ಬಾಬ್ರಿ ಅಂತಿಮ ತೀರ್ಪಿನ ಬಗ್ಗೆ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ, ಜೋಶಿ ಪ್ರತಿಕ್ರಿಯೆ

ಡಿಸೆಂಬರ್ 6ರಂದು ಅಯೋಧ್ಯೆಯಲ್ಲಿ ನಡೆದ ಘಟನೆಯಲ್ಲಿ ಯಾವುದೇ ಸಂಚು ಇಲ್ಲ

Team Udayavani, Sep 30, 2020, 3:13 PM IST

ಬಾಬ್ರಿ ಅಂತಿಮ ತೀರ್ಪಿನ ಬಗ್ಗೆ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ, ಜೋಶಿ ಪ್ರತಿಕ್ರಿಯೆ

ನವದೆಹಲಿ: ಸುದೀರ್ಘ 28 ವರ್ಷಗಳ ನಂತರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಅಂತಿಮ ತೀರ್ಪು ಪ್ರಕಟವಾದ ನಂತರ, ಸಿಬಿಐ ವಿಶೇಷ ಕೋರ್ಟ್ ತೀರ್ಪಿನಿಂದ ತುಂಬಾ ಸಂತೋಷವಾಗಿದೆ ಎಂದು ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಬುಧವಾರ(ಸೆಪ್ಟೆಂಬರ್ 30, 2020) ಪ್ರತಿಕ್ರಿಯೆ ನೀಡಿದ್ದಾರೆ.

ಈ ತೀರ್ಪು ರಾಮ ಜನ್ಮಭೂಮಿ ಚಳವಳಿಯ ಬಗ್ಗೆ ನನ್ನ ವೈಯಕ್ತಿಕ ಮತ್ತು ಬಿಜೆಪಿ ನಂಬಿಕೆ ಮತ್ತು ಬದ್ಧತೆಯನ್ನು ಸಮರ್ಥಿಸುತ್ತದೆ ಎಂದ ಅವರು ಜೈ ಶ್ರೀರಾಮ್ ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿದ್ದಾರೆ.

ಮುರಳಿಮನೋಹರ್ ಜೋಶಿ:

ಇದೊಂದು ಕೋರ್ಟ್ ನೀಡಿದ ಐತಿಹಾಸಿಕ ತೀರ್ಪು. ಡಿಸೆಂಬರ್ 6ರಂದು ಅಯೋಧ್ಯೆಯಲ್ಲಿ ನಡೆದ ಘಟನೆಯಲ್ಲಿ ಯಾವುದೇ ಸಂಚು ಇಲ್ಲ ಎಂಬುದು ಸಾಬೀತಾಗಿದೆ. ನಮ್ಮ ರಥಯಾತ್ರೆ ಮತ್ತು ಸಭೆ ಸಂಚಿನ ಒಂದು ಭಾಗ ಅಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಬಿಜೆಪಿ ಹಿರಿಯ ಮುಖಂಡ, ಕೇಂದ್ರ ಮಾಜಿ ಸಚಿವ ಮುರಳಿ ಮನೋಹರ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ.

ಯೋಗಿ ಆದಿತ್ಯನಾಥ್:

ಬಾಬ್ರಿ ಮಸೀದಿ ಪ್ರಕರಣದಲ್ಲಿ ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ವಿಶ್ವಹಿಂದೂ ಪರಿಷತ್ ಮುಖಂಡರು, ಬಿಜೆಪಿ ನಾಯಕರು, ಸಂತರು, ಕಾರ್ಯಕರ್ತರ ಮೇಲೆ ಅಂದಿನ ಕಾಂಗ್ರೆಸ್ ಸರ್ಕಾರ ಸುಳ್ಳು ಪ್ರಕರಣ ದಾಖಲಿಸಿತ್ತು ಎಂಬುದನ್ನು ಇಂದಿನ ತೀರ್ಪು ಸಾಬೀತುಪಡಿಸಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿಕ್ರಿಯೆ ನೀಡಿದ್ದಾರೆ.

ಸೀತಾರಾಮ್ ಯೆಚೂರಿ:

ಇದೊಂದು ಸಂಪೂರ್ಣ ನ್ಯಾಯದ ಅಣಕು. ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಇದು ಸ್ವಯಂ ಪ್ರಚೋದಿತವೇ? ಬಾಬ್ರಿ ಮಸೀದಿ ಧ್ವಂಸ ಕಾನೂನಿನ ಉಲ್ಲಂಘನೆ ಎಂದು ಸುಪ್ರೀಂಕೋರ್ಟ್ ನ ಅಂದಿನ ಸಿಜೆಐ ಹೇಳಿದ್ದರು. ಈಗ ಈ ತೀರ್ಪು ಹೊರಬಿದ್ದಿರುವುದು ಶೇಮ್…ಎಂದು ಸೀತಾರಾಮ್ ಯೆಚೂರಿ ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

highcourt

Shame; ಕಾರ್ಮಿಕರ ಮಕ್ಕಳ ಹಣ ಅನ್ಯ ಉದ್ದೇಶಕ್ಕೆ: ಹೈಕೋರ್ಟ್‌ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿವಾದಿತ ಮಸೀದಿ ಕಟ್ಟಡ ನೆಲಸಮ ಪೂರ್ವಯೋಜಿತವಲ್ಲ

ವಿವಾದಿತ ಮಸೀದಿ ಕಟ್ಟಡ ನೆಲಸಮ ಪೂರ್ವಯೋಜಿತವಲ್ಲ

ಬಾಬರಿ ಪ್ರಕರಣದಲ್ಲಿ ಕೇಂದ್ರ ಸರಕಾರಗಳ ಪಾತ್ರ

ಬಾಬರಿ ಪ್ರಕರಣದಲ್ಲಿ ಕೇಂದ್ರ ಸರಕಾರಗಳ ಪಾತ್ರ

ರಾಮಮಂದಿರ, ಬಿಜೆಪಿ ಒಂದೇ ನಾಣ್ಯದ 2 ಮುಖಗಳು

ರಾಮಮಂದಿರ, ಬಿಜೆಪಿ ಒಂದೇ ನಾಣ್ಯದ 2 ಮುಖಗಳು

ರಾಷ್ಟ್ರ ಬಿಟ್ಟರೆ ಕಣ್ಮುಂದೆ ಬೇರೇನೂ ಇಲ್ಲ!

ರಾಷ್ಟ್ರ ಬಿಟ್ಟರೆ ಕಣ್ಮುಂದೆ ಬೇರೇನೂ ಇಲ್ಲ!

ಜೈ ಶ್ರೀರಾಮ್‌ ಅನುರಣನ; ನಿರ್ದೋಷಿಗಳಿಂದ, ಜಾಲತಾಣಗಳವರೆಗೆ ಭಾಜಪ ಕಾರ್ಯಕರ್ತರ ರಾಮ ಧ್ಯಾನ

ಜೈ ಶ್ರೀರಾಮ್‌ ಅನುರಣನ; ನಿರ್ದೋಷಿಗಳಿಂದ, ಜಾಲತಾಣಗಳವರೆಗೆ ಭಾಜಪ ಕಾರ್ಯಕರ್ತರ ರಾಮ ಧ್ಯಾನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.