![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 29, 2020, 11:23 PM IST
ಅಬುದಾಭಿ: ಸನ್ ರೈಸರ್ಸ್ ಹೈದ್ರಾಬಾದ್ ನೀಡಿದ 163 ರನ್ ಸವಾಲನ್ನು ಬೆನ್ನಟ್ಟುವಲ್ಲಿ ವಿಫಲವಾದ ಡೆಲ್ಲಿ ಕ್ಯಾಪಿಟಲ್ಸ್ 15 ರನ್ ಗಳ ಸೋಲನ್ನು ಕಂಡಿದೆ.
ಧವನ್, ಪಂತ್, ಅಯ್ಯರ್, ಪೃಥ್ವೀ ಶಾ, ಹೈಟ್ಮೇರ್ ರಂತಹ ಸ್ಪೆಷಲಿಸ್ಟ್ ಬ್ಯಾಟ್ಸ್ ಮನ್ ಗಳನ್ನು ಹೊಂದಿದ್ದರೂ ಡೆಲ್ಲಿ ಪಡೆ ಹೈದ್ರಾಬಾದ್ ತಂಡದ ಶಿಸ್ತುಬದ್ಧ ಬೌಲಿಂಗ್ ಮತ್ತು ಉತ್ತಮ ಫೀಲ್ಡಿಂಗ್ ಗೆ ಬೆದರಿ 20 ಓವರ್ ಗಳಲ್ಲಿ 7 ವಿಕೆಟ್ ಗಳನ್ನು ಕಳೆದುಕೊಂಡು 147 ರನ್ ಗಳಷ್ಟನ್ನೇ ಕಲೆ ಹಾಕಲು ಶಕ್ತವಾಯಿತು.
162 ರನ್ ಗುರಿಯನ್ನು ಚೇಸ್ ಮಾಡಲಾರಂಭಿಸಿದ ಡೆಲ್ಲಿಗೆ ಪೃಥ್ವಿ ಶಾ ವಿಕೆಟ್ 2 ರನ್ ಆಗುವಷ್ಟರಲ್ಲಿ ಉರುಳುವುದರೊಂದಿಗೆ ಆಘಾತ ಪ್ರಾರಂಭವಾಯಿತು.
ಬಳಿಕ, 17 ರನ್ ಮಾಡಿದ ಕಪ್ತಾನ ಶ್ರೇಯಸ್ ಅಯ್ಯರ್ ಸಹ ಔಟಾದರು. ಆದರೆ, ಅನುಭವಿ ಬ್ಯಾಟ್ಸ್ ಮನ್ ಶಿಖರ್ ಧವನ್ (34) ಹಾಗೂ ರಿಷಭ್ ಪಂತ್ (32) ತಂಡವನ್ನು ಆಧರಿಸುವ ಕೆಲಸವನ್ನು ಮಾಡಿದರು.
ಇದನ್ನೂ ಓದಿ: ಬೇರ್ ಸ್ಟೋ ಫಿಪ್ಟೀ ; ವಿಲಿಯಮ್ಸನ್ ಭರ್ಜರಿ ಬ್ಯಾಟಿಂಗ್ ; ಡೆಲ್ಲಿಗೆ 163 ರನ್ ಟಾರ್ಗೆಟ್
ಆದರೆ ಡೆಲ್ಲಿ ತಂಡದ ಯಾವೊಬ್ಬ ಬ್ಯಾಟ್ಸ್ ಮನ್ ಸಹ ಪಂದ್ಯದ ಯಾವುದೇ ಹಂತದಲ್ಲೂ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಲು ಸಾಧ್ಯವಾಗಲೇ ಇಲ್ಲ. ಇದಕ್ಕೆ ಹೈದ್ರಾಬಾದ್ ತಂಡದ ಶಿಸ್ತಿನ ಬೌಲಿಂಗ್ ಅವಕಾಶ ನೀಡಲಿಲ್ಲ. ಹಾಗಾಗಿ ಈ ಸಾಮಾನ್ಯ ಗುರಿಯನ್ನೂ ಸಹ ಚೇಸ್ ಮಾಡಲು ಸಾಧ್ಯವಾಗಲಿಲ್ಲ.
ಇಂದಿನ ಪಂದ್ಯದಲ್ಲಿ ಹೈದ್ರಾಬಾದ್ ಬೌಲರ್ ಗಳ ಪರ್ ಫಾರ್ಮೆನ್ಸ್ ಉತ್ತಮವಾಗಿತ್ತು. ಅನುಭವಿ ಸ್ಪಿನ್ನರ್ ರಶೀದ್ ಖಾನ್ ಕೇವಲ 3.50 ಎಕಾನಮಿಯಲ್ಲಿ ಬೌಲಿಂಗ್ ಮಾಡಿ 3 ವಿಕೆಟ್ ಪಡೆಯುವ ಮೂಲಕ ಅಯ್ಯರ್ ಬಳಗವನ್ನು ಕಟ್ಟಿಹಾಕಿದರು.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಅವರಿಗೆ ಉತ್ತಮ ಸಾಥ್ ನೀಡಿದ ವೇಗಿ ಭುವನೇಶ್ವರ್ ಕುಮಾರ್ 2 ವಿಕೆಟ್ ಪಡೆದರೆ ಬ್ಯಾಟಿಂಗ್ ನಲ್ಲೂ ಮಿಂಚಿದ್ದ ಖಲೀಲ್ ಅಹಮ್ಮದ್ ಮತ್ತು ಟಿ. ನಟರಾಜನ್ ತಲಾ 1 ವಿಕೆಟ್ ಪಡೆದರು.
ಡೆಲ್ಲಿ ಪರ 34 ರನ್ ಬಾರಿಸಿದ ಶಿಖರ್ ಧವನ್ ಅವರೇ ಟಾಪ್ ಸ್ಕೋರರ್ ಎಣಿಸಿದರು. ಉಳಿದಂತೆ, ರಿಷಭ್ ಪಂತ್ (28), ಹೈಟ್ಮೇರ್ (21), ಶ್ರೇಯಸ್ ಅಯ್ಯರ್ (17), ಸ್ಟೋಯ್ನ್ಸ್ (11), ರಬಾಡ (ಔಟಾಗದೇ 7 ಎಸೆತಗಳಲ್ಲಿ 15) ರನ್ ಬಾರಿಸಿದರು.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.