ನಾರಾಯಣರಾವ್‌ ಉತ್ತರಾಧಿಕಾರಿಗೆ ಕಸರತ್ತು!


Team Udayavani, Oct 3, 2020, 3:59 PM IST

ನಾರಾಯಣರಾವ್‌ ಉತ್ತರಾಧಿಕಾರಿಗೆ ಕಸರತ್ತು!

ಬೀದರ: ಕೋವಿಡ್ ಸೋಂಕಿಗ ಬಲಿಯಾಗಿರುವ ಶಾಸಕ ಬಿ. ನಾರಾಯಣರಾವ್‌ ಅವರ ಸಮಾ ಧಿ ಮೇಲಿನ ಹೂವು ಇನ್ನೂ ಬಾಡಿಲ್ಲ, ಉಪ ಚುನಾವಣೆಯೂ ಘೋಷಣೆಯಾಗಿಲ್ಲ. ಆದರೆ, ಬಸವಕಲ್ಯಾಣ ಕ್ಷೇತ್ರದಲ್ಲಿ ಚುನಾವಣೆ ಕಾವು ಜೋರಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಟಿಕೆಟ್‌ ಆಕಾಂಕ್ಷಿಗಳ ರಾಜಕೀಯ ಚಟುವಟಿಕೆಗಳು ಗರಿಗೆದರುವಂತೆ ಮಾಡಿದೆ. ಶಾಸಕ ನಾರಾಯಣರಾವ್‌ ಅವರ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ತೆರವಾಗಿರುವ ಕಲ್ಯಾಣದ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದ್ದು, ಶಾಸಕರ ಉತ್ತರ ಧಿಕಾರಿಯಾರು ಎಂಬ ಚರ್ಚೆ ಶುರುವಾಗಿದೆ.

ಜನತಾ ಪರಿವಾರದ ಭದ್ರಕೋಟೆ ಎಂದೇ ಗುರುತಿಸಿಕೊಂಡಿದ್ದ ಕ್ಷೇತ್ರದಲ್ಲಿ ಬರೋಬ್ಬರಿ ನಾಲ್ಕು ದಶಕಗಳ ಬಳಿಕ ಅಹಿಂದ ನಾಯಕರಾಗಿದ್ದ ನಾರಾಯಣರಾವ್‌ ಗೆಲ್ಲುವ ಮೂಲಕ “ಕೈ’ಗೆ ನೆಲೆ ಒದಗಿಸಿಕೊಟ್ಟಿದ್ದರು. ಆದರೆ, ತಮ್ಮ ಅಧಿಕಾರದ ಅವಧಿ ಪೂರ್ಣಗೊಳಿಸುವ ಮೊದಲೇ ಇಹಲೋಕ ತ್ಯಜಿಸಿದ್ದಾರೆ. ಅವರಿಂದ ತೆರವಾದ ಸ್ಥಾನಕ್ಕೆ ಉಪ ಕದನದಲ್ಲೂ ಮತ್ತೆ ಕ್ಷೇತ್ರವನ್ನು ತಮ್ಮ “ಕೈ’ಯಲ್ಲಿ ಇಟ್ಟುಕೊಳ್ಳಲು ಕಾಂಗ್ರೆಸ್‌ ತವಕದಲ್ಲಿದ್ದರೆ, ಬಿಜೆಪಿ ಮತ್ತು ಜೆಡಿಎಸ್‌ ಸಹ “ಕೈ’ಯಿಂದ ಕ್ಷೇತ್ರವನ್ನು ತಮ್ಮ ತೆಕ್ಕೆಗೆ ಪಡೆಯಲು ಲೆಕ್ಕಚಾರದಲ್ಲಿದೆ.

