ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದರೆ ಕ್ರಮ


Team Udayavani, Oct 2, 2020, 6:49 PM IST

ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದರೆ ಕ್ರಮ

ಬೀದರ: ಹೆಚ್ಚಿನ ಮಳೆಯಿಂದಾಗಿ ಕೆರೆ ಮತ್ತು ಬಾವಿಗಳು ತುಂಬಿಕೊಂಡಿವೆ. ರಸ್ತೆಗಳು ಹಾಳಾಗಿದ್ದು, ಚರಂಡಿಗಳು ಅಲ್ಲಲ್ಲಿ ತುಂಬಿಕೊಂಡಿವೆ. ಈ ಬಗ್ಗೆ ಪಿಡಿಒಗಳು ಗಮನ ಕೊಡುತ್ತಿಲ್ಲವೆಂಬ ದೂರು ಬರುತ್ತಿವೆ. ಪಿಡಿಒಗಳು ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಯಾದಗಿರಿ ಮತ್ತು ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಎಚ್ಚರಿಸಿದ್ದಾರೆ.

ಗ್ರಾಮಗಳಲ್ಲಿ ಚರಂಡಿಗಳನ್ನು ಶುಚಿಗೊಳಿಸದೇ ಇದ್ದಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗುವುದಲ್ಲದೇ ಮಲೇರಿಯಾ, ಡೆಂಘೀಯಂತಹ ವಿವಿಧ ಸಾಂಕ್ರಾಮಿಕ ರೋಗಗಳು ಹರಡುತ್ತವೆ. ಹಾಗಾಗಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಸರಿಯಾಗಿ ಕರ್ತವ್ಯ ನಿರ್ವಹಿಸದ ಪಿಡಿಒಗಳನ್ನು ನಿರ್ಲಕ್ಷ್ಯದ ಆರೋಪದ ಮೇಲೆ ಅಮಾನತುಮಾಡಲು ಕ್ರಮ ವಹಿಸಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ.

ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕುಡಿಯುವ ನೀರಿನ ಬಾವಿಗಳಿಗೆ ಬ್ಲೀಚಿಂಗ್‌ ಪೌಡರ್‌ ಹಾಕಬೇಕು. ಚರಂಡಿಗಳನ್ನು ನಿಯಮಿತವಾಗಿ ಸ್ವಚ್ಛ ಗೊಳಿಸಬೇಕು. ಗ್ರಾಮ ಗಳಲ್ಲಿ ಕೊಳಚೆ ನೀರು ನಿಲ್ಲದಂತೆ ಎಚ್ಚರಿಕೆ ವಹಿಸ ಬೇಕು. ಸಾರ್ವಜನಿಕರು ಓಡಾಡುವ ರಸ್ತೆಗಳಲ್ಲಿ ಕೆಸರು ತುಂಬಿಕೊಂಡಿದ್ದರೆ ಕೂಡಲೇ ಸರಿಪಡಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಜಿಲ್ಲೆಯಲ್ಲಿ ಸುಮಾರು 10-12 ಪಿಡಿಒಗಳ ವಿರುದ್ಧ ಕರ್ತವ್ಯ ನಿರ್ಲಕ್ಷ್ಯದ ದೂರುಗಳಿವೆ. ಮುಂದಿನ ದಿನಗಳಲ್ಲಿ ದೂರುಗಳು ಪುನರಾವರ್ತನೆಯಾದಲ್ಲಿ ಅಂಥವರ ವಿರುದ್ಧ ಯಾವುದೇ ಮುಲಾಜಿಲ್ಲದೇ ಅಮಾನತು ಮಾಡಲು ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಧಿಕಾರಿಗಳು ಜನಹಿತದ ದೃಷ್ಟಿಕೋನದಿಂದ ಸೇವೆ ಸಲ್ಲಿಸಬೇಕು. ಗ್ರಾಮಗಳಿಗೆ ಪಿಡಿಒಗಳು ಭೇಟಿ ಕೊಡದಿದ್ದಲ್ಲಿ, ಮೂಲಭೂತ ಸೌಕರ್ಯ ಒದಗಿಸಲು ವಿಫಲರಾದಲ್ಲಿತಮಗೆ ದೂರು ನೀಡುವಂತೆ ಸಚಿವರು ಸಾರ್ವಜನಿಕರಲ್ಲಿ ಕೋರಿದ್ದಾರೆ.

