![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 29, 2020, 8:10 AM IST
ಬಳ್ಳಾರಿ: ಜಿಲ್ಲೆಯ ಹರಪನಹಳ್ಳಿ ತಾಲೂಕು ಶಿಂಗ್ರಿಹಳ್ಳಿ ಗ್ರಾಮದಲ್ಲಿ ದಂಪತಿಗಳಿಬ್ಬರೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ನಡೆದಿದೆ.
ಪತ್ನಿ ಸುಧಾ (30), ಪತಿ ತೆಲಿಗರ ಹನುಮಂತಪ್ಪ (33) ಆತ್ಮಹತ್ಯೆಗೆ ಶರಣಾದ ದಂಪತಿ.
ಮಕ್ಕಳಾಗದ ಬೇಸರ ಸೇರಿ ಇನ್ನಿತರೆ ಕೌಟುಂಬಿಕ ವಿಚಾರಗಳಿಗೆ ಸಂಬಂಧಿಸಿದಂತೆ ಪತಿ-ಪತ್ನಿಯರ ನಡುವೆ ನಿತ್ಯ ಕಲಹವಾಗುತ್ತಿದ್ದು ಇದರಿಂದ ಬೇಸತ್ತ ಪತ್ನಿ ಸುಧಾ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ, ಮರಣೋತ್ತರ ಪರೀಕ್ಷೆಯ ವೇಳೆ ಮೃತ ಪತ್ನಿ ಸುಧಾ ಮೂರು ತಿಂಗಳ ಗರ್ಭವತಿಯಾಗಿದ್ದಾಳೆ ಎಂಬುದು ತಿಳಿದಿದೆ.
ಇದರಿಂದ ಭಯಭೀತನಾದ ಪತಿ ತೆಲಿಗರ ಹನುಮಂತ, ಪತ್ನಿ ಆತ್ಮಹತ್ಯೆ ಪ್ರಕರಣದ ಆರೋಪ ತನ್ನ ಮೇಲೆ ಬರುವುದು ಎಂದು ತನ್ನ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಪೊಲೀಸ್ ಮೂಲಗಳು ತಿಳಿಸಿವೆ.
ಕಳೆದ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿಗಳಿಬ್ಬರ ಜೀವನ ಆತ್ಮಹತ್ಯೆಯಲ್ಲಿ ಅಂತ್ಯವಾಗಿದೆ. ಈ ಕುರಿತು ಹಲವಾಗಲು ಪೊಲೀಸ್ ಠಾಣೆಯಲ್ಲಿ ಹುಡುಗಿಯ ತಂದೆ ಮತ್ತು ಹುಡುಗನ ಸಹೋದರ ಪ್ರತ್ಯೇಕ ದೂರು-ಪ್ರತಿದೂರು ನೀಡಿದ್ದು, ಎರಡೂ ಕಡೆಯಿಂದ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.