ಎಗ್ಗಿಲ್ಲದೆ ಸಾಗಿದೆ ಮರಳು-ಮರಂ ಸಾಗಣೆ


Team Udayavani, Oct 2, 2020, 7:32 PM IST

ಎಗ್ಗಿಲ್ಲದೆ ಸಾಗಿದೆ ಮರಳು-ಮರಂ ಸಾಗಣೆ

ಕೊಟ್ಟೂರು: ಬಿಕ್ಕಿಮರಡಿ ದುರ್ಗಾಂಬಿಕಾ ದೇವಾಲಯದ ಹಿಂಭಾಗದಿಂದ ಅಕ್ರಮವಾಗಿ ಗ್ರಾವಲ್‌(ಮರಂ) ಸಾಗಣೆ ಮಾಡುತ್ತಿರುವುದು.

ಕೊಟ್ಟೂರು: ಪಟ್ಟಣದ ಕೊಟ್ಟೂರು ಕೆರೆಯಲ್ಲಿ ಪ್ರತಿದಿನ ಹಗಲು ರಾತ್ರಿ ಎನ್ನದೇ ಅಕ್ರಮ ಮರಳು ಹಾಗೂ ಗ್ರಾವಲ್‌ (ಕೆಂಪು ಮಣ್ಣು)(ಮರಂ) ಸಾಗಣೆ ದಂಧೆ ನಡೆಯುತ್ತಿದೆ.

ಪಟ್ಟಣದ ಬಿಕ್ಕಿಮರಡಿ ದುರ್ಗಾಂಬ ದೇವಾಲಯದ ಹಿಂಭಾಗ ಹತ್ತರಿಂದ ಹದಿನೈದು ಟ್ರ್ಯಾಕ್ಟರ್‌ಗಳು ನಂಬರ್‌ ಪ್ಲೇಟ್‌ ಇಲ್ಲದೆ ರಾಜಾರೋಷವಾಗಿ ಪ್ರತಿದಿನ ಮರಳು ಸಾಗಿಸುತ್ತಿವೆ. ಈ ಕೆರೆ ಸಣ್ಣ ನೀರಾವರಿ ಇಲಾಖೆಗೆ ಒಳಪಡುವುದು. ಇದುವರೆಗೂ ಯಾವ ಅಧಿಕಾರಿಯು ಇತ್ತ ಕಡೆ ಗಮನ ಹರಿಸಿಲ್ಲ. ನಂತರ ಇಲ್ಲಿನ ಅಧಿಕಾರಿಗಳು ಸಹ ಈ ಕಡೆ ಹೋಗಲು ಭಯಭೀತರಾಗುತ್ತಾರೆ. ಇಲ್ಲಿನ ರೈತರು ಸಾಕಷ್ಟು ಬಾರಿ ಅಧಿಕಾರಿಗಳಿಗೆ ತಿಳಿಸಿದರೆ ನಮ್ಮಲ್ಲಿ ಸಿಬ್ಬಂದಿ ಕೊರತೆ ಇದೆ ಎನ್ನುತ್ತಾರೆ.

