ಸುಣ್ಣಬಣ್ಣ ಭಾಗ್ಯ ಕಂಡ ಮೇಲ್ಮಟ್ಟದ ಟ್ಯಾಂಕ್‌


Team Udayavani, Sep 30, 2020, 2:36 PM IST

ಸುಣ್ಣಬಣ್ಣ ಭಾಗ್ಯ ಕಂಡ ಮೇಲ್ಮಟ್ಟದ ಟ್ಯಾಂಕ್‌

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರದಲ್ಲಿ ಸುಮಾರು 30 ವರ್ಷಗಳ ಹಿಂದೆ ಕುಡಿಯಲು ನೀರು ಸಂಗ್ರಹಿಸಲು ನಿರ್ಮಿಸಿರುವ 10 ಲಕ್ಷ ಲೀ. ಸಾಮರ್ಥ್ಯದ ಮೇಲ್ಮಟ್ಟದ ಟ್ಯಾಂಕ್‌ಗೆ ಸುಣ್ಣಬಣ್ಣದ ಭಾಗ್ಯಕೂಡಿ ಬಂದಿದೆ.

ಶಿಡ್ಲಘಟ್ಟ ನಗರದ 17 ವಾರ್ಡ್‌ಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲು ಮಾಜಿ ಸಿಎಂ ದಿ.ಎಸ್‌.ಆರ್‌.ಬೊಮ್ಮಾಯಿ ಅವರ ಅಧಿಕಾರಾವಧಿಯಲ್ಲಿ ನಿರ್ಮಿಸಿರುವ ಮೇಲ್ಮಟ್ಟದ ನೀರಿನ ಟ್ಯಾಂಕ್‌ ಇತ್ತೀಚಿಗೆ ಸೋರಿಕೆಯಾಗುತಿತ್ತು. ಜೊತೆಗೆ ಸುಣ್ಣಬಣ್ಣವಿಲ್ಲದೇ ವಿಕಾರವಾಗಿ ಕಾಣುತ್ತಿದ್ದ ಬೃಹತ್‌ ಗಾತ್ರದ ಮೇಲ್ಮಟ್ಟದ ನೀರಿನ ಟ್ಯಾಂಕ್‌ ನ್ನು ಸುಣ್ಣಬಣ್ಣದಿಂದ ಕಂಗೊಳಿಸಿ ಹೊಸ ರೂಪ ನೀಡಲಾಗಿದೆ.

ಶಿಡ್ಲಘಟ್ಟ ನಗರದಲ್ಲಿ 1, 2, 3ನೇ ಕಾರ್ಮಿಕ ನಗರ,1,2ನೇ ಟಿಎಂಸಿ ಬಡಾವಣೆ, ಆಝಾದ್‌ ನಗರ, ಗಾಂಧಿನಗರ, ಸಂತೋಷನಗರ, ರಹಮತ್‌ ನಗರ ಸೇರಿದಂತೆ 17 ವಾರ್ಡ್‌ಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲು ಮೇಲ್ಮ ಟ್ಟದ ಟ್ಯಾಂಕ್‌ ಆವರಣದಲ್ಲಿ ನೀರಿನ ಕಾರಂಜಿ ನಿರ್ಮಿಸಲಾಗಿತ್ತು. ಆದರೆ ಕಾಲಕ್ರಮೇಣ ನಿರ್ವಹಣೆ ಕೊರತೆಯಿಂದ ನೀರಿನ ಕಾರಂಜಿ ಹಾಳಾಗಿ ಇದೀಗ ಕೇವಲ ಮೇಲ್ಮಟ್ಟದ ಟ್ಯಾಂಕ್‌ ಉಳಿದುಕೊಂಡಿದೆ.

