ರಾಜ್ಯೋತ್ಸವದ ಹೊತ್ತಿಗೆ ಕನ್ನಡ ಭಾಷೆಗೆ ಹೊಸ ಬಲ?

ಪದ ಕಣಜ, ದೇಸೀಕರಣ ಯೋಜನೆ ಜಾರಿಗೆ ಸಿದ್ಧತೆ

Team Udayavani, Oct 2, 2020, 5:59 AM IST

ರಾಜ್ಯೋತ್ಸವದ ಹೊತ್ತಿಗೆ ಕನ್ನಡ ಭಾಷೆಗೆ ಹೊಸ ಬಲ?

ಸಾಂದರ್ಭಿಕ ಚಿತ್ರ

ಬೆಂಗಳೂರು: ಕನ್ನಡದ ಎಲ್ಲ ನಿಘಂಟುಗಳು ಹಾಗೂ ಪದಕೋಶಗಳು ಒಂದೇ ಡಿಜಿಟಲ್‌ ವೇದಿಕೆಯಲ್ಲಿ ದೊರೆಯುವ ಹಾಗೂ ಆಡಳಿತದಲ್ಲಿ ಕನ್ನಡ ಅನುಷ್ಠಾನಕ್ಕಾಗಿ ಇಂಗ್ಲಿಷ್‌ಗೆ ಪರ್ಯಾಯ ಕನ್ನಡ ಪದ ಬಳಸುವಂತೆ ಪ್ರೇರೇಪಿಸುವ ಉದ್ದೇಶದ ಪದ ಕಣಜ ಹಾಗೂ ದೇಸೀಕರಣ ಯೋಜನೆಯನ್ನು ಕರ್ನಾಟಕ ರಾಜ್ಯೋತ್ಸವದ ಹೊತ್ತಿಗೆ ಜಾರಿಗೆ ತರಲು ಸಿದ್ಧತೆ ನಡೆಯುತ್ತಿದೆ.

ಡಿಜಿಟಲ್‌ ಕ್ರಾಂತಿಯ ಯುಗದಲ್ಲಿ ಶಾಸ್ತ್ರೀಯ ಭಾಷೆ ಹಿರಿಮೆಯ ಕನ್ನಡವನ್ನು ಪರಿಣಾಮಕಾರಿಯಾಗಿ ಬಳಸುವ ಉದ್ದೇಶದಿಂದ ರೂಪುಗೊಂಡ ಪದ ಕಣಜ ಹಾಗೂ ದೇಸೀಕರಣ ಯೋಜನೆಯ ಕಾರ್ಯ ಪ್ರಗತಿಯಲ್ಲಿದೆ. ಸಾವಿರಾರು ವರ್ಷಗಳ ಇತಿಹಾಸವಿರುವ ಭಾಷೆಗಳಲ್ಲಿ ಒಂದಾಗಿರುವ ಕನ್ನಡದಲ್ಲಿ ಸಾಕಷ್ಟು ಪದ ಭಂಡಾರವಿದೆ. ಹಾಗಿದ್ದರೂ ಪೂರ್ಣ ಪ್ರಮಾಣದ ಕನ್ನಡ ಬಳಕೆಗೆ ಪದಗಳ ಕೊರತೆ ಕಾಣುತ್ತಿದೆ. ದಿನ ಕಳೆದಂತೆ ಕನ್ನಡ ಬಳಕೆ ಕಡಿಮೆಯಾಗಿರುವುದು ಇದಕ್ಕೆ ಕಾರಣವಿರಬಹುದು. ಆ ಹಿನ್ನೆಲೆಯಲ್ಲಿ ಇ-ಆಡಳಿತ ಇಲಾಖೆಯು “ಇ- ಕನ್ನಡ’ ಯೋಜನೆಯಡಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಪದ ಕಣಜ ಹಾಗೂ ದೇಸೀ ಕರಣ ಯೋಜನೆಯನ್ನು ರೂಪಿಸಲಾಗಿದೆ.

ಯೋಜನೆ ಉದ್ದೇಶ
ಕನ್ನಡದ ಎಲ್ಲ ನಿಘಂಟು, ಪದಕೋಶ ಗಳನ್ನು ಒಂದೇ ವೇದಿಕೆಯಲ್ಲಿ ತರುವ ಪ್ರಯತ್ನವನ್ನು ಇಲ್ಲಿ ಮಾಡಲಾಗಿದೆ. 200ಕ್ಕೂ ಹೆಚ್ಚು ಹಳೆಗನ್ನಡ, ಹೊಸಗನ್ನಡ ನಿಘಂಟುಗಳನ್ನು ಗುರುತಿಸಲಾಗಿದೆ. ಡಿಜಿಟಲ್‌ ಸ್ವರೂಪದಲ್ಲಿರುವ ಹಲವು ನಿಘಂಟುಗಳನ್ನು ಆದ್ಯತೆ ಮೇರೆಗೆ ಪಟ್ಟಿ ಮಾಡಿ ಆನ್‌ಲೈನ್‌ ವೇದಿಕೆಯಲ್ಲಿ ಸೇರಿಸುವ ಕಾರ್ಯ ನಡೆದಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಪತ್ರಿಕಾ ಅಕಾಡೆಮಿ, ನವ ಕರ್ನಾಟಕ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ಮೈಸೂರು ವಿಶ್ವವಿದ್ಯಾಲಯ, ಕೇಂದ್ರ ಸರಕಾರದ ಭಾರತೀಯ ಭಾಷಾ ಸಂಸ್ಥಾನ, ಕೇಂದ್ರ ಸರಕಾರದ ಸಿಎಸ್‌ಟಿಟಿ ಸಂಸ್ಥೆ ಸಹಿತ 40ಕ್ಕೂ ಹೆಚ್ಚು ನಿಘಂಟು, ಪದಕೋಶಗಳ ಹಕ್ಕುಸ್ವಾಮ್ಯ ಇಲಾಖೆಗೆ ತಲುಪಿದೆ.

