ನವಜಾತ ಶಿಶುಗಳು ಖಾಸಗಿ ಆಸ್ಪತ್ರೆಗೆ !

ಎನ್‌ಎಚ್‌ಎಂ ನೌಕರರ ಮುಷ್ಕರ; ಲೇಡಿಗೋಶನ್‌ನಲ್ಲಿ ಸಿಬಂದಿ ಕೊರತೆ

Team Udayavani, Oct 4, 2020, 6:10 AM IST

ನವಜಾತ ಶಿಶುಗಳು ಖಾಸಗಿ ಆಸ್ಪತ್ರೆಗೆ !

ಸಾಂದರ್ಭಿಕ ಚಿತ್ರ

ಮಂಗಳೂರು: ರಾಷ್ಟ್ರೀಯ ಆರೋಗ್ಯ ಮಿಷನ್‌ (ಎನ್‌ಎಚ್‌ಎಂ) ನೌಕರರ ಪ್ರತಿಭಟನೆಯ ನೇರ ಪರಿಣಾಮ ಈಗ ಲೇಡಿಗೋಶನ್‌ ಆಸ್ಪತ್ರೆಯಲ್ಲಿ ಜನಿಸಿರುವ ಶಿಶುಗಳ ಮೇಲಾಗಿದೆ. ಸಿಬಂದಿ ಕೊರತೆಯಿಂದಾಗಿ ಕೆಲವು ನವಜಾತ ಶಿಶುಗಳನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಬೇಕಾದ ಅನಿವಾರ್ಯ ಎದುರಾಗಿದೆ.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎನ್‌ಎಚ್‌ಎಂ ನೌಕರರು 10 ದಿನಗಳಿಂದ ಮುಷ್ಕರ ನಿರತರಾಗಿದ್ದಾರೆ. ಇದು ಆರೋಗ್ಯ ಇಲಾಖೆಯ ಬಹುತೇಕ ಕೆಲಸಗಳ ಮೇಲೆ ಪರಿಣಾಮ ಬೀರಿದೆ. ನವಜಾತ ಶಿಶುಗಳ ಚಿಕಿತ್ಸೆ, ವೆಂಟಿಲೇಟರ್‌ ಅಳವಡಿಕೆ, ತೀವ್ರ ನಿಗಾ ಘಟಕದಲ್ಲಿ ಆರೈಕೆ ಸಹಿತ ಎಲ್ಲ ಕೆಲಸಗಳನ್ನು ಇವರೇ ನೋಡಿಕೊಳ್ಳುತ್ತಿದ್ದರು. ಈಗ ಅವರಿಲ್ಲದೆ ನವಜಾತ ಶಿಶು ವಿಭಾಗದ ಕಾರ್ಯ ನಿರ್ವಹಣೆಗೆ ತೊಂದರೆ ಉಂಟಾಗಿದೆ. ವೆನ್ಲಾಕ್‌ ಆಸ್ಪತ್ರೆಯ ಪರಿಸ್ಥಿತಿಯೂ ಇದಕ್ಕೆ ಭಿನ್ನವಾಗಿಲ್ಲ.

ಎನ್‌ಎಚ್‌ಎಂ ಹೊರತುಪಡಿಸಿ ಇತರ ಸಿಬಂದಿಗೆ ಈ ವಿಭಾಗವನ್ನು ನಿರ್ವಹಿಸುವುದು ಕಷ್ಟಸಾಧ್ಯವಾಗಿರುವುದರಿಂದ ಬೇರೆ ದಾರಿ ಕಾಣದೆ ಎರಡೂ ಆಸ್ಪತ್ರೆಗಳಿಂದ ನವಜಾತ ಶಿಶುಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂಬ ಮಾಹಿತಿ “ಉದಯವಾಣಿ’ಗೆ ಲಭ್ಯವಾಗಿದೆ. ಆದರೆ ಅಧಿಕಾರಿಗಳು ಇದನ್ನು ನಿರಾಕರಿಸಿದ್ದಾರೆ.

ಬಡ ಪೋಷಕರು ಕಂಗಾಲು
ಆಯುಷ್ಮಾನ್‌ ಭಾರತ್‌ ಯೋಜನೆಯಡಿ ನವಜಾತ ಶಿಶುಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದೆ. ಯೋಜನೆಯಡಿ ಆಸ್ಪತ್ರೆ ಶುಲ್ಕ ಭರಿಸಲಾಗುತ್ತದೆಯೇ ವಿನಾ ಮೆಡಿಕಲ್‌ನಿಂದ ತರುವಂತಹ ಔಷಧಗಳ ವೆಚ್ಚವನ್ನು ನಾವೇ ಭರಿಸಬೇಕು. ಆಸ್ಪತ್ರೆಯಲ್ಲಿರುವಷ್ಟು ದಿನ ಊಟ, ಇತರ ಖರ್ಚು ಕೂಡ ಇರುತ್ತದೆ. ದಾಖಲೆ ಸರಿಯಿಲ್ಲದಿದ್ದರೆ ಯೋಜನೆಯಡಿ ಆಸ್ಪತ್ರೆ ಶುಲ್ಕದ ಮೊತ್ತವೂ ಸಿಗುವುದಿಲ್ಲ. ವೆನ್ಲಾಕ್‌ ಮತ್ತು ಲೇಡಿಗೋಶನ್‌ ಆಸ್ಪತ್ರೆಗಳಿಗೆ ನಮ್ಮಂತಹ ಬಡ ವರ್ಗದವರೇ ಚಿಕಿತ್ಸೆಗೆ ಬರುವುದರಿಂದ ಈಗ ಖಾಸಗಿ ಆಸ್ಪತ್ರೆಗಳಿಗೆ ಹಣ ಹೊಂದಿಸಲಾಗದೆ ಕಂಗಾಲಾಗಿದ್ದೇವೆ ಎಂದು ಲೇಡಿಗೋಶನ್‌ನಿಂದ ಖಾಸಗಿ ಆಸ್ಪತ್ರೆಯೊಂದಕ್ಕೆ ಸ್ಥಳಾಂತರಗೊಂಡಿರುವ ಶಿಶುವಿನ ಹೆತ್ತವರೊಬ್ಬರು ಅಳಲು ತೋಡಿ ಕೊಂಡಿದ್ದಾರೆ.