ನಾರಾಯಣರಾವ್‌ ಅವರ ಅಂತ್ಯಕ್ರಿಯೆ ಮುಗಿದ ಕ್ಷಣದಿಂದಲೇ ದಿ| ಶಾಸಕರ ಸ್ಥಾನ ಯಾರು ತುಂಬಬಹುದೆಂಬ ಚರ್ಚೆ ಹೆಚ್ಚಿವೆ. ಸಾರ್ವಜನಿಕ ವಲಯದಲ್ಲಿ ಗೆಲುವಿಗಾಗಿ ಅನುಕಂಪದ ಮತ, ಜಾತಿ ಲೆಕ್ಕಚಾರ ಮುನ್ನೆಲೆಗೆ ಬಂದಿದ್ದರೆ, ಪ್ರಮುಖ ಪಕ್ಷಗಳಲ್ಲಿ ಗೆಲುವಿನ ಲೆಕ್ಕಾಚಾರ, ಮತ ವಿಭಜನೆ ತಂತ್ರಗಳು ಜತೆಗೆವಲಸೆ ಅಭ್ಯರ್ಥಿಗಳನ್ನು ಕರೆತರುವ ಚಿಂತನೆಗಳು ಕೇಳಲಾರಂಭಿಸಿವೆ. ಯಾವ ಸಂದರ್ಭದಲ್ಲೂ ಉಪ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಹಿನ್ನೆಲೆ ಕ್ಷೇತ್ರದಲ್ಲಿ ಟಿಕೆಟ್‌ಗಾಗಿ ಈಗಾಗಲೇ ಪ್ರಯತ್ನ ನಡೆಸಿರುವ ನಾಯಕರ ದಂಡು ತಮ್ಮ ಪಕ್ಷದ ವರಿಷ್ಠರು ಮತ್ತು ರಾಜಕೀಯ ಗುರುಗಳ ಮನೆ ಕದ ತಟ್ಟಲು ಆರಂಭಿಸಿದ್ದಾರೆ.

ಕೈ’ ಪಾಳಯಕ್ಕೆ ಸವಾಲು: ಕ್ಷೇತ್ರವನ್ನು ತನ್ನ ವಶದಲ್ಲೇ ಇಟ್ಟುಕೊಳ್ಳುವುದು “ಕೈ’ ಪಾಳಯಕ್ಕೆ ಸವಾಲಿನ ಸಂಗತಿಯಾಗಿದೆ. ನಾರಾಯಣರಾವ್‌ ಅವರಂತೆ ಜನಮನ್ನಣೆ ಗಳಿಸುವಂಥ ವ್ಯಕ್ತಿಯನ್ನೇ ಕಣಕ್ಕಿಳಿಸಬೇಕಿದೆ. ಹಾಗಾಗಿ ನಾರಾಯಣರಾವ್‌ ಕುಟುಂಬಕ್ಕೆ ಟಿಕೆಟ್‌ ನೀಡಿದರೆ ಉತ್ತಮ ಎಂಬ ಕೂಗು ಕೇಳಿ ಬರುತ್ತಿವೆ. ಆದರೆ, ಅವರ ಇಬ್ಬರು ಮಕ್ಕಳಾದ ಗೌತಮ್‌ ಮತ್ತು ರಾಹುಲ್‌ ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದು, ಇದು ಪಕ್ಷದ ಗೆಲುವಿಗೆ ಹಿನ್ನಡೆ ಆಗಬಹುದೆಂಬಆತಂಕ ಪಕ್ಷದ ನಾಯಕರಲ್ಲಿದೆ. ಆದರೆ,ದಿ| ಶಾಸಕರ ಪರಿವಾರ ಮಾಜಿ ಸಿಎಂಸಿದ್ಧರಾಮಯ್ಯ ಅವರನ್ನೇ ಹೆಚ್ಚು ನಂಬಿಕೊಂಡಿದೆ. ಹಾಗಾಗಿ ಅವರ ನಿರ್ಣಯವೇ ಇಲ್ಲಿ ಅಂತಿಮ ಎಂದೆನ್ನಲಾಗುತ್ತಿದೆ.