ಆಡಳಿತದಲ್ಲಿ ಕನ್ನಡಕ್ಕೆ ಆದ್ಯತೆ
ಇನ್ನೊಂದೆಡೆ ಆಡಳಿತದಲ್ಲಿ ಕನ್ನಡ ಅನುಷ್ಠಾನಕ್ಕೆ ಮುಂದಾಗಿದೆ. ಸರಕಾರದ ಯಾವುದೇ ಇಲಾಖೆ ನಿರ್ದಿಷ್ಟ ಇಂಗ್ಲಿಷ್‌ ಪದಕ್ಕೆ ಕನ್ನಡ ಪದ ನೀಡುವಂತೆ ಸಮಿತಿಯನ್ನು ಕೋರಬಹುದು. ಆಗ ಸಮಿತಿಯು ಈಗಾಗಲೇ ಕನ್ನಡ ಬಳಕೆ ಪದವಿದ್ದರೆ ಆ ಬಗ್ಗೆ ಮಾಹಿತಿ ಒದಗಿಸಲಿದೆ. ಒಂದೊಮ್ಮೆ ಸೂಕ್ತ ಪದವಿಲ್ಲದಿದ್ದರೆ ಚರ್ಚಿಸಿ ಹೊಸ ಪದ ಆಯ್ಕೆ ಮಾಡಿ ನೀಡಲಿದೆ. ಆ ಮೂಲಕ ಪದಕೋಶವನ್ನೂ ವೃದ್ಧಿಸುವುದು ಯೋಜನೆಯ ಉದ್ದೇಶ.

12 ಮಂದಿಯ ಸಮಿತಿ
ಈ ಯೋಜನೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌.ನಾಗಾಭರಣ ಅಧ್ಯಕ್ಷತೆಯಲ್ಲಿ 12 ಮಂದಿಯ ಸಮಿತಿ ರಚನೆಯಾಗಿದೆ. ವಿ. ಕೃಷ್ಣ, ವಸುಧೇಂದ್ರ, ಓಂ ಶಿವಪ್ರಕಾಶ್‌, ಸಿ.ಪಿ. ರವಿಕುಮಾರ್‌, ರಜನೀಕಾಂತ್‌, ನಾಗವೇಣಿ ಎನ್‌. ಮಂಚಿ, ಡಾ| ಎನ್‌.ಎಸ್‌. ತಾರಾನಾಥ್‌, ಡಾ| ಟಿ.ವಿ. ವೆಂಕಟಾಚಲಶಾಸಿŒ, ಆರ್‌. ವಿ.ಎಸ್‌. ಸುಂದರಂ, ಭಾರತೀಯ ಭಾಷಾ ಸಂಸ್ಥಾನದ ಒಬ್ಬ ಪ್ರತಿನಿಧಿ ಸದಸ್ಯರಾಗಿದ್ದಾರೆ. ಇ- ಆಡಳಿತ (ಕನ್ನಡ ಕಂಪ್ಯೂಟಿಂಗ್‌ ಯೋಜನೆ) ಯೋಜನಾ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿದ್ದಾರೆ.

ಪ್ರಯೋಜನಗಳು
ಕೋವಿಡ್‌-19 ಹಿನ್ನೆಲೆಯಲ್ಲಿ ಆನ್‌ಲೈನ್‌ ತರಗತಿ, ಸಂವಹನ, ಕಾರ್ಯ ನಿರ್ವಹಣೆ ಹೆಚ್ಚಾಗಿದೆ. ಇಂತಹ ಹೊತ್ತಿನಲ್ಲಿ ಆನ್‌ಲೈನ್‌ ಸಂವಹನದಲ್ಲೂ ಕನ್ನಡ ಬಳಕೆಗೆ ಹೆಚ್ಚು ನೆರವಾಗಲಿದೆ. ಸರಕಾರದ ಅಪ್ಲಿಕೇಷನ್‌ಗಳು, ಸಾಫ್ಟ್ವೇರ್‌ಗಳನ್ನು ಕನ್ನಡೀಕರಿಸಲು ಸಹಾಯವಾಗಲಿದೆ.

ಮಾಹಿತಿ ತಂತ್ರಜ್ಞಾನ ಬಳಕೆ ಯಾಗುತ್ತಿರುವಂತೆ ಡಿಜಿಟಲ್‌ ವೇದಿಕೆಯಲ್ಲಿ ಕನ್ನಡದ ಬಳಕೆಯೂ ಸಮಾನವಾಗಿ ಆಗಬೇಕು. ಆ ದೃಷ್ಟಿಯಿಂದ ಆಡಳಿತದಲ್ಲಿ ಎಲ್ಲರೂ ಹೆಚ್ಚಾಗಿ ಕನ್ನಡವನ್ನು ಬಳಸುವಂತೆ ಮಾಡುವ ದೃಷ್ಟಿಯಿಂದ ಈ ಪ್ರಯತ್ನ ಕೈಗೊಳ್ಳಲಾಗಿದೆ.
– ಬೇಳೂರು ಸುದರ್ಶನ್‌, ಮುಖ್ಯಮಂತ್ರಿಗಳ “ಇ- ಆಡಳಿತ’ ಸಲಹೆಗಾರರು

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.