ನವಜಾತ ಶಿಶುಗಳ ಸ್ಥಳಾಂತರ
ಆಸ್ಪತ್ರೆಯ ಮೂಲವೊಂದರ ಪ್ರಕಾರ ಲೇಡಿಗೋಶನ್‌ನ ನವಜಾತ ಶಿಶು ವಿಭಾಗದಲ್ಲಿ ಒಟ್ಟು 40 ಹಾಸಿಗೆಗಳು, 13 ವೆಂಟಿಲೇಟರ್‌ಗಳು ಇವೆ. ಇಲ್ಲಿನ ತೀವ್ರ ನಿಗಾ ಘಟಕದಲ್ಲಿ 20 ಮಂದಿ ಎನ್‌ಎಚ್‌ಎಂ ನೌಕರರಿದ್ದು, ಈಗ ಅವರಿಲ್ಲದೆ ಆ ವಿಭಾಗದ ನಿರ್ವಹಣೆ ಸವಾಲಾಗಿದೆ. 9 ದಿನಗಳ ಅವಧಿಯಲ್ಲಿ 25ರಿಂದ 30 ನವಜಾತ ಶಿಶುಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ವೆನ್ಲಾಕ್‌ ಆಸ್ಪತ್ರೆಯಲ್ಲಿ ನವಜಾತ ಶಿಶು ವಿಭಾಗದಲ್ಲಿ 2 ಐಸಿಯುಗಳಿದ್ದು, ಒಂದರಲ್ಲಿ 12 ಹಾಸಿಗೆ, 5 ವೆಂಟಿಲೇಟರ್‌, ಮತ್ತೂಂದರಲ್ಲಿ 6 ಬೆಡ್‌ಗಳಿವೆ. ಆದರೆ ಅಲ್ಲಿಂದ ಎಷ್ಟು ಶಿಶುಗಳನ್ನು ಸ್ಥಳಾಂತರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ.

ಲೇಡಿಗೋಶನ್‌ನಿಂದ ನವಜಾತ ಶಿಶುಗಳನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸುತ್ತಿಲ್ಲ. ನಮ್ಮ ಆಸ್ಪತ್ರೆಯಲ್ಲಿ ಸಾಧ್ಯವಿರುವ ಎಲ್ಲ ಸೌಲಭ್ಯ, ಚಿಕಿತ್ಸೆಗಳನ್ನು ನೀಡುತ್ತೇವೆ. ಅಗತ್ಯಬಿದ್ದರೆ ಮಾತ್ರ ಖಾಸಗಿಗೆ ಕಳುಹಿಸುತ್ತೇವೆ. ಸಿಬಂದಿ ಕೊರತೆಯಿದ್ದರೆ ಆಂತರಿಕ ವ್ಯವಸ್ಥೆ ಮಾಡಿಕೊಳ್ಳುತ್ತೇವೆ.
– ಡಾ| ದುರ್ಗಾಪ್ರಸಾದ್‌, ವೈದ್ಯಕೀಯ ಅಧೀಕ್ಷಕರು (ಪ್ರಭಾರ), ಲೇಡಿಗೋಶನ್‌ ಸರಕಾರಿ ಆಸ್ಪತ್ರೆ

ವೆನ್ಲಾಕ್‌ನ ನವಜಾತ ಶಿಶು ವಿಭಾಗಕ್ಕೆ ಈಗಲೂ ದಾಖಲು ಮಾಡಿಕೊಳ್ಳ ಲಾಗುತ್ತಿದೆ. ಲಭ್ಯ ಸಿಬಂದಿ ವಿಭಾಗವನ್ನು ನಿರ್ವ ಹಿಸುತ್ತಿದ್ದಾರೆ. ತುಂಬಾ ಗಂಭೀರ ತೊಂದರೆ ಇರುವ ಶಿಶುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸುವಂತೆ ತಿಳಿಸಿರಬಹುದು. ಆದರೆ ಎಲ್ಲ ಶಿಶುಗಳನ್ನೂ ಕಳುಹಿಸಿಲ್ಲ.
-ಡಾ| ಸದಾನಂದ ಶ್ಯಾನ್‌ಭೋಗ್‌, ವೈದ್ಯಕೀಯ ಅಧೀಕ್ಷಕರು, ವೆನ್ಲಾಕ್‌ ಸರಕಾರಿ ಆಸ್ಪತ್ರೆ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.