ಜಿಲ್ಲೆಯಲ್ಲಿ ಸ್ವಚ್ಛೋತ್ಸವ, ನಿತ್ಯೋತ್ಸವ ಮಾಸಾಚರಣೆ


Team Udayavani, Oct 2, 2020, 12:51 PM IST

ಜಿಲ್ಲೆಯಲ್ಲಿ ಸ್ವಚ್ಛೋತ್ಸವ, ನಿತ್ಯೋತ್ಸವ ಮಾಸಾಚರಣೆ

ಚಾಮರಾಜನಗರ: ಜಿಪಂನ ಸ್ವತ್ಛ ಭಾರತ್‌ ಮಿಷನ್‌ (ಗ್ರಾ) ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 150ನೇ ಜಯಂತಿ ಸಮಾರೋಪದ ಗೌರವ ಸೂಚಕವಾಗಿ ಜಿಲ್ಲೆಯ ಪ್ರತಿ ಗ್ರಾಮವನ್ನು ಸ್ವಚ್ಛ, ಸುಂದರ, ಆರೋಗ್ಯಯುತ ಹಾಗೂ ತ್ಯಾಜ್ಯಮುಕ್ತವನ್ನಾಗಿಸಲು ಅಕ್ಟೋಬರ್‌ ತಿಂಗಳನ್ನು ಸ್ವಚ್ಛೋತ್ಸವ-ನಿತ್ಯೋತ್ಸವ ಮಾಸಾಚರಣೆಯನ್ನಾಗಿ ಹಮ್ಮಿಕೊಳ್ಳಲಾಗಿದೆ.

ಸ್ವಚ್ಛೋತ್ಸವ-ನಿತ್ಯೋತ್ಸವ ಮಾಸಾಚರಣೆಯನ್ನು ಅ.2 ರಿಂದ 31 ರವರೆಗೆ ನಡೆಸಲಾಗುತ್ತಿದ್ದು ವಿಶೇಷವಾಗಿ ಎಲ್ಲಾ ಗ್ರಾಪಂಗಳಲ್ಲಿ ಸ್ವಚ್ಛ ಸಂಕೀರ್ಣ ನಿರ್ಮಿಸಲು ಉದ್ದೇಶಿಸಲಾಗಿದೆ.

ಏನಿದು ಸ್ವಚ್ಛ ಸಂಕೀರ್ಣ?: ಜಿಲ್ಲೆಯ ಎಲ್ಲಾ ಗ್ರಾಪಂಗಳಲ್ಲಿ ತ್ಯಾಜ್ಯ ನಿರ್ವಹಣೆಗೆ ನಿರ್ಮಿಸಲಾಗುವ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಸ್ವತ್ಛ ಸಂಕೀರ್ಣ ವಿನ್ಯಾಸಗೊಳಿಸಲಾಗುವುದು. ಸ್ವಚ್ಛ ಸಂಕೀರ್ಣ ಏಕರೂಪದ ಬಣ್ಣ, ಚಿಹ್ನೆ ಸಂದೇಶ, ವಿನ್ಯಾಸವನ್ನೊಳಗೊಂಡಿರುತ್ತದೆ. ಸ್ವಚ್ಛ ಸಂಕೀರ್ಣವನ್ನು ಘನ ತ್ಯಾಜ್ಯ, ಇ-ತ್ಯಾಜ್ಯ, ಜೈವಿಕ ತ್ಯಾಜ್ಯ, ವೈದ್ಯಕೀಯ ತ್ಯಾಜ್ಯ ಸಂಗ್ರಹಿಸಲು, ಸಂಸ್ಕರಿಸಲು ಮೀಸಲಾದ ಪ್ರದೇಶಗಳೊಂದಿಗೆ ಸ್ವಯಂ ಸುಸ್ಥಿರ ವ್ಯವಸ್ಥೆಯನ್ನೊಳಗೊಂಡ ಪರಿಸರ-ಉದ್ಯಾನವನದ ಅನುಭವ ನೀಡುವ ಹಿನ್ನೆಲೆಯಲ್ಲಿ ಎಲ್ಲಾ ಗ್ರಾಪಂನಲ್ಲಿ ವಿನ್ಯಾಸಗೊಳಿಸಲಾಗುತ್ತಿದೆ.

ಜಿಲ್ಲೆಯ 130 ಗ್ರಾಪಂಗಳ ಪೈಕಿ 45 ಗ್ರಾಪಂಗಳಲ್ಲಿ ಘನತ್ಯಾಜ್ಯ ನಿರ್ವಹಣೆ ಘಟಕ ನಿರ್ಮಾಣಕ್ಕೆ ರಾಜ್ಯ ಕಚೇರಿ ವಿಸ್ತೃತ ಯೋಜನೆ ವರದಿ (ಡಿಪಿಆರ್‌) ಅನುಮೋದನೆ ನೀಡಿದೆ. ಚಾಮರಾಜನಗರ ತಾಲೂಕಿನ ಪುಣಜನೂರು ಗ್ರಾಪಂನಲ್ಲಿ ಈಗಾಗಲೇ ತ್ಯಾಜ್ಯ ನಿರ್ವಹಣೆ ಘಟಕ ನಿರ್ಮಿಸಲಾಗಿದ್ದು, ಅ.3 ರಂದು ತ್ಯಾಜ್ಯ ಘಟಕಕ್ಕೆ ಚಾಲನೆ ನೀಡಲಾಗುತ್ತದೆ. ಜಿಲ್ಲಾ, ತಾಲೂಕು, ಗ್ರಾಪಂಗಳ ಸಹಯೋಗದೊಂದಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸ್ವಚ್ಛ ಭಾರತ್‌ ಮಿಷನ್‌ (ಗ್ರಾಮೀಣ) ಯೋಜನೆಯಡಿ ಜಿಲ್ಲೆಯ ಎಲ್ಲಾ ಗ್ರಾಪಂಗಳಲ್ಲಿ ತ್ಯಾಜ್ಯ ನಿರ್ವಹಣೆ ಘಟಕ ಸ್ಥಾಪಿಸಲು ಕ್ರಮಕೈಗೊಂಡಿದ್ದು, ಜಿಲ್ಲೆಯಾದ್ಯಂತ ಏಕರೂಪದಲ್ಲಿ ತ್ಯಾಜ್ಯ ನಿರ್ವಹಣೆ ಘಟಕ ನಿರ್ಮಿಸುವ ಉದ್ದೇಶದಿಂದ ಅ.3 ರಂದು ಘನತ್ಯಾಜ್ಯ ನಿರ್ವಹಣಾ ಘಟಕಗಳ ಏಕರೂಪದ ಬ್ರ್ಯಾಡಿಂಗ್‌ ಅನ್ನು ಲೋಕಾರ್ಪಣೆ ಮಾಡಲಾಗುತ್ತದೆ.