ಶೀಘ್ರ ಬೆಳೆ ಹಾನಿ ಪರಿಹಾರ ಒದಗಿಸಿ :

ಬೀದರ: ಅತಿವೃಷ್ಟಿಯಿಂದಾಗಿ ತೋಟಗಾರಿಕೆ ಬೆಳೆಗಳನ್ನು ಕಳೆದು ಕೊಂಡಿರುವ ಜಿಲ್ಲೆಯ ರೈತರಿಗೆ ಶೀಘ್ರ ಪರಿಹಾರ ಕಲ್ಪಿಸಲು ಕ್ರಮ ವಹಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಅರವಿಂದಕುಮಾರ ಅರಳಿ ಮನವಿ ಮಾಡಿದ್ದಾರೆ. ಈ ಕುರಿತು ತೋಟಗಾರಿಕೆ ಇಲಾಖೆ ಸಚಿವ ನಾರಾಯಣ ಗೌಡ ಅವರಿಗೆ ಪತ್ರ ಬರೆದಿರುವ ಅವರು, ಭಾರೀ ಮಳೆಯಿಂದ ಜಿಲ್ಲೆಯಲ್ಲಿ ಬೆಳೆದಿದ್ದ ತೋಟಗಾರಿಕೆ ಬೆಳೆಗಳಾದ ಟೊಮ್ಯಾಟೋ, ಶುಂಠಿ,ಪಪ್ಪಾಯಿ, ಬಾಳೆ ಸೇರಿ ಅನೇಕ ಬೆಳೆಗಳು ಹಾನಿಯಾಗಿ ಕೃಷಿಕರು ಕಂಗಾಲಾಗಿದ್ದಾರೆ. ಜಿಲ್ಲೆಯ 21,600 ಹೆಕ್ಟೇರ್‌ ತೋಟಗಾರಿಕೆ ಜಮೀನಿನ ಪೈಕಿ 5 ಸಾವಿರ ಹೆಕ್ಟೇರ್‌ ಬೆಳೆ ಹಾಳಾಗಿದೆ. ಕಳೆದ 8-10 ವರ್ಷಗಳಿಂದ ಅತಿವೃಷ್ಟಿ, ಅನಾವೃಷ್ಟಿಯಿಂದ ಜಿಲ್ಲೆಯ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಬೆಳೆ ಹಾನಿ ಸಮೀಕ್ಷೆ ಕೈಗೊಂಡು ಬೆಳೆಗೆ ಸೂಕ್ತ ಪರಿಹಾರ ಒದಗಿಸಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; Minister Eshwar Khandre visits Gunateerthawadi village; Financial assistance to the bereaved family

Bidar; ಗುಣತೀರ್ಥವಾಡಿ ಗ್ರಾಮಕ್ಕೆ ಈಶ್ವರ ಖಂಡ್ರೆ ಭೇಟಿ; ನೊಂದ ಕುಟುಂಬಕ್ಕೆ ಹಣಕಾಸಿನ ನೆರವು

Bidar: BRIMS ಆಸ್ಪತ್ರೆಯಲ್ಲಿ ಕೈಕೊಟ್ಟ ವಿದ್ಯುತ್… ಆಕ್ಸಿಜನ್ ಇಲ್ಲದೆ ರೋಗಿಗಳ ಪರದಾಟ

Bidar: BRIMS ಆಸ್ಪತ್ರೆಯಲ್ಲಿ ಕೈಕೊಟ್ಟ ವಿದ್ಯುತ್… ಆಕ್ಸಿಜನ್ ಇಲ್ಲದೆ ರೋಗಿಗಳ ಪರದಾಟ

1-bhalki

Bidar; ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ: ಕಿಡ್ನಾಪ್ ಆರೋಪಿ ಕಾಲಿಗೆ ಗುಂಡೇಟು

1-bidar-1

Bidar; ಬಾನಂಗಳದಲ್ಲಿ ಲೋಹದ ಹಕ್ಕಿಗಳ ಚಿತ್ತಾರ: ಪುಳಕಿತರಾದ ಜನರು

Bidar; ಜನರ ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳ ಅಸಹಕಾರ: ಗ್ರಾ.ಪಂ. ಸದಸ್ಯ ರಾಜೀನಾಮೆ

Bidar; ಜನರ ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳ ಅಸಹಕಾರ: ಗ್ರಾ.ಪಂ. ಸದಸ್ಯ ರಾಜೀನಾಮೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.