ಟ್ಯಾಂಕ್‌ಗೆ ಹಲವು ವರ್ಷಗಳ ಬಳಿಕ ಅಭಿವೃದ್ಧಿ ಭ್ಯಾಗ್ಯಕಂಡು ಬಂದಿದೆ. ಆದರೆ ಟ್ಯಾಂಕಿನ ಕೆಳಗೆ ನಿರುಪಯುಕ್ತ ಗಿಡಗಂಟಿಗಳು ಬೆಳೆದಿದ್ದು, ವಿಷಜಂತುಗಳಿಗೆ ಆಶ್ರಯತಾಣವಾಗಿದೆ ಪರಿವರ್ತನೆಗೊಂಡಿದೆ. ಅಕ್ರಮ ಚಟುವಟಿಕೆ ತಾಣ: ಮೇಲ್ಮಟ್ಟದ ಟ್ಯಾಂಕ್‌ಗೆ ಗೇಟ್‌ ಅಳವಡಿಸಲಾಗಿದೆ. ಅದಕ್ಕೆ ಬೀಗ ಇಲ್ಲದೇ ಪುಂಡಪೋಕರಿಗೆ ಬೀಡಿ- ಸಿಗರೇಟ್‌, ಪಾನ್‌ಪರಾಗ್‌ ಗುಟ್ಕಾ ಸೇರಿದಂತೆ ಮದ್ಯ ಸೇವನೆಗೆ ಅಡ್ಡೆ ಮಾಡಿಕೊಂಡಿದ್ದು, ನಗರಸಭೆ ಅಧಿಕಾರಿಗಳು ಗಿಡಗಂಟಿಗಳನ್ನು ಸ್ವಚ್ಛಗೊಳಿಸಿ ಪುಂಡಪೋಕರಿಗಳು ಟ್ಯಾಂಕ್‌ ಒಳಗೆ ಪ್ರವೇಶಿಸದಂತೆ ಕಠಿಣ ಕ್ರಮ ಜರುಗಿಸಬೇಕಾಗಿದೆ.

ಶಿಡ್ಲಘಟ್ಟ ನಗರದ 1ನೇ ಟಿಎಂಸಿ ಬಡಾವಣೆ,ಕೋಟೆ ವೃತ್ತ ಹಾಗೂ ಹೆಲ್ತ್‌  ಕಾಲೋನಿಯಲ್ಲಿ ನಿರ್ಮಿಸಿರುವ ಮೇಲ್ಮಟ್ಟದ ನೀರಿನ ಟ್ಯಾಂಕ್‌ಗಳನ್ನು2019-20ನೇ ಸಾಲಿನ 14ನೇ ಹಣಕಾಸು ಸಾಮಾನ್ಯ ಮೂಲ ಅನುದಾನದಡಿ 5.5 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲಾಗುತ್ತಿದೆ. ಟ್ಯಾಂಕ್‌ ಸುತ್ತಮುತ್ತ ಸ್ವಚ್ಛತಾ ಕಾರ್ಯ ನಡೆಸಲಾಗುವುದು ಶ್ರೀನಿವಾಸ್‌, ಪೌರಾಯುಕ್ತ,

ಶಿಡ್ಲಘಟ್ಟ ನಗರದ ಹೊಸ ಪ್ರದೇಶದ 12 ವಾರ್ಡ್‌ಗಳು ಮತ್ತು ಹಳೆ ನಗರದ ವಾರ್ಡ್‌ ಸಂಖ್ಯೆ 23,10,11,15,29 ವಾರ್ಡ್‌ಗಳಿಗೆ ಮೇಲ್ಮಟ್ಟದ ಟ್ಯಾಂಕ್‌ ನಿರ್ಮಿಸಲಾಗಿದೆ. ಸುಮಾರು ವರ್ಷಗಳ ನಂತರ ಟ್ಯಾಂಕ್‌ನ್ನು ಸುಣ್ಣಬಣ್ಣದಿಂದ ಕಂಗೊಳಿಸಲಾಗುತ್ತಿದೆ. ಮುರಳಿ, ನೀರು ಸರಬರಾಜು ವಿಭಾಗ ನಗರಸಭೆ ಶಿಡ್ಲಘಟ್ಟ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapura: ಹೋಟೆಲ್ ಗೆ ನುಗ್ಗಿದ ಟಿಪ್ಪರ್; ಇಬ್ಬರು ಸಾವು

Chikkaballapura: ಹೋಟೆಲ್ ಗೆ ನುಗ್ಗಿದ ಟಿಪ್ಪರ್; ಇಬ್ಬರು ಸಾವು

ಅತ್ಯಾಚಾರಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ

Chikkaballapura: ಅತ್ಯಾ*ಚಾರಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ

1-asaas

Sidlaghatta; ಚರಂಡಿಗೆ ಉರುಳಿದ ಸರಕಾರಿ ಬಸ್: ತಪ್ಪಿದ ಅವಘಡ

1-aaaa

Chikkaballapura: ಮರು ಮದುವೆ ಒಪ್ಪಿ ವ್ಯಕ್ತಿಗೆ 7.40 ಲಕ್ಷ ರೂ. ವಂಚಿಸಿದ್ದ ಮಹಿಳೆ, ಬಂಧನ

1-PE-a1

Pradeep Eshwar; ರಾಜಕಾರಣದಲ್ಲಿ ತುಂಬಾ ಜನರನ್ನ ಡ್ಯಾನ್ಸ್ ಮಾಡಿಸಿದ್ದೀನಿ!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.