ಪುಣಜನೂರು ಬ್ರ್ಯಾಂಡಿಂಗ್‌ ಲೋಕಾರ್ಪಣೆ: ಪುಣಜನೂರು ಗ್ರಾಪಂನಲ್ಲಿ ಆರಂಭಗೊಂಡಿರುವ ಘನತ್ಯಾಜ್ಯ ನಿರ್ವಹಣಾ ಘಟಕ ಏಕರೂಪದ ಬ್ರ್ಯಾಂಡಿಂಗ್‌ನ ಲೋಕಾರ್ಪಣೆ ಹಾಗೂ ಸ್ವಚ್ಛೋತ್ಸವ-ನಿತ್ಯೋತ್ಸವ ಮಾಸಾಚರಣೆಗೆ ಜಿಲ್ಲಾ ಉಸ್ತುವಾರಿ ಸಚಿವರು ಅ.3 ರಂದು ವಿದ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ. ಸ್ವಚ್ಛೋತ್ಸವ-ನಿತ್ಯೋತ್ಸವ ಮಾಸಾಚರಣೆಯಲ್ಲಿ ಹಸಿ ಮತ್ತು ಒಣ ತ್ಯಾಜ್ಯ ವಿಂಗಡಣೆ, ತ್ಯಾಜ್ಯ ಸಂಗ್ರಹಣೆ ಪ್ರಕ್ರಿಯೆ ಕುರಿತು ಅರಿವು ಮೂಡಿಸುವ ಸಲುವಾಗಿ ಚರಂಡಿ, ಬೀದಿ, ಶಾಲೆ, ಅಂಗನವಾಡಿ ಶುಚಿಗೊಳಿಸುವ, ಪ್ರೌಢಶಾಲಾ ಮಕ್ಕಳಿಗೆಆನ್‌ಲೈನ್‌ ಮೂಲಕ ಪ್ರಬಂಧ ಸ್ಪರ್ಧೆ, ಕಿರುಚಿತ್ರ ಪ್ರದರ್ಶನ, ತ್ಯಾಜ್ಯ ಮತ್ತು ಶೌಚಾಲಯಗಳ ಬಳಕೆ ಕುರಿತು ಮನೆ ಮನೆ ಭೇಟಿ, ತಿಪ್ಪೆಗುಂಡಿ ನಿರ್ವಹಣೆ, ಹೊಲದಲ್ಲಿನ ಹಸಿಕಸವನ್ನು ಗೊಬ್ಬರವನ್ನಾಗಿಸುವ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕರ ಸಹಭಾಗಿತ್ವದ ಅಗತ್ಯ: ಈ ಸ್ವಚ್ಛೋತ್ಸವ-ನಿತ್ಯೋತ್ಸವ ಮಾಸಾಚರಣೆಯ ಎಲ್ಲಾ ಚಟುವಟಿಕೆಗಳಲ್ಲಿ ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯವಿದ್ದು, ಆಯಾ ಗ್ರಾಪಂನೊಂದಿಗೆ ಸಹಕಾರ ನೀಡಿ ಸ್ವಚ್ಛೋತ್ಸವನಿತ್ಯೋತ್ಸವ ಯಶಸ್ವಿಗೊಳಿಸಬೇಕೆಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೋಯರ್‌ ಹರ್ಷಲ್‌ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-kollegala

Kollegala: ಗಾಂಜಾ ಗಿಡ ಬೆಳೆಸಿದ್ದ ಆರೋಪಿಯ ಬಂಧನ; ಗಿಡ ವಶಕ್ಕೆ ಪಡೆದ ಪೊಲೀಸರು

2-gundlupete

Chamarajanagar: ಬೈಕ್- ಪಿಕ್ ಅಪ್ ಅಪಘಾತ: ಸವಾರ ಸಾವು

Road Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವುRoad Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Kollegala: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಮೃತ್ಯು

Kollegala: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಮೃತ್ಯು

Gundlupete; ರೈಲ್ವೇ ಬ್ಯಾರಿಕೇಡ್ ನಲ್ಲಿ ಸಿಲುಕಿದ ಕಾಡಾನೆ ರಕ್ಷಣೆ

Gundlupete; ರೈಲ್ವೇ ಬ್ಯಾರಿಕೇಡ್ ನಲ್ಲಿ ಸಿಲುಕಿದ ಕಾಡಾನೆ ರಕ್ಷಣೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.