ಮರಳಿನಿಂದ ಕೆರೆ ರಸ್ತೆಗಳು ದೊಡ್ಡ ದೊಡ್ಡ ಕಂದಕಗಳಾಗಿ ಮಾರ್ಪಟ್ಟಿವೆ. ಕೆಲವು ದಿನಗಳ ಹಿಂದೆ ಅಧಿಕಾರಿಗಳಿಗೆ ಮರಳು ಮತ್ತು ಗ್ರಾವಲ್‌ ದಂಧೆ ಬಗ್ಗೆ ತಿಳಿದಾಗ ಸ್ಥಳಕ್ಕೆ ಬಂದು ಗ್ರಾವಲ್‌ ಮತ್ತು ಮರಳು ಅಗೆಯುವರಿಗೆ ಎಚ್ಚರಿಕೆ ನೀಡಿದ್ದರು. ಕೆಲ ದಿನಗಳ ನಂತರ ಮತ್ತೆ ಆರಂಭಗೊಂಡಿದೆ. ಚಿರಬಿ, ಚಪ್ಪರದಹಳ್ಳಿ, ಹ್ಯಾಳಾ, ಮರೂರು, ರಾಂಪುರ ಮಾರ್ಗದಲ್ಲಿನ ಹಳ್ಳ ಹೊಲಗಳಿಂದ ರಾತ್ರಿಯಿಂದ ಬೆಳಗಾಗುವ ತನಕ ಮರಳು ಕಳ್ಳಸಾಗಾಣಿಕೆ ಮಾಡುವ ಅನೇಕ ಮರಳು ಟ್ರ್ಯಾಕ್ಟರ್‌  ಗಳನ್ನು ಸೀಜ್‌ ಮಾಡಿದ್ದರು.ಈಗ ಮತ್ತೆ ಇದು ತಲೆ ಎತ್ತಿದೆ. ನಂಬರ್‌ಪ್ಲೇಟ್‌ ಇಲ್ಲದ ಟ್ರ್ಯಾಕ್ಟರ್‌ಗಳು ಹೆಚ್ಚಾಗಿ ಮರಳು ಸಾಗಾಣಿಕೆ ಮಾಡುತ್ತವೆ. ಆರ್‌ ಟಿಒ ಅಧಿಕಾರಿಗಳು ಕಣ್ಣಿಗೆ ಕಂಡರು ಕಾಣದಂತೆ ವರ್ತಿಸುತ್ತಾರೆ ಎಂದು ಜನ ಆರೋಪಿಸಿದ್ದಾರೆ.

ಪಟ್ಟಣದಿಂದ ಹೊಲಕ್ಕೆ ಮೂರು ಕಿಮೀ ಆಗುವುದು. ಶೇಂಗಾ ಮತ್ತು ಜೋಳದ ಫಸಲನ್ನು ಉಳಿಸಿಕೊಳ್ಳಲು ಒಂದು ಕಡೆ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆ. ಇನ್ನೊಂದೆಡೆ ಟ್ರ್ಯಾಕ್ಟರ್‌ಗಳು ಕೆರೆ ರಸ್ತೆಯಲ್ಲಿ ಮರಂ, ಮರಳು ಸಾಗಿಸಿ ದಾರಿಯನ್ನು ಸಂಪೂರ್ಣ ಹದಗೆಡಿಸಿವೆ. ಸಂಬಂಧಪಟ್ಟ ಅಧಿಕಾರಿಗಳು ಫಸಲು ಸಾಗಿಸಲು ಸರಿಯಾದ ದಾರಿ ಮಾಡಿಕೊಡಿ.  -ನೊಂದ ರೈತರು

ಅಕ್ರಮ ಮರಳು ಮತ್ತು ಗ್ರಾವಲ್‌(ಮರಂ) ಅಗೆಯುವವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುತ್ತೇನೆ. ನಂತರ ಕೆರೆಯ ಸುತ್ತಮುತ್ತಲಿನ ರೈತರು ಬೆಳೆ ಸಾಗಿಸಲು ರಸ್ತೆ ಸರಿಪಡಿಸುವಂತೆ ಸೂಚಿಸಿ, ಬೆಳೆ ನಷ್ಟ ಉಂಟಾಗದಂತೆ ಅನುಕೂಲ ಮಾಡಿಕೊಡುತ್ತೇನೆ.  ಜಿ.ಅನಿಲ್‌ಕುಮಾರ್‌, ತಹಶೀಲ್ದಾರ್‌, ಕೊಟ್ಟೂರು.

 

ರವಿಕುಮಾರ್‌.ಎಂ

 

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

B Nagendra reacts to Janardhana Reddy’s statement

Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ

Bellary; B Nagendra dance at Valmiki Jayanti event

Bellary; ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಭರ್ಜರಿ ಡ್ಯಾನ್ಸ್

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

Janardhana Reddy: ಮುಡಾ ದಾಖಲೆ ಬಹಿರಂಗ ಮಾಡಿದ್ದು ಡಿಕೆಶಿ

Janardhana Reddy: ಮುಡಾ ದಾಖಲೆ ಬಹಿರಂಗ ಮಾಡಿದ್ದು ಡಿಕೆಶಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.