಗೆ ದೊಡ್ಡ ಹೊಡೆತ ಬಿದ್ದಿದ್ದು, ಸರಕಾರ ವೃತ್ತಿ ರಂಗಭೂಮಿ ಕಲಾವಿದರ ಕೈ ಹಿಡಿಯದೇ ಹೋದಲ್ಲಿ ಮುಂಬರುವ ದಿನಗಳಲ್ಲಿ ವೃತ್ತಿ ರಂಗಭೂಮಿ ಇದ್ದವು ಎಂದು ಕಥೆಗಳಲ್ಲಿ ಕೇಳಬೇಕಾದೀತು ಎಂದು ಎಚ್ಚರಿಸಿದರು.

ನಾಟಕಕಾರ ಅಮೋಘ ಖೊಬ್ರಿ ಮಾತನಾಡಿ, ಜೀವನದುದ್ದಕ್ಕೂ ತನ್ನನ್ನು ರಂಗಭೂಮಿ ಸೇವೆಗೆ ತೊಡಗಿಸಿಕೊಂಡ ಸಿದ್ದು ನಲವತ್ತವಾಡ, ಇವತ್ತಿಗೂ ನಾಟಕಗಳ ಜೀವಂತಿಕೆಗೆ ಅಪಾರ ಸೇವೆ ಸಲ್ಲಿಸುತ್ತಿದ್ದಾರೆ. ಉತ್ತರ ಕರ್ನಾಟಕದಲ್ಲಿ ರಂಗ ಜೀವಂತಿಕೆಗೆ ಶ್ರಮಿಸಿದವರಲ್ಲದೆ ಕ್ಯಾಸೆಟ್‌ ನಾಟಕಗಳಿಗೆ ಧ್ವನಿ ನೀಡುವ ಮೂಲಕ ಕ್ಯಾಸೆಟ್‌ ಕಿಂಗ್‌ ಎಂದು ಬಿರುದು ಪಡೆದವರು. ಹಾಸ್ಯ ಪಾತ್ರಗಳ ಮೂಲಕ ಜನರಲ್ಲಿ ನಾಟಕ ರುಚಿ ಹೆಚ್ಚುವಂತೆ ಮಾಡಿ ಎಲೆಮರೆ ಕಾಯಿಯಂತೆ ಕಲೆ ಮತ್ತು ಕಲಾವಿದರನ್ನು ಬೆಳೆಸುವ ಕೆಲಸ ಮಾಡುತ್ತಿದ್ದಾರೆ. ಕನ್ನಡ ವೃತ್ತಿ ರಂಗಭೂಮಿಯ ಹಿರಿಯ ಶಕ್ತಿ ಸಿದ್ದು ಇವರನ್ನು ಸರಕಾರ ಗುರುತಿಸಿ ಗೌರವಿಸಬೇಕಿದೆ ಎಂದರು.

ಹಿರಿಯರಾದ ಐ.ಎಲ್‌.ಕುಮಠಳ್ಳಿ, ತಾಪಂ ಮಾಜಿ ಸದಸ್ಯ ಅರವಿಂದ ಉಂಡೋಡಿ, ಧರೆಪ್ಪ ಮಾಳಿ, ಆನಂದ ಥೈಕಾರ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ: 12 ತಾಸು ಈಜಿ ತಾಯಿ-ಮಗ ದಾಖಲೆ

ಬೆಳಗಾವಿ: 12 ತಾಸು ಈಜಿ ತಾಯಿ-ಮಗ ದಾಖಲೆ

Jaya-Swamiji

Reservation: ಬೆಳಗಾವಿಯಲ್ಲಿ ಸೆ.22ಕ್ಕೆ ಲಿಂಗಾಯತ ಪಂಚಮಸಾಲಿ ವಕೀಲರ ಬೃಹತ್ ಸಮಾವೇಶ

Belagavi: ಸಾಲಬಾಧೆಯಿಂದ ಬೇಸತ್ತು ನೇಕಾರ ಆತ್ಮಹತ್ಯೆ…

Belagavi: ಸಾಲಬಾಧೆಯಿಂದ ಬೇಸತ್ತು ನೇಕಾರ ಆತ್ಮಹತ್ಯೆ…

Belagavi: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

Belagavi: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

Coat ಧರಿಸಿ ಕೋರ್ಟ್ ಗೆ ಆಗಮಿಸಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ

Missing Case; ಕೋಟ್ ಧರಿಸಿ ಕೋರ್ಟ್ ಗೆ ಆಗಮಿಸಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.