ರೈಲ್ವೆ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ


Team Udayavani, Oct 2, 2020, 7:05 PM IST

ರೈಲ್ವೆ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ವಿಜಯಪುರ: ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದೇಶದಲ್ಲಿ ರೈಲ್ವೆ ಖಾಸಗೀಕರಣಕ್ಕೆ ಮುಂದಾಗಿದ್ದು, ಕೂಡಲೇ ಇಂಥ ನಡೆಯಿಂದ ಹಿಂದೆ ಸರಿಯುವಂತೆ ಆಗ್ರಹಿಸಿ ಎಐಯುಟಿಯುಸಿ ಸಂಘಟನೆ ನೇತೃತ್ವದಲ್ಲಿ ಆನ್‌ಲೈನ್‌ ಮೂಲಕ ಬೇಡಿಕೆ ಭಿತ್ತಿಪತ್ರ ಪ್ರದರ್ಶನ ನಡೆಸಲಾಯಿತು.

ಗುರುವಾರ ಆನ್‌ಲೈನ್‌ ಮೂಲಕ ರೈಲ್ವೆ ಖಾಸಗೀಕರಣ ವಿರೋಧಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆ ಪ್ರಮುಖರು, ಕೇಂದ್ರ ಬಿಜೆಪಿ ಸರ್ಕಾರ ಭಾರತೀಯ ರೈಲ್ವೆ ಸೇರಿದಂತೆ ಸಾರ್ವಜನಿಕಉದ್ದಿಮೆಗಳ ಖಾಸಗೀಕರಣ, ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯಂತಹ ಜನ ವಿರೋ ಧಿ- ಕಾರ್ಪೊರೇಟ್‌ ಪರ ಕ್ರಮ ವಿರೋಧಿ ಸಿ, ವಲಸೆ ಕಾರ್ಮಿಕರು ಹಾಗೂ ಸ್ಕೀಂ ಕಾರ್ಯಕರ್ತೆಯರು ಸೇರಿದಂತೆ ವಿವಿಧ ವಲಯಗಳ ದುಡಿಯುವ ಜನರ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿಎಐಯುಟಿಯುಸಿ ಅ.1ರಿಂದ 7ರ ವರೆಗೆ ಅಖೀಲ ಭಾರತ ಪ್ರತಿಭಟನಾ ಸಪ್ತಾಹ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಭಿತ್ತಿಪತ್ರದ ಮೂಲಕ ಪ್ರತಿಭಟನೆ ನಡೆಸಲಾಗುತ್ತದೆ ಎಂದರು.

ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಎರಡನೇ ಬಾರಿಗೆ ಅಧಿಕಾರ ವಹಿಕೊಂಡ ನಂತರ ಕಾರ್ಮಿಕ ಹಾಗೂ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ಸಾರ್ವಜನಿಕ ಉದ್ದಿಮೆಗಳನ್ನು ಕಾರ್ಪೊರೇಟ್‌ ಮಡಿಲಿಗೆ ಹಾಕಿ ಲಕ್ಷಾಂತರ ಉದ್ಯೋಗ ನಾಶ ಮಾಡಿದೆ. ದಿಢೀರ್‌ ಲಾಕ್‌ಡೌನ್‌ ಹೇರಿಕೆ ಪರಿಣಾಮ ಕಟ್ಟಡ ಕಾರ್ಮಿಕರು ಮತ್ತು ವಲಸೆ ಕಾರ್ಮಿಕರ ಬುದುಕು ಚೇತರಿಕೆ ಕಂಡಿಲ್ಲ. ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರ ಕಾರ್ಪೊರೇಟ್‌ ಮನೆತನಗಳ ಒತ್ತಡಕ್ಕೆ ಮಣಿದು ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ಉದ್ದಿಮೆ