ಇನ್ನು ರಾಜ್ಯ- ಕೇಂದ್ರದ ಆಡಳಿತಾರೂಢ ಪಕ್ಷ ಬಿಜೆಪಿ ಸಹ ಕಲ್ಯಾಣದಲ್ಲಿ ಅಧಿಕಾರ ಹಿಡಿಯಲು ಪ್ರಬಲ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸಲಿದ್ದು, ಇಲ್ಲಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿ ಬೆಳೆದಿದೆ. ಕಳೆದ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಮತ್ತೂಮ್ಮೆ ಅದೃಷ್ಟ ಪರೀಕ್ಷೆ ಸಜ್ಜಾಗುತ್ತಿದ್ದಾರೆ. ಮಾಜಿ ಸಚಿವ ಗುರುಪಾದಪ್ಪ ನಾಗಮಾರಪಳ್ಳಿ ಅವರ ಕಿರಿಯ ಪುತ್ರ ಸೂರ್ಯಕಾಂತ ನಾಗಮಾರಪಳ್ಳಿ ಸಹ ಕ್ಷೇತ್ರದತ್ತ ಚಿತ್ತ ಹರಿಸಿದ್ದು, ಟಿಕೆಟ್‌ಗಾಗಿ ಲಾಬಿ ಶುರು ಮಾಡಿದ್ದಾರೆ ಎನ್ನುವ ಮಾತುಗಳಿವೆ. ಜತೆಗೆ ಪ್ರಮುಖರಾಗಿ ಶರಣು ಸಲಗಾರ, ಗುಂಡು ರೆಡ್ಡಿ, ಸಂಜಯ ಪಟವಾರಿ ಹಾಗೂ ಜೆಡಿಎಸ್‌ ಟಿಕೆಟ್‌ಗಾಗಿ ಮಾಜಿ ಶಾಸಕ ಎಂ.ಜಿ. ಮುಳೆ, ಆನಂದ ಪಾಟೀಲ ಹೆಸರುಗಳು ಕೇಳಿ ಬರುತ್ತಿವೆ.

ಆಕಾಂಕ್ಷಿಗಳ ಸಂಖ್ಯೆ ಹೆಚ್ಚಳ : ಈ ಬೆಳವಣಿಗೆ ನಡುವೆಯೂ “ಕೈ’ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಕ್ಷೇತ್ರದಲ್ಲಿ ಲಿಂಗಾಯತರ ನಂತರ ಮರಾಠಾ ಸಮುದಾಯದವರ ಸಂಖ್ಯೆ ಹೆಚ್ಚಿರುವುದರಿಂದ ಮಾಜಿ ಸಿಎಂ ದಿ| ಧರಂಸಿಂಗ್‌ ಪುತ್ರ, ಎಂಎಲ್‌ಸಿ ವಿಜಯಸಿಂಗ್‌ ಅವರು ಅಚ್ಚರಿಯ ಅಭ್ಯರ್ಥಿಯಾಗಿ ಘೋಷಣೆಯಾಗಲಿದ್ದಾರೆ ಎಂಬ ವಾದ ಶುರುವಾಗಿದ್ದರೆ, ಇನ್ನೊಂದೆಡೆ ಅಭ್ಯರ್ಥಿಯಾಗಿ ಹುಮನಾಬಾದ್‌ ಶಾಸಕ ರಾಜಶೇಖರ ಪಾಟೀಲ ಅವರ ಸಹೋದರ ಚಂದ್ರಶೇಖರ ಪಾಟೀಲ ಹೆಸರು ಸಹಚರ್ಚೆಯ ಚಾವಡಿಯಲ್ಲಿದೆ. ಇದರೊಟ್ಟಿಗೆ ಎಐಸಿಸಿ ಸದಸ್ಯ ಆನಂದ ದೇವಪ್ಪ ಮತ್ತು ಶಿವಶರಣ ಬಿರಾದಾರ ಸಹ ಟಿಕೆಟ್‌ ಆಕಾಂಕ್ಷಿಗಳಲ್ಲಿ ಒಬ್ಬರು ಎನಿಸಿಕೊಂಡಿದ್ದಾರೆ.

 

-ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

Bidar: ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

crime

Bidar:‌ ರಸ್ತೆ ಅಪಘಾತ; ಇಬ್ಬರು ಬಲಿ; ಪ್ರಕರಣ ದಾಖಲು

4-

Bidar: ವಿಮಾನಯಾನ ಸೇವೆ ಕುರಿತಂತೆ ಈಶ್ವರ ಖಂಡ್ರೆ ಸಭೆ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹುಮನಾಬಾದ್ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.