ಖಾಸಗೀಕರಣಗೊಳಿಸಿ ಕಾರ್ಮಿಕರ ಹಕ್ಕುಗಳನ್ನು ದುರ್ಬಲಗೊಳಿಸಿದೆ ಎಂದು ವಾಗ್ಧಾಳಿ ನಡೆಸಿದರು. ಭಾರತೀಯ ರೈಲ್ವೆ ಖಾಸಗೀಕರಣಗೊಳ್ಳಲು ಬಿಡಬಾರದು, 109 ರೂಟ್‌ಗಳಲ್ಲಿ 151 ಖಾಸಗಿ ರೈಲುಗಳನ್ನು ಓಡಿಸುವ ಯೋಜನೆ ಕೈ ಬಿಡಬೇಕು, ಯಾವುದೇ ಕಾರಣಕ್ಕೂ ರೈಲ್ವೆ ಜಮೀನು,

ಕಾಲೋನಿಗಳು, ಆಸ್ಪತ್ರೆಗಳು, ವರ್ಕ್‌ಶಾಪ್‌, ಇತರೆ ರೈಲ್ವೆ ಸಂಸ್ಥೆ ಮುಚ್ಚುವ, ಮಾರಾಟ ಮಾಡುವ ನಿರ್ಧಾರದಿಂದ ಹಿಂದೆ ಸರಿಯಬೇಕು. ರೈಲ್ವೆ ಉತ್ಪಾದಕ 7 ಘಟಕಗಳನ್ನು ಕಾರ್ಪೊರೇಟ್‌ ಮನೆತನಗಳಿಗೆ ಮಾರುವುದನ್ನು ತಡೆಗಟ್ಟಬೇಕು. ಉದ್ಯೋಗ ಕಡಿತದ ಬದಲು ಖಾಲಿಯಿರುವ ಹುದ್ದೆ ಭರ್ತಿ ಮಾಡಬೇಕು,55 ವರ್ಷ ವಯಸ್ಸು ಅಥವಾ 30 ವರ್ಷಗಳ ಸೇವೆ ಹೆಸರಲ್ಲಿ ಯಾವುದೇ ನೌಕರರನ್ನು ಸೇವೆಯಿಂದ ವಿಮುಕ್ತಿಗೊಳಿಸುವ ನಡೆಯಿಂದ ಸರ್ಕಾರ ಹಿಂದೆ ಸರಿಯಬೇಕು. ನಿವೃತ್ತ ಎಲ್ಲ ನೌಕರರಿಗೂ ಹಳೆ ಪಿಂಚಣಿ ಸ್ಕೀಂ ಅನುಸಾರ ಪಿಂಚಣಿ ನೀಡಬೇಕು, ರೈಲ್ವೆ ಪ್ರಯಾಣ ದರ ಮತ್ತು ಸರಕು ಸಾಗಾಣಿಕೆ ದರ ಏರಿಸಬಾರದು, ವಿವೇಕದೇವರಾಯ್‌ ಸಮಿತಿ ಶಿಫಾರಸು ರದ್ದುಗೊಳಿಸಬೇಕೆಂದು ಆಗ್ರಹಿಸಿದರು. ಈ ವೇಳೆ ಸಂಘಟನೆ ಜಿಲ್ಲಾಧ್ಯಕ್ಷ ಎಚ್‌.ಟಿ. ಮಲ್ಲಿಕಾರ್ಜುನ, ಕಾರ್ಯದರ್ಶಿ ಸುನೀಲ ಸಿದ್ರಾಮಶೆಟ್ಟಿ, ಕಾರ್ಮಿಕರಾದ ಕಾಶಿಬಾಯಿ ಜನಗೊಂಡ, ಮಹಾದೇವಿ ಧರ್ಮಶೆಟ್ಟಿ, ಭಾರತಿ ದೇವಕತೆ, ಶಶಿಕಲಾ ಮ್ಯಾಗೇರಿ, ಲಕ್ಷ್ಮೀ ಲಕ್ಷಟ್ಟಿ ಇದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Vijayapura: 2-year-old child passed away after falling into Raj canal

Vijayapura: ರಾಜಕಾಲುವೆಗೆ ಬಿದ್ದು 2 ವರ್ಷದ ಮಗು ಸಾವು

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

I don’t know about Kharge returned plot : Minister MB Patil

Vijayapura: ಖರ್ಗೆ ಕುಟುಂಬ ನಿವೇಶನ ವಾಪಸ್ ಕೊಟ್ಟಿದ್ದು ಗೊತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.